Homeಮುಖಪುಟಸುಳ್ಳು ಸುದ್ದಿ ಪ್ರಕಟ: ಚಿತ್ರನಟ, ಬಿಜೆಪಿ ಮುಖಂಡ ಜಗ್ಗೇಶ್ ವಿರುದ್ಧ ದೂರು ದಾಖಲು

ಸುಳ್ಳು ಸುದ್ದಿ ಪ್ರಕಟ: ಚಿತ್ರನಟ, ಬಿಜೆಪಿ ಮುಖಂಡ ಜಗ್ಗೇಶ್ ವಿರುದ್ಧ ದೂರು ದಾಖಲು

ಈ ಕೂಡಲೇ ಜಗ್ಗೇಶ್‌ರವರು ತಮ್ಮ ದಿಕ್ಕುತಪ್ಪಿಸುವ ಟ್ವೀಟ್‌ ಅನ್ನು ಡಿಲೀಟ್ ಮಾಡಿ ರಾಜ್ಯದ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ಎಲ್ಲಾ ಜಿಲ್ಲೆಗಳಲ್ಲಿಯೂ ದೂರು ದಾಖಲಿಸಲಾಗುವುದು ಎಂದು ಸಂದೀಪ್ ಅಣಬೇರು ಎಚ್ಚರಿಕೆ ನೀಡಿದ್ದಾರೆ.

- Advertisement -
- Advertisement -

ತಮ್ಮ ವಿರುದ್ಧ ಅವಹೇಳನಕಾರಿ ಸುಳ್ಳು ಸುದ್ದಿ ಪ್ರಕಟಿಸಿದ್ದಾರೆ ಎಂದು ಆರೋಪಿಸಿ ಚಿತ್ರನಟ, ಬಿಜೆಪಿ ಮುಖಂಡ ಜಗ್ಗೇಶ್ ವಿರುದ್ಧ ಯೂತ್ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ರಾಜ್ಯ ಉಸ್ತುವಾರಿ ಸಂದೀಪ್ ಅಣಬೇರುರವರು ಬನಶಂಕರಿ ಪೊಲೀಸ್ ಠಾಣೆಯ ಸೈಬರ್ ಕ್ರೈಂ ವಿಭಾಗದಲ್ಲಿ ದೂರು ದಾಖಲಿಸಿದ್ದಾರೆ.

ಕಾರಣವೇನು?

ಕೊರೊನಾ ವೈರಸ್ ಸಾಂಕ್ರಾಮಿಕ ತಡೆಗಟ್ಟುವ ಹಿನ್ನೆಲೆಯಲ್ಲಿ ಶನಿವಾರದಿಂದ ರಾಜ್ಯದಲ್ಲಿ 33 ಗಂಟೆಗಳ ಲಾಕ್‌ಡೌನ್ ಕರ್ಫ್ಯೂ ವಿಧಿಸಿದ್ದು ಸರಿಯಷ್ಟೇ. ಈ ಹಿನ್ನೆಲೆಯಲ್ಲಿ ಬೆಂಗಳೂರು ತೊರೆದು ಸಾವಿರಾರು ಮಂದಿ ತಮ್ಮ ಹಳ್ಳಿಗಳಿಗೆ ಹಿಂತಿರುತ್ತಿದ್ದುದು ಸರಿಯಷ್ಟೇ. ಈ ಸಮಯದಲ್ಲಿ ಆನ್‌ಲೈನ್ ವಾಹಿನಿಯೊಂದು ಹಳ್ಳಿಗೆ ಹಿಂತಿರುಗುತ್ತಿದ್ದ ಜನರನ್ನು ಮಾತಾಡಿಸಿತ್ತು. ಆ ಸಂದರ್ಭದಲ್ಲಿ ಚಿಕ್ಕಮಗಳೂರಿನ ಕಿಶೋರ್ ಎಂಬ ಯುವಕನೊಬ್ಬ ಕೊರೊನಾ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರದ ವಿಫಲತೆಯನ್ನು ಪ್ರಶ್ನಿಸಿ ಮಾತನಾಡಿದ್ದನು.

ಕೊರೋನಾ ರೋಗ ನಿಯಂತ್ರಿಸುವಲ್ಲಿ ಸರ್ಕಾರ ವಿಫಲ ಆಗಿಲ್ಲ… ಜನ ಸಾಮಾನ್ಯರು ರಾಜ್ಯ ಬಿಜೆಪಿ ಸರಕಾರ ಆಡಳಿತದ ಬಗ್ಗೆ ಎನ್ ಹೇಳತ್ತಾ ಇದ್ದಾರೆ….ಬಿಜೆಪಿ ಸರಕಾರದ ಬಗ್ಗೆ ತಮ್ಮ ಅನಿಸಿಕೆ ತಿಳಿಸಿ ತಪ್ಪದೇ ನೋಡಿ ಶೇರ್ ಮಾಡಿ..

Posted by ರಾಜಶೇಖರ ಎಸ್ ಅಂಗಡಿ on Saturday, July 4, 2020

ಕೊರೊನಾ ಟೆಸ್ಟ್‌ಗೆ 4 ಸಾವಿರ ತಗುಲುತ್ತಿದೆ. ಬಡಜನರು ಹೇಗೆ ಭರಿಸಬೇಕೆಂದು ಪ್ರಶ್ನಿಸಿ ರಾಜ್ಯ ಸರ್ಕಾರವನ್ನು ಟೀಕಿಸಿದ್ದರು.

ಆ ಯುವಕ‌ ಕಾಂಗ್ರೆಸ್‌ನವನು ಎಂದು ಜಗ್ಗೇಶ್ ಆರೋಪಿಸಿದ್ದರು. “ಕಾಂಗ್ರೆಸ್ಸಿನ ಸೋಶಿಯಲ್ ಮಿಡಿಯಾದ ಉಸ್ತುವಾರಿಯೊಬ್ಬ ಜಿಪ್ಸಿ ವ್ಯಾನಿನಲ್ಲಿ ಬಂದು ತಾನು 15 ಸಾವಿರ ಸಂಬಳ ಪಡೆಯುವ ವಲಸೆ ಕಾರ್ಮಿಕನಂತೆ ಮಾತನಾಡಿ, ಬಿಜೆಪಿಯನ್ನು ತೆಗಳಿ, ಹಳ್ಳಿಗೆ ಹೋಗುವವನಂತೆ ನಟಿಸಿದ್ದಾರೆ” ಎಂದು ಬರೆದಿರುವ ಪೋಸ್ಟರ್‌ ಅನ್ನು ಜಗ್ಗೇಶ್ ತಮ್ಮ ಟ್ವಿಟ್ಟರ್‌ನಲ್ಲಿ ಪೋಸ್ಟ್ ಮಾಡಿದ್ದರು.

ಅಲ್ಲದೇ “ಮೊನ್ನೆ ಊರು ಬಿಟ್ಟು ಹೋಗುವವನು ನನಗೆ ಪಟ್ಟಣಹಾಗೂ ಭಾಜಪ ಸರ್ಕಾರ ಸಹವಾಸು ಸಾಕು ಊರಿಗೆ ಹೋಗಿ ಜಮೀನಿನಲ್ಲಿ ಜೀವನ ಮಾಡುವೆ ಎಂದುಬಿಟ್ಟ! ಅದು ವೈರಲ್ ಆಯಿತು! ಈಗ ನೋಡಿದರೆ ಆತ ವೆಲ್ ಪ್ಲಾನ್ಡ್! ಅನ್ಯ ಪಕ್ಷದ ಕಾರ್ಯಕರ್ತ! ಆದರೂ ಸಹೋದರ ಎಷ್ಟೇ ಯತ್ನಿಸಿದರು ನರೇಂದ್ರ ಮೋದಿ ಮತ್ತು ಬಿಜೆಪಿಯು ಜನರ ಮನಸ್ಸಿನಲ್ಲಿ ಜಾಗಪಡೆದಿದೆ. ಜೈ ಹಿಂದ್!” ಎಂದು ಜಗ್ಗೇಶ್ ಬರೆದಿದ್ದಾರೆ.

ವಿಡಿಯೋಗೂ ಕಾಂಗ್ರೆಸ್‌ಗೂ ಸಂಬಂಧವಿಲ್ಲ!

ಆ ವಿಡಿಯೋದಲ್ಲಿ ಮಾತನಾಡಿರುವ ವ್ಯಕ್ತಿ ಬೇರೆ, ನಾನು ಬೇರೆ. ಆದರೆ ಬಿಜೆಪಿ ಐಟಿ ಸೆಲ್ ಫೋಟೊಶಾಪ್ ಮಾಡಿ ನಾನೇ ಆ ವಿಡಿಯೋ ಮಾಡಿ ನಾಟಕ ಮಾಡಿದ್ದೇನೆ ಎಂದು ದುರುದ್ದೇಶಪೂರಿತ ಸುಳ್ಳು ಹರಡಿದ್ದಾರೆ. ಅದನ್ನೇ ಚಿತ್ರನಟ ಜಗ್ಗೇಶ್ ಟ್ವಿಟ್ಟರ್‌ನಲ್ಲಿ ಹಂಚಿಕೊಂಡು ಮಾನಹಾನಿ ಮಾಡಿದ್ದಾರೆ. ಅವರಿಗೆ ಪರಿಶೀಲಿಸುವ ಕನಿಷ್ಠ ಸಾಮಾನ್ಯ ಜ್ಞಾನವಿಲ್ಲ. ಬೇಕೆಂತಲೇ ಸುಳ್ಳು ಹರಡಿರುವುದಕ್ಕೆ ದೂರು ದಾಖಲಿಸಿದ್ದೇನೆ ಎಂದು ಯೂತ್ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ರಾಜ್ಯ ಉಸ್ತುವಾರಿ ಸಂದೀಪ್ ಅಣಬೇರು ತಿಳಿಸಿದ್ದಾರೆ.

ಜಗ್ಗೇಶ್ ವಿರುದ್ಧ ದೂರು ದಾಖಲಿಸಿದ ಯುವ ಕಾಂಗ್ರೆಸ್ ನಾಯಕ ಸಂದೀಪ್ಬೆಂಗಳೂರು: ಜಗ್ಗೇಶ್ ವಿರುದ್ಧ ಯುವ ಕಾಂಗ್ರೆಸ್ ನಾಯಕ ಸಂದೀಪ್ ಅಣಬೇರು…

Posted by Malgudi Express on Monday, July 6, 2020

ಈ ಕೂಡಲೇ ಜಗ್ಗೇಶ್‌ರವರು ತಮ್ಮ ದಿಕ್ಕುತಪ್ಪಿಸುವ ಟ್ವೀಟ್‌ ಅನ್ನು ಡಿಲೀಟ್ ಮಾಡಿ ರಾಜ್ಯದ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ಎಲ್ಲಾ ಜಿಲ್ಲೆಗಳಲ್ಲಿಯೂ ದೂರು ದಾಖಲಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಇಷ್ಟೆಲ್ಲಾ ಘಟನೆಗಳು ಜರುಗುತ್ತಿದ್ದಂತೆ ಮೂಲ ವಿಡಿಯೋದಲ್ಲಿ ಮಾತನಾಡಿದ್ದ ಯುವಕ ಕಿಶೋರ್ ಚಿಕ್ಕಮಗಳೂರಿನಿಂದಲೇ ಮತ್ತೊಂದು ವಿಡಿಯೋ ಮಾಡಿ ಪೋಸ್ಟ್ ಮಾಡಿದ್ದಾರೆ. ಆ ವಿಡಿಯೋದಲ್ಲಿ ಮಾತನಾಡಿರುವುದು ನಾನೇ. ಆ ಮಾತುಗಳಿಗೆ ನಾನು ಈಗಲೂ ಬದ್ಧನಾಗಿದ್ದೇನೆ. ವಾಸ್ತವ ಮರೆಸಲು ಬಿಜೆಪಿ ಐಟಿ ಸೆಲ್ ಸುಳ್ಳು ಸುದ್ದಿಗಳನ್ನು ಹರಡುತ್ತಿದೆ. ಜನರ ಜೀವನಕ್ಕಿಂತ ಅದಕ್ಕೆ ರಾಜಕೀಯ ಅಧಿಕಾರವೇ ಹೆಚ್ಚು ಎಂದು ಅವರು ವಿಡಿಯೋದಲ್ಲಿ ಟೀಕಿಸಿದ್ದಾರೆ.

ಕೀಶೋರ್ ಮಾಡಿರುವ ವಿಡಿಯೋ ನೋಡಿ.

ನಿಮ್ಮ ಕಣ್ಣುಗಳನ್ನು ಬಿಟ್ಟು ಈ ವಿಡಿಯೋ ನೋಡಿಕೊಳ್ಳಿ..Lingarajendra Kattimani

Posted by ರಾಜಶೇಖರ ಎಸ್ ಅಂಗಡಿ on Monday, July 6, 2020


ಇದನ್ನೂ ಓದಿ: ವೈದ್ಯಕೀಯ ಸಾಮಗ್ರಿಗಳ ಖರೀದಿಯಲ್ಲಿ ಅಕ್ರಮಗಳು ನಡೆದಿದೆ ಎಂಬುದು ಸುಳ್ಳು: ಯಡಿಯೂರಪ್ಪ 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...