Homeಮುಖಪುಟಸುಳ್ಳು ಸುದ್ದಿ ಪ್ರಕಟ: ಚಿತ್ರನಟ, ಬಿಜೆಪಿ ಮುಖಂಡ ಜಗ್ಗೇಶ್ ವಿರುದ್ಧ ದೂರು ದಾಖಲು

ಸುಳ್ಳು ಸುದ್ದಿ ಪ್ರಕಟ: ಚಿತ್ರನಟ, ಬಿಜೆಪಿ ಮುಖಂಡ ಜಗ್ಗೇಶ್ ವಿರುದ್ಧ ದೂರು ದಾಖಲು

ಈ ಕೂಡಲೇ ಜಗ್ಗೇಶ್‌ರವರು ತಮ್ಮ ದಿಕ್ಕುತಪ್ಪಿಸುವ ಟ್ವೀಟ್‌ ಅನ್ನು ಡಿಲೀಟ್ ಮಾಡಿ ರಾಜ್ಯದ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ಎಲ್ಲಾ ಜಿಲ್ಲೆಗಳಲ್ಲಿಯೂ ದೂರು ದಾಖಲಿಸಲಾಗುವುದು ಎಂದು ಸಂದೀಪ್ ಅಣಬೇರು ಎಚ್ಚರಿಕೆ ನೀಡಿದ್ದಾರೆ.

- Advertisement -
- Advertisement -

ತಮ್ಮ ವಿರುದ್ಧ ಅವಹೇಳನಕಾರಿ ಸುಳ್ಳು ಸುದ್ದಿ ಪ್ರಕಟಿಸಿದ್ದಾರೆ ಎಂದು ಆರೋಪಿಸಿ ಚಿತ್ರನಟ, ಬಿಜೆಪಿ ಮುಖಂಡ ಜಗ್ಗೇಶ್ ವಿರುದ್ಧ ಯೂತ್ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ರಾಜ್ಯ ಉಸ್ತುವಾರಿ ಸಂದೀಪ್ ಅಣಬೇರುರವರು ಬನಶಂಕರಿ ಪೊಲೀಸ್ ಠಾಣೆಯ ಸೈಬರ್ ಕ್ರೈಂ ವಿಭಾಗದಲ್ಲಿ ದೂರು ದಾಖಲಿಸಿದ್ದಾರೆ.

ಕಾರಣವೇನು?

ಕೊರೊನಾ ವೈರಸ್ ಸಾಂಕ್ರಾಮಿಕ ತಡೆಗಟ್ಟುವ ಹಿನ್ನೆಲೆಯಲ್ಲಿ ಶನಿವಾರದಿಂದ ರಾಜ್ಯದಲ್ಲಿ 33 ಗಂಟೆಗಳ ಲಾಕ್‌ಡೌನ್ ಕರ್ಫ್ಯೂ ವಿಧಿಸಿದ್ದು ಸರಿಯಷ್ಟೇ. ಈ ಹಿನ್ನೆಲೆಯಲ್ಲಿ ಬೆಂಗಳೂರು ತೊರೆದು ಸಾವಿರಾರು ಮಂದಿ ತಮ್ಮ ಹಳ್ಳಿಗಳಿಗೆ ಹಿಂತಿರುತ್ತಿದ್ದುದು ಸರಿಯಷ್ಟೇ. ಈ ಸಮಯದಲ್ಲಿ ಆನ್‌ಲೈನ್ ವಾಹಿನಿಯೊಂದು ಹಳ್ಳಿಗೆ ಹಿಂತಿರುಗುತ್ತಿದ್ದ ಜನರನ್ನು ಮಾತಾಡಿಸಿತ್ತು. ಆ ಸಂದರ್ಭದಲ್ಲಿ ಚಿಕ್ಕಮಗಳೂರಿನ ಕಿಶೋರ್ ಎಂಬ ಯುವಕನೊಬ್ಬ ಕೊರೊನಾ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರದ ವಿಫಲತೆಯನ್ನು ಪ್ರಶ್ನಿಸಿ ಮಾತನಾಡಿದ್ದನು.

ಕೊರೋನಾ ರೋಗ ನಿಯಂತ್ರಿಸುವಲ್ಲಿ ಸರ್ಕಾರ ವಿಫಲ ಆಗಿಲ್ಲ… ಜನ ಸಾಮಾನ್ಯರು ರಾಜ್ಯ ಬಿಜೆಪಿ ಸರಕಾರ ಆಡಳಿತದ ಬಗ್ಗೆ ಎನ್ ಹೇಳತ್ತಾ ಇದ್ದಾರೆ….ಬಿಜೆಪಿ ಸರಕಾರದ ಬಗ್ಗೆ ತಮ್ಮ ಅನಿಸಿಕೆ ತಿಳಿಸಿ ತಪ್ಪದೇ ನೋಡಿ ಶೇರ್ ಮಾಡಿ..

Posted by ರಾಜಶೇಖರ ಎಸ್ ಅಂಗಡಿ on Saturday, July 4, 2020

ಕೊರೊನಾ ಟೆಸ್ಟ್‌ಗೆ 4 ಸಾವಿರ ತಗುಲುತ್ತಿದೆ. ಬಡಜನರು ಹೇಗೆ ಭರಿಸಬೇಕೆಂದು ಪ್ರಶ್ನಿಸಿ ರಾಜ್ಯ ಸರ್ಕಾರವನ್ನು ಟೀಕಿಸಿದ್ದರು.

ಆ ಯುವಕ‌ ಕಾಂಗ್ರೆಸ್‌ನವನು ಎಂದು ಜಗ್ಗೇಶ್ ಆರೋಪಿಸಿದ್ದರು. “ಕಾಂಗ್ರೆಸ್ಸಿನ ಸೋಶಿಯಲ್ ಮಿಡಿಯಾದ ಉಸ್ತುವಾರಿಯೊಬ್ಬ ಜಿಪ್ಸಿ ವ್ಯಾನಿನಲ್ಲಿ ಬಂದು ತಾನು 15 ಸಾವಿರ ಸಂಬಳ ಪಡೆಯುವ ವಲಸೆ ಕಾರ್ಮಿಕನಂತೆ ಮಾತನಾಡಿ, ಬಿಜೆಪಿಯನ್ನು ತೆಗಳಿ, ಹಳ್ಳಿಗೆ ಹೋಗುವವನಂತೆ ನಟಿಸಿದ್ದಾರೆ” ಎಂದು ಬರೆದಿರುವ ಪೋಸ್ಟರ್‌ ಅನ್ನು ಜಗ್ಗೇಶ್ ತಮ್ಮ ಟ್ವಿಟ್ಟರ್‌ನಲ್ಲಿ ಪೋಸ್ಟ್ ಮಾಡಿದ್ದರು.

ಅಲ್ಲದೇ “ಮೊನ್ನೆ ಊರು ಬಿಟ್ಟು ಹೋಗುವವನು ನನಗೆ ಪಟ್ಟಣಹಾಗೂ ಭಾಜಪ ಸರ್ಕಾರ ಸಹವಾಸು ಸಾಕು ಊರಿಗೆ ಹೋಗಿ ಜಮೀನಿನಲ್ಲಿ ಜೀವನ ಮಾಡುವೆ ಎಂದುಬಿಟ್ಟ! ಅದು ವೈರಲ್ ಆಯಿತು! ಈಗ ನೋಡಿದರೆ ಆತ ವೆಲ್ ಪ್ಲಾನ್ಡ್! ಅನ್ಯ ಪಕ್ಷದ ಕಾರ್ಯಕರ್ತ! ಆದರೂ ಸಹೋದರ ಎಷ್ಟೇ ಯತ್ನಿಸಿದರು ನರೇಂದ್ರ ಮೋದಿ ಮತ್ತು ಬಿಜೆಪಿಯು ಜನರ ಮನಸ್ಸಿನಲ್ಲಿ ಜಾಗಪಡೆದಿದೆ. ಜೈ ಹಿಂದ್!” ಎಂದು ಜಗ್ಗೇಶ್ ಬರೆದಿದ್ದಾರೆ.

ವಿಡಿಯೋಗೂ ಕಾಂಗ್ರೆಸ್‌ಗೂ ಸಂಬಂಧವಿಲ್ಲ!

ಆ ವಿಡಿಯೋದಲ್ಲಿ ಮಾತನಾಡಿರುವ ವ್ಯಕ್ತಿ ಬೇರೆ, ನಾನು ಬೇರೆ. ಆದರೆ ಬಿಜೆಪಿ ಐಟಿ ಸೆಲ್ ಫೋಟೊಶಾಪ್ ಮಾಡಿ ನಾನೇ ಆ ವಿಡಿಯೋ ಮಾಡಿ ನಾಟಕ ಮಾಡಿದ್ದೇನೆ ಎಂದು ದುರುದ್ದೇಶಪೂರಿತ ಸುಳ್ಳು ಹರಡಿದ್ದಾರೆ. ಅದನ್ನೇ ಚಿತ್ರನಟ ಜಗ್ಗೇಶ್ ಟ್ವಿಟ್ಟರ್‌ನಲ್ಲಿ ಹಂಚಿಕೊಂಡು ಮಾನಹಾನಿ ಮಾಡಿದ್ದಾರೆ. ಅವರಿಗೆ ಪರಿಶೀಲಿಸುವ ಕನಿಷ್ಠ ಸಾಮಾನ್ಯ ಜ್ಞಾನವಿಲ್ಲ. ಬೇಕೆಂತಲೇ ಸುಳ್ಳು ಹರಡಿರುವುದಕ್ಕೆ ದೂರು ದಾಖಲಿಸಿದ್ದೇನೆ ಎಂದು ಯೂತ್ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ರಾಜ್ಯ ಉಸ್ತುವಾರಿ ಸಂದೀಪ್ ಅಣಬೇರು ತಿಳಿಸಿದ್ದಾರೆ.

ಜಗ್ಗೇಶ್ ವಿರುದ್ಧ ದೂರು ದಾಖಲಿಸಿದ ಯುವ ಕಾಂಗ್ರೆಸ್ ನಾಯಕ ಸಂದೀಪ್ಬೆಂಗಳೂರು: ಜಗ್ಗೇಶ್ ವಿರುದ್ಧ ಯುವ ಕಾಂಗ್ರೆಸ್ ನಾಯಕ ಸಂದೀಪ್ ಅಣಬೇರು…

Posted by Malgudi Express on Monday, July 6, 2020

ಈ ಕೂಡಲೇ ಜಗ್ಗೇಶ್‌ರವರು ತಮ್ಮ ದಿಕ್ಕುತಪ್ಪಿಸುವ ಟ್ವೀಟ್‌ ಅನ್ನು ಡಿಲೀಟ್ ಮಾಡಿ ರಾಜ್ಯದ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ಎಲ್ಲಾ ಜಿಲ್ಲೆಗಳಲ್ಲಿಯೂ ದೂರು ದಾಖಲಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಇಷ್ಟೆಲ್ಲಾ ಘಟನೆಗಳು ಜರುಗುತ್ತಿದ್ದಂತೆ ಮೂಲ ವಿಡಿಯೋದಲ್ಲಿ ಮಾತನಾಡಿದ್ದ ಯುವಕ ಕಿಶೋರ್ ಚಿಕ್ಕಮಗಳೂರಿನಿಂದಲೇ ಮತ್ತೊಂದು ವಿಡಿಯೋ ಮಾಡಿ ಪೋಸ್ಟ್ ಮಾಡಿದ್ದಾರೆ. ಆ ವಿಡಿಯೋದಲ್ಲಿ ಮಾತನಾಡಿರುವುದು ನಾನೇ. ಆ ಮಾತುಗಳಿಗೆ ನಾನು ಈಗಲೂ ಬದ್ಧನಾಗಿದ್ದೇನೆ. ವಾಸ್ತವ ಮರೆಸಲು ಬಿಜೆಪಿ ಐಟಿ ಸೆಲ್ ಸುಳ್ಳು ಸುದ್ದಿಗಳನ್ನು ಹರಡುತ್ತಿದೆ. ಜನರ ಜೀವನಕ್ಕಿಂತ ಅದಕ್ಕೆ ರಾಜಕೀಯ ಅಧಿಕಾರವೇ ಹೆಚ್ಚು ಎಂದು ಅವರು ವಿಡಿಯೋದಲ್ಲಿ ಟೀಕಿಸಿದ್ದಾರೆ.

ಕೀಶೋರ್ ಮಾಡಿರುವ ವಿಡಿಯೋ ನೋಡಿ.

ನಿಮ್ಮ ಕಣ್ಣುಗಳನ್ನು ಬಿಟ್ಟು ಈ ವಿಡಿಯೋ ನೋಡಿಕೊಳ್ಳಿ..Lingarajendra Kattimani

Posted by ರಾಜಶೇಖರ ಎಸ್ ಅಂಗಡಿ on Monday, July 6, 2020


ಇದನ್ನೂ ಓದಿ: ವೈದ್ಯಕೀಯ ಸಾಮಗ್ರಿಗಳ ಖರೀದಿಯಲ್ಲಿ ಅಕ್ರಮಗಳು ನಡೆದಿದೆ ಎಂಬುದು ಸುಳ್ಳು: ಯಡಿಯೂರಪ್ಪ 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...