Homeಮುಖಪುಟಜಾಮಿಯಾ ವಿದ್ಯಾರ್ಥಿ ಮೇಲೆ ಗುಂಡು: ಸುಳ್ಳು ಸುದ್ದಿ ಪ್ರಸಾರ ಮಾಡಿದ ರಿಪಬ್ಲಿಕ್‌ ಟವಿಗೆ ಛೀಮಾರಿ...

ಜಾಮಿಯಾ ವಿದ್ಯಾರ್ಥಿ ಮೇಲೆ ಗುಂಡು: ಸುಳ್ಳು ಸುದ್ದಿ ಪ್ರಸಾರ ಮಾಡಿದ ರಿಪಬ್ಲಿಕ್‌ ಟವಿಗೆ ಛೀಮಾರಿ…

"ಸಿಎಎ ಹೆಸರಿನಲ್ಲಿ ... ರಾಷ್ಟ್ರ ರಾಜಧಾನಿಯ ಬೀದಿಗಳಲ್ಲಿ ಹಗಲು ಹೊತ್ತಿನಲ್ಲಿ ಬಂದೂಕುಗಳನ್ನು ಬ್ರಾಂಡ್ ಮಾಡಲಾಗುತ್ತಿದೆ. ರಾಹುಲ್ ಗಾಂಧಿ ಮತ್ತು ಅರವಿಂದ್ ಕೇಜ್ರಿವಾಲ್ ಇದನ್ನು ಬೆಂಬಲಿಸಿದ್ದಾರೆ." ಎಂದು ಸುಳ್ಳು ಸುದ್ದಿ ಪ್ರಸಾರ ಮಾಡಲಾಗಿದೆ.

- Advertisement -
- Advertisement -

ಕೆಲವು ಗಂಟೆಗಳ ಹಿಂದೆಯಷ್ಟೆ ಸಿಎಎ ವಿರುದ್ಧ ದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಮೇಲೆ ಗೋಪಾಲ್‌ ಎಂಬ ಬಲಪಂಥೀಯ ಹುಡುಗನೊಬ್ಬ ಗುಂಡು ಹಾರಿಸಿ ಪೊಲೀಸರ ಅತಿಥಿಯಾಗಿರುವುದು ನಿಮಗೆಲ್ಲ ಗೊತ್ತಿರುವ ವಿಚಾರ. ಆದರೆ ಗುಂಡು ಹಾರಿಸಿದವರು ಜಾಮಿಯಾ ವಿದ್ಯಾರ್ಥಿಗಳು, ಪ್ರತಿಭಟನಾಕಾರರು ಹಿಂಸೆಗೆ ತಿರುಗಿದ್ದಾರೆ ಎಂದೆಲ್ಲಾ ರಿಪಬ್ಲಿಕ್‌ ಟಿವಿ ಸುಳ್ಳು ವರದಿ ಮಾಡಿ ಸಿಕ್ಕಿಬಿದ್ದಿದೆ.

ದೆಹಲಿ ಪೊಲೀಸರು ಬಂದೂಕುಧಾರಿಯನ್ನು ರಾಮ್‌ಭಕ್ತ್‌ ಗೋಪಾಲ್ ಶರ್ಮಾ ಎಂದು ಗುರುತಿಸಿದ್ದಾರೆ. “ಯೆ ಲೋ ಆಜಾದಿ. ಹಿಂದೂಸ್ತಾನ್ ಜಿಂದಾಬಾದ್. ದೆಹಲಿ ಪೊಲೀಸ್ ಜಿಂದಾಬಾದ್” ಎಂದು ಅವರು ಕೂಗಿದ್ದಾರೆ. ತೆಗೆದುಕೊಳ್ಳಿ ನಿಮ್ಮ ಆಜಾದಿ ಎಂದು ಆತ ಗುಂಡು ಹೊಡೆದಿರುವುದು ಎಲ್ಲಾ ಸೋಶಿಯಲ್ ಮೀಡಿಯಾದಲ್ಲಿ ವರದಿಗಳು ಮತ್ತು ವೀಡಿಯೊಗಳು ದಪ್ಪ ಅಕ್ಷರಗಳಲ್ಲಿ ಮತ್ತು ವೇಗವಾಗಿ ಹರಿದಾಡಿದರೂ, ರಿಪಬ್ಲಿಕ್ ಟಿವಿ ಮಾತ್ರ “ಜಾಮಿಯಾ ಪ್ರತಿಭಟನೆ ಹಿಂಸೆಗೆ ತಿರುಗಿದೆ, ಪ್ರತಿಭಟನಾಕಾರರು ಗನ್‌ ಬಳಸಿದ್ದಾರೆ” ಎಂದು ಸುಳ್ಳು ವರದಿ ಮಾಡಿದೆ.

ಚಾನೆಲ್‌ನ ರಾಜಕೀಯ ಸಂಪಾದಕಿ ಐಶ್ವರ್ಯ ಕಪೂರ್ ಅವರು ಹೀಗೆ ಹೇಳಿದರು: “ಸಿಎಎ ಹೆಸರಿನಲ್ಲಿ … ರಾಷ್ಟ್ರ ರಾಜಧಾನಿಯ ಬೀದಿಗಳಲ್ಲಿ ಹಗಲು ಹೊತ್ತಿನಲ್ಲಿ ಬಂದೂಕುಗಳನ್ನು ಬ್ರಾಂಡ್ ಮಾಡಲಾಗುತ್ತಿದೆ. ರಾಹುಲ್ ಗಾಂಧಿ ಮತ್ತು ಅರವಿಂದ್ ಕೇಜ್ರಿವಾಲ್ ಇದನ್ನು ಬೆಂಬಲಿಸಿದ್ದಾರೆ.”

“ಇದನ್ನು ಅನುಮತಿಸಬಾರದು” ಎಂದು ಐಶ್ವರ್ಯ ಕಪೂರ್ ಹೇಳಿದಾಗ, ರಿಪಬ್ಲಿಕ್ ವರದಿಗಾರ ದೂರವಾಣಿಯಲ್ಲಿ ಮಾತನಾಡುತ್ತಾ: “ಅದು ನಿಖರವಾಗಿ ವಿಷಯವಾಗಿದೆ … ಅವರಿಗೆ ಯಾವುದೇ ಪಶ್ಚಾತ್ತಾಪವಿಲ್ಲ. ಎಂದು ಸುಳ್ಳು ಹೇಳಿದ್ದಾನೆ. ಈ ಸಮಯದಲ್ಲಿ ಟಿವಿ ಪರದೆಯ ಸ್ಕ್ರೋಲ್‌ ಆಗುವ ಜಾಗದಲ್ಲಿ “ಜಾಮಿಯಾ ಪ್ರತಿಭಟನಾಕಾರರು ಬಂದೂಕುಗಳನ್ನು ಬಳಸುತ್ತಾರೆ” ಎಂದು ಪ್ರಸಾರವಾಗಿದೆ.

ಐಶ್ವರ್ಯ ಕಪೂರ್ ಪಟ್ಟುಹಿಡಿದು “ದೆಹಲಿಯು ಬೆದರಿಕೆಗೆ ಒಳಗಾಗುತ್ತಿಲ್ಲವೇ … ಸಿಎಎ ವಿರೋಧಿ ಹೆಸರಿನಲ್ಲಿ ಇದು ನಡೆಯುತ್ತಿದೆ.” ಎಂದು ಅರಚಾಡಿದ್ದಾರೆ. ನಂತರ ರಿಪಬ್ಲಿಕ್ ಅವರ ಸಿಬ್ಬಂದಿಯನ್ನು ವಿಶ್ವವಿದ್ಯಾನಿಲಯದಲ್ಲಿ ಕೂಡಿಹಾಕಲಾಗಿದೆ ಎಂದು ಸುಳ್ಳು ವರದಿ ಸಹ ಮಾಡಲಾಗಿದೆ.

ರಿಪಬ್ಲಿಕ್‌ ಟಿವಿಯ ಈ ನಡೆಯನ್ನು ಹಲವಾರು ಕನ್ನಡಿಗರು ಸಾಮಾಜಿಕ ಜಾಲತಾಣದಲ್ಲಿ ತೀವ್ರವಾಗಿ ಖಂಡಿಸಿದ್ದಾರೆ. ಅಬ್ಬಬ್ಬ.. ಈ ಹೈಟೆಕ್ ಮಲ್ಟಿ ಮೀಡಿಯ ಕಾಲದಲ್ಲೇ ಇಷ್ಟು ಬ್ಲಾಟಂಟ್ ಆಗಿ ಸುಳ್ಳು ಪ್ರಚಾರ ಮಾಡ್ತಾರಲ್ಲ!! ಇನ್ನು ನಮ್ಮ ತಾತ ಮುತ್ತಾತಂದಿರ ಕಾಲದಲ್ಲಿ ಇವರಿನ್ನೆಷ್ಟು ಊರು ಹಾಳು ಮಾಡಿರಬೇಕು ಲೆಕ್ಕ ಹಾಕ್ಕೊಳಿ. ಅಬ್ಬ ಇವರ ಕುತಂತ್ರವೇ!! ಎಂದು ಕತೆಗಾರ ದಯಾನಂದ ಟಿ.ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪತ್ರಕರ್ತರಾದ ದಿನೇಶ್‌ ಕುಮಾರ್ ದಿನೂರವರು 26/11 ಮುಂಬೈ ಮೇಲಿನ ಭಯೋತ್ಪಾದಕ ದಾಳಿಯನ್ನು ಮುಂಬೈನ ಜನರೇ ಮಾಡಿದ್ದು ಎಂದರೆ ಕೇಳಿದವರು ಮೆಟ್ಟಲ್ಲಿ ಹೊಡೆಯೋದಿಲ್ಲವೇ? ಇವತ್ತು ಅರ್ನಾಬ್ ಗೋಸ್ವಾಮಿ ಮಾಡಿರುವುದೂ ಅದನ್ನೇ. ಇಡೀ ದೇಶಕ್ಕೇ ಸತ್ಯ ಏನು ಅಂತ ಗೊತ್ತಿದೆ. ಆದರೂ ಈ ಗುಲಾಮ ಚಾನೆಲ್‌ #GunsInJamia ಎಂಬ ಹ್ಯಾಶ್ ಟ್ಯಾಗ್ ನಲ್ಲೇ ಹೇಸಿಗೆ ಮಾಡಿಕೊಳ್ಳುತ್ತಿದ್ದಾನೆ. ಇವನು ಹೇಡಿ ಮಾತ್ರವಲ್ಲ, ಪರಮನೀಚ. ಬೂಟು ನೆಕ್ಕುವುದು, ಧಣಿಗಳ ಅಮೇಧ್ಯ ತಿನ್ನುವುದು ಮಾಮೂಲಾದರೆ ಇದೆಲ್ಲ ಆಗುತ್ತದೆ. ಥೂ, ಇವನಿಗೆ ಬೀದಿಬೀದಿಯಲ್ಲೂ ಜನರು ಛೀಮಾರಿ ಹಾಕಬೇಕು ಎಂದು ಕಿಡಿಕಾರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...