Homeಫ್ಯಾಕ್ಟ್‌ಚೆಕ್ಸುಳ್ಳು ಸುದ್ದಿ ಪ್ರಸಾರ: ಬಲಪಂಥೀಯ ಮಹಿಳೆ ಮೇಲೆ ಕ್ರಮಕ್ಕೆ ಮುಂದಾದ ಕೋಲ್ಕತ್ತ ಪೊಲೀಸ್!

ಸುಳ್ಳು ಸುದ್ದಿ ಪ್ರಸಾರ: ಬಲಪಂಥೀಯ ಮಹಿಳೆ ಮೇಲೆ ಕ್ರಮಕ್ಕೆ ಮುಂದಾದ ಕೋಲ್ಕತ್ತ ಪೊಲೀಸ್!

ಕೋಲ್ಕತ್ತ ಪೊಲೀಸ್‌ನ 'ಫೇಕ್ ನ್ಯೂಸ್ ಅಲರ್ಟ್' ತಂಡ "ಬಾಂಗ್ಲಾದೇಶದ ವೀಡಿಯೊ ಕ್ಲಿಪ್ ಅನ್ನು ಕೋಲ್ಕತ್ತಾದವರು ಎಂದು ತಪ್ಪಾಗಿ ಹೇಳಲಾಗುತ್ತಿದೆ. ಕಾನೂನು ಕ್ರಮ ಪ್ರಾರಂಭಿಸಲಾಗಿದೆ" ಎಂದು ಟ್ವೀಟ್ ಮಾಡಿದೆ.

- Advertisement -
- Advertisement -

ಫೇಕ್‌ ನ್ಯೂಸ್‌ ಎಂಬುವುದು ಸಮಾಜದಲ್ಲಿ ದೊಡ್ಡ ಸಮಸ್ಯೆಯಾಗಿದೆ. ಅವುಗಳ ನಿಯಂತ್ರಣ ಬಹುಕಷ್ಟವಾಗಿದೆ. ಇಂತಹ ಸಮಯದಲ್ಲಿ ಕೋಲ್ಕತ್ತ ಪೊಲೀಸರು ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳುತ್ತಿರುವುದನ್ನು ಹಲವರು ಶ್ಲಾಘಿಸಿದ್ದಾರೆ.

ಟ್ವಿಟ್ಟರ್‌ನಲ್ಲಿ 20 ಲಕ್ಷಕ್ಕೂ ಹೆಚ್ಚು ಫಾಲೋವರ್ಸ್‌ಗಳನ್ನು ಹೊಂದಿರುವ, ಫೇಕ್ ನ್ಯೂಸ್‌ ಹರಡುವುದಕ್ಕಾಗಿ ಕುಖ್ಯಾತಿ ಗಳಿಸಿದ್ದ ಮಧು ಪೂರ್ಣಿಮ ಕಿಶ್ವರ್ ಎಂಬ ಬಲಪಂಥೀಯ ಒಲವುಳ್ಳ ಮಹಿಳೆಯ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳಲು ಕೋಲ್ಕತ್ತ ಪೊಲೀಸರು ಮುಂದಾಗಿದ್ದಾರೆ.

ತಲೆಗೆ ಸ್ಕಲ್ ಟೋಪಿ ಮತ್ತು ‘ಸ್ಟಾಪ್ ಕಿಲ್ಲಿಂಗ್ ರೋಹಿಂಗ್ಯಾ ಮುಸ್ಲಿಂ’ ಎಂಬ ಫಲಕಗಳನ್ನು ಹಿಡಿದು ಪ್ರತಿಭಟನಾ ರ್‍ಯಾಲಿ ನಡೆಸುತ್ತಿರುವ ಜನರ ವಿಡಿಯೋವನ್ನು ಮಧು ಪೂರ್ಣಿಮ ಕಿಶ್ವರ್ ಎಂಬ ಮಹಿಳೆ ‘ಕೋಲ್ಕತ್ತದಲ್ಲಿ’ ಎಂಬ ಶೀರ್ಷಿಕೆಯೊಂದಿಗೆ ತಮ್ಮ ಟ್ವಿಟ್ಟರ್‌ ಖಾತೆಯಲ್ಲಿ ಹಂಚಿಕೊಂಡಿದ್ದರು.

ಆದರೆ ಆ ವೀಡಿಯೊವು ಸೆಪ್ಟೆಂಬರ್ 2017 ರದ್ದಾಗಿದ್ದು ಬಾಂಗ್ಲಾದೇಶದ್ದಾಗಿದೆ. ಅಲ್ಲಿನ ಇಸ್ಲಾಮಿಕ್ ಸಂಘಟನೆಯು ಮ್ಯಾನ್ಮಾರ್ ರಾಯಭಾರ ಕಚೇರಿಯತ್ತ ಪ್ರತಿಭಟನಾ ಮೆರವಣಿಗೆ ನಡೆಸಿದ ವಿಡಿಯೋವಾಗಿದೆ ಎಂದು ಈ ಹಿಂದೆಯೇ ನಾನುಗೌರಿ.ಕಾಂ ಫ್ಯಾಕ್ಟ್‌ಚೆಕ್ ನಡೆಸಿತ್ತು. ಆದರೆ ಪಶ್ಚಿಮ ಬಂಗಾಳ ಸರ್ಕಾರ ಮುಸ್ಲಿಂ ತುಷ್ಟೀಕರಣ ನಡೆಸುತ್ತಿದೆ ಎಂಬ ಕೆಟ್ಟ ಅಭಿಪ್ರಾಯ ಮೂಡಿಸುವುದಕ್ಕಾಗಿ ಕೋಲ್ಕತ್ತಾದ ಪ್ರತಿಭಟನೆ ಎಂದು ತಪ್ಪಾಗಿ ಹಂಚಿಕೊಳ್ಳಲಾಗಿದೆ.

ಇದ್ನನೂ ಓದಿ: ಫ್ಯಾಕ್ಟ್‌‌ಚೆಕ್‌‌: ’ಇಸ್ಲಾಂ ಜಿಂದಾಬಾದ್’ ಎಂದು ಕೂಗಿದ ಈ ರ್‍ಯಾಲಿ ಕೊಲ್ಕತ್ತಾದ್ದಲ್ಲ, ಬಾಂಗ್ಲಾದೇಶದ್ದು

ಆ ವಿಡಿಯೋವನ್ನು ಈ ವರದಿ ಬರೆಯುವ ವೇಳೆಗೆ ಮೂರು ಸಾವಿರ ಮಂದಿ ಲೈಕ್ ಮಾಡಿದ್ದು, ಎರಡೂವರೆ ಸಾವಿರ ಜನ ಷೇರ್ ಮಾಡಿದ್ದಾರೆ. ಇದನ್ನು ಗಮನಿಸಿದ ಕೋಲ್ಕತ್ತ ಪೊಲೀಸ್‌ನ ‘ಫೇಕ್ ನ್ಯೂಸ್ ಅಲರ್ಟ್’ ತಂಡ “ಬಾಂಗ್ಲಾದೇಶದ ವೀಡಿಯೊ ಕ್ಲಿಪ್ ಅನ್ನು ಕೋಲ್ಕತ್ತಾದವರು ಎಂದು ತಪ್ಪಾಗಿ ಹೇಳಲಾಗುತ್ತಿದೆ. ಕಾನೂನು ಕ್ರಮ ಪ್ರಾರಂಭಿಸಲಾಗಿದೆ.” ಎಂದು ಟ್ವೀಟ್ ಮಾಡಿದೆ.

ಅದನ್ನು ಖ್ಯಾತ ಸುಪ್ರೀಂ ಕೋರ್ಟ್ ವಕೀಲ ಪ್ರಶಾಂತ್ ಭೂಷಣ್ ಷೇರ್ ಮಾಡಿ “ಪೊಲೀಸರಿಂದ ಅದ್ಭುತ ಕೆಲಸ. ಈ ನಕಲಿ ಸುದ್ದಿ ಮತ್ತು ದ್ವೇಷದ ಸುದ್ದಿ ಹರಡುವವರಿಗೆ ಶಿಕ್ಷೆಯಾಗಬೇಕು. ಈ ಮಹಿಳೆ ಸರಣಿ ಅಪರಾಧಿಯಾಗಿದ್ದಾಳೆ” ಎಂದು ಟ್ವೀಟ್ ಮಾಡಿದ್ದಾರೆ.

ಆ ಮಹಿಳೆಯು ಈ ಹಿಂದೆಯೂ ನೂರಾರು ಸುಳ್ಳು ಸುದ್ದಿಗಳನ್ನು ಹರಡಿ ಸಿಕ್ಕಿಬಿದ್ದಿದ್ದರು. ಆದರೆ ಈಗ ಕೋಲ್ಕತ್ತ ಪೊಲೀಸರು ಕ್ರಮಕ್ಕೆ ಮುಂದಾಗಿದ್ದಾರೆ.

ಸುಳ್ಳು ಸುದ್ದಿಗಳನ್ನು ಪತ್ತೆ ಹಚ್ಚುವುದು ಹೇಗೆ? 

ಸುದ್ದಿ ಮೂಲ ಪರೀಕ್ಷಿಸಿ. ಸಂದೇಶವನ್ನು ಬಿಟ್ಟು ಅದರ ಮೂಲದ ಬಗ್ಗೆ ಹುಡುಕಿ. ಯಾರು ಇದನ್ನು ನಿಮಗೆ ಕಳುಹಿಸಿದ್ದಾರೆ ಅವರು ಕೇವಲ ಸ್ನೇಹಿತರೇ, ಯಾವುದೋ ಗುಂಪಿನ ಸದಸ್ಯರೇ, ನಂಬಿಕಸ್ಥರೇ ತಿಳಿಯಿರಿ.

ಸುದ್ದಿಯಾಗಿದ್ದರೆ ಗೂಗಲ್‌ನಲ್ಲಿ ಹುಡುಕಿ. ಅದಕ್ಕೆ ಸಂಬಂಧಿಸಿದ ಬೇರೆ ಲಿಂಕ್‌ಗಳತ್ತ ಕಣ್ಣಾಡಿಸಿ. ಚಿತ್ರವಾಗಿದ್ದರೆ ರಿವರ್ಸ್‌ ಇಮೇಜ್‌ ಸರ್ಚ್‌ ಮಾಡಿ. ವಿಡಿಯೋವಾಗಿದ್ದರು ಸಹ ಅದರ ದಿನಾಂಕ ಮತ್ತು ಮೂಲವನ್ನು ಪತ್ತೆ ಹಚ್ಚಿ. ಜಾಲತಾಣದ ಉದ್ದೇಶವೇನು, ಅವರ ಸಂಪರ್ಕ ವಿಳಾಸ ದೂರವಾಣಿ ಸಂಖ್ಯೆ ಇದೆಯೇ ನೋಡಿ.

ಕೇವಲ ಸುದ್ದಿಯ ತಲೆಬರಹ ಓದಬೇಡಿ. ಅವು ರೋಚಕವಾಗಿರುತ್ತವೆ. ಇಡೀ ಸುದ್ದಿ ಓದಿ ನೋಡಿ. ಅದು ಸುಳ್ಳಾಗಿದ್ದರೆ ಮೂಲಾಜಿಲ್ಲದೇ ತಿಳಿಸಿ, ಸಾಧ್ಯವಾದರೆ ದೂರು ನೀಡಿ.

ಸುದ್ದಿಯ ಲೇಖಕರ/ಪ್ರಕಾಶಕರ ಬಗ್ಗೆ ಸ್ವಲ್ಪ ಹುಡುಕಿ, ಅವರು ಪೂರ್ವಗ್ರಹಪೀಡಿತರಾಗಿರಬಹುದು. ಹಾಗಿದ್ದಲ್ಲಿ ಎಚ್ಚರವಹಿಸಿ.

ಸುದ್ದಿಗೆ ಏನಾದರೂ ಬೆಂಬಲಿಸುವಂತಹ ಮೂಲದ ಲಿಂಕ್ ಇದ್ದರೆ ಅದನ್ನು ಜಾಲಿಸಿ ನೋಡಿ. ಪೂರಕವಾಗಿದೆಯೇ ಇಲ್ಲವೇ ಎಂದು. ಎಷ್ಟೋ ಬಾರಿ ಅಂತಹ ಜಾಲತಾಣವೇ ಇರುವುದಿಲ್ಲ.

ಕೇವಲ ಒರ್ವ ದೊಡ್ಡ ವ್ಯಕ್ತಿಯ ಭಾವಚಿತ್ರವಿದೆ ಮತ್ತು ಅದರೊಂದಿಗೆ ಏನೋ ಹೇಳಿಕೆ ಇದೆ ಎಂದ ಮಾತ್ರಕ್ಕೆ ಅದು ನಿಜವಾಗುವುದಿಲ್ಲ. ಚಾಣಕ್ಯ, ನಾಟ್ರಡ್ಯಾಮಸ್, ಚರ್ಚಿಲ್, ಮೆಕಾಲೆ ಮುಂತಾದವರ ಭಾವಚಿತ್ರದ ಜೊತೆ ಏನೇನೋ ಸಂದೇಶಗಳು ಹರಿದಾಡುತ್ತಿವೆ.

ಸುದ್ದಿಯ, ವಿಡಿಯೋಗಳ ದಿನಾಂಕ ನೋಡಿ. ಹಳೆಯ ಸುದ್ದಿಗಳು ಹೊಸ ತಲೆಬರಹದೊಂದಿಗೆ ಮತ್ತೆ ಮತ್ತೆ ಕಾಣಸಿಗುತ್ತವೆ.

ಸುದ್ದಿಯೋ ಕೇವಲ ತಮಾಷೆಯೋ ಸರಿಯಾಗಿ ನೋಡಿ. ಕೆಲವರು ವಿಡಂಬನೆ ಮಾಡಿರುತ್ತಾರೆ ಹಾಗಾಗಿ ನಿಧಾನವಾಗಿ ಗಮನಿಸಿ. ಏಪ್ರಿಲ್ 1ರ ಸಂದೇಶಗಳು ವರ್ಷವಿಡೀ ಸುತ್ತುತ್ತಿರುತ್ತವೆ.

ನಿಮ್ಮ ಸ್ವಂತ ಪೂರ್ವನಿರ್ಧಾರಿತ ನಂಬಿಕೆಗಳು ಸುಳ್ಳನ್ನೇ ನಿಜ ಎಂದು ನಂಬುವಂತೆ ಮಾಡಬಹುದು. ಅದನ್ನು ಸರಿಪಡಿಸಿಕೊಳ್ಳಿ. ಮರುಪಶೀಲಿಸುವುದನ್ನು ಮರೆಯಬೇಡಿ. ಸಾಮಾನ್ಯ ಜ್ಞಾನ ಬಳಸಿ.

ತಜ್ಞರನ್ನು ಸಂಪರ್ಕಿಸಿ. ಸಂದೇಶ ನಿಜವೋ ಸುಳ್ಳೋ ಎಂದು ಸಂದೇಹವಿದ್ದಲ್ಲಿ ಅದನ್ನು ಮುಂದಕ್ಕೆ ಪಸರಿಸದೇ ಅದನ್ನು ನಂಬಿಕಸ್ಥ ಸತ್ಯಾಸತ್ಯತೆ ಪರಿಶೀಲಿಸುವ ಜಾಲತಾಣಗಳಿಗೆ ಕಳುಹಿಸಿ (ಆಲ್ಟ್-ನ್ಯೂಸ್, ಬೂಮ್‌ಲೈವ್‌, ಕ್ವಿಂಟ್‌ ವೆಬ್‌ಖೂಫ್‌, ಫ್ಯಾಕ್ಟ್-ಚೆಕರ್, ಎಸ್.ಎಂ.ಹೋಕ್ಸ್ ಸ್ಲೇಯರ್ ಇತ್ಯಾದಿ). ಸತ್ಯವನ್ನು ಬೆಂಬಲಿಸುವ ಜಾಲತಾಣಗಳನ್ನು ಬೆಂಬಲಿಸಿ.

ಸುಳ್ಳು ಸುದ್ದಿ/ಅಪಪ್ರಚಾರ ಪಸರಿಸಬೇಡಿ. ಇದರಿಂದ ದೇಶಕ್ಕೆ ಯಾವ ಪ್ರಯೋಜನವೂ ಇಲ್ಲ.


ಇದನ್ನೂ ಓದಿ: Fact check: ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯ ಹರಡಿದ 16 ಸುಳ್ಳು ಸುದ್ದಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...