Homeಮುಖಪುಟಜಾಮಿಯಾ ವಿದ್ಯಾರ್ಥಿ ಮೇಲೆ ಗುಂಡು: ಸುಳ್ಳು ಸುದ್ದಿ ಪ್ರಸಾರ ಮಾಡಿದ ರಿಪಬ್ಲಿಕ್‌ ಟವಿಗೆ ಛೀಮಾರಿ...

ಜಾಮಿಯಾ ವಿದ್ಯಾರ್ಥಿ ಮೇಲೆ ಗುಂಡು: ಸುಳ್ಳು ಸುದ್ದಿ ಪ್ರಸಾರ ಮಾಡಿದ ರಿಪಬ್ಲಿಕ್‌ ಟವಿಗೆ ಛೀಮಾರಿ…

"ಸಿಎಎ ಹೆಸರಿನಲ್ಲಿ ... ರಾಷ್ಟ್ರ ರಾಜಧಾನಿಯ ಬೀದಿಗಳಲ್ಲಿ ಹಗಲು ಹೊತ್ತಿನಲ್ಲಿ ಬಂದೂಕುಗಳನ್ನು ಬ್ರಾಂಡ್ ಮಾಡಲಾಗುತ್ತಿದೆ. ರಾಹುಲ್ ಗಾಂಧಿ ಮತ್ತು ಅರವಿಂದ್ ಕೇಜ್ರಿವಾಲ್ ಇದನ್ನು ಬೆಂಬಲಿಸಿದ್ದಾರೆ." ಎಂದು ಸುಳ್ಳು ಸುದ್ದಿ ಪ್ರಸಾರ ಮಾಡಲಾಗಿದೆ.

- Advertisement -
- Advertisement -

ಕೆಲವು ಗಂಟೆಗಳ ಹಿಂದೆಯಷ್ಟೆ ಸಿಎಎ ವಿರುದ್ಧ ದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಮೇಲೆ ಗೋಪಾಲ್‌ ಎಂಬ ಬಲಪಂಥೀಯ ಹುಡುಗನೊಬ್ಬ ಗುಂಡು ಹಾರಿಸಿ ಪೊಲೀಸರ ಅತಿಥಿಯಾಗಿರುವುದು ನಿಮಗೆಲ್ಲ ಗೊತ್ತಿರುವ ವಿಚಾರ. ಆದರೆ ಗುಂಡು ಹಾರಿಸಿದವರು ಜಾಮಿಯಾ ವಿದ್ಯಾರ್ಥಿಗಳು, ಪ್ರತಿಭಟನಾಕಾರರು ಹಿಂಸೆಗೆ ತಿರುಗಿದ್ದಾರೆ ಎಂದೆಲ್ಲಾ ರಿಪಬ್ಲಿಕ್‌ ಟಿವಿ ಸುಳ್ಳು ವರದಿ ಮಾಡಿ ಸಿಕ್ಕಿಬಿದ್ದಿದೆ.

ದೆಹಲಿ ಪೊಲೀಸರು ಬಂದೂಕುಧಾರಿಯನ್ನು ರಾಮ್‌ಭಕ್ತ್‌ ಗೋಪಾಲ್ ಶರ್ಮಾ ಎಂದು ಗುರುತಿಸಿದ್ದಾರೆ. “ಯೆ ಲೋ ಆಜಾದಿ. ಹಿಂದೂಸ್ತಾನ್ ಜಿಂದಾಬಾದ್. ದೆಹಲಿ ಪೊಲೀಸ್ ಜಿಂದಾಬಾದ್” ಎಂದು ಅವರು ಕೂಗಿದ್ದಾರೆ. ತೆಗೆದುಕೊಳ್ಳಿ ನಿಮ್ಮ ಆಜಾದಿ ಎಂದು ಆತ ಗುಂಡು ಹೊಡೆದಿರುವುದು ಎಲ್ಲಾ ಸೋಶಿಯಲ್ ಮೀಡಿಯಾದಲ್ಲಿ ವರದಿಗಳು ಮತ್ತು ವೀಡಿಯೊಗಳು ದಪ್ಪ ಅಕ್ಷರಗಳಲ್ಲಿ ಮತ್ತು ವೇಗವಾಗಿ ಹರಿದಾಡಿದರೂ, ರಿಪಬ್ಲಿಕ್ ಟಿವಿ ಮಾತ್ರ “ಜಾಮಿಯಾ ಪ್ರತಿಭಟನೆ ಹಿಂಸೆಗೆ ತಿರುಗಿದೆ, ಪ್ರತಿಭಟನಾಕಾರರು ಗನ್‌ ಬಳಸಿದ್ದಾರೆ” ಎಂದು ಸುಳ್ಳು ವರದಿ ಮಾಡಿದೆ.

ಚಾನೆಲ್‌ನ ರಾಜಕೀಯ ಸಂಪಾದಕಿ ಐಶ್ವರ್ಯ ಕಪೂರ್ ಅವರು ಹೀಗೆ ಹೇಳಿದರು: “ಸಿಎಎ ಹೆಸರಿನಲ್ಲಿ … ರಾಷ್ಟ್ರ ರಾಜಧಾನಿಯ ಬೀದಿಗಳಲ್ಲಿ ಹಗಲು ಹೊತ್ತಿನಲ್ಲಿ ಬಂದೂಕುಗಳನ್ನು ಬ್ರಾಂಡ್ ಮಾಡಲಾಗುತ್ತಿದೆ. ರಾಹುಲ್ ಗಾಂಧಿ ಮತ್ತು ಅರವಿಂದ್ ಕೇಜ್ರಿವಾಲ್ ಇದನ್ನು ಬೆಂಬಲಿಸಿದ್ದಾರೆ.”

“ಇದನ್ನು ಅನುಮತಿಸಬಾರದು” ಎಂದು ಐಶ್ವರ್ಯ ಕಪೂರ್ ಹೇಳಿದಾಗ, ರಿಪಬ್ಲಿಕ್ ವರದಿಗಾರ ದೂರವಾಣಿಯಲ್ಲಿ ಮಾತನಾಡುತ್ತಾ: “ಅದು ನಿಖರವಾಗಿ ವಿಷಯವಾಗಿದೆ … ಅವರಿಗೆ ಯಾವುದೇ ಪಶ್ಚಾತ್ತಾಪವಿಲ್ಲ. ಎಂದು ಸುಳ್ಳು ಹೇಳಿದ್ದಾನೆ. ಈ ಸಮಯದಲ್ಲಿ ಟಿವಿ ಪರದೆಯ ಸ್ಕ್ರೋಲ್‌ ಆಗುವ ಜಾಗದಲ್ಲಿ “ಜಾಮಿಯಾ ಪ್ರತಿಭಟನಾಕಾರರು ಬಂದೂಕುಗಳನ್ನು ಬಳಸುತ್ತಾರೆ” ಎಂದು ಪ್ರಸಾರವಾಗಿದೆ.

ಐಶ್ವರ್ಯ ಕಪೂರ್ ಪಟ್ಟುಹಿಡಿದು “ದೆಹಲಿಯು ಬೆದರಿಕೆಗೆ ಒಳಗಾಗುತ್ತಿಲ್ಲವೇ … ಸಿಎಎ ವಿರೋಧಿ ಹೆಸರಿನಲ್ಲಿ ಇದು ನಡೆಯುತ್ತಿದೆ.” ಎಂದು ಅರಚಾಡಿದ್ದಾರೆ. ನಂತರ ರಿಪಬ್ಲಿಕ್ ಅವರ ಸಿಬ್ಬಂದಿಯನ್ನು ವಿಶ್ವವಿದ್ಯಾನಿಲಯದಲ್ಲಿ ಕೂಡಿಹಾಕಲಾಗಿದೆ ಎಂದು ಸುಳ್ಳು ವರದಿ ಸಹ ಮಾಡಲಾಗಿದೆ.

ರಿಪಬ್ಲಿಕ್‌ ಟಿವಿಯ ಈ ನಡೆಯನ್ನು ಹಲವಾರು ಕನ್ನಡಿಗರು ಸಾಮಾಜಿಕ ಜಾಲತಾಣದಲ್ಲಿ ತೀವ್ರವಾಗಿ ಖಂಡಿಸಿದ್ದಾರೆ. ಅಬ್ಬಬ್ಬ.. ಈ ಹೈಟೆಕ್ ಮಲ್ಟಿ ಮೀಡಿಯ ಕಾಲದಲ್ಲೇ ಇಷ್ಟು ಬ್ಲಾಟಂಟ್ ಆಗಿ ಸುಳ್ಳು ಪ್ರಚಾರ ಮಾಡ್ತಾರಲ್ಲ!! ಇನ್ನು ನಮ್ಮ ತಾತ ಮುತ್ತಾತಂದಿರ ಕಾಲದಲ್ಲಿ ಇವರಿನ್ನೆಷ್ಟು ಊರು ಹಾಳು ಮಾಡಿರಬೇಕು ಲೆಕ್ಕ ಹಾಕ್ಕೊಳಿ. ಅಬ್ಬ ಇವರ ಕುತಂತ್ರವೇ!! ಎಂದು ಕತೆಗಾರ ದಯಾನಂದ ಟಿ.ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪತ್ರಕರ್ತರಾದ ದಿನೇಶ್‌ ಕುಮಾರ್ ದಿನೂರವರು 26/11 ಮುಂಬೈ ಮೇಲಿನ ಭಯೋತ್ಪಾದಕ ದಾಳಿಯನ್ನು ಮುಂಬೈನ ಜನರೇ ಮಾಡಿದ್ದು ಎಂದರೆ ಕೇಳಿದವರು ಮೆಟ್ಟಲ್ಲಿ ಹೊಡೆಯೋದಿಲ್ಲವೇ? ಇವತ್ತು ಅರ್ನಾಬ್ ಗೋಸ್ವಾಮಿ ಮಾಡಿರುವುದೂ ಅದನ್ನೇ. ಇಡೀ ದೇಶಕ್ಕೇ ಸತ್ಯ ಏನು ಅಂತ ಗೊತ್ತಿದೆ. ಆದರೂ ಈ ಗುಲಾಮ ಚಾನೆಲ್‌ #GunsInJamia ಎಂಬ ಹ್ಯಾಶ್ ಟ್ಯಾಗ್ ನಲ್ಲೇ ಹೇಸಿಗೆ ಮಾಡಿಕೊಳ್ಳುತ್ತಿದ್ದಾನೆ. ಇವನು ಹೇಡಿ ಮಾತ್ರವಲ್ಲ, ಪರಮನೀಚ. ಬೂಟು ನೆಕ್ಕುವುದು, ಧಣಿಗಳ ಅಮೇಧ್ಯ ತಿನ್ನುವುದು ಮಾಮೂಲಾದರೆ ಇದೆಲ್ಲ ಆಗುತ್ತದೆ. ಥೂ, ಇವನಿಗೆ ಬೀದಿಬೀದಿಯಲ್ಲೂ ಜನರು ಛೀಮಾರಿ ಹಾಕಬೇಕು ಎಂದು ಕಿಡಿಕಾರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...