Homeಮುಖಪುಟಪೋಸ್ಟ್‌ಕಾರ್ಡ್ ಹರಡಿದ ಸುಳ್ಳು: ಹೈಡ್ರಾಕ್ಸಿಕ್ಲೊರೋಕ್ವಿನ್ ಔಷಧಿ ಕಂಡುಹಿಡಿದದ್ದು ಯಾರು?

ಪೋಸ್ಟ್‌ಕಾರ್ಡ್ ಹರಡಿದ ಸುಳ್ಳು: ಹೈಡ್ರಾಕ್ಸಿಕ್ಲೊರೋಕ್ವಿನ್ ಔಷಧಿ ಕಂಡುಹಿಡಿದದ್ದು ಯಾರು?

- Advertisement -
- Advertisement -

ಸುಳ್ಳು ಸುದ್ದಿ ಎಂಬುದು ಕೊರೋನಾಗಿಂತ ಮಾರಣಾಂತಿಕ ವೈರಸ್ ಎಂಬುದರಲ್ಲಿ ಎರಡು ಮಾತಿಲ್ಲ. ಅದರಲ್ಲೂ ಕೊರೋನಾ ಹರಡುವಿಕೆ ಅತಿಯಾದಂತೆಲ್ಲಾ ಸುಳ್ಳು ಸುದ್ದಿಯ ಹರಡುವಿಕೆಯೂ ಎಗ್ಗಿಲ್ಲದೆ ಸಾಗುತ್ತಲೇ ಇದೆ. ಇನ್ನೂ ಕರ್ನಾಟಕದ ಮಟ್ಟಿಗೆ ಈ ಸುಳ್ಳು ಸುದ್ದಿಗಳ ಶೂರರು ಯಾರು? ಸುಳ್ಳೇ ಮನೆ ದೇವರು ಎಂದು ನಂಬಿ ಜೈಲುವಾಸವನ್ನೂ ಅನುಭವಿಸಿ ಬಂದವರು ಯಾರು? ಎಂಬುದನ್ನು ಕನ್ನಡಿಗರಿಗೆ ಬಿಡಿಸಿ ಹೇಳಬೇಕಿಲ್ಲ. ಏಕೆಂದರೆ ಇವೆಲ್ಲಾ ಪೋಸ್ಟ್ ಕಾರ್ಡ್ ಕನ್ನಡ ಎಂಬ ಪೋರ್ಟಲ್ ಕೆಲಸ ಎಂಬುದು ಬಹುತೇಕರಿಗೆ ಗೊತ್ತು.

ಸುಳ್ಳು ಸುದ್ದಿಗೆ ಇಡೀ ರಾಜ್ಯದಲ್ಲಿ ಕುಖ್ಯಾತಿ ಪಡೆದಿರುವ ಪೋಸ್ಟ್ ಕಾರ್ಡ್, ದಿನಕ್ಕೊಂದು ಸುಳ್ಳು ಹೇಳಿ ಮನರಂಜನೆ ನೀಡುವಲ್ಲಿ ಎತ್ತಿದ ಕೈ. ಅಂದಹಾಗೆ ಈ ಪೋರ್ಟಲ್ ಇಂದು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿರುವ ಸುಳ್ಳು ಯಾವುದು ಗೊತ್ತಾ? ಅದೇ ಪ್ರಸ್ತುತ ಕೊರೋನಾ ಸೋಂಕಿನ ಚಿಕಿತ್ಸೆಗೆ ಉಪಯೋಗಿಸಲಾಗುತ್ತಿರುವ ’ಹೈಡ್ರಾಕ್ಸಿಕ್ಲೋರೋಕ್ವಿನ್’ ಔಷಧಿ ಪಿತಾಮಹ ಆಚಾರ್ಯ ಪ್ರಫುಲ್ಲಚಂದ್ರ ರಾಯ್ ಎಂಬುದು.

Posted by Postcard ಕನ್ನಡ on Friday, April 10, 2020

ಪಶ್ಚಿಮ ಬಂಗಾಳ ಮೂಲದ ಆಚಾರ್ಯ ಪ್ರಫುಲ್ಲಾಚಂದ್ರ ರಾಯ್ ಭಾರತದ ರಸಾಯನ ಶಾಸ್ತ್ರದ ಪಿತಾಮಹ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರವೇ. ದೇಶದ ರಸಾಯನ ಶಾಸ್ತ್ರ ಕ್ಷೇತ್ರಕ್ಕೆ ಇವರು ನೀಡಿರುವ ಕೊಡುಗೆ ಅಪಾರ ಮತ್ತು ಶ್ಲಾಘನೀಯ ಎಂಬುದರಲ್ಲಿ ಎರಡು ಮಾತಿಲ್ಲ. ಈ ಕುರಿತು ಭಾರತೀಯರೆನಿಸಿಕೊಂಡವರೆಲ್ಲರಿಗೂ ಅಪಾರ ಗೌರವ ಇದೆ. ಆದರೆ, ಪ್ರಸ್ತುತ ಚರ್ಚೆಯ ಕೇಂದ್ರವಾಗಿರುವ ’ಹೈಡ್ರಾಕ್ಸಿಕ್ಲೋರೋಕ್ವಿನ್’ ಔಷಧವನ್ನು ಕಂಡು ಹಿಡಿದದ್ದು ಇವರಲ್ಲ ಎಂಬುದೇ ಸತ್ಯ. ಏಕೆಂದರೆ ಅವರು ನಿಧನವಾಗಿದ್ದು 1944ರಲ್ಲಿ. ಔಷಧಿ ಕಂಡುಹಿಡಿದಿದ್ದು 1945ರ ನಂತರ.

ಆದರೆ ಪೋಸ್ಟ್‌ ಕಾರ್ಡ್‌ ಹರಡಿದ ಈ ಹಸಿ ಸುಳ್ಳನ್ನು ಎರಡು ಸಾವಿರಕ್ಕೂ ಹೆಚ್ಚು ಜನ ಲೈಕ್‌ ಮಾಡಿದರೆ, 1800 ಜನ ಷೇರ್‌ ಮಾಡಿದ್ದಾರೆ.

ಹಾಗಾದ್ರೆ ಈ ಔಷಧಿ ಕಂಡು ಹಿಡಿದದ್ದು ಯಾರು? ಇಲ್ಲಿದೆ ಅಸಲಿ ಅತ್ಯ

ಅಸಲಿಗೆ ಮಲೇರಿಯಾಗೆ ಔಷಧ ಕಂಡು ಹಿಡಿಯುವ ನಿಟ್ಟಿನಲ್ಲಿ ಮೊಟ್ಟಮೊದಲ ಬಾರಿಗೆ ’ಹೈಡ್ರಾಕ್ಸಿಕ್ಲೋರೋಕ್ವಿನ್’ ಔಷಧವನ್ನು ಕಂಡು ಹಿಡಿದದ್ದು ಜರ್ಮನಿಯ ಬಾಯರ್ ಫಾರ್ಮ. ಇದನ್ನು ಅನ್ವೇಷಿಸಲಾದ ವರ್ಷ 1945.

ಇವತ್ತು ಜಗತ್ತಿನ 70% ’ಹೈಡ್ರಾಕ್ಸಿಕ್ಲೋರೋಕ್ವೀನ್’ ನನ್ನು ಭಾರತ ಉತ್ಪಾದಿಸುತ್ತದೆ. ಭಾರತದ ಹೀಗೆ ಅತಿಹೆಚ್ಚು ಪ್ರಮಾಣದಲ್ಲಿ ಈ ಔಷಧವನ್ನು ಉತ್ಪಾದಿಸುತ್ತದೆ ಎಂದರೆ ಅದಕ್ಕೆ ಏಕೈಕ ಕಾರಣ ಈ ದೇಶ ಮಲೇರಿಯಾ ಮತ್ತು ಡೆಂಗ್ಯೂ ಬಾಧಿತ ರಾಷ್ಟ್ರ ಎಂಬುದೊಂದೆ.

ಆದರೆ, 1945ನೇ ವರ್ಷದಲ್ಲಿ ಜರ್ಮನಿ ಮೂಲದ ಫಾರ್ಮಾ ಕಂಪೆನಿಯಿಂದ ಮಲೇರಿಯಾಗೆ ಕಂಡು ಹಿಡಿಯಲ್ಪಟ್ಟ ’ಹೈಡ್ರಾಕ್ಸಿಕ್ಲೋರೋಕ್ವಿನ್’ ಎಂಬ ಔಷಧಿಯನ್ನು, 1944ಕ್ಕೂ ಮುಂಚಿತವಾಗಿಯೇ ಮೃತಪಟ್ಟ ಆಚಾರ್ಯ ಪ್ರಫುಲ್ಲಚಂದ್ರ ರೇ ಹೇಗೆ ಕಂಡು ಹಿಡಿದರು ಎಂಬುದು ಮಾತ್ರ ಈವರೆಗೆ ತರ್ಕಕ್ಕೆ ನಿಲುಕದ್ದಾಗಿದೆ.


ಇದನ್ನೂ ಓದಿ: ಮುಖ್ಯಮಂತ್ರಿಗಳ ಎಚ್ಚರಿಕೆಯ ನಂತರವೂ ಸುಳ್ಳು ಸುದ್ದಿ ಹರಡುತ್ತಿರುವ ಪೋಸ್ಟ್‌ ಕಾರ್ಡ್‌ ಕನ್ನಡ: ಕ್ರಮ ಯಾವಾಗ? 


ಈ ಸುಳ್ಳು ಹರಡುವುದರ ಹಿಂದೆ ಒಂದು ಕಾರಣವೂ ಇದೆ. ಅದೆಂದರೆ ಈ ಹೈಡ್ರಾಕ್ಸಿಕ್ಲೋರೋಕ್ವಿನ್ ಸದ್ಯಕ್ಕೆ ಕೊರೊನಾಗೆ ಔಷಧಿಯಾಗಿ ಬಳಕೆಯಾಗುತ್ತಿದೆ. ಭಾರತದಲ್ಲಿ ಕೊರೊನಾ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿರುವುದರಿಂದ ಪ್ರಧಾನಿಗಳು ಹೈಡ್ರಾಕ್ಸಿಕ್ಲೋರೋಕ್ವಿನ್ ರಫ್ತು ಮಾಡುವುದನ್ನು ಮಾರ್ಚ್‌ 25ರಂದು ನಿಷೇಧಿಸಿದರು. ಕಾರಣ ಸ್ಪಷ್ಟ ನಮ್ಮ ದೇಶಕ್ಕೆ ಸಾಕಷ್ಟು ಮಾತ್ರೆಗಳು ಬೇಕು ಎಂಬುದಷ್ಟೆ. ಆದರೆ ಏಪ್ರಿಲ್‌ 7ರಂದು ಅಮೆರಿಕಾ ಟ್ರಂಪ್‌ರವರು ಭಾರತ ಹೈಡ್ರಾಕ್ಸಿಕ್ಲೋರೋಕ್ವಿನ್ ರಫ್ತು ಮಾಡದಿದ್ದರೆ ಪ್ರತಿಕಾರ ತೀರಿಸಿಕೊಳ್ಳುವುದಾಗಿ ಬೆದರಿಕೆ ಹಾಕಿದರು. ಕೂಡಲೇ ನಮ್ಮ ಪ್ರಧಾನಿಗಳು ರಫ್ತು ಮೇಲಿನ ನಿಷೇಧ ತೆರವುಗೊಳಿಸಿದರು. ಆದ ಡ್ಯಾಮೇಜ್‌ ಕಂಟ್ರೋಲ್‌ ಮಾಡಿಕೊಳ್ಳಲು ಪೋಸ್ಟ್‌ ಕಾರ್ಡ್‌ ಈ ರೀತಿ ಸುಳ್ಳು ಹರಡುತ್ತಿದೆ.

ಪೊಲೀಸರೇ ಕ್ರಮ ಎಂದು?

ಕೊರೋನಾ ಭೀತಿ ಹಿನ್ನೆಲೆ ಮಾಧ್ಯಮ ಮತ್ತು ಸಾಮಾಜಿಕ ಜಾಲ ತಾಣಗಳಲ್ಲಿ ಸುಳ್ಳು ಸುದ್ದಿಯನ್ನು ಹಬ್ಬಿಸುವವವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಸ್ವತಃ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ತಿಳಿಸಿದ್ದರು. ಆದರೆ, ಪೋಸ್ಟ್ ಕಾರ್ಡ್ ಎಂಬ ಪೋರ್ಟಲ್ ಸುಳ್ಳು ಹೇಳುವುದನ್ನೇ ತನ್ನ ಕುಲಕಸುಬನ್ನಾಗಿಸಿಕೊಂಡಿದೆ.

ಇದೇ ಕಾರಣಕ್ಕೆ ಓ ಪೋರ್ಟಲ್ ಮುಖ್ಯಸ್ಥ ಇತ್ತೀಚೆಗೆ ಜೈಲು ಪಾಲಾಗಿ ಹಿಂದಿರುಗಿದ್ದರು. ಆದರೂ, ಸುಳ್ಳು ಹೇಳುವುದನ್ನು ಮಾತ್ರ ಬಿಟ್ಟಿಲ್ಲ. ಸಂದಿಗ್ಧ ಪರಿಸ್ಥಿತಿಯಲ್ಲೂ ಸುಳ್ಳು ಹೇಳುವ ಇಂತವರ ವಿರುದ್ಧ ಕ್ರಮ ಎಂದು ಎಂಬುದು ಹಲವರ ಪ್ರಶ್ನೆಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...