Homeಮುಖಪುಟಸುಳ್ಳು ಸುದ್ದಿ ಪ್ರಕಟ: ಚಿತ್ರನಟ, ಬಿಜೆಪಿ ಮುಖಂಡ ಜಗ್ಗೇಶ್ ವಿರುದ್ಧ ದೂರು ದಾಖಲು

ಸುಳ್ಳು ಸುದ್ದಿ ಪ್ರಕಟ: ಚಿತ್ರನಟ, ಬಿಜೆಪಿ ಮುಖಂಡ ಜಗ್ಗೇಶ್ ವಿರುದ್ಧ ದೂರು ದಾಖಲು

ಈ ಕೂಡಲೇ ಜಗ್ಗೇಶ್‌ರವರು ತಮ್ಮ ದಿಕ್ಕುತಪ್ಪಿಸುವ ಟ್ವೀಟ್‌ ಅನ್ನು ಡಿಲೀಟ್ ಮಾಡಿ ರಾಜ್ಯದ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ಎಲ್ಲಾ ಜಿಲ್ಲೆಗಳಲ್ಲಿಯೂ ದೂರು ದಾಖಲಿಸಲಾಗುವುದು ಎಂದು ಸಂದೀಪ್ ಅಣಬೇರು ಎಚ್ಚರಿಕೆ ನೀಡಿದ್ದಾರೆ.

- Advertisement -
- Advertisement -

ತಮ್ಮ ವಿರುದ್ಧ ಅವಹೇಳನಕಾರಿ ಸುಳ್ಳು ಸುದ್ದಿ ಪ್ರಕಟಿಸಿದ್ದಾರೆ ಎಂದು ಆರೋಪಿಸಿ ಚಿತ್ರನಟ, ಬಿಜೆಪಿ ಮುಖಂಡ ಜಗ್ಗೇಶ್ ವಿರುದ್ಧ ಯೂತ್ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ರಾಜ್ಯ ಉಸ್ತುವಾರಿ ಸಂದೀಪ್ ಅಣಬೇರುರವರು ಬನಶಂಕರಿ ಪೊಲೀಸ್ ಠಾಣೆಯ ಸೈಬರ್ ಕ್ರೈಂ ವಿಭಾಗದಲ್ಲಿ ದೂರು ದಾಖಲಿಸಿದ್ದಾರೆ.

ಕಾರಣವೇನು?

ಕೊರೊನಾ ವೈರಸ್ ಸಾಂಕ್ರಾಮಿಕ ತಡೆಗಟ್ಟುವ ಹಿನ್ನೆಲೆಯಲ್ಲಿ ಶನಿವಾರದಿಂದ ರಾಜ್ಯದಲ್ಲಿ 33 ಗಂಟೆಗಳ ಲಾಕ್‌ಡೌನ್ ಕರ್ಫ್ಯೂ ವಿಧಿಸಿದ್ದು ಸರಿಯಷ್ಟೇ. ಈ ಹಿನ್ನೆಲೆಯಲ್ಲಿ ಬೆಂಗಳೂರು ತೊರೆದು ಸಾವಿರಾರು ಮಂದಿ ತಮ್ಮ ಹಳ್ಳಿಗಳಿಗೆ ಹಿಂತಿರುತ್ತಿದ್ದುದು ಸರಿಯಷ್ಟೇ. ಈ ಸಮಯದಲ್ಲಿ ಆನ್‌ಲೈನ್ ವಾಹಿನಿಯೊಂದು ಹಳ್ಳಿಗೆ ಹಿಂತಿರುಗುತ್ತಿದ್ದ ಜನರನ್ನು ಮಾತಾಡಿಸಿತ್ತು. ಆ ಸಂದರ್ಭದಲ್ಲಿ ಚಿಕ್ಕಮಗಳೂರಿನ ಕಿಶೋರ್ ಎಂಬ ಯುವಕನೊಬ್ಬ ಕೊರೊನಾ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರದ ವಿಫಲತೆಯನ್ನು ಪ್ರಶ್ನಿಸಿ ಮಾತನಾಡಿದ್ದನು.

ಕೊರೋನಾ ರೋಗ ನಿಯಂತ್ರಿಸುವಲ್ಲಿ ಸರ್ಕಾರ ವಿಫಲ ಆಗಿಲ್ಲ… ಜನ ಸಾಮಾನ್ಯರು ರಾಜ್ಯ ಬಿಜೆಪಿ ಸರಕಾರ ಆಡಳಿತದ ಬಗ್ಗೆ ಎನ್ ಹೇಳತ್ತಾ ಇದ್ದಾರೆ….ಬಿಜೆಪಿ ಸರಕಾರದ ಬಗ್ಗೆ ತಮ್ಮ ಅನಿಸಿಕೆ ತಿಳಿಸಿ ತಪ್ಪದೇ ನೋಡಿ ಶೇರ್ ಮಾಡಿ..

Posted by ರಾಜಶೇಖರ ಎಸ್ ಅಂಗಡಿ on Saturday, July 4, 2020

ಕೊರೊನಾ ಟೆಸ್ಟ್‌ಗೆ 4 ಸಾವಿರ ತಗುಲುತ್ತಿದೆ. ಬಡಜನರು ಹೇಗೆ ಭರಿಸಬೇಕೆಂದು ಪ್ರಶ್ನಿಸಿ ರಾಜ್ಯ ಸರ್ಕಾರವನ್ನು ಟೀಕಿಸಿದ್ದರು.

ಆ ಯುವಕ‌ ಕಾಂಗ್ರೆಸ್‌ನವನು ಎಂದು ಜಗ್ಗೇಶ್ ಆರೋಪಿಸಿದ್ದರು. “ಕಾಂಗ್ರೆಸ್ಸಿನ ಸೋಶಿಯಲ್ ಮಿಡಿಯಾದ ಉಸ್ತುವಾರಿಯೊಬ್ಬ ಜಿಪ್ಸಿ ವ್ಯಾನಿನಲ್ಲಿ ಬಂದು ತಾನು 15 ಸಾವಿರ ಸಂಬಳ ಪಡೆಯುವ ವಲಸೆ ಕಾರ್ಮಿಕನಂತೆ ಮಾತನಾಡಿ, ಬಿಜೆಪಿಯನ್ನು ತೆಗಳಿ, ಹಳ್ಳಿಗೆ ಹೋಗುವವನಂತೆ ನಟಿಸಿದ್ದಾರೆ” ಎಂದು ಬರೆದಿರುವ ಪೋಸ್ಟರ್‌ ಅನ್ನು ಜಗ್ಗೇಶ್ ತಮ್ಮ ಟ್ವಿಟ್ಟರ್‌ನಲ್ಲಿ ಪೋಸ್ಟ್ ಮಾಡಿದ್ದರು.

ಅಲ್ಲದೇ “ಮೊನ್ನೆ ಊರು ಬಿಟ್ಟು ಹೋಗುವವನು ನನಗೆ ಪಟ್ಟಣಹಾಗೂ ಭಾಜಪ ಸರ್ಕಾರ ಸಹವಾಸು ಸಾಕು ಊರಿಗೆ ಹೋಗಿ ಜಮೀನಿನಲ್ಲಿ ಜೀವನ ಮಾಡುವೆ ಎಂದುಬಿಟ್ಟ! ಅದು ವೈರಲ್ ಆಯಿತು! ಈಗ ನೋಡಿದರೆ ಆತ ವೆಲ್ ಪ್ಲಾನ್ಡ್! ಅನ್ಯ ಪಕ್ಷದ ಕಾರ್ಯಕರ್ತ! ಆದರೂ ಸಹೋದರ ಎಷ್ಟೇ ಯತ್ನಿಸಿದರು ನರೇಂದ್ರ ಮೋದಿ ಮತ್ತು ಬಿಜೆಪಿಯು ಜನರ ಮನಸ್ಸಿನಲ್ಲಿ ಜಾಗಪಡೆದಿದೆ. ಜೈ ಹಿಂದ್!” ಎಂದು ಜಗ್ಗೇಶ್ ಬರೆದಿದ್ದಾರೆ.

ವಿಡಿಯೋಗೂ ಕಾಂಗ್ರೆಸ್‌ಗೂ ಸಂಬಂಧವಿಲ್ಲ!

ಆ ವಿಡಿಯೋದಲ್ಲಿ ಮಾತನಾಡಿರುವ ವ್ಯಕ್ತಿ ಬೇರೆ, ನಾನು ಬೇರೆ. ಆದರೆ ಬಿಜೆಪಿ ಐಟಿ ಸೆಲ್ ಫೋಟೊಶಾಪ್ ಮಾಡಿ ನಾನೇ ಆ ವಿಡಿಯೋ ಮಾಡಿ ನಾಟಕ ಮಾಡಿದ್ದೇನೆ ಎಂದು ದುರುದ್ದೇಶಪೂರಿತ ಸುಳ್ಳು ಹರಡಿದ್ದಾರೆ. ಅದನ್ನೇ ಚಿತ್ರನಟ ಜಗ್ಗೇಶ್ ಟ್ವಿಟ್ಟರ್‌ನಲ್ಲಿ ಹಂಚಿಕೊಂಡು ಮಾನಹಾನಿ ಮಾಡಿದ್ದಾರೆ. ಅವರಿಗೆ ಪರಿಶೀಲಿಸುವ ಕನಿಷ್ಠ ಸಾಮಾನ್ಯ ಜ್ಞಾನವಿಲ್ಲ. ಬೇಕೆಂತಲೇ ಸುಳ್ಳು ಹರಡಿರುವುದಕ್ಕೆ ದೂರು ದಾಖಲಿಸಿದ್ದೇನೆ ಎಂದು ಯೂತ್ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ರಾಜ್ಯ ಉಸ್ತುವಾರಿ ಸಂದೀಪ್ ಅಣಬೇರು ತಿಳಿಸಿದ್ದಾರೆ.

ಜಗ್ಗೇಶ್ ವಿರುದ್ಧ ದೂರು ದಾಖಲಿಸಿದ ಯುವ ಕಾಂಗ್ರೆಸ್ ನಾಯಕ ಸಂದೀಪ್ಬೆಂಗಳೂರು: ಜಗ್ಗೇಶ್ ವಿರುದ್ಧ ಯುವ ಕಾಂಗ್ರೆಸ್ ನಾಯಕ ಸಂದೀಪ್ ಅಣಬೇರು…

Posted by Malgudi Express on Monday, July 6, 2020

ಈ ಕೂಡಲೇ ಜಗ್ಗೇಶ್‌ರವರು ತಮ್ಮ ದಿಕ್ಕುತಪ್ಪಿಸುವ ಟ್ವೀಟ್‌ ಅನ್ನು ಡಿಲೀಟ್ ಮಾಡಿ ರಾಜ್ಯದ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ಎಲ್ಲಾ ಜಿಲ್ಲೆಗಳಲ್ಲಿಯೂ ದೂರು ದಾಖಲಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಇಷ್ಟೆಲ್ಲಾ ಘಟನೆಗಳು ಜರುಗುತ್ತಿದ್ದಂತೆ ಮೂಲ ವಿಡಿಯೋದಲ್ಲಿ ಮಾತನಾಡಿದ್ದ ಯುವಕ ಕಿಶೋರ್ ಚಿಕ್ಕಮಗಳೂರಿನಿಂದಲೇ ಮತ್ತೊಂದು ವಿಡಿಯೋ ಮಾಡಿ ಪೋಸ್ಟ್ ಮಾಡಿದ್ದಾರೆ. ಆ ವಿಡಿಯೋದಲ್ಲಿ ಮಾತನಾಡಿರುವುದು ನಾನೇ. ಆ ಮಾತುಗಳಿಗೆ ನಾನು ಈಗಲೂ ಬದ್ಧನಾಗಿದ್ದೇನೆ. ವಾಸ್ತವ ಮರೆಸಲು ಬಿಜೆಪಿ ಐಟಿ ಸೆಲ್ ಸುಳ್ಳು ಸುದ್ದಿಗಳನ್ನು ಹರಡುತ್ತಿದೆ. ಜನರ ಜೀವನಕ್ಕಿಂತ ಅದಕ್ಕೆ ರಾಜಕೀಯ ಅಧಿಕಾರವೇ ಹೆಚ್ಚು ಎಂದು ಅವರು ವಿಡಿಯೋದಲ್ಲಿ ಟೀಕಿಸಿದ್ದಾರೆ.

ಕೀಶೋರ್ ಮಾಡಿರುವ ವಿಡಿಯೋ ನೋಡಿ.

ನಿಮ್ಮ ಕಣ್ಣುಗಳನ್ನು ಬಿಟ್ಟು ಈ ವಿಡಿಯೋ ನೋಡಿಕೊಳ್ಳಿ..Lingarajendra Kattimani

Posted by ರಾಜಶೇಖರ ಎಸ್ ಅಂಗಡಿ on Monday, July 6, 2020


ಇದನ್ನೂ ಓದಿ: ವೈದ್ಯಕೀಯ ಸಾಮಗ್ರಿಗಳ ಖರೀದಿಯಲ್ಲಿ ಅಕ್ರಮಗಳು ನಡೆದಿದೆ ಎಂಬುದು ಸುಳ್ಳು: ಯಡಿಯೂರಪ್ಪ 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...