Homeಮುಖಪುಟಜಾಮಿಯಾ ವಿದ್ಯಾರ್ಥಿ ಮೇಲೆ ಗುಂಡು: ಸುಳ್ಳು ಸುದ್ದಿ ಪ್ರಸಾರ ಮಾಡಿದ ರಿಪಬ್ಲಿಕ್‌ ಟವಿಗೆ ಛೀಮಾರಿ...

ಜಾಮಿಯಾ ವಿದ್ಯಾರ್ಥಿ ಮೇಲೆ ಗುಂಡು: ಸುಳ್ಳು ಸುದ್ದಿ ಪ್ರಸಾರ ಮಾಡಿದ ರಿಪಬ್ಲಿಕ್‌ ಟವಿಗೆ ಛೀಮಾರಿ…

"ಸಿಎಎ ಹೆಸರಿನಲ್ಲಿ ... ರಾಷ್ಟ್ರ ರಾಜಧಾನಿಯ ಬೀದಿಗಳಲ್ಲಿ ಹಗಲು ಹೊತ್ತಿನಲ್ಲಿ ಬಂದೂಕುಗಳನ್ನು ಬ್ರಾಂಡ್ ಮಾಡಲಾಗುತ್ತಿದೆ. ರಾಹುಲ್ ಗಾಂಧಿ ಮತ್ತು ಅರವಿಂದ್ ಕೇಜ್ರಿವಾಲ್ ಇದನ್ನು ಬೆಂಬಲಿಸಿದ್ದಾರೆ." ಎಂದು ಸುಳ್ಳು ಸುದ್ದಿ ಪ್ರಸಾರ ಮಾಡಲಾಗಿದೆ.

- Advertisement -
- Advertisement -

ಕೆಲವು ಗಂಟೆಗಳ ಹಿಂದೆಯಷ್ಟೆ ಸಿಎಎ ವಿರುದ್ಧ ದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಮೇಲೆ ಗೋಪಾಲ್‌ ಎಂಬ ಬಲಪಂಥೀಯ ಹುಡುಗನೊಬ್ಬ ಗುಂಡು ಹಾರಿಸಿ ಪೊಲೀಸರ ಅತಿಥಿಯಾಗಿರುವುದು ನಿಮಗೆಲ್ಲ ಗೊತ್ತಿರುವ ವಿಚಾರ. ಆದರೆ ಗುಂಡು ಹಾರಿಸಿದವರು ಜಾಮಿಯಾ ವಿದ್ಯಾರ್ಥಿಗಳು, ಪ್ರತಿಭಟನಾಕಾರರು ಹಿಂಸೆಗೆ ತಿರುಗಿದ್ದಾರೆ ಎಂದೆಲ್ಲಾ ರಿಪಬ್ಲಿಕ್‌ ಟಿವಿ ಸುಳ್ಳು ವರದಿ ಮಾಡಿ ಸಿಕ್ಕಿಬಿದ್ದಿದೆ.

ದೆಹಲಿ ಪೊಲೀಸರು ಬಂದೂಕುಧಾರಿಯನ್ನು ರಾಮ್‌ಭಕ್ತ್‌ ಗೋಪಾಲ್ ಶರ್ಮಾ ಎಂದು ಗುರುತಿಸಿದ್ದಾರೆ. “ಯೆ ಲೋ ಆಜಾದಿ. ಹಿಂದೂಸ್ತಾನ್ ಜಿಂದಾಬಾದ್. ದೆಹಲಿ ಪೊಲೀಸ್ ಜಿಂದಾಬಾದ್” ಎಂದು ಅವರು ಕೂಗಿದ್ದಾರೆ. ತೆಗೆದುಕೊಳ್ಳಿ ನಿಮ್ಮ ಆಜಾದಿ ಎಂದು ಆತ ಗುಂಡು ಹೊಡೆದಿರುವುದು ಎಲ್ಲಾ ಸೋಶಿಯಲ್ ಮೀಡಿಯಾದಲ್ಲಿ ವರದಿಗಳು ಮತ್ತು ವೀಡಿಯೊಗಳು ದಪ್ಪ ಅಕ್ಷರಗಳಲ್ಲಿ ಮತ್ತು ವೇಗವಾಗಿ ಹರಿದಾಡಿದರೂ, ರಿಪಬ್ಲಿಕ್ ಟಿವಿ ಮಾತ್ರ “ಜಾಮಿಯಾ ಪ್ರತಿಭಟನೆ ಹಿಂಸೆಗೆ ತಿರುಗಿದೆ, ಪ್ರತಿಭಟನಾಕಾರರು ಗನ್‌ ಬಳಸಿದ್ದಾರೆ” ಎಂದು ಸುಳ್ಳು ವರದಿ ಮಾಡಿದೆ.

ಚಾನೆಲ್‌ನ ರಾಜಕೀಯ ಸಂಪಾದಕಿ ಐಶ್ವರ್ಯ ಕಪೂರ್ ಅವರು ಹೀಗೆ ಹೇಳಿದರು: “ಸಿಎಎ ಹೆಸರಿನಲ್ಲಿ … ರಾಷ್ಟ್ರ ರಾಜಧಾನಿಯ ಬೀದಿಗಳಲ್ಲಿ ಹಗಲು ಹೊತ್ತಿನಲ್ಲಿ ಬಂದೂಕುಗಳನ್ನು ಬ್ರಾಂಡ್ ಮಾಡಲಾಗುತ್ತಿದೆ. ರಾಹುಲ್ ಗಾಂಧಿ ಮತ್ತು ಅರವಿಂದ್ ಕೇಜ್ರಿವಾಲ್ ಇದನ್ನು ಬೆಂಬಲಿಸಿದ್ದಾರೆ.”

“ಇದನ್ನು ಅನುಮತಿಸಬಾರದು” ಎಂದು ಐಶ್ವರ್ಯ ಕಪೂರ್ ಹೇಳಿದಾಗ, ರಿಪಬ್ಲಿಕ್ ವರದಿಗಾರ ದೂರವಾಣಿಯಲ್ಲಿ ಮಾತನಾಡುತ್ತಾ: “ಅದು ನಿಖರವಾಗಿ ವಿಷಯವಾಗಿದೆ … ಅವರಿಗೆ ಯಾವುದೇ ಪಶ್ಚಾತ್ತಾಪವಿಲ್ಲ. ಎಂದು ಸುಳ್ಳು ಹೇಳಿದ್ದಾನೆ. ಈ ಸಮಯದಲ್ಲಿ ಟಿವಿ ಪರದೆಯ ಸ್ಕ್ರೋಲ್‌ ಆಗುವ ಜಾಗದಲ್ಲಿ “ಜಾಮಿಯಾ ಪ್ರತಿಭಟನಾಕಾರರು ಬಂದೂಕುಗಳನ್ನು ಬಳಸುತ್ತಾರೆ” ಎಂದು ಪ್ರಸಾರವಾಗಿದೆ.

ಐಶ್ವರ್ಯ ಕಪೂರ್ ಪಟ್ಟುಹಿಡಿದು “ದೆಹಲಿಯು ಬೆದರಿಕೆಗೆ ಒಳಗಾಗುತ್ತಿಲ್ಲವೇ … ಸಿಎಎ ವಿರೋಧಿ ಹೆಸರಿನಲ್ಲಿ ಇದು ನಡೆಯುತ್ತಿದೆ.” ಎಂದು ಅರಚಾಡಿದ್ದಾರೆ. ನಂತರ ರಿಪಬ್ಲಿಕ್ ಅವರ ಸಿಬ್ಬಂದಿಯನ್ನು ವಿಶ್ವವಿದ್ಯಾನಿಲಯದಲ್ಲಿ ಕೂಡಿಹಾಕಲಾಗಿದೆ ಎಂದು ಸುಳ್ಳು ವರದಿ ಸಹ ಮಾಡಲಾಗಿದೆ.

ರಿಪಬ್ಲಿಕ್‌ ಟಿವಿಯ ಈ ನಡೆಯನ್ನು ಹಲವಾರು ಕನ್ನಡಿಗರು ಸಾಮಾಜಿಕ ಜಾಲತಾಣದಲ್ಲಿ ತೀವ್ರವಾಗಿ ಖಂಡಿಸಿದ್ದಾರೆ. ಅಬ್ಬಬ್ಬ.. ಈ ಹೈಟೆಕ್ ಮಲ್ಟಿ ಮೀಡಿಯ ಕಾಲದಲ್ಲೇ ಇಷ್ಟು ಬ್ಲಾಟಂಟ್ ಆಗಿ ಸುಳ್ಳು ಪ್ರಚಾರ ಮಾಡ್ತಾರಲ್ಲ!! ಇನ್ನು ನಮ್ಮ ತಾತ ಮುತ್ತಾತಂದಿರ ಕಾಲದಲ್ಲಿ ಇವರಿನ್ನೆಷ್ಟು ಊರು ಹಾಳು ಮಾಡಿರಬೇಕು ಲೆಕ್ಕ ಹಾಕ್ಕೊಳಿ. ಅಬ್ಬ ಇವರ ಕುತಂತ್ರವೇ!! ಎಂದು ಕತೆಗಾರ ದಯಾನಂದ ಟಿ.ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪತ್ರಕರ್ತರಾದ ದಿನೇಶ್‌ ಕುಮಾರ್ ದಿನೂರವರು 26/11 ಮುಂಬೈ ಮೇಲಿನ ಭಯೋತ್ಪಾದಕ ದಾಳಿಯನ್ನು ಮುಂಬೈನ ಜನರೇ ಮಾಡಿದ್ದು ಎಂದರೆ ಕೇಳಿದವರು ಮೆಟ್ಟಲ್ಲಿ ಹೊಡೆಯೋದಿಲ್ಲವೇ? ಇವತ್ತು ಅರ್ನಾಬ್ ಗೋಸ್ವಾಮಿ ಮಾಡಿರುವುದೂ ಅದನ್ನೇ. ಇಡೀ ದೇಶಕ್ಕೇ ಸತ್ಯ ಏನು ಅಂತ ಗೊತ್ತಿದೆ. ಆದರೂ ಈ ಗುಲಾಮ ಚಾನೆಲ್‌ #GunsInJamia ಎಂಬ ಹ್ಯಾಶ್ ಟ್ಯಾಗ್ ನಲ್ಲೇ ಹೇಸಿಗೆ ಮಾಡಿಕೊಳ್ಳುತ್ತಿದ್ದಾನೆ. ಇವನು ಹೇಡಿ ಮಾತ್ರವಲ್ಲ, ಪರಮನೀಚ. ಬೂಟು ನೆಕ್ಕುವುದು, ಧಣಿಗಳ ಅಮೇಧ್ಯ ತಿನ್ನುವುದು ಮಾಮೂಲಾದರೆ ಇದೆಲ್ಲ ಆಗುತ್ತದೆ. ಥೂ, ಇವನಿಗೆ ಬೀದಿಬೀದಿಯಲ್ಲೂ ಜನರು ಛೀಮಾರಿ ಹಾಕಬೇಕು ಎಂದು ಕಿಡಿಕಾರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...

ಅಯೋಧ್ಯೆ ದೇಣಿಗೆ ಹಗರಣ: ಕೇವಲ 45 ದಿನಗಳಲ್ಲಿ 70 ಬಾರಿ ಕಳ್ಳತನ, SIT ವರದಿ

ಅಯೋಧ್ಯೆಯ ರಾಮಮಂದಿರಕ್ಕೆ ಬಂದ ಸಾರ್ವಜನಿಕರ ದೇಣಿಗೆ ದುರುಪಯೋಗದ ಆರೋಪದ ಕುರಿತು ವಿಶೇಷ ತನಿಖಾ ತಂಡ (SIT) ನಡೆಸಿದ ಪ್ರಾಥಮಿಕ ತನಿಖೆಯಲ್ಲಿ, ಕೇವಲ 45 ದಿನಗಳಲ್ಲಿ ಸುಮಾರು 70 ಸಂಶಯಾಸ್ಪದ ಕಳ್ಳತನಗಳು ನಡೆದಿರುವುದಕ್ಕೆ ಪ್ರಾಥಮಿಕ...

ಬರುಯಿಪುರ ಅತ್ಯಾಚಾರ-ಕೊಲೆ ಪ್ರಕರಣ: ಪ್ರಮುಖ ಆರೋಪಿಯ ಎನ್‌ಕೌಂಟರ್; ‘ನನ್ನ ಮಗನ ಶವ ನನಗೆ ಬೇಡ’ ಎಂದ ಹೆತ್ತ ತಾಯಿ!

ಬರುಯಿಪುರ/ಕೋಲ್ಕತ್ತಾ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬರುಯಿಪುರದಲ್ಲಿ 12 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕ್ರೂರ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪ್ರಭಾಸ್ ಮೊಂಡೋಲ್ ಬುಧವಾರ...

ವಯನಾಡ್ ಭೂಕುಸಿತ: ಕಾಣೆಯಾದ ಐವರಿಗಾಗಿ ಮುಂದುವರೆದ ಹುಡುಕಾಟ

ಬೆಟ್ಟದ ಜಿಲ್ಲೆಯ ವಯನಾಡ್‌ನಲ್ಲಿ ನಡೆಯುತ್ತಿರುವ ಸುರಂಗ ರಸ್ತೆ ನಿರ್ಮಾಣ ಸ್ಥಳದಲ್ಲಿ ಭೂಕುಸಿತ ಸಂಭವಿಸಿ ಮೂರು ಜೀವಗಳು ಬಲಿಯಾದ ಒಂದು ದಿನದ ನಂತರ, ಕಾಣೆಯಾಗಿರುವ ಐವರಿಗಾಗಿ ಹುಡುಕಾಟ ಮುಂದುವರೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ವಯನಾಡ್...

ನನ್ನನ್ನು ಕೊಂಡುಕೊಳ್ಳಲು ಯಾರ ಕೈಲೂ ಸಾಧ್ಯವಿಲ್ಲ: ಮಹುವಾ ಮೋಯಿತ್ರಾ ವಿಶೇಷ ಸಂದರ್ಶನ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಜಯಭೇರಿ ಬಾರಿಸಿದ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಭದ್ರಕೋಟೆ ಧೂಳೀಪಟವಾಗಿದೆ. ಚುನಾವಣಾ ಸೋಲಿನ ನಂತರ ಸಾಲು...