Homeಮುಖಪುಟಜಾಮಿಯಾ ವಿದ್ಯಾರ್ಥಿ ಮೇಲೆ ಗುಂಡು: ಸುಳ್ಳು ಸುದ್ದಿ ಪ್ರಸಾರ ಮಾಡಿದ ರಿಪಬ್ಲಿಕ್‌ ಟವಿಗೆ ಛೀಮಾರಿ...

ಜಾಮಿಯಾ ವಿದ್ಯಾರ್ಥಿ ಮೇಲೆ ಗುಂಡು: ಸುಳ್ಳು ಸುದ್ದಿ ಪ್ರಸಾರ ಮಾಡಿದ ರಿಪಬ್ಲಿಕ್‌ ಟವಿಗೆ ಛೀಮಾರಿ…

"ಸಿಎಎ ಹೆಸರಿನಲ್ಲಿ ... ರಾಷ್ಟ್ರ ರಾಜಧಾನಿಯ ಬೀದಿಗಳಲ್ಲಿ ಹಗಲು ಹೊತ್ತಿನಲ್ಲಿ ಬಂದೂಕುಗಳನ್ನು ಬ್ರಾಂಡ್ ಮಾಡಲಾಗುತ್ತಿದೆ. ರಾಹುಲ್ ಗಾಂಧಿ ಮತ್ತು ಅರವಿಂದ್ ಕೇಜ್ರಿವಾಲ್ ಇದನ್ನು ಬೆಂಬಲಿಸಿದ್ದಾರೆ." ಎಂದು ಸುಳ್ಳು ಸುದ್ದಿ ಪ್ರಸಾರ ಮಾಡಲಾಗಿದೆ.

- Advertisement -
- Advertisement -

ಕೆಲವು ಗಂಟೆಗಳ ಹಿಂದೆಯಷ್ಟೆ ಸಿಎಎ ವಿರುದ್ಧ ದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಮೇಲೆ ಗೋಪಾಲ್‌ ಎಂಬ ಬಲಪಂಥೀಯ ಹುಡುಗನೊಬ್ಬ ಗುಂಡು ಹಾರಿಸಿ ಪೊಲೀಸರ ಅತಿಥಿಯಾಗಿರುವುದು ನಿಮಗೆಲ್ಲ ಗೊತ್ತಿರುವ ವಿಚಾರ. ಆದರೆ ಗುಂಡು ಹಾರಿಸಿದವರು ಜಾಮಿಯಾ ವಿದ್ಯಾರ್ಥಿಗಳು, ಪ್ರತಿಭಟನಾಕಾರರು ಹಿಂಸೆಗೆ ತಿರುಗಿದ್ದಾರೆ ಎಂದೆಲ್ಲಾ ರಿಪಬ್ಲಿಕ್‌ ಟಿವಿ ಸುಳ್ಳು ವರದಿ ಮಾಡಿ ಸಿಕ್ಕಿಬಿದ್ದಿದೆ.

ದೆಹಲಿ ಪೊಲೀಸರು ಬಂದೂಕುಧಾರಿಯನ್ನು ರಾಮ್‌ಭಕ್ತ್‌ ಗೋಪಾಲ್ ಶರ್ಮಾ ಎಂದು ಗುರುತಿಸಿದ್ದಾರೆ. “ಯೆ ಲೋ ಆಜಾದಿ. ಹಿಂದೂಸ್ತಾನ್ ಜಿಂದಾಬಾದ್. ದೆಹಲಿ ಪೊಲೀಸ್ ಜಿಂದಾಬಾದ್” ಎಂದು ಅವರು ಕೂಗಿದ್ದಾರೆ. ತೆಗೆದುಕೊಳ್ಳಿ ನಿಮ್ಮ ಆಜಾದಿ ಎಂದು ಆತ ಗುಂಡು ಹೊಡೆದಿರುವುದು ಎಲ್ಲಾ ಸೋಶಿಯಲ್ ಮೀಡಿಯಾದಲ್ಲಿ ವರದಿಗಳು ಮತ್ತು ವೀಡಿಯೊಗಳು ದಪ್ಪ ಅಕ್ಷರಗಳಲ್ಲಿ ಮತ್ತು ವೇಗವಾಗಿ ಹರಿದಾಡಿದರೂ, ರಿಪಬ್ಲಿಕ್ ಟಿವಿ ಮಾತ್ರ “ಜಾಮಿಯಾ ಪ್ರತಿಭಟನೆ ಹಿಂಸೆಗೆ ತಿರುಗಿದೆ, ಪ್ರತಿಭಟನಾಕಾರರು ಗನ್‌ ಬಳಸಿದ್ದಾರೆ” ಎಂದು ಸುಳ್ಳು ವರದಿ ಮಾಡಿದೆ.

ಚಾನೆಲ್‌ನ ರಾಜಕೀಯ ಸಂಪಾದಕಿ ಐಶ್ವರ್ಯ ಕಪೂರ್ ಅವರು ಹೀಗೆ ಹೇಳಿದರು: “ಸಿಎಎ ಹೆಸರಿನಲ್ಲಿ … ರಾಷ್ಟ್ರ ರಾಜಧಾನಿಯ ಬೀದಿಗಳಲ್ಲಿ ಹಗಲು ಹೊತ್ತಿನಲ್ಲಿ ಬಂದೂಕುಗಳನ್ನು ಬ್ರಾಂಡ್ ಮಾಡಲಾಗುತ್ತಿದೆ. ರಾಹುಲ್ ಗಾಂಧಿ ಮತ್ತು ಅರವಿಂದ್ ಕೇಜ್ರಿವಾಲ್ ಇದನ್ನು ಬೆಂಬಲಿಸಿದ್ದಾರೆ.”

“ಇದನ್ನು ಅನುಮತಿಸಬಾರದು” ಎಂದು ಐಶ್ವರ್ಯ ಕಪೂರ್ ಹೇಳಿದಾಗ, ರಿಪಬ್ಲಿಕ್ ವರದಿಗಾರ ದೂರವಾಣಿಯಲ್ಲಿ ಮಾತನಾಡುತ್ತಾ: “ಅದು ನಿಖರವಾಗಿ ವಿಷಯವಾಗಿದೆ … ಅವರಿಗೆ ಯಾವುದೇ ಪಶ್ಚಾತ್ತಾಪವಿಲ್ಲ. ಎಂದು ಸುಳ್ಳು ಹೇಳಿದ್ದಾನೆ. ಈ ಸಮಯದಲ್ಲಿ ಟಿವಿ ಪರದೆಯ ಸ್ಕ್ರೋಲ್‌ ಆಗುವ ಜಾಗದಲ್ಲಿ “ಜಾಮಿಯಾ ಪ್ರತಿಭಟನಾಕಾರರು ಬಂದೂಕುಗಳನ್ನು ಬಳಸುತ್ತಾರೆ” ಎಂದು ಪ್ರಸಾರವಾಗಿದೆ.

ಐಶ್ವರ್ಯ ಕಪೂರ್ ಪಟ್ಟುಹಿಡಿದು “ದೆಹಲಿಯು ಬೆದರಿಕೆಗೆ ಒಳಗಾಗುತ್ತಿಲ್ಲವೇ … ಸಿಎಎ ವಿರೋಧಿ ಹೆಸರಿನಲ್ಲಿ ಇದು ನಡೆಯುತ್ತಿದೆ.” ಎಂದು ಅರಚಾಡಿದ್ದಾರೆ. ನಂತರ ರಿಪಬ್ಲಿಕ್ ಅವರ ಸಿಬ್ಬಂದಿಯನ್ನು ವಿಶ್ವವಿದ್ಯಾನಿಲಯದಲ್ಲಿ ಕೂಡಿಹಾಕಲಾಗಿದೆ ಎಂದು ಸುಳ್ಳು ವರದಿ ಸಹ ಮಾಡಲಾಗಿದೆ.

ರಿಪಬ್ಲಿಕ್‌ ಟಿವಿಯ ಈ ನಡೆಯನ್ನು ಹಲವಾರು ಕನ್ನಡಿಗರು ಸಾಮಾಜಿಕ ಜಾಲತಾಣದಲ್ಲಿ ತೀವ್ರವಾಗಿ ಖಂಡಿಸಿದ್ದಾರೆ. ಅಬ್ಬಬ್ಬ.. ಈ ಹೈಟೆಕ್ ಮಲ್ಟಿ ಮೀಡಿಯ ಕಾಲದಲ್ಲೇ ಇಷ್ಟು ಬ್ಲಾಟಂಟ್ ಆಗಿ ಸುಳ್ಳು ಪ್ರಚಾರ ಮಾಡ್ತಾರಲ್ಲ!! ಇನ್ನು ನಮ್ಮ ತಾತ ಮುತ್ತಾತಂದಿರ ಕಾಲದಲ್ಲಿ ಇವರಿನ್ನೆಷ್ಟು ಊರು ಹಾಳು ಮಾಡಿರಬೇಕು ಲೆಕ್ಕ ಹಾಕ್ಕೊಳಿ. ಅಬ್ಬ ಇವರ ಕುತಂತ್ರವೇ!! ಎಂದು ಕತೆಗಾರ ದಯಾನಂದ ಟಿ.ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪತ್ರಕರ್ತರಾದ ದಿನೇಶ್‌ ಕುಮಾರ್ ದಿನೂರವರು 26/11 ಮುಂಬೈ ಮೇಲಿನ ಭಯೋತ್ಪಾದಕ ದಾಳಿಯನ್ನು ಮುಂಬೈನ ಜನರೇ ಮಾಡಿದ್ದು ಎಂದರೆ ಕೇಳಿದವರು ಮೆಟ್ಟಲ್ಲಿ ಹೊಡೆಯೋದಿಲ್ಲವೇ? ಇವತ್ತು ಅರ್ನಾಬ್ ಗೋಸ್ವಾಮಿ ಮಾಡಿರುವುದೂ ಅದನ್ನೇ. ಇಡೀ ದೇಶಕ್ಕೇ ಸತ್ಯ ಏನು ಅಂತ ಗೊತ್ತಿದೆ. ಆದರೂ ಈ ಗುಲಾಮ ಚಾನೆಲ್‌ #GunsInJamia ಎಂಬ ಹ್ಯಾಶ್ ಟ್ಯಾಗ್ ನಲ್ಲೇ ಹೇಸಿಗೆ ಮಾಡಿಕೊಳ್ಳುತ್ತಿದ್ದಾನೆ. ಇವನು ಹೇಡಿ ಮಾತ್ರವಲ್ಲ, ಪರಮನೀಚ. ಬೂಟು ನೆಕ್ಕುವುದು, ಧಣಿಗಳ ಅಮೇಧ್ಯ ತಿನ್ನುವುದು ಮಾಮೂಲಾದರೆ ಇದೆಲ್ಲ ಆಗುತ್ತದೆ. ಥೂ, ಇವನಿಗೆ ಬೀದಿಬೀದಿಯಲ್ಲೂ ಜನರು ಛೀಮಾರಿ ಹಾಕಬೇಕು ಎಂದು ಕಿಡಿಕಾರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...