Homeಮುಖಪುಟಮುಸ್ಕಾನ್‌ ವಿರುದ್ಧ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿ: ಕ್ರಮ ಜರುಗಿಸಲು ವಿಚಾರ ಮಾಡಲಾಗುವುದು- ಮಂಡ್ಯ ಎಸ್‌ಪಿ

ಮುಸ್ಕಾನ್‌ ವಿರುದ್ಧ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿ: ಕ್ರಮ ಜರುಗಿಸಲು ವಿಚಾರ ಮಾಡಲಾಗುವುದು- ಮಂಡ್ಯ ಎಸ್‌ಪಿ

“ಮಾಧ್ಯಮಗಳಿಗೆ ಯಾವುದೇ ಸುದ್ದಿ ಇಲ್ಲದೆ ಇರುವುದಕ್ಕೆ ಏನೋ ಒಂದನ್ನು ಬರೆದಿದ್ದಾರೆ” ಎಂದು ಸ್ಥಳೀಯ ಪೊಲೀಸ್ ಅಧಿಕಾರಿಯೊಬ್ಬರು ಬೇಸರ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

ರಾಜ್ಯದಾದ್ಯಂತ ಹಿಜಾಬ್‌ ವಿಚಾರವಾಗಿ ವಿವಾದ ಭುಗಿಲೆದ್ದ ಸಂದರ್ಭದಲ್ಲಿ ಬಿಜೆಪಿ ಬೆಂಬಲಿತ ಎಬಿವಿಪಿ ಸಂಘಟನೆಯ ದುಷ್ಕರ್ಮಿಗಳಿಂದ ಸುತ್ತುವರೆಯಲ್ಪಟ್ಟಾಗ, ‘ಅಲ್ಲಾಹು ಅಕ್ಬರ್‌’ ಎಂದು ಘೋಷಣೆ ಕೂಗಿದ್ದ ಮಂಡ್ಯದ ಪಿಇಎಸ್‌‌‌ ವಿದ್ಯಾರ್ಥಿನಿ ಮುಸ್ಕಾನ್ ವಿಚಾರವಾಗಿ, ರಾಜ್ಯದ ಹಲವಾರು ಸುದ್ದಿ ಮಾಧ್ಯಮಗಳು ಕಪೋಲಕಲ್ಪಿತ ವರದಿಗಳನ್ನು ಪ್ರಕಟಿಸಿ ಓದುಗರನ್ನು ದಾರಿತಪ್ಪಿಸಿವೆ.

ಮುಖ್ಯವಾಗಿ ಏಷ್ಯಾನೆಟ್‌ ಸುವರ್ಣ ನ್ಯೂಸ್‌‌, ವಿಜಯವಾಣಿ, ಪಬ್ಲಿಕ್ ಟಿವಿ, ಪವರ್‌ ಟಿವಿ, ಸಂಜೆವಾಣಿ ಸೇರಿದಂತೆ ಹಲವಾರು ಪತ್ರಿಕೆಗಳು ಮತ್ತು ಮಾಧ್ಯಮಗಳು ತಮ್ಮ ವೆಬ್‌ಸೈಟ್‌ನಲ್ಲಿ, “ವಿದ್ಯಾರ್ಥಿನಿ ಮುಸ್ಕಾನ್ ಮತ್ತು ಅವರ ಕುಟುಂಬ ಪೊಲೀಸರನ್ನು ಯಾಮಾರಿಸಿ ವಿದೇಶಕ್ಕೆ ತೆರಳಿದ್ದಾರೆ” ಎಂದು ವರದಿ ಮಾಡಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಕುರಿತು ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿರುವ ಮಂಡ್ಯ ಪೊಲೀಸ್ ವರಿಷ್ಠಾಧಿಕಾರಿ ಎನ್‌.ಯತೀಶ್‌, “ಮುಸ್ಕಾನ್‌ ಹಾಗೂ ಅವರ ಕುಟುಂಬದ ವಿರುದ್ಧ ಯಾವುದೇ ಪ್ರಕರಣವಿಲ್ಲ. ಅವರು ಹೋಗಿದ್ದಾರಷ್ಟೇ. ಇದರ ಬಗ್ಗೆ ಅಭಿಪ್ರಾಯ ಕೇಳುವ ಪ್ರಶ್ನೆಯೇ ಬರುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಮೌಖಿಕ ಆದೇಶವನ್ನು ಪೊಲೀಸರು ನೀಡಿದ್ದಾರೆಂದು ಮಾಧ್ಯಮವೊಂದು ವರದಿ ಮಾಡಿರುವ ಕುರಿತು ತಿಳಿಸಿದ ಅವರು, “ಆ ರೀತಿ ಏನೂ ಇಲ್ಲ” ಎಂದರು.

“ಸುಳ್ಳು ಸುದ್ದಿ ಹಬ್ಬಿಸುತ್ತಿರುವ ಮಾಧ್ಯಮಗಳ ವಿರುದ್ಧ ಯಾವುದಾದರೂ ಕ್ರಮ ಜರುಗಿಸುವಿರಾ?” ಎಂದು ಪ್ರಶ್ನಿಸಿದಾಗ, “ಈ ಕುರಿತು ವಿಚಾರ ಮಾಡಲಾಗುವುದು” ಎಂದು ಸೂಚನೆ ನೀಡಿದ್ದಾರೆ.

ಮಾಧ್ಯಮಗಳು ವರದಿ ಮಾಡಿದ್ದೇನು?

ಸುವರ್ಣ ನ್ಯೂಸ್‌ ತನ್ನ ವರದಿಯಲ್ಲಿ, “ಪೊಲೀಸರಿಗೆ ಮಾಹಿತಿ ನೀಡದೆ ವಿದೇಶಕ್ಕೆ ಹಾರಿದ ಹಿಜಾಬ್ ಹುಡುಗಿ ಮುಸ್ಕಾನ್” ಎಂದು ಸುಳ್ಳು ಸುದ್ದಿಯನ್ನು ವರದಿ ಮಾಡಿದೆ. ಅದು ತನ್ನ ವರದಿಯಲ್ಲಿ ಯಾವುದೇ ಪೊಲೀಸರ ಅಧಿಕೃತ ಹೇಳಿಕೆಯನ್ನು ಉಲ್ಲೇಖಿಸಿಲ್ಲ. ಕೇವಲ ಕಪೋಲ ಕಲ್ಪಿತವಾಗಿ ಸುದ್ದಿಯನ್ನು ವರದಿ ಮಾಡಿದೆ. ಸುವರ್ಣ ನ್ಯೂಸ್‌ನ ಈ ವರದಿಯನ್ನು ನಂದನ್ ರಾಮಕೃಷ್ಣ, ಮಂಡ್ಯ ಎಂಬವರು ಮಾಡಿದ್ದಾರೆ.

ಇದನ್ನೂ ಓದಿ: ಪಬ್ಲಿಕ್‌, ಸುವರ್ಣ, ಟಿವಿ9 ಮತ್ತು ಪಬ್ಲಿಕ್ ಟಿವಿ ಕಚೇರಿ ಮುಂದೆ ಬುಧವಾರ ‘ಆತ್ಮಾವಲೋಕನ ಸತ್ಯಾಗ್ರಹ’

ಪಬ್ಲಿಕ್‌ ಟಿವಿ ತನ್ನ ವೆಬ್‌ಸೈಟ್‌ನಲ್ಲಿ, “ಪೊಲೀಸರನ್ನು ಯಾಮಾರಿಸಿ ವಿದೇಶಕ್ಕೆ ಹಾರಿದ ಅಲ್ಲಾಹು ಅಕ್ಬರ್‌ ಕೂಗಿದ ವಿದ್ಯಾರ್ಥಿನಿ” ಎಂಬ ಹೆಡ್‌ಲೈನ್‌ನೊಂದಿಗೆ ವರದಿ ಮಾಡಿದೆ. ಈ ವರದಿಯಲ್ಲಿ ಕೂಡಾ ಪತ್ರಿಕೆ ಯಾವುದೇ ಖಚಿತ ಮಾಹಿತಿಯನ್ನು ನೀಡದೆ ಸುಳ್ಳು ಮಾಹಿತಿಯನ್ನು ಬರೆಯಲಾಗಿದೆ.

ಪವರ್‌ ಟಿವಿಯ ವೆಬ್‌ಸೈಟ್‌ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ, “ವಿದೇಶಕ್ಕೆ ಹಾರಿದ ವಿದ್ಯಾರ್ಥಿನಿ ಮುಷ್ಕಾನ್; ಉಗ್ರಗಾಮಿಗಳ ಭೇಟಿ ಸಂಚು ಇದೆಯಾ?” ಎಂದು ಸುಳ್ಳು ಸುದ್ದಿಯನ್ನು ಪ್ರಶ್ನಾರ್ಥಕವಾಗಿ ಬರೆದು ಓದುಗರನ್ನು ದಾರಿ ತಪ್ಪಿಸಿದೆ. ಜೊತೆಗೆ ವರದಿಯಲ್ಲಿ, ಮುಸ್ಕಾನ್ ಪೊಲೀಸರನ್ನು ಯಾಮಾರಿಸಿ ವಿದೇಶಕ್ಕೆ ತೆರಳಿದ್ದಾರೆ ಎಂದು ಪ್ರತಿಪಾದಿಸಿದೆ.

ವಿಜಯವಾಣಿ ಕೂಡಾ ತಮ್ಮ ವೆಬ್‌ಸೈಟ್‌ನಲ್ಲಿ ಪೊಲೀಸರನ್ನು ಯಾಮಾರಿಸಿ ಮುಸ್ಕಾನ್ ವಿದೇಶಕ್ಕೆ ತೆರಳಿದ್ದಾರೆ ಎಂದು ವರದಿ ಮಾಡಿದೆ. ಸಂಜೆವಾಣಿ ಪತ್ರಿಕೆಯ ವೆಬ್‌ಸೈಟ್‌ನಲ್ಲಿ, “ಖಾಕಿಗೆ ಮಾಹಿತಿ ನೀಡದೆ ಸೌದಿಗೆ ತೆರಳಿದ ಮುಸ್ಕಾನ್‌ ಕುಟುಂಬ” ಎಂಬ ಹೆಡ್‌ಲೈನ್ ನೀಡಿ ವರದಿ ಪ್ರಕಟಿಸಿದೆ.

ಇನ್ನೂ ಕೆಲವು ಮಾಧ್ಯಮಗಳು, ಯಾವುದೇ ಸುದ್ದಿ ಮೌಲ್ಯವಿಲ್ಲದ, ಕುಟುಂಬವೊಂದರ ವೈಯಕ್ತಿಕ ಪ್ರವಾಸವನ್ನು ವರದಿ ಮಾಡಿದ್ದು, ಜನರನ್ನು ದಾರಿ ತಪ್ಪಿಸಿವೆ.

ಇದನ್ನೂ ಓದಿ: ‘ಬಾಯಿಗೆ ಬಂದಿದ್ದು ಬರೀತೀರಾ?’: ಕೋಮುದ್ವೇಷದ ಸುದ್ದಿಗಾಗಿ ‘ಪಬ್ಲಿಕ್ ಟಿವಿ’ ಪತ್ರಕರ್ತನ ವಿರುದ್ದ ಡಿಸಿಪಿ ಕಿಡಿ

ಮುಸ್ಕಾನ್‌ ಮತ್ತು ಅವರ ಕುಟುಂಬ ಪೊಲೀಸರನ್ನು ಯಾಮಾರಿಸಿ ಹೋಗಿದ್ದರೆ? ಪೊಲೀಸರು ಹೇಳಿದ್ದೇನು?

ವಾಸ್ತವದಲ್ಲಿ ಮುಸ್ಕಾನ್ ಮತ್ತು ಅವರ ಕುಟುಂಬ ರಂಜಾನ್ ಸಮಯದಲ್ಲೇ ಮುಸ್ಲಿಮರ ಪವಿತ್ರ ಸ್ಥಳವಾದ ಸೌದಿ ಅರೇಬಿಯಾದ ಮಕ್ಕಾಗೆ ತೀರ್ಥ ಯಾತ್ರೆಗೆ ಹೋಗಿರುವುದು ವರದಿಯಾಗಿದೆ. ಆದರೆ ಅವರು ಪೊಲೀಸರನ್ನು ಯಾಮಾರಿಸಿ ಹೋಗಿದ್ದಾರೆ ಎನ್ನುವ ಆರೋಪಕ್ಕೆ ಸಂಬಂಧಿಸಿದಂತೆ ಮಂಡ್ಯ ಪೂರ್ವ ಪೊಲೀಸ್‌ ಠಾಣೆಯ ಪೊಲೀಸ್‌ ಅಧಿಕಾರಿಯೊಬ್ಬರು ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿದ್ದಾರೆ.

‘ನಾನುಗೌರಿ.ಕಾಂ’ ಜೊತೆಗೆ ಮಾತನಾಡಿದ ಪೊಲೀಸ್ ಅಧಿಕಾರಿ, “ಹೊರ ದೇಶಕ್ಕೆ ಹೋಗುವ ನಿಯಮದಂತೆ, ಕಾನೂನು ಬದ್ದವಾಗಿಯೇ ಮುಸ್ಕಾನ್ ಅವರ ಕುಟುಂಬ ವಿದೇಶಕ್ಕೆ ಹೋಗಿದೆ. ಪೊಲೀಸರಿಗೆ ಯಾಮಾರಿಸಿ, ಹೇಳದೆ ಕೇಳದೆ, ಯಾರದೇ ಕಣ್ಣು ತಪ್ಪಿಸಿ ಹೋಗಿಲ್ಲ” ಎಂದು ಸ್ಪಷ್ಟ ಪಡಿಸಿದ್ದಾರೆ.

“ಎಲ್ಲಿಗಾದರೂ ತೆರಳಬೇಕಾದರೆ ಪೊಲೀಸರಿಗೆ ತಿಳಿಸಬೇಕು ಎಂದು ಪೊಲೀಸರು ಮೌಖಿಕವಾಗಿ ತಿಳಿಸಿದ್ದಾರೆ” ಎಂಬ ಸುವರ್ಣ ಟಿವಿ ವರದಿ ಬಗ್ಗೆ ಪ್ರತಿಕ್ರಿಯಿಸಿದ ಅಧಿಕಾರಿ, “ಇವೆಲ್ಲಾ ಸುಳ್ಳು ಸುದ್ದಿ, ಅವರ ಮೇಲಾಗಲಿ ಅವರ ಕುಟುಂಬದ ಮೇಲಾಗಲಿ ಯಾವುದೇ ಪ್ರಕರಣ ಇಲ್ಲ. ಅವರಿಗೆ ಕ್ರಿಮಿನಲ್ ಹಿನ್ನಲೆಯೂ ಇಲ್ಲ. ಹೀಗಾಗಿ ಅವರನ್ನು ಮಾನಿಟರ್‌ ಮಾಡುವ ಅವಶ್ಯಕತೆಯೂ ಇಲ್ಲ. ಅವರನ್ನು ತನಿಖೆ ಮಾಡಬೇಕು ಎನ್ನುತ್ತಾರೆ, ಆದರೆ ಅವರು ಯಾವ ತಪ್ಪು ಮಾಡಿದ್ದಾರೆ ಎಂದು ತನಿಖೆ ಮಾಡಬೇಕು?” ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ದೇಶದ್ರೋಹ ಕಾನೂನಿಗೆ ತಡೆ; ಬಂಧಿತರು ಜಾಮೀನು ಪಡೆಯಬಹುದು: ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ

“ಮಾಧ್ಯಮಗಳಿಗೆ ಯಾವುದೇ ಸುದ್ದಿ ಇಲ್ಲದೆ ಇರುವುದಕ್ಕೆ ಏನೋ ಒಂದನ್ನು ಬರೆದಿದ್ದಾರೆ. ಇದನ್ನೆಲ್ಲಾ ನೋಡುತ್ತಾ ಇರಬೇಕಾದರೆ ನಮಗೆ ಬೇಜಾರಾಗುತ್ತದೆ. ಪೊಲೀಸರ ಹೆಸರು ಬಳಸಿಕೊಂಡು ಮಾಧ್ಯಮಗಳು ಸುಳ್ಳು ಹರಡುತ್ತಿರುವುದರ ಬಗ್ಗೆ ಇಲಾಖೆಯಲ್ಲಿ ಚರ್ಚೆ ನಡೆಯುತ್ತಿದೆ. ಅಂತಹ ಮಾಧ್ಯಮಗಳ ವಿರುದ್ಧ ಶೀಘ್ರದಲ್ಲೇ ಕ್ರಮ ಕೈಗೊಳ್ಳಲಾಗುವುದು” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...