Homeಮುಖಪುಟಪೋಸ್ಟ್‌ಕಾರ್ಡ್ ಹರಡಿದ ಸುಳ್ಳು: ಹೈಡ್ರಾಕ್ಸಿಕ್ಲೊರೋಕ್ವಿನ್ ಔಷಧಿ ಕಂಡುಹಿಡಿದದ್ದು ಯಾರು?

ಪೋಸ್ಟ್‌ಕಾರ್ಡ್ ಹರಡಿದ ಸುಳ್ಳು: ಹೈಡ್ರಾಕ್ಸಿಕ್ಲೊರೋಕ್ವಿನ್ ಔಷಧಿ ಕಂಡುಹಿಡಿದದ್ದು ಯಾರು?

- Advertisement -
- Advertisement -

ಸುಳ್ಳು ಸುದ್ದಿ ಎಂಬುದು ಕೊರೋನಾಗಿಂತ ಮಾರಣಾಂತಿಕ ವೈರಸ್ ಎಂಬುದರಲ್ಲಿ ಎರಡು ಮಾತಿಲ್ಲ. ಅದರಲ್ಲೂ ಕೊರೋನಾ ಹರಡುವಿಕೆ ಅತಿಯಾದಂತೆಲ್ಲಾ ಸುಳ್ಳು ಸುದ್ದಿಯ ಹರಡುವಿಕೆಯೂ ಎಗ್ಗಿಲ್ಲದೆ ಸಾಗುತ್ತಲೇ ಇದೆ. ಇನ್ನೂ ಕರ್ನಾಟಕದ ಮಟ್ಟಿಗೆ ಈ ಸುಳ್ಳು ಸುದ್ದಿಗಳ ಶೂರರು ಯಾರು? ಸುಳ್ಳೇ ಮನೆ ದೇವರು ಎಂದು ನಂಬಿ ಜೈಲುವಾಸವನ್ನೂ ಅನುಭವಿಸಿ ಬಂದವರು ಯಾರು? ಎಂಬುದನ್ನು ಕನ್ನಡಿಗರಿಗೆ ಬಿಡಿಸಿ ಹೇಳಬೇಕಿಲ್ಲ. ಏಕೆಂದರೆ ಇವೆಲ್ಲಾ ಪೋಸ್ಟ್ ಕಾರ್ಡ್ ಕನ್ನಡ ಎಂಬ ಪೋರ್ಟಲ್ ಕೆಲಸ ಎಂಬುದು ಬಹುತೇಕರಿಗೆ ಗೊತ್ತು.

ಸುಳ್ಳು ಸುದ್ದಿಗೆ ಇಡೀ ರಾಜ್ಯದಲ್ಲಿ ಕುಖ್ಯಾತಿ ಪಡೆದಿರುವ ಪೋಸ್ಟ್ ಕಾರ್ಡ್, ದಿನಕ್ಕೊಂದು ಸುಳ್ಳು ಹೇಳಿ ಮನರಂಜನೆ ನೀಡುವಲ್ಲಿ ಎತ್ತಿದ ಕೈ. ಅಂದಹಾಗೆ ಈ ಪೋರ್ಟಲ್ ಇಂದು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿರುವ ಸುಳ್ಳು ಯಾವುದು ಗೊತ್ತಾ? ಅದೇ ಪ್ರಸ್ತುತ ಕೊರೋನಾ ಸೋಂಕಿನ ಚಿಕಿತ್ಸೆಗೆ ಉಪಯೋಗಿಸಲಾಗುತ್ತಿರುವ ’ಹೈಡ್ರಾಕ್ಸಿಕ್ಲೋರೋಕ್ವಿನ್’ ಔಷಧಿ ಪಿತಾಮಹ ಆಚಾರ್ಯ ಪ್ರಫುಲ್ಲಚಂದ್ರ ರಾಯ್ ಎಂಬುದು.

Posted by Postcard ಕನ್ನಡ on Friday, April 10, 2020

ಪಶ್ಚಿಮ ಬಂಗಾಳ ಮೂಲದ ಆಚಾರ್ಯ ಪ್ರಫುಲ್ಲಾಚಂದ್ರ ರಾಯ್ ಭಾರತದ ರಸಾಯನ ಶಾಸ್ತ್ರದ ಪಿತಾಮಹ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರವೇ. ದೇಶದ ರಸಾಯನ ಶಾಸ್ತ್ರ ಕ್ಷೇತ್ರಕ್ಕೆ ಇವರು ನೀಡಿರುವ ಕೊಡುಗೆ ಅಪಾರ ಮತ್ತು ಶ್ಲಾಘನೀಯ ಎಂಬುದರಲ್ಲಿ ಎರಡು ಮಾತಿಲ್ಲ. ಈ ಕುರಿತು ಭಾರತೀಯರೆನಿಸಿಕೊಂಡವರೆಲ್ಲರಿಗೂ ಅಪಾರ ಗೌರವ ಇದೆ. ಆದರೆ, ಪ್ರಸ್ತುತ ಚರ್ಚೆಯ ಕೇಂದ್ರವಾಗಿರುವ ’ಹೈಡ್ರಾಕ್ಸಿಕ್ಲೋರೋಕ್ವಿನ್’ ಔಷಧವನ್ನು ಕಂಡು ಹಿಡಿದದ್ದು ಇವರಲ್ಲ ಎಂಬುದೇ ಸತ್ಯ. ಏಕೆಂದರೆ ಅವರು ನಿಧನವಾಗಿದ್ದು 1944ರಲ್ಲಿ. ಔಷಧಿ ಕಂಡುಹಿಡಿದಿದ್ದು 1945ರ ನಂತರ.

ಆದರೆ ಪೋಸ್ಟ್‌ ಕಾರ್ಡ್‌ ಹರಡಿದ ಈ ಹಸಿ ಸುಳ್ಳನ್ನು ಎರಡು ಸಾವಿರಕ್ಕೂ ಹೆಚ್ಚು ಜನ ಲೈಕ್‌ ಮಾಡಿದರೆ, 1800 ಜನ ಷೇರ್‌ ಮಾಡಿದ್ದಾರೆ.

ಹಾಗಾದ್ರೆ ಈ ಔಷಧಿ ಕಂಡು ಹಿಡಿದದ್ದು ಯಾರು? ಇಲ್ಲಿದೆ ಅಸಲಿ ಅತ್ಯ

ಅಸಲಿಗೆ ಮಲೇರಿಯಾಗೆ ಔಷಧ ಕಂಡು ಹಿಡಿಯುವ ನಿಟ್ಟಿನಲ್ಲಿ ಮೊಟ್ಟಮೊದಲ ಬಾರಿಗೆ ’ಹೈಡ್ರಾಕ್ಸಿಕ್ಲೋರೋಕ್ವಿನ್’ ಔಷಧವನ್ನು ಕಂಡು ಹಿಡಿದದ್ದು ಜರ್ಮನಿಯ ಬಾಯರ್ ಫಾರ್ಮ. ಇದನ್ನು ಅನ್ವೇಷಿಸಲಾದ ವರ್ಷ 1945.

ಇವತ್ತು ಜಗತ್ತಿನ 70% ’ಹೈಡ್ರಾಕ್ಸಿಕ್ಲೋರೋಕ್ವೀನ್’ ನನ್ನು ಭಾರತ ಉತ್ಪಾದಿಸುತ್ತದೆ. ಭಾರತದ ಹೀಗೆ ಅತಿಹೆಚ್ಚು ಪ್ರಮಾಣದಲ್ಲಿ ಈ ಔಷಧವನ್ನು ಉತ್ಪಾದಿಸುತ್ತದೆ ಎಂದರೆ ಅದಕ್ಕೆ ಏಕೈಕ ಕಾರಣ ಈ ದೇಶ ಮಲೇರಿಯಾ ಮತ್ತು ಡೆಂಗ್ಯೂ ಬಾಧಿತ ರಾಷ್ಟ್ರ ಎಂಬುದೊಂದೆ.

ಆದರೆ, 1945ನೇ ವರ್ಷದಲ್ಲಿ ಜರ್ಮನಿ ಮೂಲದ ಫಾರ್ಮಾ ಕಂಪೆನಿಯಿಂದ ಮಲೇರಿಯಾಗೆ ಕಂಡು ಹಿಡಿಯಲ್ಪಟ್ಟ ’ಹೈಡ್ರಾಕ್ಸಿಕ್ಲೋರೋಕ್ವಿನ್’ ಎಂಬ ಔಷಧಿಯನ್ನು, 1944ಕ್ಕೂ ಮುಂಚಿತವಾಗಿಯೇ ಮೃತಪಟ್ಟ ಆಚಾರ್ಯ ಪ್ರಫುಲ್ಲಚಂದ್ರ ರೇ ಹೇಗೆ ಕಂಡು ಹಿಡಿದರು ಎಂಬುದು ಮಾತ್ರ ಈವರೆಗೆ ತರ್ಕಕ್ಕೆ ನಿಲುಕದ್ದಾಗಿದೆ.


ಇದನ್ನೂ ಓದಿ: ಮುಖ್ಯಮಂತ್ರಿಗಳ ಎಚ್ಚರಿಕೆಯ ನಂತರವೂ ಸುಳ್ಳು ಸುದ್ದಿ ಹರಡುತ್ತಿರುವ ಪೋಸ್ಟ್‌ ಕಾರ್ಡ್‌ ಕನ್ನಡ: ಕ್ರಮ ಯಾವಾಗ? 


ಈ ಸುಳ್ಳು ಹರಡುವುದರ ಹಿಂದೆ ಒಂದು ಕಾರಣವೂ ಇದೆ. ಅದೆಂದರೆ ಈ ಹೈಡ್ರಾಕ್ಸಿಕ್ಲೋರೋಕ್ವಿನ್ ಸದ್ಯಕ್ಕೆ ಕೊರೊನಾಗೆ ಔಷಧಿಯಾಗಿ ಬಳಕೆಯಾಗುತ್ತಿದೆ. ಭಾರತದಲ್ಲಿ ಕೊರೊನಾ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿರುವುದರಿಂದ ಪ್ರಧಾನಿಗಳು ಹೈಡ್ರಾಕ್ಸಿಕ್ಲೋರೋಕ್ವಿನ್ ರಫ್ತು ಮಾಡುವುದನ್ನು ಮಾರ್ಚ್‌ 25ರಂದು ನಿಷೇಧಿಸಿದರು. ಕಾರಣ ಸ್ಪಷ್ಟ ನಮ್ಮ ದೇಶಕ್ಕೆ ಸಾಕಷ್ಟು ಮಾತ್ರೆಗಳು ಬೇಕು ಎಂಬುದಷ್ಟೆ. ಆದರೆ ಏಪ್ರಿಲ್‌ 7ರಂದು ಅಮೆರಿಕಾ ಟ್ರಂಪ್‌ರವರು ಭಾರತ ಹೈಡ್ರಾಕ್ಸಿಕ್ಲೋರೋಕ್ವಿನ್ ರಫ್ತು ಮಾಡದಿದ್ದರೆ ಪ್ರತಿಕಾರ ತೀರಿಸಿಕೊಳ್ಳುವುದಾಗಿ ಬೆದರಿಕೆ ಹಾಕಿದರು. ಕೂಡಲೇ ನಮ್ಮ ಪ್ರಧಾನಿಗಳು ರಫ್ತು ಮೇಲಿನ ನಿಷೇಧ ತೆರವುಗೊಳಿಸಿದರು. ಆದ ಡ್ಯಾಮೇಜ್‌ ಕಂಟ್ರೋಲ್‌ ಮಾಡಿಕೊಳ್ಳಲು ಪೋಸ್ಟ್‌ ಕಾರ್ಡ್‌ ಈ ರೀತಿ ಸುಳ್ಳು ಹರಡುತ್ತಿದೆ.

ಪೊಲೀಸರೇ ಕ್ರಮ ಎಂದು?

ಕೊರೋನಾ ಭೀತಿ ಹಿನ್ನೆಲೆ ಮಾಧ್ಯಮ ಮತ್ತು ಸಾಮಾಜಿಕ ಜಾಲ ತಾಣಗಳಲ್ಲಿ ಸುಳ್ಳು ಸುದ್ದಿಯನ್ನು ಹಬ್ಬಿಸುವವವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಸ್ವತಃ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ತಿಳಿಸಿದ್ದರು. ಆದರೆ, ಪೋಸ್ಟ್ ಕಾರ್ಡ್ ಎಂಬ ಪೋರ್ಟಲ್ ಸುಳ್ಳು ಹೇಳುವುದನ್ನೇ ತನ್ನ ಕುಲಕಸುಬನ್ನಾಗಿಸಿಕೊಂಡಿದೆ.

ಇದೇ ಕಾರಣಕ್ಕೆ ಓ ಪೋರ್ಟಲ್ ಮುಖ್ಯಸ್ಥ ಇತ್ತೀಚೆಗೆ ಜೈಲು ಪಾಲಾಗಿ ಹಿಂದಿರುಗಿದ್ದರು. ಆದರೂ, ಸುಳ್ಳು ಹೇಳುವುದನ್ನು ಮಾತ್ರ ಬಿಟ್ಟಿಲ್ಲ. ಸಂದಿಗ್ಧ ಪರಿಸ್ಥಿತಿಯಲ್ಲೂ ಸುಳ್ಳು ಹೇಳುವ ಇಂತವರ ವಿರುದ್ಧ ಕ್ರಮ ಎಂದು ಎಂಬುದು ಹಲವರ ಪ್ರಶ್ನೆಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...