Homeಫ್ಯಾಕ್ಟ್‌ಚೆಕ್FACT CHECK | ಮಹಾಲಕ್ಷ್ಮಿ ಕೊಲೆ : ಅಶ್ರಫ್‌ನನ್ನು ಕಟಕಟೆಯಲ್ಲಿ ನಿಲ್ಲಿಸಿದ ಸುಳ್ಳು ಸುದ್ದಿ ಜಾಲ

FACT CHECK | ಮಹಾಲಕ್ಷ್ಮಿ ಕೊಲೆ : ಅಶ್ರಫ್‌ನನ್ನು ಕಟಕಟೆಯಲ್ಲಿ ನಿಲ್ಲಿಸಿದ ಸುಳ್ಳು ಸುದ್ದಿ ಜಾಲ

- Advertisement -
- Advertisement -

ಸೆಪ್ಟೆಂಬರ್ 21, 2024ರಂದು ಬೆಂಗಳೂರಿನ ವೈಯ್ಯಾಲಿಕಾವಲ್ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯೊಂದರಲ್ಲಿ 29 ವರ್ಷದ ಮಹಾಲಕ್ಷ್ಮಿ ಎಂಬ ಮಹಿಳೆಯ ಕೊಲೆ ನಡೆದಿರುವುದು ಬೆಳಕಿಗೆ ಬಂದಿತ್ತು. ಮಹಾಲಕ್ಷ್ಮಿಯ ದೇಹವನ್ನು ಸುಮಾರು 30 ತುಂಡುಗಳಾಗಿ ಕತ್ತರಿಸಿ ಫ್ರಿಡ್ಜ್‌ನಲ್ಲಿ ಇಡಲಾಗಿತ್ತು.

ದೆಹಲಿಯಲ್ಲಿ ಶ್ರದ್ದಾ ವಾಕರ್ ಎಂಬ ಯುವತಿಯ ಕೊಲೆ ನಡೆದ ರೀತಿಯಲ್ಲೇ ಮಹಾಲಕ್ಷ್ಮಿಯನ್ನು ಕೊಲೆ ನಡೆದಿತ್ತು. ಶ್ರದ್ದಾ ವಾಕರ್ ಕೊಲೆಯನ್ನು ಆಕೆಯ ಸ್ನೇಹಿತ ಅಫ್ತಾಬ್ ಅಮೀನ್ ಪೂನವಲ್ಲ ಎಂಬಾತ ಮಾಡಿರುವುದು ತನಿಖೆಯಿಂದ ಬಯಲಾಗಿತ್ತು. ಅದೇ ರೀತಿ ಮಹಾಲಕ್ಷ್ಮಿ ಕೊಲೆ ಪ್ರಕರಣದಲ್ಲೂ ಅಶ್ರಫ್ ಎಂಬಾತ ಹೆಸರು ತಳುಕು ಹಾಕಿಕೊಂಡಿತ್ತು.

‘ಅಶ್ರಫ್’ ಎಂಬ ಹೆಸರು ಕೇಳಿ ಬಂದಿದ್ದೆ ತಡ ಮಾಧ್ಯಮಗಳು, ಬಲಪಂಥೀಯ ಸಾಮಾಜಿಕ ಜಾಲತಾಣ ಪ್ರಭಾವಿಗಳು, ಕೆಲ ರಾಜಕೀಯ ಪಕ್ಷಗಳ ಮುಖಂಡರು ಒಂದು ಸಮುದಾಯದ ವಿರುದ್ದ ಆರೋಪಗಳ ಸುರಿಮಳೆ ಸುರಿಸಿದ್ದರು.

ಅನೇಕರು ಶ್ರದ್ದಾ ಕೊಲೆಗೆ ಮಹಾಲಕ್ಷ್ಮಿ ಕೊಲೆಯನ್ನು ಹೋಲಿಕೆ ಮಾಡಿ ಚರ್ಚಿಸಿದ್ದರು. ಇನ್ನೂ ಕೆಲವರು ‘ಲವ್‌ ಜಿಹಾದ್ ‘ ಆರೋಪ ಮಾಡಿದ್ದರು. ಮತ್ತೂ ಕೆಲವರು ಈ ರೀತಿಯ ಕೊಲೆಗಳು ‘ಒಂದು ಸಮುದಾಯದ ವಿರುದ್ದದ ವ್ಯವಸ್ಥಿತ ಸಂಚಿನ ಭಾಗ’ ಎಂದಿದ್ದರು. ಕೆಲ ಮಾಧ್ಯಮಗಳು ಸಾಮಾಜಿಕ ಜಾಲತಾಣವನ್ನೇ ಪ್ರಮುಖ ಮೂಲವನ್ನಾಗಿಟ್ಟುಕೊಂಡು ಒಂದು ಸಮುದಾಯದ ಜನರನ್ನು ಅರೋಪಿ ಸ್ಥಾನದಲ್ಲಿ ನಿಲ್ಲಿಸಿತ್ತು.

ಘಟನೆಯ ಕುರಿತು ಟಿವಿ ಚಾನೆಲ್‌ನಲ್ಲಿ ಸುದ್ದಿ ಓದಿದ ನ್ಯೂಸ್‌ 18 ಇಂಡಿಯಾದ ಸುದ್ದಿ ನಿರೂಪಕ ಹಾಗೂ ನೆಟ್‌ವರ್ಕ್‌ 18ನ ಹಿರಿಯ ಸಂಪಾದಕ ಅಮನ್ ಚೋಪ್ರಾ ” ಶ್ರದ್ಧಾ ವಾಕರ್ ಅನ್ನು ಹೇಗೆ ತುಂಡು ತುಂಡಾಗಿ ಕತ್ತರಿಸಿ ಫ್ರಿಡ್ಜ್‌ನಲ್ಲಿ ಇರಿಸಲಾಯಿತು ಎಂಬುವುದನ್ನು ನೆನಪಿಸಿಕೊಳ್ಳಿ. ಬೆಂಗಳೂರಿನಲ್ಲೂ ಅಂಥದ್ದೇ ಘಟನೆ ನಡೆದಿದೆ. ಆದರೆ, ಶ್ರದ್ದಾಳಿಂದ ಮಹಾಲಕ್ಷ್ಮಿಗೆ ಹೆಸರು ಬದಲಾಗಿದೆ. ಫ್ರಿಡ್ಜ್‌ನಲ್ಲಿ ಮಹಾಲಕ್ಷ್ಮಿ ಶವದ 50ಕ್ಕೂ ಹೆಚ್ಚು ತುಂಡುಗಳು ಪತ್ತೆಯಾಗಿವೆ. ಮೊದಲ ಪ್ರಕರಣದ ಆರೋಪಿ ಅಫ್ತಾಬ್, ಈಗ ಕುಟುಂಬ ಅಶ್ರಫ್‌ ಎಂಬಾತನ ಮೇಲೆ ಆರೋಪ ಹೊರಿಸಿದೆ” ಎಂದಿದ್ದರು. ಸುದ್ದಿ ಓದುವಾಗ ‘ಅಶ್ರಫ್’ ಎಂಬ ಹೆಸರನ್ನು ಅಮನ್‌ ಚೋಪ್ರಾ ಅನೇಕ ಬಾರಿ ಒತ್ತಿ ಹೇಳಿದ್ದರು. ಈ ಮೂಲಕ ಪರೋಕ್ಷವಾಗಿ ‘ಹಿಂದೂ ಮಹಿಳೆಯನ್ನು ಮುಸ್ಲಿಂ ಯುವಕ ಕೊಲೆ ಮಾಡಿದ್ದಾನೆ’ ಎಂಬ ಅಂಶವನ್ನು ಜನರ ತಲೆಗೆ ತುಂಬುವ ಪ್ರಯತ್ನ ಮಾಡಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕಟಿಸಿದ್ದ ವರದಿಯ ಸ್ಕ್ರೀನ್ ಶಾಟ್ ಅನ್ನು ಸೆಪ್ಟೆಂಬರ್ 22ರಂದು ಬಲಪಂಥೀಯ ಸುದ್ದಿ ವೆಬ್‌ಸೈಟ್ ಓಪ್‌ ಇಂಡಿಯಾ ತನ್ನ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿತ್ತು. ಅದಕ್ಕೆ ಪ್ರತಿಕ್ರಿಯಿಸಿದ್ದ ಕರ್ನಾಟಕ ಬಿಜೆಪಿ “ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಅಡಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣ ಹದೆಗೆಟ್ಟಿದೆ. ಅಶ್ರಫ್‌ನಿಂದ ಮಹಾಲಕ್ಷ್ಮಿಯ ಕ್ರೂರ ಹತ್ಯೆಯು ಹಿಟ್ಲರ್ ನೇತೃತ್ವದ ಈ ರಾಜ್ಯದಲ್ಲಿ ಕನ್ನಡಿಗರು ಇನ್ನು ಸುರಕ್ಷಿತವಾಗಿಲ್ಲ ಎಂಬುದನ್ನು ಸ್ಪಷ್ಟವಾಗಿ ನೆನಪಿಸುತ್ತದೆ. ಸಿದ್ದರಾಮಯ್ಯ ಸರ್ಕಾರ ಮತ ಬ್ಯಾಂಕ್‌ ಅನ್ನು ಮೆಚ್ಚಿಸಲು ಮತ್ತು ತಪ್ಪಿತಸ್ಥರನ್ನು ಸಮಾಧಾನಪಡಿಸಲು ಇದನ್ನು ಕೇವಲ ಅಪಘಾತ ಅಥವಾ ತಮಾಷೆಯಾಗಿ ಪರಿಗಣಿಸಬೇಡಿ ಎಂದು ನಾವು ಕಾಂಗ್ರೆಸ್ ಮಂತ್ರಿಗಳನ್ನು ಒತ್ತಾಯಿಸುತ್ತೇವೆ. ರಾಹುಲ್ ಗಾಂಧಿಯವರೇ ನೀವು ಹಮಾಸ್ ಭಯೋತ್ಪಾದಕರಿಗಾಗಿ ಅಳುತ್ತಿರುವಾಗ, ನೀವು ಪರಿಗಣಿಸಬೇಕಾದ ವಿಷಯ ಇಲ್ಲಿದೆ. ಕಾಂಗ್ರೆಸ್‌ ಏಕೆ ಅಪರಾಧಿಗಳನ್ನು ಗಲ್ಲಿಗೇರಿಸುವುದನ್ನು ಮತ್ತು ಲವ್ ಜಿಹಾದ್ ವಿರೋಧಿ ಕಾನೂನುಗಳನ್ನು ವಿರೋಧಿಸುತ್ತಿದೆ ಎಂದು ಈ ಮೂಲಕ ಸ್ಪಷ್ಟವಾಗಿದೆ” ಎಂದು ಬರೆದುಕೊಂಡಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್ 23,2024ರಂದು ಎಕ್ಸ್‌ನಲ್ಲಿ ಪೋಸ್ಟ್ ಒಂದನ್ನು ಹಾಕಿದ್ದ ಆಗಾಗ ಸುಳ್ಳು ಮತ್ತು ಕೋಮುದ್ವೇಷದ ಸುದ್ದಿಗಳನ್ನು ಹಬ್ಬಿಸುವ ಇಸ್ಕಾನ್ ಕೋಲ್ಕತ್ತಾದ ಉಪಾಧ್ಯಕ್ಷ ಮತ್ತು ವಕ್ತಾರ ರಾಧಾರಮನ್ ದಾಸ್ “ಅಬ್ದುಲ್‌ನ ಫ್ರಿಡ್ಜ್‌ನಲ್ಲಿ ಹಿಂದೂ ಹುಡುಗಿಯ ಮತ್ತೊಂದು ಶವ ಪತ್ತೆ. ಈ ಕಥೆ ಪುನರಾವರ್ತನೆಯಾಗುತ್ತಲೇ ಇರುತ್ತದೆ ಮತ್ತು ಅಬ್ದುಲ್‌ನ ಜೊತೆಗಿನ ಹಿಂದೂ ಹುಡುಗಿಯರು ‘ನನ್ನ ಅಬ್ದುಲ್ ಆ ರೀತಿಯಲ್ಲ’ ಎಂದು ಯೋಚಿಸುತ್ತಲೇ ಇರುತ್ತಾರೆ” ಎಂದು ಬರೆದುಕೊಂಡಿದ್ದರು.

ಸೆಪ್ಟೆಂಬರ್ 23, 2024ರಂದು ಎಕ್ಸ್‌ನಲ್ಲಿ ಇಂಡಿಯಾ ಟುಡೇ ಸುದ್ದಿಯನ್ನು ಪೋಸ್ಟ್ ಮಾಡಿದ್ದ ಕೋಮು ದ್ವೇಷದ ಸುದ್ದಿಗಳನ್ನು ಹರಡುವ ಬಲಪಂಥೀಯ ಸಾಮಾಜಿಕ ಜಾಲತಾಣ ಪ್ರಭಾವಿ ಮಿ.ಸಿನ್ಹಾ ” ಬೆಂಗಳೂರು ಕೊಲೆ ಪ್ರಕರಣದಲ್ಲಿ ಆಘಾತಕಾರಿ ಅಂಶ ಬಹಿರಂಗ: ಮಹಿಳೆಯ ಶವ 32 ತುಂಡಾಗಿ ಕತ್ತರಿಸಿ ಫ್ರಿಡ್ಜ್‌ನಲ್ಲಿ ಶೇಖರಿಸಿಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಇಂಡಿಯಾ ಟುಡೇ ವರದಿ ಪ್ರಕಾರ ಸಂತ್ರಸ್ತೆಯನ್ನು ಮಹಾಲಕ್ಷ್ಮಿ ಎಂದು ಗುರುತಿಸಲಾಗಿದೆ. ಅಶ್ರಫ್ ಎಂಬ ವ್ಯಕ್ತಿಯೊಂದಿಗೆ ವಿವಾಹೇತರ ಸಂಬಂಧ ಹೊಂದಿದ್ದಳು ಎಂದು ಆಕೆಯ ಪತಿ ಆರೋಪಿಸಿದ್ದಾರೆ” ಎಂದು ಬರೆದುಕೊಂಡಿದ್ದರು.

ಮತ್ತೊಂದು ಪೋಸ್ಟ್ ಹಾಕಿದ್ದ ಸಿನ್ಹಾ ” ಪ್ರಮುಖ ಶಂಕಿತ ‘ಹೊರಗಿನವನು’ ಮತ್ತು ತಲೆಮರೆಸಿಕೊಂಡಿದ್ದಾನೆ- ಬೆಂಗಳೂರು ಸಿಪಿ. ಮಹಾಲಕ್ಷ್ಮಿ ಪತಿ ಅಶ್ರಫ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ…ಕಳೆದ 9 ತಿಂಗಳಿಂದ ಆತನೊಂದಿಗೆ ಆಕೆ ವಾಸವಿದ್ದಳು” ಎಂದು ಬರೆದುಕೊಂಡಿದ್ದರು.

ಇದೇ ರೀತಿ ಆರ್‌ಎಸ್‌ಎಸ್‌ ಮುಖವಾಣಿ ಪಾಂಚಜನ್ಯ, ಬಲಪಂಥೀಯ ಸಾಮಾಜಿಕ ಜಾಲತಾಣ ಪ್ರಭಾವಿಗಳಾದ ಕಾಜಲ್ ಹಿಂದುಸ್ತಾನಿ, ಜೈಪುರ್ ಡೈಲಾಗ್ಸ್, ರಿಶಿ ಬಾಗ್ರೀ, ಅಶ್ವಿನಿ ಶ್ರೀವಾಸ್ತವ್, ಸಂಜೀವ್ ನ್ಯೂವರ್, ಲಾಯರ್ ಶಶಾಂಕ್ ಶೇಖರ್ ಜ್ಹಾ, ಅಜೀತ್ ಭಾರ್ತಿ ಪೋಸ್ಟ್‌ ಹಾಕಿ, ಸುದ್ದಿ ಹಂಚಿಕೊಂಡು ಅಶ್ರಫ್ ಹೆಸರನ್ನು ಮುಂದಿಟ್ಟುಕೊಂಡು ಒಂದು ಸಮುದಾಯವನ್ನು ಗುರಿಯಾಗಿಸಿದ್ದರು.

ಕನ್ನಡ, ಹಿಂದಿ, ಇಂಗ್ಲಿಷ್‌ನ ಹಲವು ಮಾಧ್ಯಮಗಳು ಕೂಡ ಪ್ರಕರಣದ ಕುರಿತು ವರದಿ ಪ್ರಕಟಿಸಿತ್ತು. ಕೆಲವು ಅಶ್ರಫ್ ಕೊಲೆ ಮಾಡಿರುವುದಾಗಿ ನೇರವಾಗಿ ಆರೋಪಿಸಿದರೆ, ಇನ್ನೂ ಕೆಲವು ಮಹಾಲಕ್ಷ್ಮಿಯ ವಿಚ್ಚೇದಿತ ಪತಿಯ ಹೇಳಿಕೆಯನ್ನು ಉಲ್ಲೇಖಿಸಿತ್ತು.

ಫ್ಯಾಕ್ಟ್‌ಚೆಕ್ : ವರದಿಗಳ ಪ್ರಕಾರ, 29 ವರ್ಷದ ಮಹಾಲಕ್ಷ್ಮಿ ಅವರು ನೆಲಮಂಗಲದಲ್ಲಿ ವಾಸಿಸುವ ಮತ್ತು ಮೊಬೈಲ್ ಪರಿಕರಗಳ ಅಂಗಡಿಯನ್ನು ನಡೆಸುತ್ತಿರುವ ಹೇಮಂತ್ ದಾಸ್ ಅವರನ್ನು ವಿವಾಹವಾಗಿದ್ದರು. ದಂಪತಿಗೆ ಒಂದು ಮಗು ಕೂಡ ಇದೆ. ತನ್ನ ಪತಿಯಿಂದ ಬೇರ್ಪಟ್ಟ ನಂತರ, ಆಕೆ ತನ್ನ ಸಹೋದರ ಹುಕುಮ್ ಸಿಂಗ್ ಮತ್ತು ಆತನ ಹೆಂಡತಿಯೊಂದಿಗೆ ವಾಸಿಸುತ್ತಿದ್ದರು. ಸಹೋದರರ ನಡುವೆ ಜಗಳ ನಡೆದ ನಂತರ ಹುಕುಮ್ ಸಿಂಗ್ ತನ್ನ ಹೆಂಡತಿಯೊಂದಿಗೆ ಮನೆ ಬಿಟ್ಟು ಹೋಗಿದ್ದರು. ಅಂದಿನಿಂದ ಮಹಾಲಕ್ಷ್ಮಿ ಒಂಟಿಯಾಗಿ ವಾಸಿಸುತ್ತಿದ್ದರು. ಆಕೆಯ, ತಾಯಿಯ ಹೇಳಿಕೆಯ ಪ್ರಕಾರ, ಮಹಾಲಕ್ಷ್ಮಿ ಸೆಪ್ಟೆಂಬರ್ 2 ರಂದು ಕೊನೆಯದಾಗಿ ತಾಯಿಗೆ ಕರೆ ಮಾಡಿ ಮಾತನಾಡಿದ್ದರು. ಶೀಘ್ರದಲ್ಲೇ ತನ್ನ ವಿಚ್ಛೇದಿತ ಪತಿಯನ್ನು ಭೇಟಿಯಾಗುವುದಾಗಿ ತಿಳಿಸಿದ್ದರು. ಸೆಪ್ಟೆಂಬರ್ 21 ರಂದು ಆಕೆ ಕೊಲೆಯಾಗಿರುವುದು ಬೆಳಕಿಗೆ ಬಂದಿದೆ.

ಮಹಾಲಕ್ಷ್ಮಿಯ ಕೊಲೆ ನಡೆದ ಬಳಿಕ, ಆಕೆಯ ವಿಚ್ಛೇದಿತ ಪತಿ ಹೇಮಂತ್ ದಾಸ್ ಒಬ್ಬ ವ್ಯಕ್ತಿಯ ಮೇಲೆ ಅನುಮಾನ ವ್ಯಕ್ತಪಡಿಸಿ ಮಾಧ್ಯಮಗಳಿಗೆ ಹೇಳಿಕೆ ಕೊಟ್ಟಿದ್ದರು. ಆಕೆ ಆತನೊಂದಿಗೆ ಸಂಬಂಧ ಹೊಂದಿದ್ದಾಳೆ ಎಂದಿದ್ದರು. ಆರು ವರ್ಷಗಳ ವೈವಾಹಿಕ ಜೀವನದ ಬಳಿಕ, ಒಂಬತ್ತು ತಿಂಗಳ ಹಿಂದೆ ನಾವು ಬೇರೆಯಾಗಿದ್ದೇವೆ. ನೆಲಮಂಗಲದ ಸಲೂನ್‌ನಲ್ಲಿ ಕೆಲಸ ಮಾಡುತ್ತಿದ್ದ ಅಶ್ರಫ್ ಎಂಬಾತನೇ ಕೃತ್ಯದಲ್ಲಿ ಭಾಗಿಯಾಗಿರುವ ಶಂಕೆ ಇದೆ ಎಂದು ಅವರು ಹೇಳಿದ್ದರು.

ಹೇಮಂತ್ ದಾಸ್ ಹೇಳಿರುವಂತೆ, ಮಹಾಲಕ್ಷ್ಮಿ ಅಶ್ರಫ್ ಜೊತೆ ಅಕ್ರಮ ಸಂಬಂಧ ಹೊಂದಿದ್ದರು. ಕೆಲ ತಿಂಗಳ ಹಿಂದೆ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಅಶ್ರಫ್ ವಿರುದ್ಧ ಮಹಾಲಕ್ಷ್ಮಿ ವಂಚನೆ ಆರೋಪ ಮಾಡಿ ದೂರು ಕೂಡ ದಾಖಲಿಸಿದ್ದರು.

ವಾಸ್ತವವಾಗಿ, ಪೊಲೀಸರು ಅಶ್ರಫ್ ಅನ್ನು ಪ್ರಮುಖ ಆರೋಪಿ ಎಂದು ಹೆಸರಿಸಿರಲಿಲ್ಲ. ಆತನನ್ನು ವಿಚಾರಣೆಗೆ ಒಳಪಡಿಸಿ ಬಿಟ್ಟು ಕಳಿಸಿದ್ದರು. ಆ ಕುರಿತ ಮಾಧ್ಯಮ ವರದಿ ಇಲ್ಲಿದೆ 

ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್ 23 ರಂದು ಹೇಳಿಕೆ ನೀಡಿದ್ದ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ ದಯಾನಂದ ಅವರು “ಪ್ರಕರಣದ ಪ್ರಮುಖ ಶಂಕಿತನನ್ನು ಗುರುತಿಸಲಾಗಿದೆ. ಆತ ಹೊರಗಿನ (ಹೊರ ರಾಜ್ಯದ) ವ್ಯಕ್ತಿಯಾಗಿದ್ದು, ತಲೆ ಮರೆಸಿಕೊಂಡಿದ್ದಾನೆ. ಪೊಲೀಸರು ಆತನ ಬಗ್ಗೆ ಹೆಚ್ಚುವರಿ ಮಾಹಿತಿಗಳನ್ನು ಕಲೆ ಹಾಕಿದ್ದಾರೆ ಎಂದಿದ್ದರು.

ಇದಾದ ನಂತರ, ಕೊಲೆ ಪ್ರಕರಣದ ಶಂಕಿತ ಆರೋಪಿ ಒಡಿಶ್ಶಾದಲ್ಲಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ ಎಂದು ಮಾಧ್ಯಮಗಳಲ್ಲಿ ವರದಿಯಾದಾಗ ಪ್ರಕರಣ ಮಹತ್ವದ ತಿರುವು ಪಡೆಯಿತು. ಆರೋಪಿ ಮುಕ್ತಿರಾಜನ್ ಪ್ರತಾಪ್ ರೇ ಯ ಮೃತದೇಹವು ಬುಧವಾರ (ಸೆ.25) ಬೆಳಿಗ್ಗೆ ಒಡಿಶಾದ ಭದ್ರಕ್ ಜಿಲ್ಲೆಯ ಭುಯಿನ್‌ಪುರ್ ಗ್ರಾಮದಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆರೋಪಿ ಭುಯಿನ್‌ಪುರ್ ಗ್ರಾಮದವನು ಎಂದು ವರದಿಗಳು ಹೇಳಿತ್ತು. ಹೆಚ್ಚಿನ ವರದಿಗಳು ಆರೋಪಿ ಮುಕ್ತಿ ರಂಜನ್ ರೇ ಎಂದು ಹೆಸರನ್ನು ಉಲ್ಲೇಖಿಸಿತ್ತು.

ಭದ್ರಕ್ ಎಸ್ಪಿ ವರುಣ್ ಗುಂಟುಪಲ್ಲಿ ಅವರ ಪ್ರಕಾರ, ಬೆಂಗಳೂರು ಪೊಲೀಸ್ ತಂಡವು ಬಂಧಿಸುವ ಮೊದಲು, ಆರೋಪಿಯನ್ನು ಮುಕ್ತಿರಾಜನ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆ ಪತ್ರ ಸಿಕ್ಕಿದ್ದು, ಅದರಲ್ಲಿ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ.

“ಬೆಂಗಳೂರಿನ ಕೊಲೆಗೆ ಸಂಬಂಧಿಸಿದಂತೆ ಬಂಧನದ ಭಯದಿಂದ ಆತನು ತನ್ನ ಜೀವನವನ್ನು ಕೊನೆಗೊಳಿಸಿದ್ದಾನೆ ಎಂದು ನಾವು ಬಲವಾಗಿ ಅನುಮಾನಿಸುತ್ತೇವೆ” ಎಂದು ಟೈಮ್ಸ್‌ ಆಫ್ ಇಂಡಿಯಾಗೆ ಎಸ್ಪಿ ಹೇಳಿದ್ದರು.

ವರದಿಗಳ ಪ್ರಕಾರ, ಆತ್ಮಹತ್ಯೆ ಆರೋಪಿ ಮುಕ್ತಿರಾಜನ್ ಪ್ರತಾಪ್ ರಾಯ್ ಮತ್ತು ಕೊಲೆಯಾದ ಮಹಾಲಕ್ಷ್ಮಿ 2023 ರಿಂದ ಸಹೋದ್ಯೋಗಿಗಳಾಗಿದ್ದರು. ಈ ವಿಷಯ ತಿಳಿದ ಪೊಲೀಸರು ಮಹಾಲಕ್ಷ್ಮಿಯೊಂದಿಗೆ ಸಂಪರ್ಕ ಹೊಂದಿದ್ದ ಜನರನ್ನು ವಿಚಾರಣೆ ನಡೆಸಿದ್ದರು. ಆಗ ಸ್ವಲ್ಪ ದಿನಗಳಿಂದ ರಾಯ್ ತಲೆಮರೆಸಿಕೊಂಡಿರುವುದು ಗೊತ್ತಾಗಿದೆ. ಸೆಪ್ಟೆಂಬರ್ 1ರಿಂದ ಮಹಾಲಕ್ಷ್ಮಿ ಮತ್ತು ರಾಯ್ ಇಬ್ಬರೂ ಕೆಲಸಕ್ಕೆ ಬಂದಿರಲಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಪೊಲೀಸರು ರಾಯ್‌ನ ಸಹೋದರನನ್ನು ಸಂಪರ್ಕಿಸಿದಾಗ, “ರಾಯ್‌ ಪಶ್ವಿಮ ಬಂಗಾಳದಿಂದ ಕರೆ ಮಾಡಿ ಕೊಲೆ ಮಾಡಿರುವ ವಿಚಾರ ನನಗೆ ತಿಳಿಸಿದ್ದಾನೆ. ನಾನು ಆತನಿಗೆ ಒಡಿಶಾದ ತಮ್ಮ ಹಳ್ಳಿಗೆ ಬರುವಂತೆ ಹೇಳಿದ್ದೇನೆ” ಎಂದು ವಿವರಿಸಿದ್ದಾನೆ. ಪ್ರಸ್ತುತ ಪೊಲೀಸರು ಪ್ರಕರಣದ ತನಿಖೆ ಮುಂದುವರೆಸಿದ್ದಾರೆ.

ಒಟ್ಟಿನಲ್ಲಿ, 29 ವರ್ಷದ ಮಹಾಲಕ್ಷ್ಮಿಯ ಕೊಲೆ ಪ್ರಕರಣದ ಆರೋಪಿಯ ಹೆಸರು ಮುಕ್ತಿರಾಜನ್ ಪ್ರತಾಪ್ ರೇ ಎಂದಾಗಿದ್ದು, ಆತ ಒಡಿಶ್ಶಾದ ತನ್ನ ಹಳ್ಳಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಬಂಧನದ ಭೀತಿಯಿಂದ ಆತ ಆತ್ಮಹತ್ಯೆ ಮಾಡಿಕೊಂಡಿರಬಹುದು. ಆತನ ಡೆತ್ ನೋಟ್ ಪತ್ತೆಯಾಗಿದ್ದು, ಅದರಲ್ಲಿ ಮಹಾಲಕ್ಷ್ಮಿಯನ್ನು ಕೊಲೆ ಮಾಡಿರುವುದು ನಾನೇ ಎಂದು ಒಪ್ಪಿಕೊಂಡಿದ್ದಾನೆ ಎಂದು ವರದಿಗಳು ಮತ್ತು ಪೊಲೀಸರ ಹೇಳಿಕೆಯಿಂದ ತಿಳಿದು ಬಂದಿದೆ. ಆದ್ದರಿಂದ ಮಹಾಲಕ್ಷ್ಮಿಯನ್ನು ಅಶ್ರಫ್ ಕೊಲೆ ಮಾಡಿದ್ದಾನೆ ಎಂಬುವುದು ದೃಢಪಟ್ಟಿಲ್ಲ.

ಈ ಪ್ರಕರಣದ ತನಿಖೆ ಇನ್ನೂ ಪ್ರಗತಿಯಲ್ಲಿದೆ. ಸತ್ಯಾಸತ್ಯತೆ ಪೊಲೀಸರ ತನಿಖೆ ಪೂರ್ಣಗೊಂಡ ಬಳಿಕ ಗೊತ್ತಾಗಲಿದೆ. ಆದರೆ, ಪ್ರಸ್ತುತ ಅಶ್ರಫ್ ಎಂಬಾತ ಕೊಲೆ ಮಾಡಿದ್ದಾನೆ ಎಂಬುವುದನ್ನು ಪೊಲೀಸರು ದೃಢಪಡಿಸಿಲ್ಲ. ಆತ್ಮಹತ್ಯೆ ಮಾಡಿಕೊಂಡಿರುವ ಮುಕ್ತಿರಾಜನ್ ಪ್ರತಾಪ್ ರೇ ಕೂಡ ಆರೋಪಿ ಎಂದೇ ಪರಿಗಣಿಸಲ್ಪಟ್ಟಿದ್ದಾನೆ. ಪ್ರಕರಣಕ್ಕೆ ಕೆಲವರು ಕೋಮು ಬಣ್ಣ ಬಳಿದಿರುವುದರಿಂದ, ಇದುವರೆಗೆ ಆದ ಬೆಳವಣಿಗೆಯ ಸತ್ಯಾಸತ್ಯತೆಯನ್ನು ಮಾತ್ರ ನಾವಿಲ್ಲಿ ವಿವರಿಸಿದ್ದೇವೆ.

ಇದನ್ನೂ ಓದಿ : FACT CHECK : ಮುಂಬೈನಲ್ಲಿ ಮುಸ್ಲಿಮರಿಂದ ಶಕ್ತಿ ಪ್ರದರ್ಶನ ಎಂದು ಸಂಬಂಧವಿಲ್ಲದ ವಿಡಿಯೋ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...