Homeಮುಖಪುಟಮುಸ್ಕಾನ್‌ ವಿರುದ್ಧ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿ: ಕ್ರಮ ಜರುಗಿಸಲು ವಿಚಾರ ಮಾಡಲಾಗುವುದು- ಮಂಡ್ಯ ಎಸ್‌ಪಿ

ಮುಸ್ಕಾನ್‌ ವಿರುದ್ಧ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿ: ಕ್ರಮ ಜರುಗಿಸಲು ವಿಚಾರ ಮಾಡಲಾಗುವುದು- ಮಂಡ್ಯ ಎಸ್‌ಪಿ

“ಮಾಧ್ಯಮಗಳಿಗೆ ಯಾವುದೇ ಸುದ್ದಿ ಇಲ್ಲದೆ ಇರುವುದಕ್ಕೆ ಏನೋ ಒಂದನ್ನು ಬರೆದಿದ್ದಾರೆ” ಎಂದು ಸ್ಥಳೀಯ ಪೊಲೀಸ್ ಅಧಿಕಾರಿಯೊಬ್ಬರು ಬೇಸರ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

ರಾಜ್ಯದಾದ್ಯಂತ ಹಿಜಾಬ್‌ ವಿಚಾರವಾಗಿ ವಿವಾದ ಭುಗಿಲೆದ್ದ ಸಂದರ್ಭದಲ್ಲಿ ಬಿಜೆಪಿ ಬೆಂಬಲಿತ ಎಬಿವಿಪಿ ಸಂಘಟನೆಯ ದುಷ್ಕರ್ಮಿಗಳಿಂದ ಸುತ್ತುವರೆಯಲ್ಪಟ್ಟಾಗ, ‘ಅಲ್ಲಾಹು ಅಕ್ಬರ್‌’ ಎಂದು ಘೋಷಣೆ ಕೂಗಿದ್ದ ಮಂಡ್ಯದ ಪಿಇಎಸ್‌‌‌ ವಿದ್ಯಾರ್ಥಿನಿ ಮುಸ್ಕಾನ್ ವಿಚಾರವಾಗಿ, ರಾಜ್ಯದ ಹಲವಾರು ಸುದ್ದಿ ಮಾಧ್ಯಮಗಳು ಕಪೋಲಕಲ್ಪಿತ ವರದಿಗಳನ್ನು ಪ್ರಕಟಿಸಿ ಓದುಗರನ್ನು ದಾರಿತಪ್ಪಿಸಿವೆ.

ಮುಖ್ಯವಾಗಿ ಏಷ್ಯಾನೆಟ್‌ ಸುವರ್ಣ ನ್ಯೂಸ್‌‌, ವಿಜಯವಾಣಿ, ಪಬ್ಲಿಕ್ ಟಿವಿ, ಪವರ್‌ ಟಿವಿ, ಸಂಜೆವಾಣಿ ಸೇರಿದಂತೆ ಹಲವಾರು ಪತ್ರಿಕೆಗಳು ಮತ್ತು ಮಾಧ್ಯಮಗಳು ತಮ್ಮ ವೆಬ್‌ಸೈಟ್‌ನಲ್ಲಿ, “ವಿದ್ಯಾರ್ಥಿನಿ ಮುಸ್ಕಾನ್ ಮತ್ತು ಅವರ ಕುಟುಂಬ ಪೊಲೀಸರನ್ನು ಯಾಮಾರಿಸಿ ವಿದೇಶಕ್ಕೆ ತೆರಳಿದ್ದಾರೆ” ಎಂದು ವರದಿ ಮಾಡಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಕುರಿತು ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿರುವ ಮಂಡ್ಯ ಪೊಲೀಸ್ ವರಿಷ್ಠಾಧಿಕಾರಿ ಎನ್‌.ಯತೀಶ್‌, “ಮುಸ್ಕಾನ್‌ ಹಾಗೂ ಅವರ ಕುಟುಂಬದ ವಿರುದ್ಧ ಯಾವುದೇ ಪ್ರಕರಣವಿಲ್ಲ. ಅವರು ಹೋಗಿದ್ದಾರಷ್ಟೇ. ಇದರ ಬಗ್ಗೆ ಅಭಿಪ್ರಾಯ ಕೇಳುವ ಪ್ರಶ್ನೆಯೇ ಬರುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಮೌಖಿಕ ಆದೇಶವನ್ನು ಪೊಲೀಸರು ನೀಡಿದ್ದಾರೆಂದು ಮಾಧ್ಯಮವೊಂದು ವರದಿ ಮಾಡಿರುವ ಕುರಿತು ತಿಳಿಸಿದ ಅವರು, “ಆ ರೀತಿ ಏನೂ ಇಲ್ಲ” ಎಂದರು.

“ಸುಳ್ಳು ಸುದ್ದಿ ಹಬ್ಬಿಸುತ್ತಿರುವ ಮಾಧ್ಯಮಗಳ ವಿರುದ್ಧ ಯಾವುದಾದರೂ ಕ್ರಮ ಜರುಗಿಸುವಿರಾ?” ಎಂದು ಪ್ರಶ್ನಿಸಿದಾಗ, “ಈ ಕುರಿತು ವಿಚಾರ ಮಾಡಲಾಗುವುದು” ಎಂದು ಸೂಚನೆ ನೀಡಿದ್ದಾರೆ.

ಮಾಧ್ಯಮಗಳು ವರದಿ ಮಾಡಿದ್ದೇನು?

ಸುವರ್ಣ ನ್ಯೂಸ್‌ ತನ್ನ ವರದಿಯಲ್ಲಿ, “ಪೊಲೀಸರಿಗೆ ಮಾಹಿತಿ ನೀಡದೆ ವಿದೇಶಕ್ಕೆ ಹಾರಿದ ಹಿಜಾಬ್ ಹುಡುಗಿ ಮುಸ್ಕಾನ್” ಎಂದು ಸುಳ್ಳು ಸುದ್ದಿಯನ್ನು ವರದಿ ಮಾಡಿದೆ. ಅದು ತನ್ನ ವರದಿಯಲ್ಲಿ ಯಾವುದೇ ಪೊಲೀಸರ ಅಧಿಕೃತ ಹೇಳಿಕೆಯನ್ನು ಉಲ್ಲೇಖಿಸಿಲ್ಲ. ಕೇವಲ ಕಪೋಲ ಕಲ್ಪಿತವಾಗಿ ಸುದ್ದಿಯನ್ನು ವರದಿ ಮಾಡಿದೆ. ಸುವರ್ಣ ನ್ಯೂಸ್‌ನ ಈ ವರದಿಯನ್ನು ನಂದನ್ ರಾಮಕೃಷ್ಣ, ಮಂಡ್ಯ ಎಂಬವರು ಮಾಡಿದ್ದಾರೆ.

ಇದನ್ನೂ ಓದಿ: ಪಬ್ಲಿಕ್‌, ಸುವರ್ಣ, ಟಿವಿ9 ಮತ್ತು ಪಬ್ಲಿಕ್ ಟಿವಿ ಕಚೇರಿ ಮುಂದೆ ಬುಧವಾರ ‘ಆತ್ಮಾವಲೋಕನ ಸತ್ಯಾಗ್ರಹ’

ಪಬ್ಲಿಕ್‌ ಟಿವಿ ತನ್ನ ವೆಬ್‌ಸೈಟ್‌ನಲ್ಲಿ, “ಪೊಲೀಸರನ್ನು ಯಾಮಾರಿಸಿ ವಿದೇಶಕ್ಕೆ ಹಾರಿದ ಅಲ್ಲಾಹು ಅಕ್ಬರ್‌ ಕೂಗಿದ ವಿದ್ಯಾರ್ಥಿನಿ” ಎಂಬ ಹೆಡ್‌ಲೈನ್‌ನೊಂದಿಗೆ ವರದಿ ಮಾಡಿದೆ. ಈ ವರದಿಯಲ್ಲಿ ಕೂಡಾ ಪತ್ರಿಕೆ ಯಾವುದೇ ಖಚಿತ ಮಾಹಿತಿಯನ್ನು ನೀಡದೆ ಸುಳ್ಳು ಮಾಹಿತಿಯನ್ನು ಬರೆಯಲಾಗಿದೆ.

ಪವರ್‌ ಟಿವಿಯ ವೆಬ್‌ಸೈಟ್‌ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ, “ವಿದೇಶಕ್ಕೆ ಹಾರಿದ ವಿದ್ಯಾರ್ಥಿನಿ ಮುಷ್ಕಾನ್; ಉಗ್ರಗಾಮಿಗಳ ಭೇಟಿ ಸಂಚು ಇದೆಯಾ?” ಎಂದು ಸುಳ್ಳು ಸುದ್ದಿಯನ್ನು ಪ್ರಶ್ನಾರ್ಥಕವಾಗಿ ಬರೆದು ಓದುಗರನ್ನು ದಾರಿ ತಪ್ಪಿಸಿದೆ. ಜೊತೆಗೆ ವರದಿಯಲ್ಲಿ, ಮುಸ್ಕಾನ್ ಪೊಲೀಸರನ್ನು ಯಾಮಾರಿಸಿ ವಿದೇಶಕ್ಕೆ ತೆರಳಿದ್ದಾರೆ ಎಂದು ಪ್ರತಿಪಾದಿಸಿದೆ.

ವಿಜಯವಾಣಿ ಕೂಡಾ ತಮ್ಮ ವೆಬ್‌ಸೈಟ್‌ನಲ್ಲಿ ಪೊಲೀಸರನ್ನು ಯಾಮಾರಿಸಿ ಮುಸ್ಕಾನ್ ವಿದೇಶಕ್ಕೆ ತೆರಳಿದ್ದಾರೆ ಎಂದು ವರದಿ ಮಾಡಿದೆ. ಸಂಜೆವಾಣಿ ಪತ್ರಿಕೆಯ ವೆಬ್‌ಸೈಟ್‌ನಲ್ಲಿ, “ಖಾಕಿಗೆ ಮಾಹಿತಿ ನೀಡದೆ ಸೌದಿಗೆ ತೆರಳಿದ ಮುಸ್ಕಾನ್‌ ಕುಟುಂಬ” ಎಂಬ ಹೆಡ್‌ಲೈನ್ ನೀಡಿ ವರದಿ ಪ್ರಕಟಿಸಿದೆ.

ಇನ್ನೂ ಕೆಲವು ಮಾಧ್ಯಮಗಳು, ಯಾವುದೇ ಸುದ್ದಿ ಮೌಲ್ಯವಿಲ್ಲದ, ಕುಟುಂಬವೊಂದರ ವೈಯಕ್ತಿಕ ಪ್ರವಾಸವನ್ನು ವರದಿ ಮಾಡಿದ್ದು, ಜನರನ್ನು ದಾರಿ ತಪ್ಪಿಸಿವೆ.

ಇದನ್ನೂ ಓದಿ: ‘ಬಾಯಿಗೆ ಬಂದಿದ್ದು ಬರೀತೀರಾ?’: ಕೋಮುದ್ವೇಷದ ಸುದ್ದಿಗಾಗಿ ‘ಪಬ್ಲಿಕ್ ಟಿವಿ’ ಪತ್ರಕರ್ತನ ವಿರುದ್ದ ಡಿಸಿಪಿ ಕಿಡಿ

ಮುಸ್ಕಾನ್‌ ಮತ್ತು ಅವರ ಕುಟುಂಬ ಪೊಲೀಸರನ್ನು ಯಾಮಾರಿಸಿ ಹೋಗಿದ್ದರೆ? ಪೊಲೀಸರು ಹೇಳಿದ್ದೇನು?

ವಾಸ್ತವದಲ್ಲಿ ಮುಸ್ಕಾನ್ ಮತ್ತು ಅವರ ಕುಟುಂಬ ರಂಜಾನ್ ಸಮಯದಲ್ಲೇ ಮುಸ್ಲಿಮರ ಪವಿತ್ರ ಸ್ಥಳವಾದ ಸೌದಿ ಅರೇಬಿಯಾದ ಮಕ್ಕಾಗೆ ತೀರ್ಥ ಯಾತ್ರೆಗೆ ಹೋಗಿರುವುದು ವರದಿಯಾಗಿದೆ. ಆದರೆ ಅವರು ಪೊಲೀಸರನ್ನು ಯಾಮಾರಿಸಿ ಹೋಗಿದ್ದಾರೆ ಎನ್ನುವ ಆರೋಪಕ್ಕೆ ಸಂಬಂಧಿಸಿದಂತೆ ಮಂಡ್ಯ ಪೂರ್ವ ಪೊಲೀಸ್‌ ಠಾಣೆಯ ಪೊಲೀಸ್‌ ಅಧಿಕಾರಿಯೊಬ್ಬರು ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿದ್ದಾರೆ.

‘ನಾನುಗೌರಿ.ಕಾಂ’ ಜೊತೆಗೆ ಮಾತನಾಡಿದ ಪೊಲೀಸ್ ಅಧಿಕಾರಿ, “ಹೊರ ದೇಶಕ್ಕೆ ಹೋಗುವ ನಿಯಮದಂತೆ, ಕಾನೂನು ಬದ್ದವಾಗಿಯೇ ಮುಸ್ಕಾನ್ ಅವರ ಕುಟುಂಬ ವಿದೇಶಕ್ಕೆ ಹೋಗಿದೆ. ಪೊಲೀಸರಿಗೆ ಯಾಮಾರಿಸಿ, ಹೇಳದೆ ಕೇಳದೆ, ಯಾರದೇ ಕಣ್ಣು ತಪ್ಪಿಸಿ ಹೋಗಿಲ್ಲ” ಎಂದು ಸ್ಪಷ್ಟ ಪಡಿಸಿದ್ದಾರೆ.

“ಎಲ್ಲಿಗಾದರೂ ತೆರಳಬೇಕಾದರೆ ಪೊಲೀಸರಿಗೆ ತಿಳಿಸಬೇಕು ಎಂದು ಪೊಲೀಸರು ಮೌಖಿಕವಾಗಿ ತಿಳಿಸಿದ್ದಾರೆ” ಎಂಬ ಸುವರ್ಣ ಟಿವಿ ವರದಿ ಬಗ್ಗೆ ಪ್ರತಿಕ್ರಿಯಿಸಿದ ಅಧಿಕಾರಿ, “ಇವೆಲ್ಲಾ ಸುಳ್ಳು ಸುದ್ದಿ, ಅವರ ಮೇಲಾಗಲಿ ಅವರ ಕುಟುಂಬದ ಮೇಲಾಗಲಿ ಯಾವುದೇ ಪ್ರಕರಣ ಇಲ್ಲ. ಅವರಿಗೆ ಕ್ರಿಮಿನಲ್ ಹಿನ್ನಲೆಯೂ ಇಲ್ಲ. ಹೀಗಾಗಿ ಅವರನ್ನು ಮಾನಿಟರ್‌ ಮಾಡುವ ಅವಶ್ಯಕತೆಯೂ ಇಲ್ಲ. ಅವರನ್ನು ತನಿಖೆ ಮಾಡಬೇಕು ಎನ್ನುತ್ತಾರೆ, ಆದರೆ ಅವರು ಯಾವ ತಪ್ಪು ಮಾಡಿದ್ದಾರೆ ಎಂದು ತನಿಖೆ ಮಾಡಬೇಕು?” ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ದೇಶದ್ರೋಹ ಕಾನೂನಿಗೆ ತಡೆ; ಬಂಧಿತರು ಜಾಮೀನು ಪಡೆಯಬಹುದು: ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ

“ಮಾಧ್ಯಮಗಳಿಗೆ ಯಾವುದೇ ಸುದ್ದಿ ಇಲ್ಲದೆ ಇರುವುದಕ್ಕೆ ಏನೋ ಒಂದನ್ನು ಬರೆದಿದ್ದಾರೆ. ಇದನ್ನೆಲ್ಲಾ ನೋಡುತ್ತಾ ಇರಬೇಕಾದರೆ ನಮಗೆ ಬೇಜಾರಾಗುತ್ತದೆ. ಪೊಲೀಸರ ಹೆಸರು ಬಳಸಿಕೊಂಡು ಮಾಧ್ಯಮಗಳು ಸುಳ್ಳು ಹರಡುತ್ತಿರುವುದರ ಬಗ್ಗೆ ಇಲಾಖೆಯಲ್ಲಿ ಚರ್ಚೆ ನಡೆಯುತ್ತಿದೆ. ಅಂತಹ ಮಾಧ್ಯಮಗಳ ವಿರುದ್ಧ ಶೀಘ್ರದಲ್ಲೇ ಕ್ರಮ ಕೈಗೊಳ್ಳಲಾಗುವುದು” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...