Homeಮುಖಪುಟಜಾಮಿಯಾ ವಿದ್ಯಾರ್ಥಿ ಮೇಲೆ ಗುಂಡು: ಸುಳ್ಳು ಸುದ್ದಿ ಪ್ರಸಾರ ಮಾಡಿದ ರಿಪಬ್ಲಿಕ್‌ ಟವಿಗೆ ಛೀಮಾರಿ...

ಜಾಮಿಯಾ ವಿದ್ಯಾರ್ಥಿ ಮೇಲೆ ಗುಂಡು: ಸುಳ್ಳು ಸುದ್ದಿ ಪ್ರಸಾರ ಮಾಡಿದ ರಿಪಬ್ಲಿಕ್‌ ಟವಿಗೆ ಛೀಮಾರಿ…

"ಸಿಎಎ ಹೆಸರಿನಲ್ಲಿ ... ರಾಷ್ಟ್ರ ರಾಜಧಾನಿಯ ಬೀದಿಗಳಲ್ಲಿ ಹಗಲು ಹೊತ್ತಿನಲ್ಲಿ ಬಂದೂಕುಗಳನ್ನು ಬ್ರಾಂಡ್ ಮಾಡಲಾಗುತ್ತಿದೆ. ರಾಹುಲ್ ಗಾಂಧಿ ಮತ್ತು ಅರವಿಂದ್ ಕೇಜ್ರಿವಾಲ್ ಇದನ್ನು ಬೆಂಬಲಿಸಿದ್ದಾರೆ." ಎಂದು ಸುಳ್ಳು ಸುದ್ದಿ ಪ್ರಸಾರ ಮಾಡಲಾಗಿದೆ.

- Advertisement -
- Advertisement -

ಕೆಲವು ಗಂಟೆಗಳ ಹಿಂದೆಯಷ್ಟೆ ಸಿಎಎ ವಿರುದ್ಧ ದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಮೇಲೆ ಗೋಪಾಲ್‌ ಎಂಬ ಬಲಪಂಥೀಯ ಹುಡುಗನೊಬ್ಬ ಗುಂಡು ಹಾರಿಸಿ ಪೊಲೀಸರ ಅತಿಥಿಯಾಗಿರುವುದು ನಿಮಗೆಲ್ಲ ಗೊತ್ತಿರುವ ವಿಚಾರ. ಆದರೆ ಗುಂಡು ಹಾರಿಸಿದವರು ಜಾಮಿಯಾ ವಿದ್ಯಾರ್ಥಿಗಳು, ಪ್ರತಿಭಟನಾಕಾರರು ಹಿಂಸೆಗೆ ತಿರುಗಿದ್ದಾರೆ ಎಂದೆಲ್ಲಾ ರಿಪಬ್ಲಿಕ್‌ ಟಿವಿ ಸುಳ್ಳು ವರದಿ ಮಾಡಿ ಸಿಕ್ಕಿಬಿದ್ದಿದೆ.

ದೆಹಲಿ ಪೊಲೀಸರು ಬಂದೂಕುಧಾರಿಯನ್ನು ರಾಮ್‌ಭಕ್ತ್‌ ಗೋಪಾಲ್ ಶರ್ಮಾ ಎಂದು ಗುರುತಿಸಿದ್ದಾರೆ. “ಯೆ ಲೋ ಆಜಾದಿ. ಹಿಂದೂಸ್ತಾನ್ ಜಿಂದಾಬಾದ್. ದೆಹಲಿ ಪೊಲೀಸ್ ಜಿಂದಾಬಾದ್” ಎಂದು ಅವರು ಕೂಗಿದ್ದಾರೆ. ತೆಗೆದುಕೊಳ್ಳಿ ನಿಮ್ಮ ಆಜಾದಿ ಎಂದು ಆತ ಗುಂಡು ಹೊಡೆದಿರುವುದು ಎಲ್ಲಾ ಸೋಶಿಯಲ್ ಮೀಡಿಯಾದಲ್ಲಿ ವರದಿಗಳು ಮತ್ತು ವೀಡಿಯೊಗಳು ದಪ್ಪ ಅಕ್ಷರಗಳಲ್ಲಿ ಮತ್ತು ವೇಗವಾಗಿ ಹರಿದಾಡಿದರೂ, ರಿಪಬ್ಲಿಕ್ ಟಿವಿ ಮಾತ್ರ “ಜಾಮಿಯಾ ಪ್ರತಿಭಟನೆ ಹಿಂಸೆಗೆ ತಿರುಗಿದೆ, ಪ್ರತಿಭಟನಾಕಾರರು ಗನ್‌ ಬಳಸಿದ್ದಾರೆ” ಎಂದು ಸುಳ್ಳು ವರದಿ ಮಾಡಿದೆ.

ಚಾನೆಲ್‌ನ ರಾಜಕೀಯ ಸಂಪಾದಕಿ ಐಶ್ವರ್ಯ ಕಪೂರ್ ಅವರು ಹೀಗೆ ಹೇಳಿದರು: “ಸಿಎಎ ಹೆಸರಿನಲ್ಲಿ … ರಾಷ್ಟ್ರ ರಾಜಧಾನಿಯ ಬೀದಿಗಳಲ್ಲಿ ಹಗಲು ಹೊತ್ತಿನಲ್ಲಿ ಬಂದೂಕುಗಳನ್ನು ಬ್ರಾಂಡ್ ಮಾಡಲಾಗುತ್ತಿದೆ. ರಾಹುಲ್ ಗಾಂಧಿ ಮತ್ತು ಅರವಿಂದ್ ಕೇಜ್ರಿವಾಲ್ ಇದನ್ನು ಬೆಂಬಲಿಸಿದ್ದಾರೆ.”

“ಇದನ್ನು ಅನುಮತಿಸಬಾರದು” ಎಂದು ಐಶ್ವರ್ಯ ಕಪೂರ್ ಹೇಳಿದಾಗ, ರಿಪಬ್ಲಿಕ್ ವರದಿಗಾರ ದೂರವಾಣಿಯಲ್ಲಿ ಮಾತನಾಡುತ್ತಾ: “ಅದು ನಿಖರವಾಗಿ ವಿಷಯವಾಗಿದೆ … ಅವರಿಗೆ ಯಾವುದೇ ಪಶ್ಚಾತ್ತಾಪವಿಲ್ಲ. ಎಂದು ಸುಳ್ಳು ಹೇಳಿದ್ದಾನೆ. ಈ ಸಮಯದಲ್ಲಿ ಟಿವಿ ಪರದೆಯ ಸ್ಕ್ರೋಲ್‌ ಆಗುವ ಜಾಗದಲ್ಲಿ “ಜಾಮಿಯಾ ಪ್ರತಿಭಟನಾಕಾರರು ಬಂದೂಕುಗಳನ್ನು ಬಳಸುತ್ತಾರೆ” ಎಂದು ಪ್ರಸಾರವಾಗಿದೆ.

ಐಶ್ವರ್ಯ ಕಪೂರ್ ಪಟ್ಟುಹಿಡಿದು “ದೆಹಲಿಯು ಬೆದರಿಕೆಗೆ ಒಳಗಾಗುತ್ತಿಲ್ಲವೇ … ಸಿಎಎ ವಿರೋಧಿ ಹೆಸರಿನಲ್ಲಿ ಇದು ನಡೆಯುತ್ತಿದೆ.” ಎಂದು ಅರಚಾಡಿದ್ದಾರೆ. ನಂತರ ರಿಪಬ್ಲಿಕ್ ಅವರ ಸಿಬ್ಬಂದಿಯನ್ನು ವಿಶ್ವವಿದ್ಯಾನಿಲಯದಲ್ಲಿ ಕೂಡಿಹಾಕಲಾಗಿದೆ ಎಂದು ಸುಳ್ಳು ವರದಿ ಸಹ ಮಾಡಲಾಗಿದೆ.

ರಿಪಬ್ಲಿಕ್‌ ಟಿವಿಯ ಈ ನಡೆಯನ್ನು ಹಲವಾರು ಕನ್ನಡಿಗರು ಸಾಮಾಜಿಕ ಜಾಲತಾಣದಲ್ಲಿ ತೀವ್ರವಾಗಿ ಖಂಡಿಸಿದ್ದಾರೆ. ಅಬ್ಬಬ್ಬ.. ಈ ಹೈಟೆಕ್ ಮಲ್ಟಿ ಮೀಡಿಯ ಕಾಲದಲ್ಲೇ ಇಷ್ಟು ಬ್ಲಾಟಂಟ್ ಆಗಿ ಸುಳ್ಳು ಪ್ರಚಾರ ಮಾಡ್ತಾರಲ್ಲ!! ಇನ್ನು ನಮ್ಮ ತಾತ ಮುತ್ತಾತಂದಿರ ಕಾಲದಲ್ಲಿ ಇವರಿನ್ನೆಷ್ಟು ಊರು ಹಾಳು ಮಾಡಿರಬೇಕು ಲೆಕ್ಕ ಹಾಕ್ಕೊಳಿ. ಅಬ್ಬ ಇವರ ಕುತಂತ್ರವೇ!! ಎಂದು ಕತೆಗಾರ ದಯಾನಂದ ಟಿ.ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪತ್ರಕರ್ತರಾದ ದಿನೇಶ್‌ ಕುಮಾರ್ ದಿನೂರವರು 26/11 ಮುಂಬೈ ಮೇಲಿನ ಭಯೋತ್ಪಾದಕ ದಾಳಿಯನ್ನು ಮುಂಬೈನ ಜನರೇ ಮಾಡಿದ್ದು ಎಂದರೆ ಕೇಳಿದವರು ಮೆಟ್ಟಲ್ಲಿ ಹೊಡೆಯೋದಿಲ್ಲವೇ? ಇವತ್ತು ಅರ್ನಾಬ್ ಗೋಸ್ವಾಮಿ ಮಾಡಿರುವುದೂ ಅದನ್ನೇ. ಇಡೀ ದೇಶಕ್ಕೇ ಸತ್ಯ ಏನು ಅಂತ ಗೊತ್ತಿದೆ. ಆದರೂ ಈ ಗುಲಾಮ ಚಾನೆಲ್‌ #GunsInJamia ಎಂಬ ಹ್ಯಾಶ್ ಟ್ಯಾಗ್ ನಲ್ಲೇ ಹೇಸಿಗೆ ಮಾಡಿಕೊಳ್ಳುತ್ತಿದ್ದಾನೆ. ಇವನು ಹೇಡಿ ಮಾತ್ರವಲ್ಲ, ಪರಮನೀಚ. ಬೂಟು ನೆಕ್ಕುವುದು, ಧಣಿಗಳ ಅಮೇಧ್ಯ ತಿನ್ನುವುದು ಮಾಮೂಲಾದರೆ ಇದೆಲ್ಲ ಆಗುತ್ತದೆ. ಥೂ, ಇವನಿಗೆ ಬೀದಿಬೀದಿಯಲ್ಲೂ ಜನರು ಛೀಮಾರಿ ಹಾಕಬೇಕು ಎಂದು ಕಿಡಿಕಾರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...