Homeಮುಖಪುಟಪೋಸ್ಟ್‌ಕಾರ್ಡ್ ಹರಡಿದ ಸುಳ್ಳು: ಹೈಡ್ರಾಕ್ಸಿಕ್ಲೊರೋಕ್ವಿನ್ ಔಷಧಿ ಕಂಡುಹಿಡಿದದ್ದು ಯಾರು?

ಪೋಸ್ಟ್‌ಕಾರ್ಡ್ ಹರಡಿದ ಸುಳ್ಳು: ಹೈಡ್ರಾಕ್ಸಿಕ್ಲೊರೋಕ್ವಿನ್ ಔಷಧಿ ಕಂಡುಹಿಡಿದದ್ದು ಯಾರು?

- Advertisement -
- Advertisement -

ಸುಳ್ಳು ಸುದ್ದಿ ಎಂಬುದು ಕೊರೋನಾಗಿಂತ ಮಾರಣಾಂತಿಕ ವೈರಸ್ ಎಂಬುದರಲ್ಲಿ ಎರಡು ಮಾತಿಲ್ಲ. ಅದರಲ್ಲೂ ಕೊರೋನಾ ಹರಡುವಿಕೆ ಅತಿಯಾದಂತೆಲ್ಲಾ ಸುಳ್ಳು ಸುದ್ದಿಯ ಹರಡುವಿಕೆಯೂ ಎಗ್ಗಿಲ್ಲದೆ ಸಾಗುತ್ತಲೇ ಇದೆ. ಇನ್ನೂ ಕರ್ನಾಟಕದ ಮಟ್ಟಿಗೆ ಈ ಸುಳ್ಳು ಸುದ್ದಿಗಳ ಶೂರರು ಯಾರು? ಸುಳ್ಳೇ ಮನೆ ದೇವರು ಎಂದು ನಂಬಿ ಜೈಲುವಾಸವನ್ನೂ ಅನುಭವಿಸಿ ಬಂದವರು ಯಾರು? ಎಂಬುದನ್ನು ಕನ್ನಡಿಗರಿಗೆ ಬಿಡಿಸಿ ಹೇಳಬೇಕಿಲ್ಲ. ಏಕೆಂದರೆ ಇವೆಲ್ಲಾ ಪೋಸ್ಟ್ ಕಾರ್ಡ್ ಕನ್ನಡ ಎಂಬ ಪೋರ್ಟಲ್ ಕೆಲಸ ಎಂಬುದು ಬಹುತೇಕರಿಗೆ ಗೊತ್ತು.

ಸುಳ್ಳು ಸುದ್ದಿಗೆ ಇಡೀ ರಾಜ್ಯದಲ್ಲಿ ಕುಖ್ಯಾತಿ ಪಡೆದಿರುವ ಪೋಸ್ಟ್ ಕಾರ್ಡ್, ದಿನಕ್ಕೊಂದು ಸುಳ್ಳು ಹೇಳಿ ಮನರಂಜನೆ ನೀಡುವಲ್ಲಿ ಎತ್ತಿದ ಕೈ. ಅಂದಹಾಗೆ ಈ ಪೋರ್ಟಲ್ ಇಂದು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿರುವ ಸುಳ್ಳು ಯಾವುದು ಗೊತ್ತಾ? ಅದೇ ಪ್ರಸ್ತುತ ಕೊರೋನಾ ಸೋಂಕಿನ ಚಿಕಿತ್ಸೆಗೆ ಉಪಯೋಗಿಸಲಾಗುತ್ತಿರುವ ’ಹೈಡ್ರಾಕ್ಸಿಕ್ಲೋರೋಕ್ವಿನ್’ ಔಷಧಿ ಪಿತಾಮಹ ಆಚಾರ್ಯ ಪ್ರಫುಲ್ಲಚಂದ್ರ ರಾಯ್ ಎಂಬುದು.

Posted by Postcard ಕನ್ನಡ on Friday, April 10, 2020

ಪಶ್ಚಿಮ ಬಂಗಾಳ ಮೂಲದ ಆಚಾರ್ಯ ಪ್ರಫುಲ್ಲಾಚಂದ್ರ ರಾಯ್ ಭಾರತದ ರಸಾಯನ ಶಾಸ್ತ್ರದ ಪಿತಾಮಹ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರವೇ. ದೇಶದ ರಸಾಯನ ಶಾಸ್ತ್ರ ಕ್ಷೇತ್ರಕ್ಕೆ ಇವರು ನೀಡಿರುವ ಕೊಡುಗೆ ಅಪಾರ ಮತ್ತು ಶ್ಲಾಘನೀಯ ಎಂಬುದರಲ್ಲಿ ಎರಡು ಮಾತಿಲ್ಲ. ಈ ಕುರಿತು ಭಾರತೀಯರೆನಿಸಿಕೊಂಡವರೆಲ್ಲರಿಗೂ ಅಪಾರ ಗೌರವ ಇದೆ. ಆದರೆ, ಪ್ರಸ್ತುತ ಚರ್ಚೆಯ ಕೇಂದ್ರವಾಗಿರುವ ’ಹೈಡ್ರಾಕ್ಸಿಕ್ಲೋರೋಕ್ವಿನ್’ ಔಷಧವನ್ನು ಕಂಡು ಹಿಡಿದದ್ದು ಇವರಲ್ಲ ಎಂಬುದೇ ಸತ್ಯ. ಏಕೆಂದರೆ ಅವರು ನಿಧನವಾಗಿದ್ದು 1944ರಲ್ಲಿ. ಔಷಧಿ ಕಂಡುಹಿಡಿದಿದ್ದು 1945ರ ನಂತರ.

ಆದರೆ ಪೋಸ್ಟ್‌ ಕಾರ್ಡ್‌ ಹರಡಿದ ಈ ಹಸಿ ಸುಳ್ಳನ್ನು ಎರಡು ಸಾವಿರಕ್ಕೂ ಹೆಚ್ಚು ಜನ ಲೈಕ್‌ ಮಾಡಿದರೆ, 1800 ಜನ ಷೇರ್‌ ಮಾಡಿದ್ದಾರೆ.

ಹಾಗಾದ್ರೆ ಈ ಔಷಧಿ ಕಂಡು ಹಿಡಿದದ್ದು ಯಾರು? ಇಲ್ಲಿದೆ ಅಸಲಿ ಅತ್ಯ

ಅಸಲಿಗೆ ಮಲೇರಿಯಾಗೆ ಔಷಧ ಕಂಡು ಹಿಡಿಯುವ ನಿಟ್ಟಿನಲ್ಲಿ ಮೊಟ್ಟಮೊದಲ ಬಾರಿಗೆ ’ಹೈಡ್ರಾಕ್ಸಿಕ್ಲೋರೋಕ್ವಿನ್’ ಔಷಧವನ್ನು ಕಂಡು ಹಿಡಿದದ್ದು ಜರ್ಮನಿಯ ಬಾಯರ್ ಫಾರ್ಮ. ಇದನ್ನು ಅನ್ವೇಷಿಸಲಾದ ವರ್ಷ 1945.

ಇವತ್ತು ಜಗತ್ತಿನ 70% ’ಹೈಡ್ರಾಕ್ಸಿಕ್ಲೋರೋಕ್ವೀನ್’ ನನ್ನು ಭಾರತ ಉತ್ಪಾದಿಸುತ್ತದೆ. ಭಾರತದ ಹೀಗೆ ಅತಿಹೆಚ್ಚು ಪ್ರಮಾಣದಲ್ಲಿ ಈ ಔಷಧವನ್ನು ಉತ್ಪಾದಿಸುತ್ತದೆ ಎಂದರೆ ಅದಕ್ಕೆ ಏಕೈಕ ಕಾರಣ ಈ ದೇಶ ಮಲೇರಿಯಾ ಮತ್ತು ಡೆಂಗ್ಯೂ ಬಾಧಿತ ರಾಷ್ಟ್ರ ಎಂಬುದೊಂದೆ.

ಆದರೆ, 1945ನೇ ವರ್ಷದಲ್ಲಿ ಜರ್ಮನಿ ಮೂಲದ ಫಾರ್ಮಾ ಕಂಪೆನಿಯಿಂದ ಮಲೇರಿಯಾಗೆ ಕಂಡು ಹಿಡಿಯಲ್ಪಟ್ಟ ’ಹೈಡ್ರಾಕ್ಸಿಕ್ಲೋರೋಕ್ವಿನ್’ ಎಂಬ ಔಷಧಿಯನ್ನು, 1944ಕ್ಕೂ ಮುಂಚಿತವಾಗಿಯೇ ಮೃತಪಟ್ಟ ಆಚಾರ್ಯ ಪ್ರಫುಲ್ಲಚಂದ್ರ ರೇ ಹೇಗೆ ಕಂಡು ಹಿಡಿದರು ಎಂಬುದು ಮಾತ್ರ ಈವರೆಗೆ ತರ್ಕಕ್ಕೆ ನಿಲುಕದ್ದಾಗಿದೆ.


ಇದನ್ನೂ ಓದಿ: ಮುಖ್ಯಮಂತ್ರಿಗಳ ಎಚ್ಚರಿಕೆಯ ನಂತರವೂ ಸುಳ್ಳು ಸುದ್ದಿ ಹರಡುತ್ತಿರುವ ಪೋಸ್ಟ್‌ ಕಾರ್ಡ್‌ ಕನ್ನಡ: ಕ್ರಮ ಯಾವಾಗ? 


ಈ ಸುಳ್ಳು ಹರಡುವುದರ ಹಿಂದೆ ಒಂದು ಕಾರಣವೂ ಇದೆ. ಅದೆಂದರೆ ಈ ಹೈಡ್ರಾಕ್ಸಿಕ್ಲೋರೋಕ್ವಿನ್ ಸದ್ಯಕ್ಕೆ ಕೊರೊನಾಗೆ ಔಷಧಿಯಾಗಿ ಬಳಕೆಯಾಗುತ್ತಿದೆ. ಭಾರತದಲ್ಲಿ ಕೊರೊನಾ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿರುವುದರಿಂದ ಪ್ರಧಾನಿಗಳು ಹೈಡ್ರಾಕ್ಸಿಕ್ಲೋರೋಕ್ವಿನ್ ರಫ್ತು ಮಾಡುವುದನ್ನು ಮಾರ್ಚ್‌ 25ರಂದು ನಿಷೇಧಿಸಿದರು. ಕಾರಣ ಸ್ಪಷ್ಟ ನಮ್ಮ ದೇಶಕ್ಕೆ ಸಾಕಷ್ಟು ಮಾತ್ರೆಗಳು ಬೇಕು ಎಂಬುದಷ್ಟೆ. ಆದರೆ ಏಪ್ರಿಲ್‌ 7ರಂದು ಅಮೆರಿಕಾ ಟ್ರಂಪ್‌ರವರು ಭಾರತ ಹೈಡ್ರಾಕ್ಸಿಕ್ಲೋರೋಕ್ವಿನ್ ರಫ್ತು ಮಾಡದಿದ್ದರೆ ಪ್ರತಿಕಾರ ತೀರಿಸಿಕೊಳ್ಳುವುದಾಗಿ ಬೆದರಿಕೆ ಹಾಕಿದರು. ಕೂಡಲೇ ನಮ್ಮ ಪ್ರಧಾನಿಗಳು ರಫ್ತು ಮೇಲಿನ ನಿಷೇಧ ತೆರವುಗೊಳಿಸಿದರು. ಆದ ಡ್ಯಾಮೇಜ್‌ ಕಂಟ್ರೋಲ್‌ ಮಾಡಿಕೊಳ್ಳಲು ಪೋಸ್ಟ್‌ ಕಾರ್ಡ್‌ ಈ ರೀತಿ ಸುಳ್ಳು ಹರಡುತ್ತಿದೆ.

ಪೊಲೀಸರೇ ಕ್ರಮ ಎಂದು?

ಕೊರೋನಾ ಭೀತಿ ಹಿನ್ನೆಲೆ ಮಾಧ್ಯಮ ಮತ್ತು ಸಾಮಾಜಿಕ ಜಾಲ ತಾಣಗಳಲ್ಲಿ ಸುಳ್ಳು ಸುದ್ದಿಯನ್ನು ಹಬ್ಬಿಸುವವವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಸ್ವತಃ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ತಿಳಿಸಿದ್ದರು. ಆದರೆ, ಪೋಸ್ಟ್ ಕಾರ್ಡ್ ಎಂಬ ಪೋರ್ಟಲ್ ಸುಳ್ಳು ಹೇಳುವುದನ್ನೇ ತನ್ನ ಕುಲಕಸುಬನ್ನಾಗಿಸಿಕೊಂಡಿದೆ.

ಇದೇ ಕಾರಣಕ್ಕೆ ಓ ಪೋರ್ಟಲ್ ಮುಖ್ಯಸ್ಥ ಇತ್ತೀಚೆಗೆ ಜೈಲು ಪಾಲಾಗಿ ಹಿಂದಿರುಗಿದ್ದರು. ಆದರೂ, ಸುಳ್ಳು ಹೇಳುವುದನ್ನು ಮಾತ್ರ ಬಿಟ್ಟಿಲ್ಲ. ಸಂದಿಗ್ಧ ಪರಿಸ್ಥಿತಿಯಲ್ಲೂ ಸುಳ್ಳು ಹೇಳುವ ಇಂತವರ ವಿರುದ್ಧ ಕ್ರಮ ಎಂದು ಎಂಬುದು ಹಲವರ ಪ್ರಶ್ನೆಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...