Homeಮುಖಪುಟಸುಳ್ಳು ಸುದ್ದಿ ಪ್ರಕಟ: ಚಿತ್ರನಟ, ಬಿಜೆಪಿ ಮುಖಂಡ ಜಗ್ಗೇಶ್ ವಿರುದ್ಧ ದೂರು ದಾಖಲು

ಸುಳ್ಳು ಸುದ್ದಿ ಪ್ರಕಟ: ಚಿತ್ರನಟ, ಬಿಜೆಪಿ ಮುಖಂಡ ಜಗ್ಗೇಶ್ ವಿರುದ್ಧ ದೂರು ದಾಖಲು

ಈ ಕೂಡಲೇ ಜಗ್ಗೇಶ್‌ರವರು ತಮ್ಮ ದಿಕ್ಕುತಪ್ಪಿಸುವ ಟ್ವೀಟ್‌ ಅನ್ನು ಡಿಲೀಟ್ ಮಾಡಿ ರಾಜ್ಯದ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ಎಲ್ಲಾ ಜಿಲ್ಲೆಗಳಲ್ಲಿಯೂ ದೂರು ದಾಖಲಿಸಲಾಗುವುದು ಎಂದು ಸಂದೀಪ್ ಅಣಬೇರು ಎಚ್ಚರಿಕೆ ನೀಡಿದ್ದಾರೆ.

- Advertisement -
- Advertisement -

ತಮ್ಮ ವಿರುದ್ಧ ಅವಹೇಳನಕಾರಿ ಸುಳ್ಳು ಸುದ್ದಿ ಪ್ರಕಟಿಸಿದ್ದಾರೆ ಎಂದು ಆರೋಪಿಸಿ ಚಿತ್ರನಟ, ಬಿಜೆಪಿ ಮುಖಂಡ ಜಗ್ಗೇಶ್ ವಿರುದ್ಧ ಯೂತ್ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ರಾಜ್ಯ ಉಸ್ತುವಾರಿ ಸಂದೀಪ್ ಅಣಬೇರುರವರು ಬನಶಂಕರಿ ಪೊಲೀಸ್ ಠಾಣೆಯ ಸೈಬರ್ ಕ್ರೈಂ ವಿಭಾಗದಲ್ಲಿ ದೂರು ದಾಖಲಿಸಿದ್ದಾರೆ.

ಕಾರಣವೇನು?

ಕೊರೊನಾ ವೈರಸ್ ಸಾಂಕ್ರಾಮಿಕ ತಡೆಗಟ್ಟುವ ಹಿನ್ನೆಲೆಯಲ್ಲಿ ಶನಿವಾರದಿಂದ ರಾಜ್ಯದಲ್ಲಿ 33 ಗಂಟೆಗಳ ಲಾಕ್‌ಡೌನ್ ಕರ್ಫ್ಯೂ ವಿಧಿಸಿದ್ದು ಸರಿಯಷ್ಟೇ. ಈ ಹಿನ್ನೆಲೆಯಲ್ಲಿ ಬೆಂಗಳೂರು ತೊರೆದು ಸಾವಿರಾರು ಮಂದಿ ತಮ್ಮ ಹಳ್ಳಿಗಳಿಗೆ ಹಿಂತಿರುತ್ತಿದ್ದುದು ಸರಿಯಷ್ಟೇ. ಈ ಸಮಯದಲ್ಲಿ ಆನ್‌ಲೈನ್ ವಾಹಿನಿಯೊಂದು ಹಳ್ಳಿಗೆ ಹಿಂತಿರುಗುತ್ತಿದ್ದ ಜನರನ್ನು ಮಾತಾಡಿಸಿತ್ತು. ಆ ಸಂದರ್ಭದಲ್ಲಿ ಚಿಕ್ಕಮಗಳೂರಿನ ಕಿಶೋರ್ ಎಂಬ ಯುವಕನೊಬ್ಬ ಕೊರೊನಾ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರದ ವಿಫಲತೆಯನ್ನು ಪ್ರಶ್ನಿಸಿ ಮಾತನಾಡಿದ್ದನು.

ಕೊರೋನಾ ರೋಗ ನಿಯಂತ್ರಿಸುವಲ್ಲಿ ಸರ್ಕಾರ ವಿಫಲ ಆಗಿಲ್ಲ… ಜನ ಸಾಮಾನ್ಯರು ರಾಜ್ಯ ಬಿಜೆಪಿ ಸರಕಾರ ಆಡಳಿತದ ಬಗ್ಗೆ ಎನ್ ಹೇಳತ್ತಾ ಇದ್ದಾರೆ….ಬಿಜೆಪಿ ಸರಕಾರದ ಬಗ್ಗೆ ತಮ್ಮ ಅನಿಸಿಕೆ ತಿಳಿಸಿ ತಪ್ಪದೇ ನೋಡಿ ಶೇರ್ ಮಾಡಿ..

Posted by ರಾಜಶೇಖರ ಎಸ್ ಅಂಗಡಿ on Saturday, July 4, 2020

ಕೊರೊನಾ ಟೆಸ್ಟ್‌ಗೆ 4 ಸಾವಿರ ತಗುಲುತ್ತಿದೆ. ಬಡಜನರು ಹೇಗೆ ಭರಿಸಬೇಕೆಂದು ಪ್ರಶ್ನಿಸಿ ರಾಜ್ಯ ಸರ್ಕಾರವನ್ನು ಟೀಕಿಸಿದ್ದರು.

ಆ ಯುವಕ‌ ಕಾಂಗ್ರೆಸ್‌ನವನು ಎಂದು ಜಗ್ಗೇಶ್ ಆರೋಪಿಸಿದ್ದರು. “ಕಾಂಗ್ರೆಸ್ಸಿನ ಸೋಶಿಯಲ್ ಮಿಡಿಯಾದ ಉಸ್ತುವಾರಿಯೊಬ್ಬ ಜಿಪ್ಸಿ ವ್ಯಾನಿನಲ್ಲಿ ಬಂದು ತಾನು 15 ಸಾವಿರ ಸಂಬಳ ಪಡೆಯುವ ವಲಸೆ ಕಾರ್ಮಿಕನಂತೆ ಮಾತನಾಡಿ, ಬಿಜೆಪಿಯನ್ನು ತೆಗಳಿ, ಹಳ್ಳಿಗೆ ಹೋಗುವವನಂತೆ ನಟಿಸಿದ್ದಾರೆ” ಎಂದು ಬರೆದಿರುವ ಪೋಸ್ಟರ್‌ ಅನ್ನು ಜಗ್ಗೇಶ್ ತಮ್ಮ ಟ್ವಿಟ್ಟರ್‌ನಲ್ಲಿ ಪೋಸ್ಟ್ ಮಾಡಿದ್ದರು.

ಅಲ್ಲದೇ “ಮೊನ್ನೆ ಊರು ಬಿಟ್ಟು ಹೋಗುವವನು ನನಗೆ ಪಟ್ಟಣಹಾಗೂ ಭಾಜಪ ಸರ್ಕಾರ ಸಹವಾಸು ಸಾಕು ಊರಿಗೆ ಹೋಗಿ ಜಮೀನಿನಲ್ಲಿ ಜೀವನ ಮಾಡುವೆ ಎಂದುಬಿಟ್ಟ! ಅದು ವೈರಲ್ ಆಯಿತು! ಈಗ ನೋಡಿದರೆ ಆತ ವೆಲ್ ಪ್ಲಾನ್ಡ್! ಅನ್ಯ ಪಕ್ಷದ ಕಾರ್ಯಕರ್ತ! ಆದರೂ ಸಹೋದರ ಎಷ್ಟೇ ಯತ್ನಿಸಿದರು ನರೇಂದ್ರ ಮೋದಿ ಮತ್ತು ಬಿಜೆಪಿಯು ಜನರ ಮನಸ್ಸಿನಲ್ಲಿ ಜಾಗಪಡೆದಿದೆ. ಜೈ ಹಿಂದ್!” ಎಂದು ಜಗ್ಗೇಶ್ ಬರೆದಿದ್ದಾರೆ.

ವಿಡಿಯೋಗೂ ಕಾಂಗ್ರೆಸ್‌ಗೂ ಸಂಬಂಧವಿಲ್ಲ!

ಆ ವಿಡಿಯೋದಲ್ಲಿ ಮಾತನಾಡಿರುವ ವ್ಯಕ್ತಿ ಬೇರೆ, ನಾನು ಬೇರೆ. ಆದರೆ ಬಿಜೆಪಿ ಐಟಿ ಸೆಲ್ ಫೋಟೊಶಾಪ್ ಮಾಡಿ ನಾನೇ ಆ ವಿಡಿಯೋ ಮಾಡಿ ನಾಟಕ ಮಾಡಿದ್ದೇನೆ ಎಂದು ದುರುದ್ದೇಶಪೂರಿತ ಸುಳ್ಳು ಹರಡಿದ್ದಾರೆ. ಅದನ್ನೇ ಚಿತ್ರನಟ ಜಗ್ಗೇಶ್ ಟ್ವಿಟ್ಟರ್‌ನಲ್ಲಿ ಹಂಚಿಕೊಂಡು ಮಾನಹಾನಿ ಮಾಡಿದ್ದಾರೆ. ಅವರಿಗೆ ಪರಿಶೀಲಿಸುವ ಕನಿಷ್ಠ ಸಾಮಾನ್ಯ ಜ್ಞಾನವಿಲ್ಲ. ಬೇಕೆಂತಲೇ ಸುಳ್ಳು ಹರಡಿರುವುದಕ್ಕೆ ದೂರು ದಾಖಲಿಸಿದ್ದೇನೆ ಎಂದು ಯೂತ್ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ರಾಜ್ಯ ಉಸ್ತುವಾರಿ ಸಂದೀಪ್ ಅಣಬೇರು ತಿಳಿಸಿದ್ದಾರೆ.

ಜಗ್ಗೇಶ್ ವಿರುದ್ಧ ದೂರು ದಾಖಲಿಸಿದ ಯುವ ಕಾಂಗ್ರೆಸ್ ನಾಯಕ ಸಂದೀಪ್ಬೆಂಗಳೂರು: ಜಗ್ಗೇಶ್ ವಿರುದ್ಧ ಯುವ ಕಾಂಗ್ರೆಸ್ ನಾಯಕ ಸಂದೀಪ್ ಅಣಬೇರು…

Posted by Malgudi Express on Monday, July 6, 2020

ಈ ಕೂಡಲೇ ಜಗ್ಗೇಶ್‌ರವರು ತಮ್ಮ ದಿಕ್ಕುತಪ್ಪಿಸುವ ಟ್ವೀಟ್‌ ಅನ್ನು ಡಿಲೀಟ್ ಮಾಡಿ ರಾಜ್ಯದ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ಎಲ್ಲಾ ಜಿಲ್ಲೆಗಳಲ್ಲಿಯೂ ದೂರು ದಾಖಲಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಇಷ್ಟೆಲ್ಲಾ ಘಟನೆಗಳು ಜರುಗುತ್ತಿದ್ದಂತೆ ಮೂಲ ವಿಡಿಯೋದಲ್ಲಿ ಮಾತನಾಡಿದ್ದ ಯುವಕ ಕಿಶೋರ್ ಚಿಕ್ಕಮಗಳೂರಿನಿಂದಲೇ ಮತ್ತೊಂದು ವಿಡಿಯೋ ಮಾಡಿ ಪೋಸ್ಟ್ ಮಾಡಿದ್ದಾರೆ. ಆ ವಿಡಿಯೋದಲ್ಲಿ ಮಾತನಾಡಿರುವುದು ನಾನೇ. ಆ ಮಾತುಗಳಿಗೆ ನಾನು ಈಗಲೂ ಬದ್ಧನಾಗಿದ್ದೇನೆ. ವಾಸ್ತವ ಮರೆಸಲು ಬಿಜೆಪಿ ಐಟಿ ಸೆಲ್ ಸುಳ್ಳು ಸುದ್ದಿಗಳನ್ನು ಹರಡುತ್ತಿದೆ. ಜನರ ಜೀವನಕ್ಕಿಂತ ಅದಕ್ಕೆ ರಾಜಕೀಯ ಅಧಿಕಾರವೇ ಹೆಚ್ಚು ಎಂದು ಅವರು ವಿಡಿಯೋದಲ್ಲಿ ಟೀಕಿಸಿದ್ದಾರೆ.

ಕೀಶೋರ್ ಮಾಡಿರುವ ವಿಡಿಯೋ ನೋಡಿ.

ನಿಮ್ಮ ಕಣ್ಣುಗಳನ್ನು ಬಿಟ್ಟು ಈ ವಿಡಿಯೋ ನೋಡಿಕೊಳ್ಳಿ..Lingarajendra Kattimani

Posted by ರಾಜಶೇಖರ ಎಸ್ ಅಂಗಡಿ on Monday, July 6, 2020


ಇದನ್ನೂ ಓದಿ: ವೈದ್ಯಕೀಯ ಸಾಮಗ್ರಿಗಳ ಖರೀದಿಯಲ್ಲಿ ಅಕ್ರಮಗಳು ನಡೆದಿದೆ ಎಂಬುದು ಸುಳ್ಳು: ಯಡಿಯೂರಪ್ಪ 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...