Homeಮುಖಪುಟಜಾಮಿಯಾ ವಿದ್ಯಾರ್ಥಿ ಮೇಲೆ ಗುಂಡು: ಸುಳ್ಳು ಸುದ್ದಿ ಪ್ರಸಾರ ಮಾಡಿದ ರಿಪಬ್ಲಿಕ್‌ ಟವಿಗೆ ಛೀಮಾರಿ...

ಜಾಮಿಯಾ ವಿದ್ಯಾರ್ಥಿ ಮೇಲೆ ಗುಂಡು: ಸುಳ್ಳು ಸುದ್ದಿ ಪ್ರಸಾರ ಮಾಡಿದ ರಿಪಬ್ಲಿಕ್‌ ಟವಿಗೆ ಛೀಮಾರಿ…

"ಸಿಎಎ ಹೆಸರಿನಲ್ಲಿ ... ರಾಷ್ಟ್ರ ರಾಜಧಾನಿಯ ಬೀದಿಗಳಲ್ಲಿ ಹಗಲು ಹೊತ್ತಿನಲ್ಲಿ ಬಂದೂಕುಗಳನ್ನು ಬ್ರಾಂಡ್ ಮಾಡಲಾಗುತ್ತಿದೆ. ರಾಹುಲ್ ಗಾಂಧಿ ಮತ್ತು ಅರವಿಂದ್ ಕೇಜ್ರಿವಾಲ್ ಇದನ್ನು ಬೆಂಬಲಿಸಿದ್ದಾರೆ." ಎಂದು ಸುಳ್ಳು ಸುದ್ದಿ ಪ್ರಸಾರ ಮಾಡಲಾಗಿದೆ.

- Advertisement -
- Advertisement -

ಕೆಲವು ಗಂಟೆಗಳ ಹಿಂದೆಯಷ್ಟೆ ಸಿಎಎ ವಿರುದ್ಧ ದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಮೇಲೆ ಗೋಪಾಲ್‌ ಎಂಬ ಬಲಪಂಥೀಯ ಹುಡುಗನೊಬ್ಬ ಗುಂಡು ಹಾರಿಸಿ ಪೊಲೀಸರ ಅತಿಥಿಯಾಗಿರುವುದು ನಿಮಗೆಲ್ಲ ಗೊತ್ತಿರುವ ವಿಚಾರ. ಆದರೆ ಗುಂಡು ಹಾರಿಸಿದವರು ಜಾಮಿಯಾ ವಿದ್ಯಾರ್ಥಿಗಳು, ಪ್ರತಿಭಟನಾಕಾರರು ಹಿಂಸೆಗೆ ತಿರುಗಿದ್ದಾರೆ ಎಂದೆಲ್ಲಾ ರಿಪಬ್ಲಿಕ್‌ ಟಿವಿ ಸುಳ್ಳು ವರದಿ ಮಾಡಿ ಸಿಕ್ಕಿಬಿದ್ದಿದೆ.

ದೆಹಲಿ ಪೊಲೀಸರು ಬಂದೂಕುಧಾರಿಯನ್ನು ರಾಮ್‌ಭಕ್ತ್‌ ಗೋಪಾಲ್ ಶರ್ಮಾ ಎಂದು ಗುರುತಿಸಿದ್ದಾರೆ. “ಯೆ ಲೋ ಆಜಾದಿ. ಹಿಂದೂಸ್ತಾನ್ ಜಿಂದಾಬಾದ್. ದೆಹಲಿ ಪೊಲೀಸ್ ಜಿಂದಾಬಾದ್” ಎಂದು ಅವರು ಕೂಗಿದ್ದಾರೆ. ತೆಗೆದುಕೊಳ್ಳಿ ನಿಮ್ಮ ಆಜಾದಿ ಎಂದು ಆತ ಗುಂಡು ಹೊಡೆದಿರುವುದು ಎಲ್ಲಾ ಸೋಶಿಯಲ್ ಮೀಡಿಯಾದಲ್ಲಿ ವರದಿಗಳು ಮತ್ತು ವೀಡಿಯೊಗಳು ದಪ್ಪ ಅಕ್ಷರಗಳಲ್ಲಿ ಮತ್ತು ವೇಗವಾಗಿ ಹರಿದಾಡಿದರೂ, ರಿಪಬ್ಲಿಕ್ ಟಿವಿ ಮಾತ್ರ “ಜಾಮಿಯಾ ಪ್ರತಿಭಟನೆ ಹಿಂಸೆಗೆ ತಿರುಗಿದೆ, ಪ್ರತಿಭಟನಾಕಾರರು ಗನ್‌ ಬಳಸಿದ್ದಾರೆ” ಎಂದು ಸುಳ್ಳು ವರದಿ ಮಾಡಿದೆ.

ಚಾನೆಲ್‌ನ ರಾಜಕೀಯ ಸಂಪಾದಕಿ ಐಶ್ವರ್ಯ ಕಪೂರ್ ಅವರು ಹೀಗೆ ಹೇಳಿದರು: “ಸಿಎಎ ಹೆಸರಿನಲ್ಲಿ … ರಾಷ್ಟ್ರ ರಾಜಧಾನಿಯ ಬೀದಿಗಳಲ್ಲಿ ಹಗಲು ಹೊತ್ತಿನಲ್ಲಿ ಬಂದೂಕುಗಳನ್ನು ಬ್ರಾಂಡ್ ಮಾಡಲಾಗುತ್ತಿದೆ. ರಾಹುಲ್ ಗಾಂಧಿ ಮತ್ತು ಅರವಿಂದ್ ಕೇಜ್ರಿವಾಲ್ ಇದನ್ನು ಬೆಂಬಲಿಸಿದ್ದಾರೆ.”

“ಇದನ್ನು ಅನುಮತಿಸಬಾರದು” ಎಂದು ಐಶ್ವರ್ಯ ಕಪೂರ್ ಹೇಳಿದಾಗ, ರಿಪಬ್ಲಿಕ್ ವರದಿಗಾರ ದೂರವಾಣಿಯಲ್ಲಿ ಮಾತನಾಡುತ್ತಾ: “ಅದು ನಿಖರವಾಗಿ ವಿಷಯವಾಗಿದೆ … ಅವರಿಗೆ ಯಾವುದೇ ಪಶ್ಚಾತ್ತಾಪವಿಲ್ಲ. ಎಂದು ಸುಳ್ಳು ಹೇಳಿದ್ದಾನೆ. ಈ ಸಮಯದಲ್ಲಿ ಟಿವಿ ಪರದೆಯ ಸ್ಕ್ರೋಲ್‌ ಆಗುವ ಜಾಗದಲ್ಲಿ “ಜಾಮಿಯಾ ಪ್ರತಿಭಟನಾಕಾರರು ಬಂದೂಕುಗಳನ್ನು ಬಳಸುತ್ತಾರೆ” ಎಂದು ಪ್ರಸಾರವಾಗಿದೆ.

ಐಶ್ವರ್ಯ ಕಪೂರ್ ಪಟ್ಟುಹಿಡಿದು “ದೆಹಲಿಯು ಬೆದರಿಕೆಗೆ ಒಳಗಾಗುತ್ತಿಲ್ಲವೇ … ಸಿಎಎ ವಿರೋಧಿ ಹೆಸರಿನಲ್ಲಿ ಇದು ನಡೆಯುತ್ತಿದೆ.” ಎಂದು ಅರಚಾಡಿದ್ದಾರೆ. ನಂತರ ರಿಪಬ್ಲಿಕ್ ಅವರ ಸಿಬ್ಬಂದಿಯನ್ನು ವಿಶ್ವವಿದ್ಯಾನಿಲಯದಲ್ಲಿ ಕೂಡಿಹಾಕಲಾಗಿದೆ ಎಂದು ಸುಳ್ಳು ವರದಿ ಸಹ ಮಾಡಲಾಗಿದೆ.

ರಿಪಬ್ಲಿಕ್‌ ಟಿವಿಯ ಈ ನಡೆಯನ್ನು ಹಲವಾರು ಕನ್ನಡಿಗರು ಸಾಮಾಜಿಕ ಜಾಲತಾಣದಲ್ಲಿ ತೀವ್ರವಾಗಿ ಖಂಡಿಸಿದ್ದಾರೆ. ಅಬ್ಬಬ್ಬ.. ಈ ಹೈಟೆಕ್ ಮಲ್ಟಿ ಮೀಡಿಯ ಕಾಲದಲ್ಲೇ ಇಷ್ಟು ಬ್ಲಾಟಂಟ್ ಆಗಿ ಸುಳ್ಳು ಪ್ರಚಾರ ಮಾಡ್ತಾರಲ್ಲ!! ಇನ್ನು ನಮ್ಮ ತಾತ ಮುತ್ತಾತಂದಿರ ಕಾಲದಲ್ಲಿ ಇವರಿನ್ನೆಷ್ಟು ಊರು ಹಾಳು ಮಾಡಿರಬೇಕು ಲೆಕ್ಕ ಹಾಕ್ಕೊಳಿ. ಅಬ್ಬ ಇವರ ಕುತಂತ್ರವೇ!! ಎಂದು ಕತೆಗಾರ ದಯಾನಂದ ಟಿ.ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪತ್ರಕರ್ತರಾದ ದಿನೇಶ್‌ ಕುಮಾರ್ ದಿನೂರವರು 26/11 ಮುಂಬೈ ಮೇಲಿನ ಭಯೋತ್ಪಾದಕ ದಾಳಿಯನ್ನು ಮುಂಬೈನ ಜನರೇ ಮಾಡಿದ್ದು ಎಂದರೆ ಕೇಳಿದವರು ಮೆಟ್ಟಲ್ಲಿ ಹೊಡೆಯೋದಿಲ್ಲವೇ? ಇವತ್ತು ಅರ್ನಾಬ್ ಗೋಸ್ವಾಮಿ ಮಾಡಿರುವುದೂ ಅದನ್ನೇ. ಇಡೀ ದೇಶಕ್ಕೇ ಸತ್ಯ ಏನು ಅಂತ ಗೊತ್ತಿದೆ. ಆದರೂ ಈ ಗುಲಾಮ ಚಾನೆಲ್‌ #GunsInJamia ಎಂಬ ಹ್ಯಾಶ್ ಟ್ಯಾಗ್ ನಲ್ಲೇ ಹೇಸಿಗೆ ಮಾಡಿಕೊಳ್ಳುತ್ತಿದ್ದಾನೆ. ಇವನು ಹೇಡಿ ಮಾತ್ರವಲ್ಲ, ಪರಮನೀಚ. ಬೂಟು ನೆಕ್ಕುವುದು, ಧಣಿಗಳ ಅಮೇಧ್ಯ ತಿನ್ನುವುದು ಮಾಮೂಲಾದರೆ ಇದೆಲ್ಲ ಆಗುತ್ತದೆ. ಥೂ, ಇವನಿಗೆ ಬೀದಿಬೀದಿಯಲ್ಲೂ ಜನರು ಛೀಮಾರಿ ಹಾಕಬೇಕು ಎಂದು ಕಿಡಿಕಾರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...