Homeಮುಖಪುಟಕೊರೋನಾ: ಭವಿಷ್ಯದ ಸುಳ್ಳು ಸುದ್ದಿಗಳು

ಕೊರೋನಾ: ಭವಿಷ್ಯದ ಸುಳ್ಳು ಸುದ್ದಿಗಳು

ಸಾಬರಿಂದ ಹಬ್ಬಿತು ವೈರಸ್ ಎಂದು ಇನ್ನೊಂದು ಸುಳ್ಳುಸುದ್ದಿ ಹರಡಿಸುತ್ತಾರೆ. ಆದರೆ ಅದಕ್ಕೆ ಕಾರಣ ಅವರು ಸಾಬರಾಗಿರುವುದು ಅಲ್ಲದೇ ಇನ್ನೊಂದು ಬಹುಮುಖ್ಯ ಕಾರಣವಿದೆ.

- Advertisement -
- Advertisement -

ಮುಂದಿನೆರಡು ತಿಂಗಳಿನಲ್ಲಿ, ಕೊರೊನಾ ಹತೋಟಿಗೆ ಬಂದರೆ, ಬಿಜೆಪಿ ಹಬ್ಬಿಸುವ ಸುಳ್ಳುಸುದ್ಧಿಗಳು ಇಂತಿರಲಿವೆ:

– ಭಾರತಕ್ಕೆ ಬರಲು ಹೆದರಿತೆ ಕೊರೋನಾ? ನೋಡಿ ಮೋದಿ ಯೋಗದ ಪರಿಣಾಮ!

– ವುಹಾನ್‌ನಲ್ಲಿ ಕೊರೋನಾ ವೈರಸ್ ಗೆಳತಿಯ ವೇಷ ಧರಿಸಿ ವೈರಸ್‌ನನ್ನೇ ಕೊಂದ ಧೋವಲ್!

– ಅಮಿ_ ಶಾ_ ದಡಿಯಲ್ಲಿ ವಿಲವಿಲ ಒದ್ದಾಡಿದ ದಡ್ಡ ಕೊರೋನಾ!

ಕೊರೋನಾಸುರನನ್ನು ಕೊಂದ ಕಾರಣಕ್ಕಷ್ಟೇ ಅಲ್ಲದೇ, ಭಾರತದಲ್ಲಿ ಈ ವೈರಸ್‌ನ ರಗಳೆ ಮುಂದೆ ಹೆಚ್ಚು ಹಬ್ಬದೇ ಹೋದರೆ ಅದಕ್ಕೆ ಇನ್ನೂ ಕೆಲವು ಕಾರಣಗಳಿವೆ. ಅವು ಹೀಗಿವೆ.

ನಮ್ಮ ದೇಶದ ಜಿಡಿಪಿ ಪ್ರವಾಸೋದ್ಯಮದ ಕಾರಣದಿಂದ 9% ನಷ್ಟು ಗಳಿಸುತ್ತದೆ. ಆದರೆ ಚೈನಾದಿಂದ ನಮ್ಮಲ್ಲಿ ಬರುವ ಪ್ರವಾಸಿಗರ ಸಂಖ್ಯೆ ಅತ್ಯಂತ ಅಲ್ಪ. (ಉತ್ತರ ಇಟಲಿಯ ಸಮಸ್ಯೆ ಮುಖ್ಯವಾಗಿ ಉಂಟಾದದ್ದೇ ಚೀನಾದ ಪ್ರವಾಸಿಗರ ಕಾರಣದಿಂದ. ಅದು ದಕ್ಷಿಣ ಜರ್ಮನಿಯ ಬವೇರಿಯಾ ಪ್ರಾಂತ್ಯಕ್ಕೆ ದಾಟಿದ್ದು ಶೆಂಗಿಯನ್ ದೇಶಗಳಿಗೆ ಪೋರಸ್ ಗಡಿಗಳಿರುವ ಕಾರಣದಿಂದ). ಮಲೇಷ್ಯಾ ಹೊರತುಪಡಿಸಿದರೆ ಪೂರ್ವ ಏಷ್ಯಾದಿಂದ ಭಾರತಕ್ಕೆ ಬರುವ ಪ್ರವಾಸಿಗರು ಅತ್ಯಂತ ಕಡಿಮೆ. ಯೂರೋಪಿನಿಂದ ಭಾರತಕ್ಕೆ ಬರುವ ಪ್ರವಾಸಿಗರು ಬೇಸಿಗೆಯಲ್ಲಿ ಹೆಚ್ಚು ಬರುತ್ತಾರೆಯೇ ಹೊರತು, ನಮ್ಮ ಚಳಿಗಾಲದಲ್ಲಿ ಅಲ್ಲ.

ಸೇವೆ ಆಧಾರಿತ ಎಕಾನಮಿಯ ದೇಶವಾದ ನಮ್ಮಿಂದ ಯುರೋಪಿಗೋ, ಅಮೇರಿಕಾಕ್ಕೋ ಹೋಗುವ ಜನಗಳು ಬಹಳ ಕಡಿಮೆ. ಉತ್ಪನ್ನಾಧರಿತ ದೇಶವಾದ ಚೈನಾದಿಂದ ಹೊರದೇಶಗಳಿಗೆ ಭೇಟಿ ಕೊಡುವ ಜನರೂ, ವಸ್ತುಗಳೂ ಬಹಳ ಹೆಚ್ಚು. (ನಾವು ಹೆಚ್ಚೆಂದರೆ ಸಾಫ್ಟ್ ವೇರ್ ವೈರಸ್ ಉಂಟುಮಾಡಿ ಹರಡಬಹುದಷ್ಟೇ! ಆದರೆ ಕಮ್ಯೂನಲ್ ವೈರಸ್ ಹರಡುವುದರಲ್ಲೇ ಬಿಝಿಯಾದ ನಮ್ಮ ಸಾಫ್ಟ್-ವೇರ್ ಇಂಜಿನೀರುಗಳಿಗೆ ಅಷ್ಟು ತಲೆಯಾಗಲೀ ವ್ಯವಧಾನವಾಗಲೀ ಇಲ್ಲ.) ಹಾಗಾಗಿ, ಬಹುಷಃ ನಮ್ಮ ದೇಶಕ್ಕೆ ಈ ವೈರಸ್ ಹೆಚ್ಚು ಬಂದಿರದೇ ಇರಬಹುದು.

ಸಾಬರಿಂದ ಹಬ್ಬಿತು ವೈರಸ್ ಎಂದು ಇನ್ನೊಂದು ಸುಳ್ಳುಸುದ್ದಿ ಹರಡಿಸುತ್ತಾರೆ. ಆದರೆ ಅದಕ್ಕೆ ಕಾರಣ ಅವರು ಸಾಬರಾಗಿರುವುದು ಅಲ್ಲದೇ ಇನ್ನೊಂದು ಬಹುಮುಖ್ಯ ಕಾರಣವಿದೆ.

ಜಗತ್ತಿನ ಏರ್-ಟ್ರಾಫಿಕ್ ಟ್ರಾನ್ಸಿಟ್‌ಗಳಲ್ಲಿ (ಅಂದರೆ ಬೆಂಗಳೂರಿನಿಂದ ಸಾಗರಕ್ಕೆ ಹೋಗುವಾಗ ಸಿಗರೇಟ್ ಸೇದಲು ಬಸ್ ನಿಲ್ಲುವ ಕೆ.ಬಿ ಕ್ರಾಸೋ ಅರಸಿಕೆರೆಯೋ ಅಂಥ ಜಾಗ ಅಂತಿಟ್ಟುಕೊಳ್ಳಿ.) ದುಬೈ ಅತ್ಯಂತ ಮುಖ್ಯ ಏರ್ಪೋರ್ಟ್. ಅದು ಜಗತ್ತಿನ ಅತೀದೊಡ್ಡ ಟ್ರಾನ್ಸಿಟ್ ಏರ್ಪೋರ್ಟ್ಗಳ ಪೈಕಿ ಒಂದು. ವರ್ಷಕ್ಕೆ ಹತ್ತು ಕೋಟಿ ಜನ ಆ ವಿಮಾನ ನಿಲ್ದಾಣದಲ್ಲಿ ಕಾಲಿಡುತ್ತಾರೆ. 12 ನಿಮಿಷಕ್ಕೆ ಒಂದು ಕಿಲೋಮೀಟರ್ ನಡೆಯುವ ನನಗೆ ನಾಲ್ಕು ಕಿಲೋಮೀಟರ್‌ಗಳಷ್ಟಿರುವ ಆ ಏರ್ಪೋರ್ಟ್ನ ತುದಿಯಿಂದ ತುದಿಗೆ ತಲುಪಲು ಗಂಟೆಗಿಂತ ಹೆಚ್ಚು ಹಿಡಿದಿತ್ತು. ಅಂಥ ವಿಸ್ತಾರ ಜಾಗದಲ್ಲಿ ಎಷ್ಟು ಜನಕ್ಕೆ ಹಬ್ಬುವುದೆಂದು ಗೊತ್ತಾಗದೇ ಜಾತಿಧರ್ಮ ಮೀರಿ ಕೊರೊನಾ ಕೈಲಾದಷ್ಟು ಜನರಿಗೆ ಅಂಟಿಕೊಳ್ಳುತ್ತದೆ. ಕೈತೊಳೆಯದ ಜನ ಇನ್ನಷ್ಟು ಹಬ್ಬಿಸುತ್ತಾರೆ. ಮಿಡಲ್ ಈಸ್ಟ್ನಲ್ಲಿ ಸಾಬರಿರುವುದರಿಂದ ಅದು ಅವರ ಗಡ್ಡಕ್ಕೂ ಅಂಟಿಕೊಳ್ಳುವ ಸಾಧ್ಯತೆಯಿದೆ ಹೊರತು, ಅವರು ಸಾಬರೆಂದು ಕೊರೋನಾಕ್ಕೆ ಗೊತ್ತಾಗುವುದಿಲ್ಲ. ಅದು ಗೊತ್ತಾಗುವುದು ನಮ್ಮ ಬಿಜೆಪಿಗಳಿಗೆ ಮಾತ್ರ.

ಇನ್ನೊಂದು ತರ್ಕವಿದೆ. ಇದು ಅನೇಕ ಬಾರಿಯ ವಯಕ್ತಿಕ ಅನುಭವದ್ದು. ಯೂರೋಪಿನಿಂದ ಮತ್ತು ಅಮೆರಿಕಾದಿಂದ ದುಬೈನ ಟ್ರಾನ್ಸಿಟ್‌ವರೆಗೆ ಅತ್ಯಂತ ಒಳ್ಳೆಯ ರೀತಿಯಲ್ಲಿ ಮೇಂಟೇನ್ ಮಾಡಲಾದ ಬೋಯಿಂಗ್ 747 ಜಂಬೋಜೆಟ್‌ಗಳಂತಹ ವಿಮಾನಗಳು ಬರುತ್ತವೆ. ಅಲ್ಲಿಂದ ಇಂಡಿಯಾಕ್ಕೆ ಮತ್ತು ಏಷ್ಯಾದ ದೇಶಗಳಿಗೆ ಬರುವ ವಿಮಾನಗಳು -ಸ್ಯಾನಿಟೇಷನ್‌ನ ದೃಷ್ಟಿಯಿಂದ – ಅಷ್ಟು ಉತ್ತಮವಾಗಿರದ ಏರ್ ಬಸ್ ವಿಮಾನಗಳು.

ಝೀ ಟಿವಿಯ ಸುಧೀರ್ ಚೌಧರಿಯಂಥವರು ಚೀಪ್ (pun intended) ಎಡಿಟರ್ ಆಗಿರುವ, ಆಕ್ಸೆಂಟೆಡ್ ಇಂಗ್ಲಿಷ್ ಮಾತಾಡುವ ನಿರೂಪಕಿ ಇರುವ ವಿಯೋನ್ ಟಿ.ವಿಯ ವರದಿ ಚೈನಾದ ಕುರಿತು ದೊಡ್ಡ ಕಾನ್ಸ್-ಪಿರಸಿ ಥಿಯರಿಯನ್ನು ಹಬ್ಬಿಸುತ್ತಿದೆ. Ravi Belagere ತನಿಖಾ ಪತ್ರಕರ್ತರು ಇದನ್ನು ಹಂಚಿಕೊಳ್ಳುತ್ತಾರೆ. (ನಾನಿಲ್ಲಿ ಚೈನಾವನ್ನು ಖಂಡಿತಾ ಸಪೋರ್ಟ್ ಮಾಡುತ್ತಿಲ್ಲ. ನಮ್ಮ ಮನೆಗೆ ಬಂದು ಊಟ ಮಾಡಿಕೊಂಡು ಹೋಗಿ, ಅವರ ಮನೆಗೆ ಹೋದರೆ ಬಾಗಿಲಲ್ಲಿ ಮಾತಾಡಿಸಿ ಕಳುಹಿಸುವ ದೇಶ ಅದು.) ಆದರೆ ಜಾಗತಿಕ ಡಿಪ್ಲೊಮಸಿ ಮತ್ತು ಎಕನಾಮಿಕ್ಸ್ನ ಕನಿಷ್ಟ ನರಮಂಡಲ ಗೊತ್ತಿದ್ದರೆ ಅಂಥ ಥಿಯರಿಯನ್ನು ಯಾರೂ ನಂಬುವುದಿಲ್ಲ. ಮಾಸ್ಕ್ ಮಾರಿ ಶ್ರೀಮಂತವಾಗುತ್ತದೆ ಚೈನಾ ಎನ್ನುತ್ತಾರೆ ಜನ. ಅಡಿಗೆಮನೆಗೆ ಬೆಂಕಿ ಹಾಕಿ ಅಕ್ಕಿ ಮಾರಲಾಗುವುದಿಲ್ಲ. ಐಫೋನ್ ಕೊಳ್ಳುವವರೆಲ್ಲ ಸತ್ತು ಹೋದರೆ ಅದನ್ನು ಮಾಡುವ ಚೈನಾ ಅದನ್ನು ಅಂಡಿಗೆ ಹಾಕಿಕೊಳ್ಳಬೇಕಷ್ಟೇ.

ಜರ್ಮನಿಯಲ್ಲಿ ಮೂರು ವರ್ಷದಿಂದ ನಾನು ವಾಸಿಸುತ್ತಿರುವ ಬಿಲ್ಡಿಂಗ್‌ನಲ್ಲಿ ಸುಮಾರು 20-25 ಜನ ಚೈನೀಸ್ ಹುಡುಗರನ್ನು ಮಾತಾಡಿಸಲು ಪ್ರಯತ್ನಿಸಿದ್ದೇನೆ. ರಾಜಕೀಯ ಮಾತಾಡಲು ಪ್ರಯತ್ನಿಸಿದರೆ ಒಂದೋ ಹೆದರುತ್ತಾರೆ. ಅಥವಾ I don’t want to spek about it ಎಂದು ನೇರವಾಗಿ ಹೇಳುವಷ್ಟು ಹೆದರುತ್ತಾರೆ. ಒಬ್ಬ ಹುಡುಗ ಮಾತ್ರ ಅಡಿಗೆ ಮನೆಯ ಕಿಟಕಿ ಬಾಗಿಲುಗಳ ಮುಚ್ಚಿ ಕಥೆಗಳನ್ನು ಹೇಳಿದ. ಅದೆಲ್ಲ ನಾವು ಆ ದೇಶದ ಬಗ್ಗೆ ನಂಬಿರುವಂಥದ್ದೇ. ಅಂಥದ್ದೇ ಡಿಕ್ಟೇಟೋರಿಯಲ್ ದೇಶ ನಾವಾಗಲು ಕಾದುಕುಳಿತಿದ್ದೇವೆ. ಬೆಳಿಗ್ಗೆ ಚೈನಾದಂಥ ಆಡಳಿತ ಬರಬೇಕು ಎಂದು ಕೂಗುತ್ತೇವೆ. ಮಧ್ಯಾಹ್ನ ಆ ದೇಶ ಜಗತ್ತಿಗೆ ನ್ಯೂಸ್ ಕೊಡುತ್ತಿಲ್ಲ ಅಂಥ ಬೊಬ್ಬಿರಿಯುತ್ತೇವೆ. ಸಂಜೆ ನಮ್ಮ ಬಗ್ಗೆ ಅಮೇರಿಕನ್ ಮೀಡಿಯಾ ತಪ್ಪಾಗಿ ಬಿಂಬಿಸುತ್ತಿದೆ ಎಂದು ಕನ್ನಡ ಮೀಡಿಯಾಗಳು ಊಳಿಡುತ್ತವೆ.

ಇದೆಲ್ಲ ಬಿಟ್ಟು-

ಒಂದೊಮ್ಮೆ, ಇನ್ಕ್ಯುಬೇಷನ್ ಅವಧಿ ಹೆಚ್ಚಿರುವ ಈ ವೈರಸ್ ಬಂದಿದ್ದು, ಜನರಿಂದ ಜನಕ್ಕೆ ಹರಡಿ ಅದು ಕಾಣಿಸಿಕೊಂಡರೆ, ಅದು ಮುಂದೆರಡು ತಿಂಗಳಿನಲ್ಲಿ – ಈ ಸರ್ಕಾರ ಹಿಂದೂಮುಂದೂ ಯೋಚಿಸದ ರೀತಿಯಲ್ಲಿ ಲಾಕ್ ಡೌನ್ ಮಾಡಿ, ಟೆಸ್ಟುಗಳನ್ನೂ ಸರಿಯಾಗಿ ಮಾಡದೇ ಜನರಿಂದ ಜನರಿಗೆ ಹಬ್ಬುವಂತೆ ಮಾಡಿದ್ದರಲ್ಲಿ ಸಾಬರಿಗೆ ಬಂದಿದ್ದರೆ ಅದು ಕೊರೋನಾದ ತಪ್ಪೇ ಹೊರತು ಸಾಬರದ್ದಲ್ಲ ಎಂದು ಅರ್ಥ.

ಪುಣ್ಯಕ್ಕೆ ಸಾಬರಲ್ಲಿ ಮುಕ್ಕಾಲು ಪಾಲು ಜನ ಕುಡಿಯುವುದಿಲ್ಲ. ಹೆಂಡ ಕೊಡದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದು ಹೆದರಿಸುತಿರುವ ಹಿಂದುಗಳಿಗೆ ಹೆಂಡ ಕೊಡುತ್ತಿರುವ ನಾವು ಸಾಬರಿಗೆ ಅದನ್ನೂ ಕೊಡದೇ ಮಜಾ ನೋಡುತ್ತಿದ್ದೆವು. ಆ ಅವಕಾಶ ಮಾತ್ರ ಬಿಜೆಪಿಗೆ ತಪ್ಪಿಹೋಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...