Homeಮುಖಪುಟಕೊರೋನಾ: ಭವಿಷ್ಯದ ಸುಳ್ಳು ಸುದ್ದಿಗಳು

ಕೊರೋನಾ: ಭವಿಷ್ಯದ ಸುಳ್ಳು ಸುದ್ದಿಗಳು

ಸಾಬರಿಂದ ಹಬ್ಬಿತು ವೈರಸ್ ಎಂದು ಇನ್ನೊಂದು ಸುಳ್ಳುಸುದ್ದಿ ಹರಡಿಸುತ್ತಾರೆ. ಆದರೆ ಅದಕ್ಕೆ ಕಾರಣ ಅವರು ಸಾಬರಾಗಿರುವುದು ಅಲ್ಲದೇ ಇನ್ನೊಂದು ಬಹುಮುಖ್ಯ ಕಾರಣವಿದೆ.

- Advertisement -
- Advertisement -

ಮುಂದಿನೆರಡು ತಿಂಗಳಿನಲ್ಲಿ, ಕೊರೊನಾ ಹತೋಟಿಗೆ ಬಂದರೆ, ಬಿಜೆಪಿ ಹಬ್ಬಿಸುವ ಸುಳ್ಳುಸುದ್ಧಿಗಳು ಇಂತಿರಲಿವೆ:

– ಭಾರತಕ್ಕೆ ಬರಲು ಹೆದರಿತೆ ಕೊರೋನಾ? ನೋಡಿ ಮೋದಿ ಯೋಗದ ಪರಿಣಾಮ!

– ವುಹಾನ್‌ನಲ್ಲಿ ಕೊರೋನಾ ವೈರಸ್ ಗೆಳತಿಯ ವೇಷ ಧರಿಸಿ ವೈರಸ್‌ನನ್ನೇ ಕೊಂದ ಧೋವಲ್!

– ಅಮಿ_ ಶಾ_ ದಡಿಯಲ್ಲಿ ವಿಲವಿಲ ಒದ್ದಾಡಿದ ದಡ್ಡ ಕೊರೋನಾ!

ಕೊರೋನಾಸುರನನ್ನು ಕೊಂದ ಕಾರಣಕ್ಕಷ್ಟೇ ಅಲ್ಲದೇ, ಭಾರತದಲ್ಲಿ ಈ ವೈರಸ್‌ನ ರಗಳೆ ಮುಂದೆ ಹೆಚ್ಚು ಹಬ್ಬದೇ ಹೋದರೆ ಅದಕ್ಕೆ ಇನ್ನೂ ಕೆಲವು ಕಾರಣಗಳಿವೆ. ಅವು ಹೀಗಿವೆ.

ನಮ್ಮ ದೇಶದ ಜಿಡಿಪಿ ಪ್ರವಾಸೋದ್ಯಮದ ಕಾರಣದಿಂದ 9% ನಷ್ಟು ಗಳಿಸುತ್ತದೆ. ಆದರೆ ಚೈನಾದಿಂದ ನಮ್ಮಲ್ಲಿ ಬರುವ ಪ್ರವಾಸಿಗರ ಸಂಖ್ಯೆ ಅತ್ಯಂತ ಅಲ್ಪ. (ಉತ್ತರ ಇಟಲಿಯ ಸಮಸ್ಯೆ ಮುಖ್ಯವಾಗಿ ಉಂಟಾದದ್ದೇ ಚೀನಾದ ಪ್ರವಾಸಿಗರ ಕಾರಣದಿಂದ. ಅದು ದಕ್ಷಿಣ ಜರ್ಮನಿಯ ಬವೇರಿಯಾ ಪ್ರಾಂತ್ಯಕ್ಕೆ ದಾಟಿದ್ದು ಶೆಂಗಿಯನ್ ದೇಶಗಳಿಗೆ ಪೋರಸ್ ಗಡಿಗಳಿರುವ ಕಾರಣದಿಂದ). ಮಲೇಷ್ಯಾ ಹೊರತುಪಡಿಸಿದರೆ ಪೂರ್ವ ಏಷ್ಯಾದಿಂದ ಭಾರತಕ್ಕೆ ಬರುವ ಪ್ರವಾಸಿಗರು ಅತ್ಯಂತ ಕಡಿಮೆ. ಯೂರೋಪಿನಿಂದ ಭಾರತಕ್ಕೆ ಬರುವ ಪ್ರವಾಸಿಗರು ಬೇಸಿಗೆಯಲ್ಲಿ ಹೆಚ್ಚು ಬರುತ್ತಾರೆಯೇ ಹೊರತು, ನಮ್ಮ ಚಳಿಗಾಲದಲ್ಲಿ ಅಲ್ಲ.

ಸೇವೆ ಆಧಾರಿತ ಎಕಾನಮಿಯ ದೇಶವಾದ ನಮ್ಮಿಂದ ಯುರೋಪಿಗೋ, ಅಮೇರಿಕಾಕ್ಕೋ ಹೋಗುವ ಜನಗಳು ಬಹಳ ಕಡಿಮೆ. ಉತ್ಪನ್ನಾಧರಿತ ದೇಶವಾದ ಚೈನಾದಿಂದ ಹೊರದೇಶಗಳಿಗೆ ಭೇಟಿ ಕೊಡುವ ಜನರೂ, ವಸ್ತುಗಳೂ ಬಹಳ ಹೆಚ್ಚು. (ನಾವು ಹೆಚ್ಚೆಂದರೆ ಸಾಫ್ಟ್ ವೇರ್ ವೈರಸ್ ಉಂಟುಮಾಡಿ ಹರಡಬಹುದಷ್ಟೇ! ಆದರೆ ಕಮ್ಯೂನಲ್ ವೈರಸ್ ಹರಡುವುದರಲ್ಲೇ ಬಿಝಿಯಾದ ನಮ್ಮ ಸಾಫ್ಟ್-ವೇರ್ ಇಂಜಿನೀರುಗಳಿಗೆ ಅಷ್ಟು ತಲೆಯಾಗಲೀ ವ್ಯವಧಾನವಾಗಲೀ ಇಲ್ಲ.) ಹಾಗಾಗಿ, ಬಹುಷಃ ನಮ್ಮ ದೇಶಕ್ಕೆ ಈ ವೈರಸ್ ಹೆಚ್ಚು ಬಂದಿರದೇ ಇರಬಹುದು.

ಸಾಬರಿಂದ ಹಬ್ಬಿತು ವೈರಸ್ ಎಂದು ಇನ್ನೊಂದು ಸುಳ್ಳುಸುದ್ದಿ ಹರಡಿಸುತ್ತಾರೆ. ಆದರೆ ಅದಕ್ಕೆ ಕಾರಣ ಅವರು ಸಾಬರಾಗಿರುವುದು ಅಲ್ಲದೇ ಇನ್ನೊಂದು ಬಹುಮುಖ್ಯ ಕಾರಣವಿದೆ.

ಜಗತ್ತಿನ ಏರ್-ಟ್ರಾಫಿಕ್ ಟ್ರಾನ್ಸಿಟ್‌ಗಳಲ್ಲಿ (ಅಂದರೆ ಬೆಂಗಳೂರಿನಿಂದ ಸಾಗರಕ್ಕೆ ಹೋಗುವಾಗ ಸಿಗರೇಟ್ ಸೇದಲು ಬಸ್ ನಿಲ್ಲುವ ಕೆ.ಬಿ ಕ್ರಾಸೋ ಅರಸಿಕೆರೆಯೋ ಅಂಥ ಜಾಗ ಅಂತಿಟ್ಟುಕೊಳ್ಳಿ.) ದುಬೈ ಅತ್ಯಂತ ಮುಖ್ಯ ಏರ್ಪೋರ್ಟ್. ಅದು ಜಗತ್ತಿನ ಅತೀದೊಡ್ಡ ಟ್ರಾನ್ಸಿಟ್ ಏರ್ಪೋರ್ಟ್ಗಳ ಪೈಕಿ ಒಂದು. ವರ್ಷಕ್ಕೆ ಹತ್ತು ಕೋಟಿ ಜನ ಆ ವಿಮಾನ ನಿಲ್ದಾಣದಲ್ಲಿ ಕಾಲಿಡುತ್ತಾರೆ. 12 ನಿಮಿಷಕ್ಕೆ ಒಂದು ಕಿಲೋಮೀಟರ್ ನಡೆಯುವ ನನಗೆ ನಾಲ್ಕು ಕಿಲೋಮೀಟರ್‌ಗಳಷ್ಟಿರುವ ಆ ಏರ್ಪೋರ್ಟ್ನ ತುದಿಯಿಂದ ತುದಿಗೆ ತಲುಪಲು ಗಂಟೆಗಿಂತ ಹೆಚ್ಚು ಹಿಡಿದಿತ್ತು. ಅಂಥ ವಿಸ್ತಾರ ಜಾಗದಲ್ಲಿ ಎಷ್ಟು ಜನಕ್ಕೆ ಹಬ್ಬುವುದೆಂದು ಗೊತ್ತಾಗದೇ ಜಾತಿಧರ್ಮ ಮೀರಿ ಕೊರೊನಾ ಕೈಲಾದಷ್ಟು ಜನರಿಗೆ ಅಂಟಿಕೊಳ್ಳುತ್ತದೆ. ಕೈತೊಳೆಯದ ಜನ ಇನ್ನಷ್ಟು ಹಬ್ಬಿಸುತ್ತಾರೆ. ಮಿಡಲ್ ಈಸ್ಟ್ನಲ್ಲಿ ಸಾಬರಿರುವುದರಿಂದ ಅದು ಅವರ ಗಡ್ಡಕ್ಕೂ ಅಂಟಿಕೊಳ್ಳುವ ಸಾಧ್ಯತೆಯಿದೆ ಹೊರತು, ಅವರು ಸಾಬರೆಂದು ಕೊರೋನಾಕ್ಕೆ ಗೊತ್ತಾಗುವುದಿಲ್ಲ. ಅದು ಗೊತ್ತಾಗುವುದು ನಮ್ಮ ಬಿಜೆಪಿಗಳಿಗೆ ಮಾತ್ರ.

ಇನ್ನೊಂದು ತರ್ಕವಿದೆ. ಇದು ಅನೇಕ ಬಾರಿಯ ವಯಕ್ತಿಕ ಅನುಭವದ್ದು. ಯೂರೋಪಿನಿಂದ ಮತ್ತು ಅಮೆರಿಕಾದಿಂದ ದುಬೈನ ಟ್ರಾನ್ಸಿಟ್‌ವರೆಗೆ ಅತ್ಯಂತ ಒಳ್ಳೆಯ ರೀತಿಯಲ್ಲಿ ಮೇಂಟೇನ್ ಮಾಡಲಾದ ಬೋಯಿಂಗ್ 747 ಜಂಬೋಜೆಟ್‌ಗಳಂತಹ ವಿಮಾನಗಳು ಬರುತ್ತವೆ. ಅಲ್ಲಿಂದ ಇಂಡಿಯಾಕ್ಕೆ ಮತ್ತು ಏಷ್ಯಾದ ದೇಶಗಳಿಗೆ ಬರುವ ವಿಮಾನಗಳು -ಸ್ಯಾನಿಟೇಷನ್‌ನ ದೃಷ್ಟಿಯಿಂದ – ಅಷ್ಟು ಉತ್ತಮವಾಗಿರದ ಏರ್ ಬಸ್ ವಿಮಾನಗಳು.

ಝೀ ಟಿವಿಯ ಸುಧೀರ್ ಚೌಧರಿಯಂಥವರು ಚೀಪ್ (pun intended) ಎಡಿಟರ್ ಆಗಿರುವ, ಆಕ್ಸೆಂಟೆಡ್ ಇಂಗ್ಲಿಷ್ ಮಾತಾಡುವ ನಿರೂಪಕಿ ಇರುವ ವಿಯೋನ್ ಟಿ.ವಿಯ ವರದಿ ಚೈನಾದ ಕುರಿತು ದೊಡ್ಡ ಕಾನ್ಸ್-ಪಿರಸಿ ಥಿಯರಿಯನ್ನು ಹಬ್ಬಿಸುತ್ತಿದೆ. Ravi Belagere ತನಿಖಾ ಪತ್ರಕರ್ತರು ಇದನ್ನು ಹಂಚಿಕೊಳ್ಳುತ್ತಾರೆ. (ನಾನಿಲ್ಲಿ ಚೈನಾವನ್ನು ಖಂಡಿತಾ ಸಪೋರ್ಟ್ ಮಾಡುತ್ತಿಲ್ಲ. ನಮ್ಮ ಮನೆಗೆ ಬಂದು ಊಟ ಮಾಡಿಕೊಂಡು ಹೋಗಿ, ಅವರ ಮನೆಗೆ ಹೋದರೆ ಬಾಗಿಲಲ್ಲಿ ಮಾತಾಡಿಸಿ ಕಳುಹಿಸುವ ದೇಶ ಅದು.) ಆದರೆ ಜಾಗತಿಕ ಡಿಪ್ಲೊಮಸಿ ಮತ್ತು ಎಕನಾಮಿಕ್ಸ್ನ ಕನಿಷ್ಟ ನರಮಂಡಲ ಗೊತ್ತಿದ್ದರೆ ಅಂಥ ಥಿಯರಿಯನ್ನು ಯಾರೂ ನಂಬುವುದಿಲ್ಲ. ಮಾಸ್ಕ್ ಮಾರಿ ಶ್ರೀಮಂತವಾಗುತ್ತದೆ ಚೈನಾ ಎನ್ನುತ್ತಾರೆ ಜನ. ಅಡಿಗೆಮನೆಗೆ ಬೆಂಕಿ ಹಾಕಿ ಅಕ್ಕಿ ಮಾರಲಾಗುವುದಿಲ್ಲ. ಐಫೋನ್ ಕೊಳ್ಳುವವರೆಲ್ಲ ಸತ್ತು ಹೋದರೆ ಅದನ್ನು ಮಾಡುವ ಚೈನಾ ಅದನ್ನು ಅಂಡಿಗೆ ಹಾಕಿಕೊಳ್ಳಬೇಕಷ್ಟೇ.

ಜರ್ಮನಿಯಲ್ಲಿ ಮೂರು ವರ್ಷದಿಂದ ನಾನು ವಾಸಿಸುತ್ತಿರುವ ಬಿಲ್ಡಿಂಗ್‌ನಲ್ಲಿ ಸುಮಾರು 20-25 ಜನ ಚೈನೀಸ್ ಹುಡುಗರನ್ನು ಮಾತಾಡಿಸಲು ಪ್ರಯತ್ನಿಸಿದ್ದೇನೆ. ರಾಜಕೀಯ ಮಾತಾಡಲು ಪ್ರಯತ್ನಿಸಿದರೆ ಒಂದೋ ಹೆದರುತ್ತಾರೆ. ಅಥವಾ I don’t want to spek about it ಎಂದು ನೇರವಾಗಿ ಹೇಳುವಷ್ಟು ಹೆದರುತ್ತಾರೆ. ಒಬ್ಬ ಹುಡುಗ ಮಾತ್ರ ಅಡಿಗೆ ಮನೆಯ ಕಿಟಕಿ ಬಾಗಿಲುಗಳ ಮುಚ್ಚಿ ಕಥೆಗಳನ್ನು ಹೇಳಿದ. ಅದೆಲ್ಲ ನಾವು ಆ ದೇಶದ ಬಗ್ಗೆ ನಂಬಿರುವಂಥದ್ದೇ. ಅಂಥದ್ದೇ ಡಿಕ್ಟೇಟೋರಿಯಲ್ ದೇಶ ನಾವಾಗಲು ಕಾದುಕುಳಿತಿದ್ದೇವೆ. ಬೆಳಿಗ್ಗೆ ಚೈನಾದಂಥ ಆಡಳಿತ ಬರಬೇಕು ಎಂದು ಕೂಗುತ್ತೇವೆ. ಮಧ್ಯಾಹ್ನ ಆ ದೇಶ ಜಗತ್ತಿಗೆ ನ್ಯೂಸ್ ಕೊಡುತ್ತಿಲ್ಲ ಅಂಥ ಬೊಬ್ಬಿರಿಯುತ್ತೇವೆ. ಸಂಜೆ ನಮ್ಮ ಬಗ್ಗೆ ಅಮೇರಿಕನ್ ಮೀಡಿಯಾ ತಪ್ಪಾಗಿ ಬಿಂಬಿಸುತ್ತಿದೆ ಎಂದು ಕನ್ನಡ ಮೀಡಿಯಾಗಳು ಊಳಿಡುತ್ತವೆ.

ಇದೆಲ್ಲ ಬಿಟ್ಟು-

ಒಂದೊಮ್ಮೆ, ಇನ್ಕ್ಯುಬೇಷನ್ ಅವಧಿ ಹೆಚ್ಚಿರುವ ಈ ವೈರಸ್ ಬಂದಿದ್ದು, ಜನರಿಂದ ಜನಕ್ಕೆ ಹರಡಿ ಅದು ಕಾಣಿಸಿಕೊಂಡರೆ, ಅದು ಮುಂದೆರಡು ತಿಂಗಳಿನಲ್ಲಿ – ಈ ಸರ್ಕಾರ ಹಿಂದೂಮುಂದೂ ಯೋಚಿಸದ ರೀತಿಯಲ್ಲಿ ಲಾಕ್ ಡೌನ್ ಮಾಡಿ, ಟೆಸ್ಟುಗಳನ್ನೂ ಸರಿಯಾಗಿ ಮಾಡದೇ ಜನರಿಂದ ಜನರಿಗೆ ಹಬ್ಬುವಂತೆ ಮಾಡಿದ್ದರಲ್ಲಿ ಸಾಬರಿಗೆ ಬಂದಿದ್ದರೆ ಅದು ಕೊರೋನಾದ ತಪ್ಪೇ ಹೊರತು ಸಾಬರದ್ದಲ್ಲ ಎಂದು ಅರ್ಥ.

ಪುಣ್ಯಕ್ಕೆ ಸಾಬರಲ್ಲಿ ಮುಕ್ಕಾಲು ಪಾಲು ಜನ ಕುಡಿಯುವುದಿಲ್ಲ. ಹೆಂಡ ಕೊಡದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದು ಹೆದರಿಸುತಿರುವ ಹಿಂದುಗಳಿಗೆ ಹೆಂಡ ಕೊಡುತ್ತಿರುವ ನಾವು ಸಾಬರಿಗೆ ಅದನ್ನೂ ಕೊಡದೇ ಮಜಾ ನೋಡುತ್ತಿದ್ದೆವು. ಆ ಅವಕಾಶ ಮಾತ್ರ ಬಿಜೆಪಿಗೆ ತಪ್ಪಿಹೋಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...