Homeಮುಖಪುಟಜಾಮಿಯಾ ವಿದ್ಯಾರ್ಥಿ ಮೇಲೆ ಗುಂಡು: ಸುಳ್ಳು ಸುದ್ದಿ ಪ್ರಸಾರ ಮಾಡಿದ ರಿಪಬ್ಲಿಕ್‌ ಟವಿಗೆ ಛೀಮಾರಿ...

ಜಾಮಿಯಾ ವಿದ್ಯಾರ್ಥಿ ಮೇಲೆ ಗುಂಡು: ಸುಳ್ಳು ಸುದ್ದಿ ಪ್ರಸಾರ ಮಾಡಿದ ರಿಪಬ್ಲಿಕ್‌ ಟವಿಗೆ ಛೀಮಾರಿ…

"ಸಿಎಎ ಹೆಸರಿನಲ್ಲಿ ... ರಾಷ್ಟ್ರ ರಾಜಧಾನಿಯ ಬೀದಿಗಳಲ್ಲಿ ಹಗಲು ಹೊತ್ತಿನಲ್ಲಿ ಬಂದೂಕುಗಳನ್ನು ಬ್ರಾಂಡ್ ಮಾಡಲಾಗುತ್ತಿದೆ. ರಾಹುಲ್ ಗಾಂಧಿ ಮತ್ತು ಅರವಿಂದ್ ಕೇಜ್ರಿವಾಲ್ ಇದನ್ನು ಬೆಂಬಲಿಸಿದ್ದಾರೆ." ಎಂದು ಸುಳ್ಳು ಸುದ್ದಿ ಪ್ರಸಾರ ಮಾಡಲಾಗಿದೆ.

- Advertisement -
- Advertisement -

ಕೆಲವು ಗಂಟೆಗಳ ಹಿಂದೆಯಷ್ಟೆ ಸಿಎಎ ವಿರುದ್ಧ ದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಮೇಲೆ ಗೋಪಾಲ್‌ ಎಂಬ ಬಲಪಂಥೀಯ ಹುಡುಗನೊಬ್ಬ ಗುಂಡು ಹಾರಿಸಿ ಪೊಲೀಸರ ಅತಿಥಿಯಾಗಿರುವುದು ನಿಮಗೆಲ್ಲ ಗೊತ್ತಿರುವ ವಿಚಾರ. ಆದರೆ ಗುಂಡು ಹಾರಿಸಿದವರು ಜಾಮಿಯಾ ವಿದ್ಯಾರ್ಥಿಗಳು, ಪ್ರತಿಭಟನಾಕಾರರು ಹಿಂಸೆಗೆ ತಿರುಗಿದ್ದಾರೆ ಎಂದೆಲ್ಲಾ ರಿಪಬ್ಲಿಕ್‌ ಟಿವಿ ಸುಳ್ಳು ವರದಿ ಮಾಡಿ ಸಿಕ್ಕಿಬಿದ್ದಿದೆ.

ದೆಹಲಿ ಪೊಲೀಸರು ಬಂದೂಕುಧಾರಿಯನ್ನು ರಾಮ್‌ಭಕ್ತ್‌ ಗೋಪಾಲ್ ಶರ್ಮಾ ಎಂದು ಗುರುತಿಸಿದ್ದಾರೆ. “ಯೆ ಲೋ ಆಜಾದಿ. ಹಿಂದೂಸ್ತಾನ್ ಜಿಂದಾಬಾದ್. ದೆಹಲಿ ಪೊಲೀಸ್ ಜಿಂದಾಬಾದ್” ಎಂದು ಅವರು ಕೂಗಿದ್ದಾರೆ. ತೆಗೆದುಕೊಳ್ಳಿ ನಿಮ್ಮ ಆಜಾದಿ ಎಂದು ಆತ ಗುಂಡು ಹೊಡೆದಿರುವುದು ಎಲ್ಲಾ ಸೋಶಿಯಲ್ ಮೀಡಿಯಾದಲ್ಲಿ ವರದಿಗಳು ಮತ್ತು ವೀಡಿಯೊಗಳು ದಪ್ಪ ಅಕ್ಷರಗಳಲ್ಲಿ ಮತ್ತು ವೇಗವಾಗಿ ಹರಿದಾಡಿದರೂ, ರಿಪಬ್ಲಿಕ್ ಟಿವಿ ಮಾತ್ರ “ಜಾಮಿಯಾ ಪ್ರತಿಭಟನೆ ಹಿಂಸೆಗೆ ತಿರುಗಿದೆ, ಪ್ರತಿಭಟನಾಕಾರರು ಗನ್‌ ಬಳಸಿದ್ದಾರೆ” ಎಂದು ಸುಳ್ಳು ವರದಿ ಮಾಡಿದೆ.

ಚಾನೆಲ್‌ನ ರಾಜಕೀಯ ಸಂಪಾದಕಿ ಐಶ್ವರ್ಯ ಕಪೂರ್ ಅವರು ಹೀಗೆ ಹೇಳಿದರು: “ಸಿಎಎ ಹೆಸರಿನಲ್ಲಿ … ರಾಷ್ಟ್ರ ರಾಜಧಾನಿಯ ಬೀದಿಗಳಲ್ಲಿ ಹಗಲು ಹೊತ್ತಿನಲ್ಲಿ ಬಂದೂಕುಗಳನ್ನು ಬ್ರಾಂಡ್ ಮಾಡಲಾಗುತ್ತಿದೆ. ರಾಹುಲ್ ಗಾಂಧಿ ಮತ್ತು ಅರವಿಂದ್ ಕೇಜ್ರಿವಾಲ್ ಇದನ್ನು ಬೆಂಬಲಿಸಿದ್ದಾರೆ.”

“ಇದನ್ನು ಅನುಮತಿಸಬಾರದು” ಎಂದು ಐಶ್ವರ್ಯ ಕಪೂರ್ ಹೇಳಿದಾಗ, ರಿಪಬ್ಲಿಕ್ ವರದಿಗಾರ ದೂರವಾಣಿಯಲ್ಲಿ ಮಾತನಾಡುತ್ತಾ: “ಅದು ನಿಖರವಾಗಿ ವಿಷಯವಾಗಿದೆ … ಅವರಿಗೆ ಯಾವುದೇ ಪಶ್ಚಾತ್ತಾಪವಿಲ್ಲ. ಎಂದು ಸುಳ್ಳು ಹೇಳಿದ್ದಾನೆ. ಈ ಸಮಯದಲ್ಲಿ ಟಿವಿ ಪರದೆಯ ಸ್ಕ್ರೋಲ್‌ ಆಗುವ ಜಾಗದಲ್ಲಿ “ಜಾಮಿಯಾ ಪ್ರತಿಭಟನಾಕಾರರು ಬಂದೂಕುಗಳನ್ನು ಬಳಸುತ್ತಾರೆ” ಎಂದು ಪ್ರಸಾರವಾಗಿದೆ.

ಐಶ್ವರ್ಯ ಕಪೂರ್ ಪಟ್ಟುಹಿಡಿದು “ದೆಹಲಿಯು ಬೆದರಿಕೆಗೆ ಒಳಗಾಗುತ್ತಿಲ್ಲವೇ … ಸಿಎಎ ವಿರೋಧಿ ಹೆಸರಿನಲ್ಲಿ ಇದು ನಡೆಯುತ್ತಿದೆ.” ಎಂದು ಅರಚಾಡಿದ್ದಾರೆ. ನಂತರ ರಿಪಬ್ಲಿಕ್ ಅವರ ಸಿಬ್ಬಂದಿಯನ್ನು ವಿಶ್ವವಿದ್ಯಾನಿಲಯದಲ್ಲಿ ಕೂಡಿಹಾಕಲಾಗಿದೆ ಎಂದು ಸುಳ್ಳು ವರದಿ ಸಹ ಮಾಡಲಾಗಿದೆ.

ರಿಪಬ್ಲಿಕ್‌ ಟಿವಿಯ ಈ ನಡೆಯನ್ನು ಹಲವಾರು ಕನ್ನಡಿಗರು ಸಾಮಾಜಿಕ ಜಾಲತಾಣದಲ್ಲಿ ತೀವ್ರವಾಗಿ ಖಂಡಿಸಿದ್ದಾರೆ. ಅಬ್ಬಬ್ಬ.. ಈ ಹೈಟೆಕ್ ಮಲ್ಟಿ ಮೀಡಿಯ ಕಾಲದಲ್ಲೇ ಇಷ್ಟು ಬ್ಲಾಟಂಟ್ ಆಗಿ ಸುಳ್ಳು ಪ್ರಚಾರ ಮಾಡ್ತಾರಲ್ಲ!! ಇನ್ನು ನಮ್ಮ ತಾತ ಮುತ್ತಾತಂದಿರ ಕಾಲದಲ್ಲಿ ಇವರಿನ್ನೆಷ್ಟು ಊರು ಹಾಳು ಮಾಡಿರಬೇಕು ಲೆಕ್ಕ ಹಾಕ್ಕೊಳಿ. ಅಬ್ಬ ಇವರ ಕುತಂತ್ರವೇ!! ಎಂದು ಕತೆಗಾರ ದಯಾನಂದ ಟಿ.ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪತ್ರಕರ್ತರಾದ ದಿನೇಶ್‌ ಕುಮಾರ್ ದಿನೂರವರು 26/11 ಮುಂಬೈ ಮೇಲಿನ ಭಯೋತ್ಪಾದಕ ದಾಳಿಯನ್ನು ಮುಂಬೈನ ಜನರೇ ಮಾಡಿದ್ದು ಎಂದರೆ ಕೇಳಿದವರು ಮೆಟ್ಟಲ್ಲಿ ಹೊಡೆಯೋದಿಲ್ಲವೇ? ಇವತ್ತು ಅರ್ನಾಬ್ ಗೋಸ್ವಾಮಿ ಮಾಡಿರುವುದೂ ಅದನ್ನೇ. ಇಡೀ ದೇಶಕ್ಕೇ ಸತ್ಯ ಏನು ಅಂತ ಗೊತ್ತಿದೆ. ಆದರೂ ಈ ಗುಲಾಮ ಚಾನೆಲ್‌ #GunsInJamia ಎಂಬ ಹ್ಯಾಶ್ ಟ್ಯಾಗ್ ನಲ್ಲೇ ಹೇಸಿಗೆ ಮಾಡಿಕೊಳ್ಳುತ್ತಿದ್ದಾನೆ. ಇವನು ಹೇಡಿ ಮಾತ್ರವಲ್ಲ, ಪರಮನೀಚ. ಬೂಟು ನೆಕ್ಕುವುದು, ಧಣಿಗಳ ಅಮೇಧ್ಯ ತಿನ್ನುವುದು ಮಾಮೂಲಾದರೆ ಇದೆಲ್ಲ ಆಗುತ್ತದೆ. ಥೂ, ಇವನಿಗೆ ಬೀದಿಬೀದಿಯಲ್ಲೂ ಜನರು ಛೀಮಾರಿ ಹಾಕಬೇಕು ಎಂದು ಕಿಡಿಕಾರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...