Homeಮುಖಪುಟಜಾಮಿಯಾ ವಿದ್ಯಾರ್ಥಿ ಮೇಲೆ ಗುಂಡು: ಸುಳ್ಳು ಸುದ್ದಿ ಪ್ರಸಾರ ಮಾಡಿದ ರಿಪಬ್ಲಿಕ್‌ ಟವಿಗೆ ಛೀಮಾರಿ...

ಜಾಮಿಯಾ ವಿದ್ಯಾರ್ಥಿ ಮೇಲೆ ಗುಂಡು: ಸುಳ್ಳು ಸುದ್ದಿ ಪ್ರಸಾರ ಮಾಡಿದ ರಿಪಬ್ಲಿಕ್‌ ಟವಿಗೆ ಛೀಮಾರಿ…

"ಸಿಎಎ ಹೆಸರಿನಲ್ಲಿ ... ರಾಷ್ಟ್ರ ರಾಜಧಾನಿಯ ಬೀದಿಗಳಲ್ಲಿ ಹಗಲು ಹೊತ್ತಿನಲ್ಲಿ ಬಂದೂಕುಗಳನ್ನು ಬ್ರಾಂಡ್ ಮಾಡಲಾಗುತ್ತಿದೆ. ರಾಹುಲ್ ಗಾಂಧಿ ಮತ್ತು ಅರವಿಂದ್ ಕೇಜ್ರಿವಾಲ್ ಇದನ್ನು ಬೆಂಬಲಿಸಿದ್ದಾರೆ." ಎಂದು ಸುಳ್ಳು ಸುದ್ದಿ ಪ್ರಸಾರ ಮಾಡಲಾಗಿದೆ.

- Advertisement -
- Advertisement -

ಕೆಲವು ಗಂಟೆಗಳ ಹಿಂದೆಯಷ್ಟೆ ಸಿಎಎ ವಿರುದ್ಧ ದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಮೇಲೆ ಗೋಪಾಲ್‌ ಎಂಬ ಬಲಪಂಥೀಯ ಹುಡುಗನೊಬ್ಬ ಗುಂಡು ಹಾರಿಸಿ ಪೊಲೀಸರ ಅತಿಥಿಯಾಗಿರುವುದು ನಿಮಗೆಲ್ಲ ಗೊತ್ತಿರುವ ವಿಚಾರ. ಆದರೆ ಗುಂಡು ಹಾರಿಸಿದವರು ಜಾಮಿಯಾ ವಿದ್ಯಾರ್ಥಿಗಳು, ಪ್ರತಿಭಟನಾಕಾರರು ಹಿಂಸೆಗೆ ತಿರುಗಿದ್ದಾರೆ ಎಂದೆಲ್ಲಾ ರಿಪಬ್ಲಿಕ್‌ ಟಿವಿ ಸುಳ್ಳು ವರದಿ ಮಾಡಿ ಸಿಕ್ಕಿಬಿದ್ದಿದೆ.

ದೆಹಲಿ ಪೊಲೀಸರು ಬಂದೂಕುಧಾರಿಯನ್ನು ರಾಮ್‌ಭಕ್ತ್‌ ಗೋಪಾಲ್ ಶರ್ಮಾ ಎಂದು ಗುರುತಿಸಿದ್ದಾರೆ. “ಯೆ ಲೋ ಆಜಾದಿ. ಹಿಂದೂಸ್ತಾನ್ ಜಿಂದಾಬಾದ್. ದೆಹಲಿ ಪೊಲೀಸ್ ಜಿಂದಾಬಾದ್” ಎಂದು ಅವರು ಕೂಗಿದ್ದಾರೆ. ತೆಗೆದುಕೊಳ್ಳಿ ನಿಮ್ಮ ಆಜಾದಿ ಎಂದು ಆತ ಗುಂಡು ಹೊಡೆದಿರುವುದು ಎಲ್ಲಾ ಸೋಶಿಯಲ್ ಮೀಡಿಯಾದಲ್ಲಿ ವರದಿಗಳು ಮತ್ತು ವೀಡಿಯೊಗಳು ದಪ್ಪ ಅಕ್ಷರಗಳಲ್ಲಿ ಮತ್ತು ವೇಗವಾಗಿ ಹರಿದಾಡಿದರೂ, ರಿಪಬ್ಲಿಕ್ ಟಿವಿ ಮಾತ್ರ “ಜಾಮಿಯಾ ಪ್ರತಿಭಟನೆ ಹಿಂಸೆಗೆ ತಿರುಗಿದೆ, ಪ್ರತಿಭಟನಾಕಾರರು ಗನ್‌ ಬಳಸಿದ್ದಾರೆ” ಎಂದು ಸುಳ್ಳು ವರದಿ ಮಾಡಿದೆ.

ಚಾನೆಲ್‌ನ ರಾಜಕೀಯ ಸಂಪಾದಕಿ ಐಶ್ವರ್ಯ ಕಪೂರ್ ಅವರು ಹೀಗೆ ಹೇಳಿದರು: “ಸಿಎಎ ಹೆಸರಿನಲ್ಲಿ … ರಾಷ್ಟ್ರ ರಾಜಧಾನಿಯ ಬೀದಿಗಳಲ್ಲಿ ಹಗಲು ಹೊತ್ತಿನಲ್ಲಿ ಬಂದೂಕುಗಳನ್ನು ಬ್ರಾಂಡ್ ಮಾಡಲಾಗುತ್ತಿದೆ. ರಾಹುಲ್ ಗಾಂಧಿ ಮತ್ತು ಅರವಿಂದ್ ಕೇಜ್ರಿವಾಲ್ ಇದನ್ನು ಬೆಂಬಲಿಸಿದ್ದಾರೆ.”

“ಇದನ್ನು ಅನುಮತಿಸಬಾರದು” ಎಂದು ಐಶ್ವರ್ಯ ಕಪೂರ್ ಹೇಳಿದಾಗ, ರಿಪಬ್ಲಿಕ್ ವರದಿಗಾರ ದೂರವಾಣಿಯಲ್ಲಿ ಮಾತನಾಡುತ್ತಾ: “ಅದು ನಿಖರವಾಗಿ ವಿಷಯವಾಗಿದೆ … ಅವರಿಗೆ ಯಾವುದೇ ಪಶ್ಚಾತ್ತಾಪವಿಲ್ಲ. ಎಂದು ಸುಳ್ಳು ಹೇಳಿದ್ದಾನೆ. ಈ ಸಮಯದಲ್ಲಿ ಟಿವಿ ಪರದೆಯ ಸ್ಕ್ರೋಲ್‌ ಆಗುವ ಜಾಗದಲ್ಲಿ “ಜಾಮಿಯಾ ಪ್ರತಿಭಟನಾಕಾರರು ಬಂದೂಕುಗಳನ್ನು ಬಳಸುತ್ತಾರೆ” ಎಂದು ಪ್ರಸಾರವಾಗಿದೆ.

ಐಶ್ವರ್ಯ ಕಪೂರ್ ಪಟ್ಟುಹಿಡಿದು “ದೆಹಲಿಯು ಬೆದರಿಕೆಗೆ ಒಳಗಾಗುತ್ತಿಲ್ಲವೇ … ಸಿಎಎ ವಿರೋಧಿ ಹೆಸರಿನಲ್ಲಿ ಇದು ನಡೆಯುತ್ತಿದೆ.” ಎಂದು ಅರಚಾಡಿದ್ದಾರೆ. ನಂತರ ರಿಪಬ್ಲಿಕ್ ಅವರ ಸಿಬ್ಬಂದಿಯನ್ನು ವಿಶ್ವವಿದ್ಯಾನಿಲಯದಲ್ಲಿ ಕೂಡಿಹಾಕಲಾಗಿದೆ ಎಂದು ಸುಳ್ಳು ವರದಿ ಸಹ ಮಾಡಲಾಗಿದೆ.

ರಿಪಬ್ಲಿಕ್‌ ಟಿವಿಯ ಈ ನಡೆಯನ್ನು ಹಲವಾರು ಕನ್ನಡಿಗರು ಸಾಮಾಜಿಕ ಜಾಲತಾಣದಲ್ಲಿ ತೀವ್ರವಾಗಿ ಖಂಡಿಸಿದ್ದಾರೆ. ಅಬ್ಬಬ್ಬ.. ಈ ಹೈಟೆಕ್ ಮಲ್ಟಿ ಮೀಡಿಯ ಕಾಲದಲ್ಲೇ ಇಷ್ಟು ಬ್ಲಾಟಂಟ್ ಆಗಿ ಸುಳ್ಳು ಪ್ರಚಾರ ಮಾಡ್ತಾರಲ್ಲ!! ಇನ್ನು ನಮ್ಮ ತಾತ ಮುತ್ತಾತಂದಿರ ಕಾಲದಲ್ಲಿ ಇವರಿನ್ನೆಷ್ಟು ಊರು ಹಾಳು ಮಾಡಿರಬೇಕು ಲೆಕ್ಕ ಹಾಕ್ಕೊಳಿ. ಅಬ್ಬ ಇವರ ಕುತಂತ್ರವೇ!! ಎಂದು ಕತೆಗಾರ ದಯಾನಂದ ಟಿ.ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪತ್ರಕರ್ತರಾದ ದಿನೇಶ್‌ ಕುಮಾರ್ ದಿನೂರವರು 26/11 ಮುಂಬೈ ಮೇಲಿನ ಭಯೋತ್ಪಾದಕ ದಾಳಿಯನ್ನು ಮುಂಬೈನ ಜನರೇ ಮಾಡಿದ್ದು ಎಂದರೆ ಕೇಳಿದವರು ಮೆಟ್ಟಲ್ಲಿ ಹೊಡೆಯೋದಿಲ್ಲವೇ? ಇವತ್ತು ಅರ್ನಾಬ್ ಗೋಸ್ವಾಮಿ ಮಾಡಿರುವುದೂ ಅದನ್ನೇ. ಇಡೀ ದೇಶಕ್ಕೇ ಸತ್ಯ ಏನು ಅಂತ ಗೊತ್ತಿದೆ. ಆದರೂ ಈ ಗುಲಾಮ ಚಾನೆಲ್‌ #GunsInJamia ಎಂಬ ಹ್ಯಾಶ್ ಟ್ಯಾಗ್ ನಲ್ಲೇ ಹೇಸಿಗೆ ಮಾಡಿಕೊಳ್ಳುತ್ತಿದ್ದಾನೆ. ಇವನು ಹೇಡಿ ಮಾತ್ರವಲ್ಲ, ಪರಮನೀಚ. ಬೂಟು ನೆಕ್ಕುವುದು, ಧಣಿಗಳ ಅಮೇಧ್ಯ ತಿನ್ನುವುದು ಮಾಮೂಲಾದರೆ ಇದೆಲ್ಲ ಆಗುತ್ತದೆ. ಥೂ, ಇವನಿಗೆ ಬೀದಿಬೀದಿಯಲ್ಲೂ ಜನರು ಛೀಮಾರಿ ಹಾಕಬೇಕು ಎಂದು ಕಿಡಿಕಾರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...