Homeಮುಖಪುಟಜಾಮಿಯಾ ವಿದ್ಯಾರ್ಥಿ ಮೇಲೆ ಗುಂಡು: ಸುಳ್ಳು ಸುದ್ದಿ ಪ್ರಸಾರ ಮಾಡಿದ ರಿಪಬ್ಲಿಕ್‌ ಟವಿಗೆ ಛೀಮಾರಿ...

ಜಾಮಿಯಾ ವಿದ್ಯಾರ್ಥಿ ಮೇಲೆ ಗುಂಡು: ಸುಳ್ಳು ಸುದ್ದಿ ಪ್ರಸಾರ ಮಾಡಿದ ರಿಪಬ್ಲಿಕ್‌ ಟವಿಗೆ ಛೀಮಾರಿ…

"ಸಿಎಎ ಹೆಸರಿನಲ್ಲಿ ... ರಾಷ್ಟ್ರ ರಾಜಧಾನಿಯ ಬೀದಿಗಳಲ್ಲಿ ಹಗಲು ಹೊತ್ತಿನಲ್ಲಿ ಬಂದೂಕುಗಳನ್ನು ಬ್ರಾಂಡ್ ಮಾಡಲಾಗುತ್ತಿದೆ. ರಾಹುಲ್ ಗಾಂಧಿ ಮತ್ತು ಅರವಿಂದ್ ಕೇಜ್ರಿವಾಲ್ ಇದನ್ನು ಬೆಂಬಲಿಸಿದ್ದಾರೆ." ಎಂದು ಸುಳ್ಳು ಸುದ್ದಿ ಪ್ರಸಾರ ಮಾಡಲಾಗಿದೆ.

- Advertisement -
- Advertisement -

ಕೆಲವು ಗಂಟೆಗಳ ಹಿಂದೆಯಷ್ಟೆ ಸಿಎಎ ವಿರುದ್ಧ ದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಮೇಲೆ ಗೋಪಾಲ್‌ ಎಂಬ ಬಲಪಂಥೀಯ ಹುಡುಗನೊಬ್ಬ ಗುಂಡು ಹಾರಿಸಿ ಪೊಲೀಸರ ಅತಿಥಿಯಾಗಿರುವುದು ನಿಮಗೆಲ್ಲ ಗೊತ್ತಿರುವ ವಿಚಾರ. ಆದರೆ ಗುಂಡು ಹಾರಿಸಿದವರು ಜಾಮಿಯಾ ವಿದ್ಯಾರ್ಥಿಗಳು, ಪ್ರತಿಭಟನಾಕಾರರು ಹಿಂಸೆಗೆ ತಿರುಗಿದ್ದಾರೆ ಎಂದೆಲ್ಲಾ ರಿಪಬ್ಲಿಕ್‌ ಟಿವಿ ಸುಳ್ಳು ವರದಿ ಮಾಡಿ ಸಿಕ್ಕಿಬಿದ್ದಿದೆ.

ದೆಹಲಿ ಪೊಲೀಸರು ಬಂದೂಕುಧಾರಿಯನ್ನು ರಾಮ್‌ಭಕ್ತ್‌ ಗೋಪಾಲ್ ಶರ್ಮಾ ಎಂದು ಗುರುತಿಸಿದ್ದಾರೆ. “ಯೆ ಲೋ ಆಜಾದಿ. ಹಿಂದೂಸ್ತಾನ್ ಜಿಂದಾಬಾದ್. ದೆಹಲಿ ಪೊಲೀಸ್ ಜಿಂದಾಬಾದ್” ಎಂದು ಅವರು ಕೂಗಿದ್ದಾರೆ. ತೆಗೆದುಕೊಳ್ಳಿ ನಿಮ್ಮ ಆಜಾದಿ ಎಂದು ಆತ ಗುಂಡು ಹೊಡೆದಿರುವುದು ಎಲ್ಲಾ ಸೋಶಿಯಲ್ ಮೀಡಿಯಾದಲ್ಲಿ ವರದಿಗಳು ಮತ್ತು ವೀಡಿಯೊಗಳು ದಪ್ಪ ಅಕ್ಷರಗಳಲ್ಲಿ ಮತ್ತು ವೇಗವಾಗಿ ಹರಿದಾಡಿದರೂ, ರಿಪಬ್ಲಿಕ್ ಟಿವಿ ಮಾತ್ರ “ಜಾಮಿಯಾ ಪ್ರತಿಭಟನೆ ಹಿಂಸೆಗೆ ತಿರುಗಿದೆ, ಪ್ರತಿಭಟನಾಕಾರರು ಗನ್‌ ಬಳಸಿದ್ದಾರೆ” ಎಂದು ಸುಳ್ಳು ವರದಿ ಮಾಡಿದೆ.

ಚಾನೆಲ್‌ನ ರಾಜಕೀಯ ಸಂಪಾದಕಿ ಐಶ್ವರ್ಯ ಕಪೂರ್ ಅವರು ಹೀಗೆ ಹೇಳಿದರು: “ಸಿಎಎ ಹೆಸರಿನಲ್ಲಿ … ರಾಷ್ಟ್ರ ರಾಜಧಾನಿಯ ಬೀದಿಗಳಲ್ಲಿ ಹಗಲು ಹೊತ್ತಿನಲ್ಲಿ ಬಂದೂಕುಗಳನ್ನು ಬ್ರಾಂಡ್ ಮಾಡಲಾಗುತ್ತಿದೆ. ರಾಹುಲ್ ಗಾಂಧಿ ಮತ್ತು ಅರವಿಂದ್ ಕೇಜ್ರಿವಾಲ್ ಇದನ್ನು ಬೆಂಬಲಿಸಿದ್ದಾರೆ.”

“ಇದನ್ನು ಅನುಮತಿಸಬಾರದು” ಎಂದು ಐಶ್ವರ್ಯ ಕಪೂರ್ ಹೇಳಿದಾಗ, ರಿಪಬ್ಲಿಕ್ ವರದಿಗಾರ ದೂರವಾಣಿಯಲ್ಲಿ ಮಾತನಾಡುತ್ತಾ: “ಅದು ನಿಖರವಾಗಿ ವಿಷಯವಾಗಿದೆ … ಅವರಿಗೆ ಯಾವುದೇ ಪಶ್ಚಾತ್ತಾಪವಿಲ್ಲ. ಎಂದು ಸುಳ್ಳು ಹೇಳಿದ್ದಾನೆ. ಈ ಸಮಯದಲ್ಲಿ ಟಿವಿ ಪರದೆಯ ಸ್ಕ್ರೋಲ್‌ ಆಗುವ ಜಾಗದಲ್ಲಿ “ಜಾಮಿಯಾ ಪ್ರತಿಭಟನಾಕಾರರು ಬಂದೂಕುಗಳನ್ನು ಬಳಸುತ್ತಾರೆ” ಎಂದು ಪ್ರಸಾರವಾಗಿದೆ.

ಐಶ್ವರ್ಯ ಕಪೂರ್ ಪಟ್ಟುಹಿಡಿದು “ದೆಹಲಿಯು ಬೆದರಿಕೆಗೆ ಒಳಗಾಗುತ್ತಿಲ್ಲವೇ … ಸಿಎಎ ವಿರೋಧಿ ಹೆಸರಿನಲ್ಲಿ ಇದು ನಡೆಯುತ್ತಿದೆ.” ಎಂದು ಅರಚಾಡಿದ್ದಾರೆ. ನಂತರ ರಿಪಬ್ಲಿಕ್ ಅವರ ಸಿಬ್ಬಂದಿಯನ್ನು ವಿಶ್ವವಿದ್ಯಾನಿಲಯದಲ್ಲಿ ಕೂಡಿಹಾಕಲಾಗಿದೆ ಎಂದು ಸುಳ್ಳು ವರದಿ ಸಹ ಮಾಡಲಾಗಿದೆ.

ರಿಪಬ್ಲಿಕ್‌ ಟಿವಿಯ ಈ ನಡೆಯನ್ನು ಹಲವಾರು ಕನ್ನಡಿಗರು ಸಾಮಾಜಿಕ ಜಾಲತಾಣದಲ್ಲಿ ತೀವ್ರವಾಗಿ ಖಂಡಿಸಿದ್ದಾರೆ. ಅಬ್ಬಬ್ಬ.. ಈ ಹೈಟೆಕ್ ಮಲ್ಟಿ ಮೀಡಿಯ ಕಾಲದಲ್ಲೇ ಇಷ್ಟು ಬ್ಲಾಟಂಟ್ ಆಗಿ ಸುಳ್ಳು ಪ್ರಚಾರ ಮಾಡ್ತಾರಲ್ಲ!! ಇನ್ನು ನಮ್ಮ ತಾತ ಮುತ್ತಾತಂದಿರ ಕಾಲದಲ್ಲಿ ಇವರಿನ್ನೆಷ್ಟು ಊರು ಹಾಳು ಮಾಡಿರಬೇಕು ಲೆಕ್ಕ ಹಾಕ್ಕೊಳಿ. ಅಬ್ಬ ಇವರ ಕುತಂತ್ರವೇ!! ಎಂದು ಕತೆಗಾರ ದಯಾನಂದ ಟಿ.ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪತ್ರಕರ್ತರಾದ ದಿನೇಶ್‌ ಕುಮಾರ್ ದಿನೂರವರು 26/11 ಮುಂಬೈ ಮೇಲಿನ ಭಯೋತ್ಪಾದಕ ದಾಳಿಯನ್ನು ಮುಂಬೈನ ಜನರೇ ಮಾಡಿದ್ದು ಎಂದರೆ ಕೇಳಿದವರು ಮೆಟ್ಟಲ್ಲಿ ಹೊಡೆಯೋದಿಲ್ಲವೇ? ಇವತ್ತು ಅರ್ನಾಬ್ ಗೋಸ್ವಾಮಿ ಮಾಡಿರುವುದೂ ಅದನ್ನೇ. ಇಡೀ ದೇಶಕ್ಕೇ ಸತ್ಯ ಏನು ಅಂತ ಗೊತ್ತಿದೆ. ಆದರೂ ಈ ಗುಲಾಮ ಚಾನೆಲ್‌ #GunsInJamia ಎಂಬ ಹ್ಯಾಶ್ ಟ್ಯಾಗ್ ನಲ್ಲೇ ಹೇಸಿಗೆ ಮಾಡಿಕೊಳ್ಳುತ್ತಿದ್ದಾನೆ. ಇವನು ಹೇಡಿ ಮಾತ್ರವಲ್ಲ, ಪರಮನೀಚ. ಬೂಟು ನೆಕ್ಕುವುದು, ಧಣಿಗಳ ಅಮೇಧ್ಯ ತಿನ್ನುವುದು ಮಾಮೂಲಾದರೆ ಇದೆಲ್ಲ ಆಗುತ್ತದೆ. ಥೂ, ಇವನಿಗೆ ಬೀದಿಬೀದಿಯಲ್ಲೂ ಜನರು ಛೀಮಾರಿ ಹಾಕಬೇಕು ಎಂದು ಕಿಡಿಕಾರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...