Homeಮುಖಪುಟಪೋಸ್ಟ್‌ಕಾರ್ಡ್ ಹರಡಿದ ಸುಳ್ಳು: ಹೈಡ್ರಾಕ್ಸಿಕ್ಲೊರೋಕ್ವಿನ್ ಔಷಧಿ ಕಂಡುಹಿಡಿದದ್ದು ಯಾರು?

ಪೋಸ್ಟ್‌ಕಾರ್ಡ್ ಹರಡಿದ ಸುಳ್ಳು: ಹೈಡ್ರಾಕ್ಸಿಕ್ಲೊರೋಕ್ವಿನ್ ಔಷಧಿ ಕಂಡುಹಿಡಿದದ್ದು ಯಾರು?

- Advertisement -
- Advertisement -

ಸುಳ್ಳು ಸುದ್ದಿ ಎಂಬುದು ಕೊರೋನಾಗಿಂತ ಮಾರಣಾಂತಿಕ ವೈರಸ್ ಎಂಬುದರಲ್ಲಿ ಎರಡು ಮಾತಿಲ್ಲ. ಅದರಲ್ಲೂ ಕೊರೋನಾ ಹರಡುವಿಕೆ ಅತಿಯಾದಂತೆಲ್ಲಾ ಸುಳ್ಳು ಸುದ್ದಿಯ ಹರಡುವಿಕೆಯೂ ಎಗ್ಗಿಲ್ಲದೆ ಸಾಗುತ್ತಲೇ ಇದೆ. ಇನ್ನೂ ಕರ್ನಾಟಕದ ಮಟ್ಟಿಗೆ ಈ ಸುಳ್ಳು ಸುದ್ದಿಗಳ ಶೂರರು ಯಾರು? ಸುಳ್ಳೇ ಮನೆ ದೇವರು ಎಂದು ನಂಬಿ ಜೈಲುವಾಸವನ್ನೂ ಅನುಭವಿಸಿ ಬಂದವರು ಯಾರು? ಎಂಬುದನ್ನು ಕನ್ನಡಿಗರಿಗೆ ಬಿಡಿಸಿ ಹೇಳಬೇಕಿಲ್ಲ. ಏಕೆಂದರೆ ಇವೆಲ್ಲಾ ಪೋಸ್ಟ್ ಕಾರ್ಡ್ ಕನ್ನಡ ಎಂಬ ಪೋರ್ಟಲ್ ಕೆಲಸ ಎಂಬುದು ಬಹುತೇಕರಿಗೆ ಗೊತ್ತು.

ಸುಳ್ಳು ಸುದ್ದಿಗೆ ಇಡೀ ರಾಜ್ಯದಲ್ಲಿ ಕುಖ್ಯಾತಿ ಪಡೆದಿರುವ ಪೋಸ್ಟ್ ಕಾರ್ಡ್, ದಿನಕ್ಕೊಂದು ಸುಳ್ಳು ಹೇಳಿ ಮನರಂಜನೆ ನೀಡುವಲ್ಲಿ ಎತ್ತಿದ ಕೈ. ಅಂದಹಾಗೆ ಈ ಪೋರ್ಟಲ್ ಇಂದು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿರುವ ಸುಳ್ಳು ಯಾವುದು ಗೊತ್ತಾ? ಅದೇ ಪ್ರಸ್ತುತ ಕೊರೋನಾ ಸೋಂಕಿನ ಚಿಕಿತ್ಸೆಗೆ ಉಪಯೋಗಿಸಲಾಗುತ್ತಿರುವ ’ಹೈಡ್ರಾಕ್ಸಿಕ್ಲೋರೋಕ್ವಿನ್’ ಔಷಧಿ ಪಿತಾಮಹ ಆಚಾರ್ಯ ಪ್ರಫುಲ್ಲಚಂದ್ರ ರಾಯ್ ಎಂಬುದು.

Posted by Postcard ಕನ್ನಡ on Friday, April 10, 2020

ಪಶ್ಚಿಮ ಬಂಗಾಳ ಮೂಲದ ಆಚಾರ್ಯ ಪ್ರಫುಲ್ಲಾಚಂದ್ರ ರಾಯ್ ಭಾರತದ ರಸಾಯನ ಶಾಸ್ತ್ರದ ಪಿತಾಮಹ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರವೇ. ದೇಶದ ರಸಾಯನ ಶಾಸ್ತ್ರ ಕ್ಷೇತ್ರಕ್ಕೆ ಇವರು ನೀಡಿರುವ ಕೊಡುಗೆ ಅಪಾರ ಮತ್ತು ಶ್ಲಾಘನೀಯ ಎಂಬುದರಲ್ಲಿ ಎರಡು ಮಾತಿಲ್ಲ. ಈ ಕುರಿತು ಭಾರತೀಯರೆನಿಸಿಕೊಂಡವರೆಲ್ಲರಿಗೂ ಅಪಾರ ಗೌರವ ಇದೆ. ಆದರೆ, ಪ್ರಸ್ತುತ ಚರ್ಚೆಯ ಕೇಂದ್ರವಾಗಿರುವ ’ಹೈಡ್ರಾಕ್ಸಿಕ್ಲೋರೋಕ್ವಿನ್’ ಔಷಧವನ್ನು ಕಂಡು ಹಿಡಿದದ್ದು ಇವರಲ್ಲ ಎಂಬುದೇ ಸತ್ಯ. ಏಕೆಂದರೆ ಅವರು ನಿಧನವಾಗಿದ್ದು 1944ರಲ್ಲಿ. ಔಷಧಿ ಕಂಡುಹಿಡಿದಿದ್ದು 1945ರ ನಂತರ.

ಆದರೆ ಪೋಸ್ಟ್‌ ಕಾರ್ಡ್‌ ಹರಡಿದ ಈ ಹಸಿ ಸುಳ್ಳನ್ನು ಎರಡು ಸಾವಿರಕ್ಕೂ ಹೆಚ್ಚು ಜನ ಲೈಕ್‌ ಮಾಡಿದರೆ, 1800 ಜನ ಷೇರ್‌ ಮಾಡಿದ್ದಾರೆ.

ಹಾಗಾದ್ರೆ ಈ ಔಷಧಿ ಕಂಡು ಹಿಡಿದದ್ದು ಯಾರು? ಇಲ್ಲಿದೆ ಅಸಲಿ ಅತ್ಯ

ಅಸಲಿಗೆ ಮಲೇರಿಯಾಗೆ ಔಷಧ ಕಂಡು ಹಿಡಿಯುವ ನಿಟ್ಟಿನಲ್ಲಿ ಮೊಟ್ಟಮೊದಲ ಬಾರಿಗೆ ’ಹೈಡ್ರಾಕ್ಸಿಕ್ಲೋರೋಕ್ವಿನ್’ ಔಷಧವನ್ನು ಕಂಡು ಹಿಡಿದದ್ದು ಜರ್ಮನಿಯ ಬಾಯರ್ ಫಾರ್ಮ. ಇದನ್ನು ಅನ್ವೇಷಿಸಲಾದ ವರ್ಷ 1945.

ಇವತ್ತು ಜಗತ್ತಿನ 70% ’ಹೈಡ್ರಾಕ್ಸಿಕ್ಲೋರೋಕ್ವೀನ್’ ನನ್ನು ಭಾರತ ಉತ್ಪಾದಿಸುತ್ತದೆ. ಭಾರತದ ಹೀಗೆ ಅತಿಹೆಚ್ಚು ಪ್ರಮಾಣದಲ್ಲಿ ಈ ಔಷಧವನ್ನು ಉತ್ಪಾದಿಸುತ್ತದೆ ಎಂದರೆ ಅದಕ್ಕೆ ಏಕೈಕ ಕಾರಣ ಈ ದೇಶ ಮಲೇರಿಯಾ ಮತ್ತು ಡೆಂಗ್ಯೂ ಬಾಧಿತ ರಾಷ್ಟ್ರ ಎಂಬುದೊಂದೆ.

ಆದರೆ, 1945ನೇ ವರ್ಷದಲ್ಲಿ ಜರ್ಮನಿ ಮೂಲದ ಫಾರ್ಮಾ ಕಂಪೆನಿಯಿಂದ ಮಲೇರಿಯಾಗೆ ಕಂಡು ಹಿಡಿಯಲ್ಪಟ್ಟ ’ಹೈಡ್ರಾಕ್ಸಿಕ್ಲೋರೋಕ್ವಿನ್’ ಎಂಬ ಔಷಧಿಯನ್ನು, 1944ಕ್ಕೂ ಮುಂಚಿತವಾಗಿಯೇ ಮೃತಪಟ್ಟ ಆಚಾರ್ಯ ಪ್ರಫುಲ್ಲಚಂದ್ರ ರೇ ಹೇಗೆ ಕಂಡು ಹಿಡಿದರು ಎಂಬುದು ಮಾತ್ರ ಈವರೆಗೆ ತರ್ಕಕ್ಕೆ ನಿಲುಕದ್ದಾಗಿದೆ.


ಇದನ್ನೂ ಓದಿ: ಮುಖ್ಯಮಂತ್ರಿಗಳ ಎಚ್ಚರಿಕೆಯ ನಂತರವೂ ಸುಳ್ಳು ಸುದ್ದಿ ಹರಡುತ್ತಿರುವ ಪೋಸ್ಟ್‌ ಕಾರ್ಡ್‌ ಕನ್ನಡ: ಕ್ರಮ ಯಾವಾಗ? 


ಈ ಸುಳ್ಳು ಹರಡುವುದರ ಹಿಂದೆ ಒಂದು ಕಾರಣವೂ ಇದೆ. ಅದೆಂದರೆ ಈ ಹೈಡ್ರಾಕ್ಸಿಕ್ಲೋರೋಕ್ವಿನ್ ಸದ್ಯಕ್ಕೆ ಕೊರೊನಾಗೆ ಔಷಧಿಯಾಗಿ ಬಳಕೆಯಾಗುತ್ತಿದೆ. ಭಾರತದಲ್ಲಿ ಕೊರೊನಾ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿರುವುದರಿಂದ ಪ್ರಧಾನಿಗಳು ಹೈಡ್ರಾಕ್ಸಿಕ್ಲೋರೋಕ್ವಿನ್ ರಫ್ತು ಮಾಡುವುದನ್ನು ಮಾರ್ಚ್‌ 25ರಂದು ನಿಷೇಧಿಸಿದರು. ಕಾರಣ ಸ್ಪಷ್ಟ ನಮ್ಮ ದೇಶಕ್ಕೆ ಸಾಕಷ್ಟು ಮಾತ್ರೆಗಳು ಬೇಕು ಎಂಬುದಷ್ಟೆ. ಆದರೆ ಏಪ್ರಿಲ್‌ 7ರಂದು ಅಮೆರಿಕಾ ಟ್ರಂಪ್‌ರವರು ಭಾರತ ಹೈಡ್ರಾಕ್ಸಿಕ್ಲೋರೋಕ್ವಿನ್ ರಫ್ತು ಮಾಡದಿದ್ದರೆ ಪ್ರತಿಕಾರ ತೀರಿಸಿಕೊಳ್ಳುವುದಾಗಿ ಬೆದರಿಕೆ ಹಾಕಿದರು. ಕೂಡಲೇ ನಮ್ಮ ಪ್ರಧಾನಿಗಳು ರಫ್ತು ಮೇಲಿನ ನಿಷೇಧ ತೆರವುಗೊಳಿಸಿದರು. ಆದ ಡ್ಯಾಮೇಜ್‌ ಕಂಟ್ರೋಲ್‌ ಮಾಡಿಕೊಳ್ಳಲು ಪೋಸ್ಟ್‌ ಕಾರ್ಡ್‌ ಈ ರೀತಿ ಸುಳ್ಳು ಹರಡುತ್ತಿದೆ.

ಪೊಲೀಸರೇ ಕ್ರಮ ಎಂದು?

ಕೊರೋನಾ ಭೀತಿ ಹಿನ್ನೆಲೆ ಮಾಧ್ಯಮ ಮತ್ತು ಸಾಮಾಜಿಕ ಜಾಲ ತಾಣಗಳಲ್ಲಿ ಸುಳ್ಳು ಸುದ್ದಿಯನ್ನು ಹಬ್ಬಿಸುವವವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಸ್ವತಃ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ತಿಳಿಸಿದ್ದರು. ಆದರೆ, ಪೋಸ್ಟ್ ಕಾರ್ಡ್ ಎಂಬ ಪೋರ್ಟಲ್ ಸುಳ್ಳು ಹೇಳುವುದನ್ನೇ ತನ್ನ ಕುಲಕಸುಬನ್ನಾಗಿಸಿಕೊಂಡಿದೆ.

ಇದೇ ಕಾರಣಕ್ಕೆ ಓ ಪೋರ್ಟಲ್ ಮುಖ್ಯಸ್ಥ ಇತ್ತೀಚೆಗೆ ಜೈಲು ಪಾಲಾಗಿ ಹಿಂದಿರುಗಿದ್ದರು. ಆದರೂ, ಸುಳ್ಳು ಹೇಳುವುದನ್ನು ಮಾತ್ರ ಬಿಟ್ಟಿಲ್ಲ. ಸಂದಿಗ್ಧ ಪರಿಸ್ಥಿತಿಯಲ್ಲೂ ಸುಳ್ಳು ಹೇಳುವ ಇಂತವರ ವಿರುದ್ಧ ಕ್ರಮ ಎಂದು ಎಂಬುದು ಹಲವರ ಪ್ರಶ್ನೆಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...

‘ನಿಮ್ಮ ಮೌನ ಸ್ವೀಕಾರಾರ್ಹವಲ್ಲ’: ರಾಮ ಮಂದಿರ ದೇಣಿಗೆ ‘ಕಳ್ಳತನ’ದ ತನಿಖೆಗೆ ಮೋದಿಗೆ ಖರ್ಗೆ-ರಾಹುಲ್ ಗಾಂಧಿ ಪತ್ರ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಆರ್ಥಿಕ ಅಕ್ರಮ ಹಾಗೂ ‘ಕಳ್ಳತನ’ದ ವಿಷಯ ರಾಷ್ಟ್ರ ರಾಜಕಾರಣದಲ್ಲಿ...

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...