Homeಮುಖಪುಟಸುಳ್ಳು ಸುದ್ದಿ ಪ್ರಕಟ: ಚಿತ್ರನಟ, ಬಿಜೆಪಿ ಮುಖಂಡ ಜಗ್ಗೇಶ್ ವಿರುದ್ಧ ದೂರು ದಾಖಲು

ಸುಳ್ಳು ಸುದ್ದಿ ಪ್ರಕಟ: ಚಿತ್ರನಟ, ಬಿಜೆಪಿ ಮುಖಂಡ ಜಗ್ಗೇಶ್ ವಿರುದ್ಧ ದೂರು ದಾಖಲು

ಈ ಕೂಡಲೇ ಜಗ್ಗೇಶ್‌ರವರು ತಮ್ಮ ದಿಕ್ಕುತಪ್ಪಿಸುವ ಟ್ವೀಟ್‌ ಅನ್ನು ಡಿಲೀಟ್ ಮಾಡಿ ರಾಜ್ಯದ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ಎಲ್ಲಾ ಜಿಲ್ಲೆಗಳಲ್ಲಿಯೂ ದೂರು ದಾಖಲಿಸಲಾಗುವುದು ಎಂದು ಸಂದೀಪ್ ಅಣಬೇರು ಎಚ್ಚರಿಕೆ ನೀಡಿದ್ದಾರೆ.

- Advertisement -
- Advertisement -

ತಮ್ಮ ವಿರುದ್ಧ ಅವಹೇಳನಕಾರಿ ಸುಳ್ಳು ಸುದ್ದಿ ಪ್ರಕಟಿಸಿದ್ದಾರೆ ಎಂದು ಆರೋಪಿಸಿ ಚಿತ್ರನಟ, ಬಿಜೆಪಿ ಮುಖಂಡ ಜಗ್ಗೇಶ್ ವಿರುದ್ಧ ಯೂತ್ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ರಾಜ್ಯ ಉಸ್ತುವಾರಿ ಸಂದೀಪ್ ಅಣಬೇರುರವರು ಬನಶಂಕರಿ ಪೊಲೀಸ್ ಠಾಣೆಯ ಸೈಬರ್ ಕ್ರೈಂ ವಿಭಾಗದಲ್ಲಿ ದೂರು ದಾಖಲಿಸಿದ್ದಾರೆ.

ಕಾರಣವೇನು?

ಕೊರೊನಾ ವೈರಸ್ ಸಾಂಕ್ರಾಮಿಕ ತಡೆಗಟ್ಟುವ ಹಿನ್ನೆಲೆಯಲ್ಲಿ ಶನಿವಾರದಿಂದ ರಾಜ್ಯದಲ್ಲಿ 33 ಗಂಟೆಗಳ ಲಾಕ್‌ಡೌನ್ ಕರ್ಫ್ಯೂ ವಿಧಿಸಿದ್ದು ಸರಿಯಷ್ಟೇ. ಈ ಹಿನ್ನೆಲೆಯಲ್ಲಿ ಬೆಂಗಳೂರು ತೊರೆದು ಸಾವಿರಾರು ಮಂದಿ ತಮ್ಮ ಹಳ್ಳಿಗಳಿಗೆ ಹಿಂತಿರುತ್ತಿದ್ದುದು ಸರಿಯಷ್ಟೇ. ಈ ಸಮಯದಲ್ಲಿ ಆನ್‌ಲೈನ್ ವಾಹಿನಿಯೊಂದು ಹಳ್ಳಿಗೆ ಹಿಂತಿರುಗುತ್ತಿದ್ದ ಜನರನ್ನು ಮಾತಾಡಿಸಿತ್ತು. ಆ ಸಂದರ್ಭದಲ್ಲಿ ಚಿಕ್ಕಮಗಳೂರಿನ ಕಿಶೋರ್ ಎಂಬ ಯುವಕನೊಬ್ಬ ಕೊರೊನಾ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರದ ವಿಫಲತೆಯನ್ನು ಪ್ರಶ್ನಿಸಿ ಮಾತನಾಡಿದ್ದನು.

ಕೊರೋನಾ ರೋಗ ನಿಯಂತ್ರಿಸುವಲ್ಲಿ ಸರ್ಕಾರ ವಿಫಲ ಆಗಿಲ್ಲ… ಜನ ಸಾಮಾನ್ಯರು ರಾಜ್ಯ ಬಿಜೆಪಿ ಸರಕಾರ ಆಡಳಿತದ ಬಗ್ಗೆ ಎನ್ ಹೇಳತ್ತಾ ಇದ್ದಾರೆ….ಬಿಜೆಪಿ ಸರಕಾರದ ಬಗ್ಗೆ ತಮ್ಮ ಅನಿಸಿಕೆ ತಿಳಿಸಿ ತಪ್ಪದೇ ನೋಡಿ ಶೇರ್ ಮಾಡಿ..

Posted by ರಾಜಶೇಖರ ಎಸ್ ಅಂಗಡಿ on Saturday, July 4, 2020

ಕೊರೊನಾ ಟೆಸ್ಟ್‌ಗೆ 4 ಸಾವಿರ ತಗುಲುತ್ತಿದೆ. ಬಡಜನರು ಹೇಗೆ ಭರಿಸಬೇಕೆಂದು ಪ್ರಶ್ನಿಸಿ ರಾಜ್ಯ ಸರ್ಕಾರವನ್ನು ಟೀಕಿಸಿದ್ದರು.

ಆ ಯುವಕ‌ ಕಾಂಗ್ರೆಸ್‌ನವನು ಎಂದು ಜಗ್ಗೇಶ್ ಆರೋಪಿಸಿದ್ದರು. “ಕಾಂಗ್ರೆಸ್ಸಿನ ಸೋಶಿಯಲ್ ಮಿಡಿಯಾದ ಉಸ್ತುವಾರಿಯೊಬ್ಬ ಜಿಪ್ಸಿ ವ್ಯಾನಿನಲ್ಲಿ ಬಂದು ತಾನು 15 ಸಾವಿರ ಸಂಬಳ ಪಡೆಯುವ ವಲಸೆ ಕಾರ್ಮಿಕನಂತೆ ಮಾತನಾಡಿ, ಬಿಜೆಪಿಯನ್ನು ತೆಗಳಿ, ಹಳ್ಳಿಗೆ ಹೋಗುವವನಂತೆ ನಟಿಸಿದ್ದಾರೆ” ಎಂದು ಬರೆದಿರುವ ಪೋಸ್ಟರ್‌ ಅನ್ನು ಜಗ್ಗೇಶ್ ತಮ್ಮ ಟ್ವಿಟ್ಟರ್‌ನಲ್ಲಿ ಪೋಸ್ಟ್ ಮಾಡಿದ್ದರು.

ಅಲ್ಲದೇ “ಮೊನ್ನೆ ಊರು ಬಿಟ್ಟು ಹೋಗುವವನು ನನಗೆ ಪಟ್ಟಣಹಾಗೂ ಭಾಜಪ ಸರ್ಕಾರ ಸಹವಾಸು ಸಾಕು ಊರಿಗೆ ಹೋಗಿ ಜಮೀನಿನಲ್ಲಿ ಜೀವನ ಮಾಡುವೆ ಎಂದುಬಿಟ್ಟ! ಅದು ವೈರಲ್ ಆಯಿತು! ಈಗ ನೋಡಿದರೆ ಆತ ವೆಲ್ ಪ್ಲಾನ್ಡ್! ಅನ್ಯ ಪಕ್ಷದ ಕಾರ್ಯಕರ್ತ! ಆದರೂ ಸಹೋದರ ಎಷ್ಟೇ ಯತ್ನಿಸಿದರು ನರೇಂದ್ರ ಮೋದಿ ಮತ್ತು ಬಿಜೆಪಿಯು ಜನರ ಮನಸ್ಸಿನಲ್ಲಿ ಜಾಗಪಡೆದಿದೆ. ಜೈ ಹಿಂದ್!” ಎಂದು ಜಗ್ಗೇಶ್ ಬರೆದಿದ್ದಾರೆ.

ವಿಡಿಯೋಗೂ ಕಾಂಗ್ರೆಸ್‌ಗೂ ಸಂಬಂಧವಿಲ್ಲ!

ಆ ವಿಡಿಯೋದಲ್ಲಿ ಮಾತನಾಡಿರುವ ವ್ಯಕ್ತಿ ಬೇರೆ, ನಾನು ಬೇರೆ. ಆದರೆ ಬಿಜೆಪಿ ಐಟಿ ಸೆಲ್ ಫೋಟೊಶಾಪ್ ಮಾಡಿ ನಾನೇ ಆ ವಿಡಿಯೋ ಮಾಡಿ ನಾಟಕ ಮಾಡಿದ್ದೇನೆ ಎಂದು ದುರುದ್ದೇಶಪೂರಿತ ಸುಳ್ಳು ಹರಡಿದ್ದಾರೆ. ಅದನ್ನೇ ಚಿತ್ರನಟ ಜಗ್ಗೇಶ್ ಟ್ವಿಟ್ಟರ್‌ನಲ್ಲಿ ಹಂಚಿಕೊಂಡು ಮಾನಹಾನಿ ಮಾಡಿದ್ದಾರೆ. ಅವರಿಗೆ ಪರಿಶೀಲಿಸುವ ಕನಿಷ್ಠ ಸಾಮಾನ್ಯ ಜ್ಞಾನವಿಲ್ಲ. ಬೇಕೆಂತಲೇ ಸುಳ್ಳು ಹರಡಿರುವುದಕ್ಕೆ ದೂರು ದಾಖಲಿಸಿದ್ದೇನೆ ಎಂದು ಯೂತ್ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ರಾಜ್ಯ ಉಸ್ತುವಾರಿ ಸಂದೀಪ್ ಅಣಬೇರು ತಿಳಿಸಿದ್ದಾರೆ.

ಜಗ್ಗೇಶ್ ವಿರುದ್ಧ ದೂರು ದಾಖಲಿಸಿದ ಯುವ ಕಾಂಗ್ರೆಸ್ ನಾಯಕ ಸಂದೀಪ್ಬೆಂಗಳೂರು: ಜಗ್ಗೇಶ್ ವಿರುದ್ಧ ಯುವ ಕಾಂಗ್ರೆಸ್ ನಾಯಕ ಸಂದೀಪ್ ಅಣಬೇರು…

Posted by Malgudi Express on Monday, July 6, 2020

ಈ ಕೂಡಲೇ ಜಗ್ಗೇಶ್‌ರವರು ತಮ್ಮ ದಿಕ್ಕುತಪ್ಪಿಸುವ ಟ್ವೀಟ್‌ ಅನ್ನು ಡಿಲೀಟ್ ಮಾಡಿ ರಾಜ್ಯದ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ಎಲ್ಲಾ ಜಿಲ್ಲೆಗಳಲ್ಲಿಯೂ ದೂರು ದಾಖಲಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಇಷ್ಟೆಲ್ಲಾ ಘಟನೆಗಳು ಜರುಗುತ್ತಿದ್ದಂತೆ ಮೂಲ ವಿಡಿಯೋದಲ್ಲಿ ಮಾತನಾಡಿದ್ದ ಯುವಕ ಕಿಶೋರ್ ಚಿಕ್ಕಮಗಳೂರಿನಿಂದಲೇ ಮತ್ತೊಂದು ವಿಡಿಯೋ ಮಾಡಿ ಪೋಸ್ಟ್ ಮಾಡಿದ್ದಾರೆ. ಆ ವಿಡಿಯೋದಲ್ಲಿ ಮಾತನಾಡಿರುವುದು ನಾನೇ. ಆ ಮಾತುಗಳಿಗೆ ನಾನು ಈಗಲೂ ಬದ್ಧನಾಗಿದ್ದೇನೆ. ವಾಸ್ತವ ಮರೆಸಲು ಬಿಜೆಪಿ ಐಟಿ ಸೆಲ್ ಸುಳ್ಳು ಸುದ್ದಿಗಳನ್ನು ಹರಡುತ್ತಿದೆ. ಜನರ ಜೀವನಕ್ಕಿಂತ ಅದಕ್ಕೆ ರಾಜಕೀಯ ಅಧಿಕಾರವೇ ಹೆಚ್ಚು ಎಂದು ಅವರು ವಿಡಿಯೋದಲ್ಲಿ ಟೀಕಿಸಿದ್ದಾರೆ.

ಕೀಶೋರ್ ಮಾಡಿರುವ ವಿಡಿಯೋ ನೋಡಿ.

ನಿಮ್ಮ ಕಣ್ಣುಗಳನ್ನು ಬಿಟ್ಟು ಈ ವಿಡಿಯೋ ನೋಡಿಕೊಳ್ಳಿ..Lingarajendra Kattimani

Posted by ರಾಜಶೇಖರ ಎಸ್ ಅಂಗಡಿ on Monday, July 6, 2020


ಇದನ್ನೂ ಓದಿ: ವೈದ್ಯಕೀಯ ಸಾಮಗ್ರಿಗಳ ಖರೀದಿಯಲ್ಲಿ ಅಕ್ರಮಗಳು ನಡೆದಿದೆ ಎಂಬುದು ಸುಳ್ಳು: ಯಡಿಯೂರಪ್ಪ 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...