Homeಫ್ಯಾಕ್ಟ್‌ಚೆಕ್ಸುಳ್ಳು ಸುದ್ದಿ ಪ್ರಸಾರ: ಬಲಪಂಥೀಯ ಮಹಿಳೆ ಮೇಲೆ ಕ್ರಮಕ್ಕೆ ಮುಂದಾದ ಕೋಲ್ಕತ್ತ ಪೊಲೀಸ್!

ಸುಳ್ಳು ಸುದ್ದಿ ಪ್ರಸಾರ: ಬಲಪಂಥೀಯ ಮಹಿಳೆ ಮೇಲೆ ಕ್ರಮಕ್ಕೆ ಮುಂದಾದ ಕೋಲ್ಕತ್ತ ಪೊಲೀಸ್!

ಕೋಲ್ಕತ್ತ ಪೊಲೀಸ್‌ನ 'ಫೇಕ್ ನ್ಯೂಸ್ ಅಲರ್ಟ್' ತಂಡ "ಬಾಂಗ್ಲಾದೇಶದ ವೀಡಿಯೊ ಕ್ಲಿಪ್ ಅನ್ನು ಕೋಲ್ಕತ್ತಾದವರು ಎಂದು ತಪ್ಪಾಗಿ ಹೇಳಲಾಗುತ್ತಿದೆ. ಕಾನೂನು ಕ್ರಮ ಪ್ರಾರಂಭಿಸಲಾಗಿದೆ" ಎಂದು ಟ್ವೀಟ್ ಮಾಡಿದೆ.

- Advertisement -
- Advertisement -

ಫೇಕ್‌ ನ್ಯೂಸ್‌ ಎಂಬುವುದು ಸಮಾಜದಲ್ಲಿ ದೊಡ್ಡ ಸಮಸ್ಯೆಯಾಗಿದೆ. ಅವುಗಳ ನಿಯಂತ್ರಣ ಬಹುಕಷ್ಟವಾಗಿದೆ. ಇಂತಹ ಸಮಯದಲ್ಲಿ ಕೋಲ್ಕತ್ತ ಪೊಲೀಸರು ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳುತ್ತಿರುವುದನ್ನು ಹಲವರು ಶ್ಲಾಘಿಸಿದ್ದಾರೆ.

ಟ್ವಿಟ್ಟರ್‌ನಲ್ಲಿ 20 ಲಕ್ಷಕ್ಕೂ ಹೆಚ್ಚು ಫಾಲೋವರ್ಸ್‌ಗಳನ್ನು ಹೊಂದಿರುವ, ಫೇಕ್ ನ್ಯೂಸ್‌ ಹರಡುವುದಕ್ಕಾಗಿ ಕುಖ್ಯಾತಿ ಗಳಿಸಿದ್ದ ಮಧು ಪೂರ್ಣಿಮ ಕಿಶ್ವರ್ ಎಂಬ ಬಲಪಂಥೀಯ ಒಲವುಳ್ಳ ಮಹಿಳೆಯ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳಲು ಕೋಲ್ಕತ್ತ ಪೊಲೀಸರು ಮುಂದಾಗಿದ್ದಾರೆ.

ತಲೆಗೆ ಸ್ಕಲ್ ಟೋಪಿ ಮತ್ತು ‘ಸ್ಟಾಪ್ ಕಿಲ್ಲಿಂಗ್ ರೋಹಿಂಗ್ಯಾ ಮುಸ್ಲಿಂ’ ಎಂಬ ಫಲಕಗಳನ್ನು ಹಿಡಿದು ಪ್ರತಿಭಟನಾ ರ್‍ಯಾಲಿ ನಡೆಸುತ್ತಿರುವ ಜನರ ವಿಡಿಯೋವನ್ನು ಮಧು ಪೂರ್ಣಿಮ ಕಿಶ್ವರ್ ಎಂಬ ಮಹಿಳೆ ‘ಕೋಲ್ಕತ್ತದಲ್ಲಿ’ ಎಂಬ ಶೀರ್ಷಿಕೆಯೊಂದಿಗೆ ತಮ್ಮ ಟ್ವಿಟ್ಟರ್‌ ಖಾತೆಯಲ್ಲಿ ಹಂಚಿಕೊಂಡಿದ್ದರು.

ಆದರೆ ಆ ವೀಡಿಯೊವು ಸೆಪ್ಟೆಂಬರ್ 2017 ರದ್ದಾಗಿದ್ದು ಬಾಂಗ್ಲಾದೇಶದ್ದಾಗಿದೆ. ಅಲ್ಲಿನ ಇಸ್ಲಾಮಿಕ್ ಸಂಘಟನೆಯು ಮ್ಯಾನ್ಮಾರ್ ರಾಯಭಾರ ಕಚೇರಿಯತ್ತ ಪ್ರತಿಭಟನಾ ಮೆರವಣಿಗೆ ನಡೆಸಿದ ವಿಡಿಯೋವಾಗಿದೆ ಎಂದು ಈ ಹಿಂದೆಯೇ ನಾನುಗೌರಿ.ಕಾಂ ಫ್ಯಾಕ್ಟ್‌ಚೆಕ್ ನಡೆಸಿತ್ತು. ಆದರೆ ಪಶ್ಚಿಮ ಬಂಗಾಳ ಸರ್ಕಾರ ಮುಸ್ಲಿಂ ತುಷ್ಟೀಕರಣ ನಡೆಸುತ್ತಿದೆ ಎಂಬ ಕೆಟ್ಟ ಅಭಿಪ್ರಾಯ ಮೂಡಿಸುವುದಕ್ಕಾಗಿ ಕೋಲ್ಕತ್ತಾದ ಪ್ರತಿಭಟನೆ ಎಂದು ತಪ್ಪಾಗಿ ಹಂಚಿಕೊಳ್ಳಲಾಗಿದೆ.

ಇದ್ನನೂ ಓದಿ: ಫ್ಯಾಕ್ಟ್‌‌ಚೆಕ್‌‌: ’ಇಸ್ಲಾಂ ಜಿಂದಾಬಾದ್’ ಎಂದು ಕೂಗಿದ ಈ ರ್‍ಯಾಲಿ ಕೊಲ್ಕತ್ತಾದ್ದಲ್ಲ, ಬಾಂಗ್ಲಾದೇಶದ್ದು

ಆ ವಿಡಿಯೋವನ್ನು ಈ ವರದಿ ಬರೆಯುವ ವೇಳೆಗೆ ಮೂರು ಸಾವಿರ ಮಂದಿ ಲೈಕ್ ಮಾಡಿದ್ದು, ಎರಡೂವರೆ ಸಾವಿರ ಜನ ಷೇರ್ ಮಾಡಿದ್ದಾರೆ. ಇದನ್ನು ಗಮನಿಸಿದ ಕೋಲ್ಕತ್ತ ಪೊಲೀಸ್‌ನ ‘ಫೇಕ್ ನ್ಯೂಸ್ ಅಲರ್ಟ್’ ತಂಡ “ಬಾಂಗ್ಲಾದೇಶದ ವೀಡಿಯೊ ಕ್ಲಿಪ್ ಅನ್ನು ಕೋಲ್ಕತ್ತಾದವರು ಎಂದು ತಪ್ಪಾಗಿ ಹೇಳಲಾಗುತ್ತಿದೆ. ಕಾನೂನು ಕ್ರಮ ಪ್ರಾರಂಭಿಸಲಾಗಿದೆ.” ಎಂದು ಟ್ವೀಟ್ ಮಾಡಿದೆ.

ಅದನ್ನು ಖ್ಯಾತ ಸುಪ್ರೀಂ ಕೋರ್ಟ್ ವಕೀಲ ಪ್ರಶಾಂತ್ ಭೂಷಣ್ ಷೇರ್ ಮಾಡಿ “ಪೊಲೀಸರಿಂದ ಅದ್ಭುತ ಕೆಲಸ. ಈ ನಕಲಿ ಸುದ್ದಿ ಮತ್ತು ದ್ವೇಷದ ಸುದ್ದಿ ಹರಡುವವರಿಗೆ ಶಿಕ್ಷೆಯಾಗಬೇಕು. ಈ ಮಹಿಳೆ ಸರಣಿ ಅಪರಾಧಿಯಾಗಿದ್ದಾಳೆ” ಎಂದು ಟ್ವೀಟ್ ಮಾಡಿದ್ದಾರೆ.

ಆ ಮಹಿಳೆಯು ಈ ಹಿಂದೆಯೂ ನೂರಾರು ಸುಳ್ಳು ಸುದ್ದಿಗಳನ್ನು ಹರಡಿ ಸಿಕ್ಕಿಬಿದ್ದಿದ್ದರು. ಆದರೆ ಈಗ ಕೋಲ್ಕತ್ತ ಪೊಲೀಸರು ಕ್ರಮಕ್ಕೆ ಮುಂದಾಗಿದ್ದಾರೆ.

ಸುಳ್ಳು ಸುದ್ದಿಗಳನ್ನು ಪತ್ತೆ ಹಚ್ಚುವುದು ಹೇಗೆ? 

ಸುದ್ದಿ ಮೂಲ ಪರೀಕ್ಷಿಸಿ. ಸಂದೇಶವನ್ನು ಬಿಟ್ಟು ಅದರ ಮೂಲದ ಬಗ್ಗೆ ಹುಡುಕಿ. ಯಾರು ಇದನ್ನು ನಿಮಗೆ ಕಳುಹಿಸಿದ್ದಾರೆ ಅವರು ಕೇವಲ ಸ್ನೇಹಿತರೇ, ಯಾವುದೋ ಗುಂಪಿನ ಸದಸ್ಯರೇ, ನಂಬಿಕಸ್ಥರೇ ತಿಳಿಯಿರಿ.

ಸುದ್ದಿಯಾಗಿದ್ದರೆ ಗೂಗಲ್‌ನಲ್ಲಿ ಹುಡುಕಿ. ಅದಕ್ಕೆ ಸಂಬಂಧಿಸಿದ ಬೇರೆ ಲಿಂಕ್‌ಗಳತ್ತ ಕಣ್ಣಾಡಿಸಿ. ಚಿತ್ರವಾಗಿದ್ದರೆ ರಿವರ್ಸ್‌ ಇಮೇಜ್‌ ಸರ್ಚ್‌ ಮಾಡಿ. ವಿಡಿಯೋವಾಗಿದ್ದರು ಸಹ ಅದರ ದಿನಾಂಕ ಮತ್ತು ಮೂಲವನ್ನು ಪತ್ತೆ ಹಚ್ಚಿ. ಜಾಲತಾಣದ ಉದ್ದೇಶವೇನು, ಅವರ ಸಂಪರ್ಕ ವಿಳಾಸ ದೂರವಾಣಿ ಸಂಖ್ಯೆ ಇದೆಯೇ ನೋಡಿ.

ಕೇವಲ ಸುದ್ದಿಯ ತಲೆಬರಹ ಓದಬೇಡಿ. ಅವು ರೋಚಕವಾಗಿರುತ್ತವೆ. ಇಡೀ ಸುದ್ದಿ ಓದಿ ನೋಡಿ. ಅದು ಸುಳ್ಳಾಗಿದ್ದರೆ ಮೂಲಾಜಿಲ್ಲದೇ ತಿಳಿಸಿ, ಸಾಧ್ಯವಾದರೆ ದೂರು ನೀಡಿ.

ಸುದ್ದಿಯ ಲೇಖಕರ/ಪ್ರಕಾಶಕರ ಬಗ್ಗೆ ಸ್ವಲ್ಪ ಹುಡುಕಿ, ಅವರು ಪೂರ್ವಗ್ರಹಪೀಡಿತರಾಗಿರಬಹುದು. ಹಾಗಿದ್ದಲ್ಲಿ ಎಚ್ಚರವಹಿಸಿ.

ಸುದ್ದಿಗೆ ಏನಾದರೂ ಬೆಂಬಲಿಸುವಂತಹ ಮೂಲದ ಲಿಂಕ್ ಇದ್ದರೆ ಅದನ್ನು ಜಾಲಿಸಿ ನೋಡಿ. ಪೂರಕವಾಗಿದೆಯೇ ಇಲ್ಲವೇ ಎಂದು. ಎಷ್ಟೋ ಬಾರಿ ಅಂತಹ ಜಾಲತಾಣವೇ ಇರುವುದಿಲ್ಲ.

ಕೇವಲ ಒರ್ವ ದೊಡ್ಡ ವ್ಯಕ್ತಿಯ ಭಾವಚಿತ್ರವಿದೆ ಮತ್ತು ಅದರೊಂದಿಗೆ ಏನೋ ಹೇಳಿಕೆ ಇದೆ ಎಂದ ಮಾತ್ರಕ್ಕೆ ಅದು ನಿಜವಾಗುವುದಿಲ್ಲ. ಚಾಣಕ್ಯ, ನಾಟ್ರಡ್ಯಾಮಸ್, ಚರ್ಚಿಲ್, ಮೆಕಾಲೆ ಮುಂತಾದವರ ಭಾವಚಿತ್ರದ ಜೊತೆ ಏನೇನೋ ಸಂದೇಶಗಳು ಹರಿದಾಡುತ್ತಿವೆ.

ಸುದ್ದಿಯ, ವಿಡಿಯೋಗಳ ದಿನಾಂಕ ನೋಡಿ. ಹಳೆಯ ಸುದ್ದಿಗಳು ಹೊಸ ತಲೆಬರಹದೊಂದಿಗೆ ಮತ್ತೆ ಮತ್ತೆ ಕಾಣಸಿಗುತ್ತವೆ.

ಸುದ್ದಿಯೋ ಕೇವಲ ತಮಾಷೆಯೋ ಸರಿಯಾಗಿ ನೋಡಿ. ಕೆಲವರು ವಿಡಂಬನೆ ಮಾಡಿರುತ್ತಾರೆ ಹಾಗಾಗಿ ನಿಧಾನವಾಗಿ ಗಮನಿಸಿ. ಏಪ್ರಿಲ್ 1ರ ಸಂದೇಶಗಳು ವರ್ಷವಿಡೀ ಸುತ್ತುತ್ತಿರುತ್ತವೆ.

ನಿಮ್ಮ ಸ್ವಂತ ಪೂರ್ವನಿರ್ಧಾರಿತ ನಂಬಿಕೆಗಳು ಸುಳ್ಳನ್ನೇ ನಿಜ ಎಂದು ನಂಬುವಂತೆ ಮಾಡಬಹುದು. ಅದನ್ನು ಸರಿಪಡಿಸಿಕೊಳ್ಳಿ. ಮರುಪಶೀಲಿಸುವುದನ್ನು ಮರೆಯಬೇಡಿ. ಸಾಮಾನ್ಯ ಜ್ಞಾನ ಬಳಸಿ.

ತಜ್ಞರನ್ನು ಸಂಪರ್ಕಿಸಿ. ಸಂದೇಶ ನಿಜವೋ ಸುಳ್ಳೋ ಎಂದು ಸಂದೇಹವಿದ್ದಲ್ಲಿ ಅದನ್ನು ಮುಂದಕ್ಕೆ ಪಸರಿಸದೇ ಅದನ್ನು ನಂಬಿಕಸ್ಥ ಸತ್ಯಾಸತ್ಯತೆ ಪರಿಶೀಲಿಸುವ ಜಾಲತಾಣಗಳಿಗೆ ಕಳುಹಿಸಿ (ಆಲ್ಟ್-ನ್ಯೂಸ್, ಬೂಮ್‌ಲೈವ್‌, ಕ್ವಿಂಟ್‌ ವೆಬ್‌ಖೂಫ್‌, ಫ್ಯಾಕ್ಟ್-ಚೆಕರ್, ಎಸ್.ಎಂ.ಹೋಕ್ಸ್ ಸ್ಲೇಯರ್ ಇತ್ಯಾದಿ). ಸತ್ಯವನ್ನು ಬೆಂಬಲಿಸುವ ಜಾಲತಾಣಗಳನ್ನು ಬೆಂಬಲಿಸಿ.

ಸುಳ್ಳು ಸುದ್ದಿ/ಅಪಪ್ರಚಾರ ಪಸರಿಸಬೇಡಿ. ಇದರಿಂದ ದೇಶಕ್ಕೆ ಯಾವ ಪ್ರಯೋಜನವೂ ಇಲ್ಲ.


ಇದನ್ನೂ ಓದಿ: Fact check: ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯ ಹರಡಿದ 16 ಸುಳ್ಳು ಸುದ್ದಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...