Homeಮುಖಪುಟಸುಳ್ಳು ಸುದ್ದಿ ಪ್ರಕಟ: ಚಿತ್ರನಟ, ಬಿಜೆಪಿ ಮುಖಂಡ ಜಗ್ಗೇಶ್ ವಿರುದ್ಧ ದೂರು ದಾಖಲು

ಸುಳ್ಳು ಸುದ್ದಿ ಪ್ರಕಟ: ಚಿತ್ರನಟ, ಬಿಜೆಪಿ ಮುಖಂಡ ಜಗ್ಗೇಶ್ ವಿರುದ್ಧ ದೂರು ದಾಖಲು

ಈ ಕೂಡಲೇ ಜಗ್ಗೇಶ್‌ರವರು ತಮ್ಮ ದಿಕ್ಕುತಪ್ಪಿಸುವ ಟ್ವೀಟ್‌ ಅನ್ನು ಡಿಲೀಟ್ ಮಾಡಿ ರಾಜ್ಯದ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ಎಲ್ಲಾ ಜಿಲ್ಲೆಗಳಲ್ಲಿಯೂ ದೂರು ದಾಖಲಿಸಲಾಗುವುದು ಎಂದು ಸಂದೀಪ್ ಅಣಬೇರು ಎಚ್ಚರಿಕೆ ನೀಡಿದ್ದಾರೆ.

- Advertisement -
- Advertisement -

ತಮ್ಮ ವಿರುದ್ಧ ಅವಹೇಳನಕಾರಿ ಸುಳ್ಳು ಸುದ್ದಿ ಪ್ರಕಟಿಸಿದ್ದಾರೆ ಎಂದು ಆರೋಪಿಸಿ ಚಿತ್ರನಟ, ಬಿಜೆಪಿ ಮುಖಂಡ ಜಗ್ಗೇಶ್ ವಿರುದ್ಧ ಯೂತ್ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ರಾಜ್ಯ ಉಸ್ತುವಾರಿ ಸಂದೀಪ್ ಅಣಬೇರುರವರು ಬನಶಂಕರಿ ಪೊಲೀಸ್ ಠಾಣೆಯ ಸೈಬರ್ ಕ್ರೈಂ ವಿಭಾಗದಲ್ಲಿ ದೂರು ದಾಖಲಿಸಿದ್ದಾರೆ.

ಕಾರಣವೇನು?

ಕೊರೊನಾ ವೈರಸ್ ಸಾಂಕ್ರಾಮಿಕ ತಡೆಗಟ್ಟುವ ಹಿನ್ನೆಲೆಯಲ್ಲಿ ಶನಿವಾರದಿಂದ ರಾಜ್ಯದಲ್ಲಿ 33 ಗಂಟೆಗಳ ಲಾಕ್‌ಡೌನ್ ಕರ್ಫ್ಯೂ ವಿಧಿಸಿದ್ದು ಸರಿಯಷ್ಟೇ. ಈ ಹಿನ್ನೆಲೆಯಲ್ಲಿ ಬೆಂಗಳೂರು ತೊರೆದು ಸಾವಿರಾರು ಮಂದಿ ತಮ್ಮ ಹಳ್ಳಿಗಳಿಗೆ ಹಿಂತಿರುತ್ತಿದ್ದುದು ಸರಿಯಷ್ಟೇ. ಈ ಸಮಯದಲ್ಲಿ ಆನ್‌ಲೈನ್ ವಾಹಿನಿಯೊಂದು ಹಳ್ಳಿಗೆ ಹಿಂತಿರುಗುತ್ತಿದ್ದ ಜನರನ್ನು ಮಾತಾಡಿಸಿತ್ತು. ಆ ಸಂದರ್ಭದಲ್ಲಿ ಚಿಕ್ಕಮಗಳೂರಿನ ಕಿಶೋರ್ ಎಂಬ ಯುವಕನೊಬ್ಬ ಕೊರೊನಾ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರದ ವಿಫಲತೆಯನ್ನು ಪ್ರಶ್ನಿಸಿ ಮಾತನಾಡಿದ್ದನು.

ಕೊರೋನಾ ರೋಗ ನಿಯಂತ್ರಿಸುವಲ್ಲಿ ಸರ್ಕಾರ ವಿಫಲ ಆಗಿಲ್ಲ… ಜನ ಸಾಮಾನ್ಯರು ರಾಜ್ಯ ಬಿಜೆಪಿ ಸರಕಾರ ಆಡಳಿತದ ಬಗ್ಗೆ ಎನ್ ಹೇಳತ್ತಾ ಇದ್ದಾರೆ….ಬಿಜೆಪಿ ಸರಕಾರದ ಬಗ್ಗೆ ತಮ್ಮ ಅನಿಸಿಕೆ ತಿಳಿಸಿ ತಪ್ಪದೇ ನೋಡಿ ಶೇರ್ ಮಾಡಿ..

Posted by ರಾಜಶೇಖರ ಎಸ್ ಅಂಗಡಿ on Saturday, July 4, 2020

ಕೊರೊನಾ ಟೆಸ್ಟ್‌ಗೆ 4 ಸಾವಿರ ತಗುಲುತ್ತಿದೆ. ಬಡಜನರು ಹೇಗೆ ಭರಿಸಬೇಕೆಂದು ಪ್ರಶ್ನಿಸಿ ರಾಜ್ಯ ಸರ್ಕಾರವನ್ನು ಟೀಕಿಸಿದ್ದರು.

ಆ ಯುವಕ‌ ಕಾಂಗ್ರೆಸ್‌ನವನು ಎಂದು ಜಗ್ಗೇಶ್ ಆರೋಪಿಸಿದ್ದರು. “ಕಾಂಗ್ರೆಸ್ಸಿನ ಸೋಶಿಯಲ್ ಮಿಡಿಯಾದ ಉಸ್ತುವಾರಿಯೊಬ್ಬ ಜಿಪ್ಸಿ ವ್ಯಾನಿನಲ್ಲಿ ಬಂದು ತಾನು 15 ಸಾವಿರ ಸಂಬಳ ಪಡೆಯುವ ವಲಸೆ ಕಾರ್ಮಿಕನಂತೆ ಮಾತನಾಡಿ, ಬಿಜೆಪಿಯನ್ನು ತೆಗಳಿ, ಹಳ್ಳಿಗೆ ಹೋಗುವವನಂತೆ ನಟಿಸಿದ್ದಾರೆ” ಎಂದು ಬರೆದಿರುವ ಪೋಸ್ಟರ್‌ ಅನ್ನು ಜಗ್ಗೇಶ್ ತಮ್ಮ ಟ್ವಿಟ್ಟರ್‌ನಲ್ಲಿ ಪೋಸ್ಟ್ ಮಾಡಿದ್ದರು.

ಅಲ್ಲದೇ “ಮೊನ್ನೆ ಊರು ಬಿಟ್ಟು ಹೋಗುವವನು ನನಗೆ ಪಟ್ಟಣಹಾಗೂ ಭಾಜಪ ಸರ್ಕಾರ ಸಹವಾಸು ಸಾಕು ಊರಿಗೆ ಹೋಗಿ ಜಮೀನಿನಲ್ಲಿ ಜೀವನ ಮಾಡುವೆ ಎಂದುಬಿಟ್ಟ! ಅದು ವೈರಲ್ ಆಯಿತು! ಈಗ ನೋಡಿದರೆ ಆತ ವೆಲ್ ಪ್ಲಾನ್ಡ್! ಅನ್ಯ ಪಕ್ಷದ ಕಾರ್ಯಕರ್ತ! ಆದರೂ ಸಹೋದರ ಎಷ್ಟೇ ಯತ್ನಿಸಿದರು ನರೇಂದ್ರ ಮೋದಿ ಮತ್ತು ಬಿಜೆಪಿಯು ಜನರ ಮನಸ್ಸಿನಲ್ಲಿ ಜಾಗಪಡೆದಿದೆ. ಜೈ ಹಿಂದ್!” ಎಂದು ಜಗ್ಗೇಶ್ ಬರೆದಿದ್ದಾರೆ.

ವಿಡಿಯೋಗೂ ಕಾಂಗ್ರೆಸ್‌ಗೂ ಸಂಬಂಧವಿಲ್ಲ!

ಆ ವಿಡಿಯೋದಲ್ಲಿ ಮಾತನಾಡಿರುವ ವ್ಯಕ್ತಿ ಬೇರೆ, ನಾನು ಬೇರೆ. ಆದರೆ ಬಿಜೆಪಿ ಐಟಿ ಸೆಲ್ ಫೋಟೊಶಾಪ್ ಮಾಡಿ ನಾನೇ ಆ ವಿಡಿಯೋ ಮಾಡಿ ನಾಟಕ ಮಾಡಿದ್ದೇನೆ ಎಂದು ದುರುದ್ದೇಶಪೂರಿತ ಸುಳ್ಳು ಹರಡಿದ್ದಾರೆ. ಅದನ್ನೇ ಚಿತ್ರನಟ ಜಗ್ಗೇಶ್ ಟ್ವಿಟ್ಟರ್‌ನಲ್ಲಿ ಹಂಚಿಕೊಂಡು ಮಾನಹಾನಿ ಮಾಡಿದ್ದಾರೆ. ಅವರಿಗೆ ಪರಿಶೀಲಿಸುವ ಕನಿಷ್ಠ ಸಾಮಾನ್ಯ ಜ್ಞಾನವಿಲ್ಲ. ಬೇಕೆಂತಲೇ ಸುಳ್ಳು ಹರಡಿರುವುದಕ್ಕೆ ದೂರು ದಾಖಲಿಸಿದ್ದೇನೆ ಎಂದು ಯೂತ್ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ರಾಜ್ಯ ಉಸ್ತುವಾರಿ ಸಂದೀಪ್ ಅಣಬೇರು ತಿಳಿಸಿದ್ದಾರೆ.

ಜಗ್ಗೇಶ್ ವಿರುದ್ಧ ದೂರು ದಾಖಲಿಸಿದ ಯುವ ಕಾಂಗ್ರೆಸ್ ನಾಯಕ ಸಂದೀಪ್ಬೆಂಗಳೂರು: ಜಗ್ಗೇಶ್ ವಿರುದ್ಧ ಯುವ ಕಾಂಗ್ರೆಸ್ ನಾಯಕ ಸಂದೀಪ್ ಅಣಬೇರು…

Posted by Malgudi Express on Monday, July 6, 2020

ಈ ಕೂಡಲೇ ಜಗ್ಗೇಶ್‌ರವರು ತಮ್ಮ ದಿಕ್ಕುತಪ್ಪಿಸುವ ಟ್ವೀಟ್‌ ಅನ್ನು ಡಿಲೀಟ್ ಮಾಡಿ ರಾಜ್ಯದ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ಎಲ್ಲಾ ಜಿಲ್ಲೆಗಳಲ್ಲಿಯೂ ದೂರು ದಾಖಲಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಇಷ್ಟೆಲ್ಲಾ ಘಟನೆಗಳು ಜರುಗುತ್ತಿದ್ದಂತೆ ಮೂಲ ವಿಡಿಯೋದಲ್ಲಿ ಮಾತನಾಡಿದ್ದ ಯುವಕ ಕಿಶೋರ್ ಚಿಕ್ಕಮಗಳೂರಿನಿಂದಲೇ ಮತ್ತೊಂದು ವಿಡಿಯೋ ಮಾಡಿ ಪೋಸ್ಟ್ ಮಾಡಿದ್ದಾರೆ. ಆ ವಿಡಿಯೋದಲ್ಲಿ ಮಾತನಾಡಿರುವುದು ನಾನೇ. ಆ ಮಾತುಗಳಿಗೆ ನಾನು ಈಗಲೂ ಬದ್ಧನಾಗಿದ್ದೇನೆ. ವಾಸ್ತವ ಮರೆಸಲು ಬಿಜೆಪಿ ಐಟಿ ಸೆಲ್ ಸುಳ್ಳು ಸುದ್ದಿಗಳನ್ನು ಹರಡುತ್ತಿದೆ. ಜನರ ಜೀವನಕ್ಕಿಂತ ಅದಕ್ಕೆ ರಾಜಕೀಯ ಅಧಿಕಾರವೇ ಹೆಚ್ಚು ಎಂದು ಅವರು ವಿಡಿಯೋದಲ್ಲಿ ಟೀಕಿಸಿದ್ದಾರೆ.

ಕೀಶೋರ್ ಮಾಡಿರುವ ವಿಡಿಯೋ ನೋಡಿ.

ನಿಮ್ಮ ಕಣ್ಣುಗಳನ್ನು ಬಿಟ್ಟು ಈ ವಿಡಿಯೋ ನೋಡಿಕೊಳ್ಳಿ..Lingarajendra Kattimani

Posted by ರಾಜಶೇಖರ ಎಸ್ ಅಂಗಡಿ on Monday, July 6, 2020


ಇದನ್ನೂ ಓದಿ: ವೈದ್ಯಕೀಯ ಸಾಮಗ್ರಿಗಳ ಖರೀದಿಯಲ್ಲಿ ಅಕ್ರಮಗಳು ನಡೆದಿದೆ ಎಂಬುದು ಸುಳ್ಳು: ಯಡಿಯೂರಪ್ಪ 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...