Homeಮುಖಪುಟಮುಸ್ಕಾನ್‌ ವಿರುದ್ಧ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿ: ಕ್ರಮ ಜರುಗಿಸಲು ವಿಚಾರ ಮಾಡಲಾಗುವುದು- ಮಂಡ್ಯ ಎಸ್‌ಪಿ

ಮುಸ್ಕಾನ್‌ ವಿರುದ್ಧ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿ: ಕ್ರಮ ಜರುಗಿಸಲು ವಿಚಾರ ಮಾಡಲಾಗುವುದು- ಮಂಡ್ಯ ಎಸ್‌ಪಿ

“ಮಾಧ್ಯಮಗಳಿಗೆ ಯಾವುದೇ ಸುದ್ದಿ ಇಲ್ಲದೆ ಇರುವುದಕ್ಕೆ ಏನೋ ಒಂದನ್ನು ಬರೆದಿದ್ದಾರೆ” ಎಂದು ಸ್ಥಳೀಯ ಪೊಲೀಸ್ ಅಧಿಕಾರಿಯೊಬ್ಬರು ಬೇಸರ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

ರಾಜ್ಯದಾದ್ಯಂತ ಹಿಜಾಬ್‌ ವಿಚಾರವಾಗಿ ವಿವಾದ ಭುಗಿಲೆದ್ದ ಸಂದರ್ಭದಲ್ಲಿ ಬಿಜೆಪಿ ಬೆಂಬಲಿತ ಎಬಿವಿಪಿ ಸಂಘಟನೆಯ ದುಷ್ಕರ್ಮಿಗಳಿಂದ ಸುತ್ತುವರೆಯಲ್ಪಟ್ಟಾಗ, ‘ಅಲ್ಲಾಹು ಅಕ್ಬರ್‌’ ಎಂದು ಘೋಷಣೆ ಕೂಗಿದ್ದ ಮಂಡ್ಯದ ಪಿಇಎಸ್‌‌‌ ವಿದ್ಯಾರ್ಥಿನಿ ಮುಸ್ಕಾನ್ ವಿಚಾರವಾಗಿ, ರಾಜ್ಯದ ಹಲವಾರು ಸುದ್ದಿ ಮಾಧ್ಯಮಗಳು ಕಪೋಲಕಲ್ಪಿತ ವರದಿಗಳನ್ನು ಪ್ರಕಟಿಸಿ ಓದುಗರನ್ನು ದಾರಿತಪ್ಪಿಸಿವೆ.

ಮುಖ್ಯವಾಗಿ ಏಷ್ಯಾನೆಟ್‌ ಸುವರ್ಣ ನ್ಯೂಸ್‌‌, ವಿಜಯವಾಣಿ, ಪಬ್ಲಿಕ್ ಟಿವಿ, ಪವರ್‌ ಟಿವಿ, ಸಂಜೆವಾಣಿ ಸೇರಿದಂತೆ ಹಲವಾರು ಪತ್ರಿಕೆಗಳು ಮತ್ತು ಮಾಧ್ಯಮಗಳು ತಮ್ಮ ವೆಬ್‌ಸೈಟ್‌ನಲ್ಲಿ, “ವಿದ್ಯಾರ್ಥಿನಿ ಮುಸ್ಕಾನ್ ಮತ್ತು ಅವರ ಕುಟುಂಬ ಪೊಲೀಸರನ್ನು ಯಾಮಾರಿಸಿ ವಿದೇಶಕ್ಕೆ ತೆರಳಿದ್ದಾರೆ” ಎಂದು ವರದಿ ಮಾಡಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಕುರಿತು ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿರುವ ಮಂಡ್ಯ ಪೊಲೀಸ್ ವರಿಷ್ಠಾಧಿಕಾರಿ ಎನ್‌.ಯತೀಶ್‌, “ಮುಸ್ಕಾನ್‌ ಹಾಗೂ ಅವರ ಕುಟುಂಬದ ವಿರುದ್ಧ ಯಾವುದೇ ಪ್ರಕರಣವಿಲ್ಲ. ಅವರು ಹೋಗಿದ್ದಾರಷ್ಟೇ. ಇದರ ಬಗ್ಗೆ ಅಭಿಪ್ರಾಯ ಕೇಳುವ ಪ್ರಶ್ನೆಯೇ ಬರುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಮೌಖಿಕ ಆದೇಶವನ್ನು ಪೊಲೀಸರು ನೀಡಿದ್ದಾರೆಂದು ಮಾಧ್ಯಮವೊಂದು ವರದಿ ಮಾಡಿರುವ ಕುರಿತು ತಿಳಿಸಿದ ಅವರು, “ಆ ರೀತಿ ಏನೂ ಇಲ್ಲ” ಎಂದರು.

“ಸುಳ್ಳು ಸುದ್ದಿ ಹಬ್ಬಿಸುತ್ತಿರುವ ಮಾಧ್ಯಮಗಳ ವಿರುದ್ಧ ಯಾವುದಾದರೂ ಕ್ರಮ ಜರುಗಿಸುವಿರಾ?” ಎಂದು ಪ್ರಶ್ನಿಸಿದಾಗ, “ಈ ಕುರಿತು ವಿಚಾರ ಮಾಡಲಾಗುವುದು” ಎಂದು ಸೂಚನೆ ನೀಡಿದ್ದಾರೆ.

ಮಾಧ್ಯಮಗಳು ವರದಿ ಮಾಡಿದ್ದೇನು?

ಸುವರ್ಣ ನ್ಯೂಸ್‌ ತನ್ನ ವರದಿಯಲ್ಲಿ, “ಪೊಲೀಸರಿಗೆ ಮಾಹಿತಿ ನೀಡದೆ ವಿದೇಶಕ್ಕೆ ಹಾರಿದ ಹಿಜಾಬ್ ಹುಡುಗಿ ಮುಸ್ಕಾನ್” ಎಂದು ಸುಳ್ಳು ಸುದ್ದಿಯನ್ನು ವರದಿ ಮಾಡಿದೆ. ಅದು ತನ್ನ ವರದಿಯಲ್ಲಿ ಯಾವುದೇ ಪೊಲೀಸರ ಅಧಿಕೃತ ಹೇಳಿಕೆಯನ್ನು ಉಲ್ಲೇಖಿಸಿಲ್ಲ. ಕೇವಲ ಕಪೋಲ ಕಲ್ಪಿತವಾಗಿ ಸುದ್ದಿಯನ್ನು ವರದಿ ಮಾಡಿದೆ. ಸುವರ್ಣ ನ್ಯೂಸ್‌ನ ಈ ವರದಿಯನ್ನು ನಂದನ್ ರಾಮಕೃಷ್ಣ, ಮಂಡ್ಯ ಎಂಬವರು ಮಾಡಿದ್ದಾರೆ.

ಇದನ್ನೂ ಓದಿ: ಪಬ್ಲಿಕ್‌, ಸುವರ್ಣ, ಟಿವಿ9 ಮತ್ತು ಪಬ್ಲಿಕ್ ಟಿವಿ ಕಚೇರಿ ಮುಂದೆ ಬುಧವಾರ ‘ಆತ್ಮಾವಲೋಕನ ಸತ್ಯಾಗ್ರಹ’

ಪಬ್ಲಿಕ್‌ ಟಿವಿ ತನ್ನ ವೆಬ್‌ಸೈಟ್‌ನಲ್ಲಿ, “ಪೊಲೀಸರನ್ನು ಯಾಮಾರಿಸಿ ವಿದೇಶಕ್ಕೆ ಹಾರಿದ ಅಲ್ಲಾಹು ಅಕ್ಬರ್‌ ಕೂಗಿದ ವಿದ್ಯಾರ್ಥಿನಿ” ಎಂಬ ಹೆಡ್‌ಲೈನ್‌ನೊಂದಿಗೆ ವರದಿ ಮಾಡಿದೆ. ಈ ವರದಿಯಲ್ಲಿ ಕೂಡಾ ಪತ್ರಿಕೆ ಯಾವುದೇ ಖಚಿತ ಮಾಹಿತಿಯನ್ನು ನೀಡದೆ ಸುಳ್ಳು ಮಾಹಿತಿಯನ್ನು ಬರೆಯಲಾಗಿದೆ.

ಪವರ್‌ ಟಿವಿಯ ವೆಬ್‌ಸೈಟ್‌ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ, “ವಿದೇಶಕ್ಕೆ ಹಾರಿದ ವಿದ್ಯಾರ್ಥಿನಿ ಮುಷ್ಕಾನ್; ಉಗ್ರಗಾಮಿಗಳ ಭೇಟಿ ಸಂಚು ಇದೆಯಾ?” ಎಂದು ಸುಳ್ಳು ಸುದ್ದಿಯನ್ನು ಪ್ರಶ್ನಾರ್ಥಕವಾಗಿ ಬರೆದು ಓದುಗರನ್ನು ದಾರಿ ತಪ್ಪಿಸಿದೆ. ಜೊತೆಗೆ ವರದಿಯಲ್ಲಿ, ಮುಸ್ಕಾನ್ ಪೊಲೀಸರನ್ನು ಯಾಮಾರಿಸಿ ವಿದೇಶಕ್ಕೆ ತೆರಳಿದ್ದಾರೆ ಎಂದು ಪ್ರತಿಪಾದಿಸಿದೆ.

ವಿಜಯವಾಣಿ ಕೂಡಾ ತಮ್ಮ ವೆಬ್‌ಸೈಟ್‌ನಲ್ಲಿ ಪೊಲೀಸರನ್ನು ಯಾಮಾರಿಸಿ ಮುಸ್ಕಾನ್ ವಿದೇಶಕ್ಕೆ ತೆರಳಿದ್ದಾರೆ ಎಂದು ವರದಿ ಮಾಡಿದೆ. ಸಂಜೆವಾಣಿ ಪತ್ರಿಕೆಯ ವೆಬ್‌ಸೈಟ್‌ನಲ್ಲಿ, “ಖಾಕಿಗೆ ಮಾಹಿತಿ ನೀಡದೆ ಸೌದಿಗೆ ತೆರಳಿದ ಮುಸ್ಕಾನ್‌ ಕುಟುಂಬ” ಎಂಬ ಹೆಡ್‌ಲೈನ್ ನೀಡಿ ವರದಿ ಪ್ರಕಟಿಸಿದೆ.

ಇನ್ನೂ ಕೆಲವು ಮಾಧ್ಯಮಗಳು, ಯಾವುದೇ ಸುದ್ದಿ ಮೌಲ್ಯವಿಲ್ಲದ, ಕುಟುಂಬವೊಂದರ ವೈಯಕ್ತಿಕ ಪ್ರವಾಸವನ್ನು ವರದಿ ಮಾಡಿದ್ದು, ಜನರನ್ನು ದಾರಿ ತಪ್ಪಿಸಿವೆ.

ಇದನ್ನೂ ಓದಿ: ‘ಬಾಯಿಗೆ ಬಂದಿದ್ದು ಬರೀತೀರಾ?’: ಕೋಮುದ್ವೇಷದ ಸುದ್ದಿಗಾಗಿ ‘ಪಬ್ಲಿಕ್ ಟಿವಿ’ ಪತ್ರಕರ್ತನ ವಿರುದ್ದ ಡಿಸಿಪಿ ಕಿಡಿ

ಮುಸ್ಕಾನ್‌ ಮತ್ತು ಅವರ ಕುಟುಂಬ ಪೊಲೀಸರನ್ನು ಯಾಮಾರಿಸಿ ಹೋಗಿದ್ದರೆ? ಪೊಲೀಸರು ಹೇಳಿದ್ದೇನು?

ವಾಸ್ತವದಲ್ಲಿ ಮುಸ್ಕಾನ್ ಮತ್ತು ಅವರ ಕುಟುಂಬ ರಂಜಾನ್ ಸಮಯದಲ್ಲೇ ಮುಸ್ಲಿಮರ ಪವಿತ್ರ ಸ್ಥಳವಾದ ಸೌದಿ ಅರೇಬಿಯಾದ ಮಕ್ಕಾಗೆ ತೀರ್ಥ ಯಾತ್ರೆಗೆ ಹೋಗಿರುವುದು ವರದಿಯಾಗಿದೆ. ಆದರೆ ಅವರು ಪೊಲೀಸರನ್ನು ಯಾಮಾರಿಸಿ ಹೋಗಿದ್ದಾರೆ ಎನ್ನುವ ಆರೋಪಕ್ಕೆ ಸಂಬಂಧಿಸಿದಂತೆ ಮಂಡ್ಯ ಪೂರ್ವ ಪೊಲೀಸ್‌ ಠಾಣೆಯ ಪೊಲೀಸ್‌ ಅಧಿಕಾರಿಯೊಬ್ಬರು ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿದ್ದಾರೆ.

‘ನಾನುಗೌರಿ.ಕಾಂ’ ಜೊತೆಗೆ ಮಾತನಾಡಿದ ಪೊಲೀಸ್ ಅಧಿಕಾರಿ, “ಹೊರ ದೇಶಕ್ಕೆ ಹೋಗುವ ನಿಯಮದಂತೆ, ಕಾನೂನು ಬದ್ದವಾಗಿಯೇ ಮುಸ್ಕಾನ್ ಅವರ ಕುಟುಂಬ ವಿದೇಶಕ್ಕೆ ಹೋಗಿದೆ. ಪೊಲೀಸರಿಗೆ ಯಾಮಾರಿಸಿ, ಹೇಳದೆ ಕೇಳದೆ, ಯಾರದೇ ಕಣ್ಣು ತಪ್ಪಿಸಿ ಹೋಗಿಲ್ಲ” ಎಂದು ಸ್ಪಷ್ಟ ಪಡಿಸಿದ್ದಾರೆ.

“ಎಲ್ಲಿಗಾದರೂ ತೆರಳಬೇಕಾದರೆ ಪೊಲೀಸರಿಗೆ ತಿಳಿಸಬೇಕು ಎಂದು ಪೊಲೀಸರು ಮೌಖಿಕವಾಗಿ ತಿಳಿಸಿದ್ದಾರೆ” ಎಂಬ ಸುವರ್ಣ ಟಿವಿ ವರದಿ ಬಗ್ಗೆ ಪ್ರತಿಕ್ರಿಯಿಸಿದ ಅಧಿಕಾರಿ, “ಇವೆಲ್ಲಾ ಸುಳ್ಳು ಸುದ್ದಿ, ಅವರ ಮೇಲಾಗಲಿ ಅವರ ಕುಟುಂಬದ ಮೇಲಾಗಲಿ ಯಾವುದೇ ಪ್ರಕರಣ ಇಲ್ಲ. ಅವರಿಗೆ ಕ್ರಿಮಿನಲ್ ಹಿನ್ನಲೆಯೂ ಇಲ್ಲ. ಹೀಗಾಗಿ ಅವರನ್ನು ಮಾನಿಟರ್‌ ಮಾಡುವ ಅವಶ್ಯಕತೆಯೂ ಇಲ್ಲ. ಅವರನ್ನು ತನಿಖೆ ಮಾಡಬೇಕು ಎನ್ನುತ್ತಾರೆ, ಆದರೆ ಅವರು ಯಾವ ತಪ್ಪು ಮಾಡಿದ್ದಾರೆ ಎಂದು ತನಿಖೆ ಮಾಡಬೇಕು?” ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ದೇಶದ್ರೋಹ ಕಾನೂನಿಗೆ ತಡೆ; ಬಂಧಿತರು ಜಾಮೀನು ಪಡೆಯಬಹುದು: ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ

“ಮಾಧ್ಯಮಗಳಿಗೆ ಯಾವುದೇ ಸುದ್ದಿ ಇಲ್ಲದೆ ಇರುವುದಕ್ಕೆ ಏನೋ ಒಂದನ್ನು ಬರೆದಿದ್ದಾರೆ. ಇದನ್ನೆಲ್ಲಾ ನೋಡುತ್ತಾ ಇರಬೇಕಾದರೆ ನಮಗೆ ಬೇಜಾರಾಗುತ್ತದೆ. ಪೊಲೀಸರ ಹೆಸರು ಬಳಸಿಕೊಂಡು ಮಾಧ್ಯಮಗಳು ಸುಳ್ಳು ಹರಡುತ್ತಿರುವುದರ ಬಗ್ಗೆ ಇಲಾಖೆಯಲ್ಲಿ ಚರ್ಚೆ ನಡೆಯುತ್ತಿದೆ. ಅಂತಹ ಮಾಧ್ಯಮಗಳ ವಿರುದ್ಧ ಶೀಘ್ರದಲ್ಲೇ ಕ್ರಮ ಕೈಗೊಳ್ಳಲಾಗುವುದು” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...