Homeಮುಖಪುಟಜಾಮಿಯಾ ವಿದ್ಯಾರ್ಥಿ ಮೇಲೆ ಗುಂಡು: ಸುಳ್ಳು ಸುದ್ದಿ ಪ್ರಸಾರ ಮಾಡಿದ ರಿಪಬ್ಲಿಕ್‌ ಟವಿಗೆ ಛೀಮಾರಿ...

ಜಾಮಿಯಾ ವಿದ್ಯಾರ್ಥಿ ಮೇಲೆ ಗುಂಡು: ಸುಳ್ಳು ಸುದ್ದಿ ಪ್ರಸಾರ ಮಾಡಿದ ರಿಪಬ್ಲಿಕ್‌ ಟವಿಗೆ ಛೀಮಾರಿ…

"ಸಿಎಎ ಹೆಸರಿನಲ್ಲಿ ... ರಾಷ್ಟ್ರ ರಾಜಧಾನಿಯ ಬೀದಿಗಳಲ್ಲಿ ಹಗಲು ಹೊತ್ತಿನಲ್ಲಿ ಬಂದೂಕುಗಳನ್ನು ಬ್ರಾಂಡ್ ಮಾಡಲಾಗುತ್ತಿದೆ. ರಾಹುಲ್ ಗಾಂಧಿ ಮತ್ತು ಅರವಿಂದ್ ಕೇಜ್ರಿವಾಲ್ ಇದನ್ನು ಬೆಂಬಲಿಸಿದ್ದಾರೆ." ಎಂದು ಸುಳ್ಳು ಸುದ್ದಿ ಪ್ರಸಾರ ಮಾಡಲಾಗಿದೆ.

- Advertisement -
- Advertisement -

ಕೆಲವು ಗಂಟೆಗಳ ಹಿಂದೆಯಷ್ಟೆ ಸಿಎಎ ವಿರುದ್ಧ ದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಮೇಲೆ ಗೋಪಾಲ್‌ ಎಂಬ ಬಲಪಂಥೀಯ ಹುಡುಗನೊಬ್ಬ ಗುಂಡು ಹಾರಿಸಿ ಪೊಲೀಸರ ಅತಿಥಿಯಾಗಿರುವುದು ನಿಮಗೆಲ್ಲ ಗೊತ್ತಿರುವ ವಿಚಾರ. ಆದರೆ ಗುಂಡು ಹಾರಿಸಿದವರು ಜಾಮಿಯಾ ವಿದ್ಯಾರ್ಥಿಗಳು, ಪ್ರತಿಭಟನಾಕಾರರು ಹಿಂಸೆಗೆ ತಿರುಗಿದ್ದಾರೆ ಎಂದೆಲ್ಲಾ ರಿಪಬ್ಲಿಕ್‌ ಟಿವಿ ಸುಳ್ಳು ವರದಿ ಮಾಡಿ ಸಿಕ್ಕಿಬಿದ್ದಿದೆ.

ದೆಹಲಿ ಪೊಲೀಸರು ಬಂದೂಕುಧಾರಿಯನ್ನು ರಾಮ್‌ಭಕ್ತ್‌ ಗೋಪಾಲ್ ಶರ್ಮಾ ಎಂದು ಗುರುತಿಸಿದ್ದಾರೆ. “ಯೆ ಲೋ ಆಜಾದಿ. ಹಿಂದೂಸ್ತಾನ್ ಜಿಂದಾಬಾದ್. ದೆಹಲಿ ಪೊಲೀಸ್ ಜಿಂದಾಬಾದ್” ಎಂದು ಅವರು ಕೂಗಿದ್ದಾರೆ. ತೆಗೆದುಕೊಳ್ಳಿ ನಿಮ್ಮ ಆಜಾದಿ ಎಂದು ಆತ ಗುಂಡು ಹೊಡೆದಿರುವುದು ಎಲ್ಲಾ ಸೋಶಿಯಲ್ ಮೀಡಿಯಾದಲ್ಲಿ ವರದಿಗಳು ಮತ್ತು ವೀಡಿಯೊಗಳು ದಪ್ಪ ಅಕ್ಷರಗಳಲ್ಲಿ ಮತ್ತು ವೇಗವಾಗಿ ಹರಿದಾಡಿದರೂ, ರಿಪಬ್ಲಿಕ್ ಟಿವಿ ಮಾತ್ರ “ಜಾಮಿಯಾ ಪ್ರತಿಭಟನೆ ಹಿಂಸೆಗೆ ತಿರುಗಿದೆ, ಪ್ರತಿಭಟನಾಕಾರರು ಗನ್‌ ಬಳಸಿದ್ದಾರೆ” ಎಂದು ಸುಳ್ಳು ವರದಿ ಮಾಡಿದೆ.

ಚಾನೆಲ್‌ನ ರಾಜಕೀಯ ಸಂಪಾದಕಿ ಐಶ್ವರ್ಯ ಕಪೂರ್ ಅವರು ಹೀಗೆ ಹೇಳಿದರು: “ಸಿಎಎ ಹೆಸರಿನಲ್ಲಿ … ರಾಷ್ಟ್ರ ರಾಜಧಾನಿಯ ಬೀದಿಗಳಲ್ಲಿ ಹಗಲು ಹೊತ್ತಿನಲ್ಲಿ ಬಂದೂಕುಗಳನ್ನು ಬ್ರಾಂಡ್ ಮಾಡಲಾಗುತ್ತಿದೆ. ರಾಹುಲ್ ಗಾಂಧಿ ಮತ್ತು ಅರವಿಂದ್ ಕೇಜ್ರಿವಾಲ್ ಇದನ್ನು ಬೆಂಬಲಿಸಿದ್ದಾರೆ.”

“ಇದನ್ನು ಅನುಮತಿಸಬಾರದು” ಎಂದು ಐಶ್ವರ್ಯ ಕಪೂರ್ ಹೇಳಿದಾಗ, ರಿಪಬ್ಲಿಕ್ ವರದಿಗಾರ ದೂರವಾಣಿಯಲ್ಲಿ ಮಾತನಾಡುತ್ತಾ: “ಅದು ನಿಖರವಾಗಿ ವಿಷಯವಾಗಿದೆ … ಅವರಿಗೆ ಯಾವುದೇ ಪಶ್ಚಾತ್ತಾಪವಿಲ್ಲ. ಎಂದು ಸುಳ್ಳು ಹೇಳಿದ್ದಾನೆ. ಈ ಸಮಯದಲ್ಲಿ ಟಿವಿ ಪರದೆಯ ಸ್ಕ್ರೋಲ್‌ ಆಗುವ ಜಾಗದಲ್ಲಿ “ಜಾಮಿಯಾ ಪ್ರತಿಭಟನಾಕಾರರು ಬಂದೂಕುಗಳನ್ನು ಬಳಸುತ್ತಾರೆ” ಎಂದು ಪ್ರಸಾರವಾಗಿದೆ.

ಐಶ್ವರ್ಯ ಕಪೂರ್ ಪಟ್ಟುಹಿಡಿದು “ದೆಹಲಿಯು ಬೆದರಿಕೆಗೆ ಒಳಗಾಗುತ್ತಿಲ್ಲವೇ … ಸಿಎಎ ವಿರೋಧಿ ಹೆಸರಿನಲ್ಲಿ ಇದು ನಡೆಯುತ್ತಿದೆ.” ಎಂದು ಅರಚಾಡಿದ್ದಾರೆ. ನಂತರ ರಿಪಬ್ಲಿಕ್ ಅವರ ಸಿಬ್ಬಂದಿಯನ್ನು ವಿಶ್ವವಿದ್ಯಾನಿಲಯದಲ್ಲಿ ಕೂಡಿಹಾಕಲಾಗಿದೆ ಎಂದು ಸುಳ್ಳು ವರದಿ ಸಹ ಮಾಡಲಾಗಿದೆ.

ರಿಪಬ್ಲಿಕ್‌ ಟಿವಿಯ ಈ ನಡೆಯನ್ನು ಹಲವಾರು ಕನ್ನಡಿಗರು ಸಾಮಾಜಿಕ ಜಾಲತಾಣದಲ್ಲಿ ತೀವ್ರವಾಗಿ ಖಂಡಿಸಿದ್ದಾರೆ. ಅಬ್ಬಬ್ಬ.. ಈ ಹೈಟೆಕ್ ಮಲ್ಟಿ ಮೀಡಿಯ ಕಾಲದಲ್ಲೇ ಇಷ್ಟು ಬ್ಲಾಟಂಟ್ ಆಗಿ ಸುಳ್ಳು ಪ್ರಚಾರ ಮಾಡ್ತಾರಲ್ಲ!! ಇನ್ನು ನಮ್ಮ ತಾತ ಮುತ್ತಾತಂದಿರ ಕಾಲದಲ್ಲಿ ಇವರಿನ್ನೆಷ್ಟು ಊರು ಹಾಳು ಮಾಡಿರಬೇಕು ಲೆಕ್ಕ ಹಾಕ್ಕೊಳಿ. ಅಬ್ಬ ಇವರ ಕುತಂತ್ರವೇ!! ಎಂದು ಕತೆಗಾರ ದಯಾನಂದ ಟಿ.ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪತ್ರಕರ್ತರಾದ ದಿನೇಶ್‌ ಕುಮಾರ್ ದಿನೂರವರು 26/11 ಮುಂಬೈ ಮೇಲಿನ ಭಯೋತ್ಪಾದಕ ದಾಳಿಯನ್ನು ಮುಂಬೈನ ಜನರೇ ಮಾಡಿದ್ದು ಎಂದರೆ ಕೇಳಿದವರು ಮೆಟ್ಟಲ್ಲಿ ಹೊಡೆಯೋದಿಲ್ಲವೇ? ಇವತ್ತು ಅರ್ನಾಬ್ ಗೋಸ್ವಾಮಿ ಮಾಡಿರುವುದೂ ಅದನ್ನೇ. ಇಡೀ ದೇಶಕ್ಕೇ ಸತ್ಯ ಏನು ಅಂತ ಗೊತ್ತಿದೆ. ಆದರೂ ಈ ಗುಲಾಮ ಚಾನೆಲ್‌ #GunsInJamia ಎಂಬ ಹ್ಯಾಶ್ ಟ್ಯಾಗ್ ನಲ್ಲೇ ಹೇಸಿಗೆ ಮಾಡಿಕೊಳ್ಳುತ್ತಿದ್ದಾನೆ. ಇವನು ಹೇಡಿ ಮಾತ್ರವಲ್ಲ, ಪರಮನೀಚ. ಬೂಟು ನೆಕ್ಕುವುದು, ಧಣಿಗಳ ಅಮೇಧ್ಯ ತಿನ್ನುವುದು ಮಾಮೂಲಾದರೆ ಇದೆಲ್ಲ ಆಗುತ್ತದೆ. ಥೂ, ಇವನಿಗೆ ಬೀದಿಬೀದಿಯಲ್ಲೂ ಜನರು ಛೀಮಾರಿ ಹಾಕಬೇಕು ಎಂದು ಕಿಡಿಕಾರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...