Homeಮುಖಪುಟಪೋಸ್ಟ್‌ಕಾರ್ಡ್ ಹರಡಿದ ಸುಳ್ಳು: ಹೈಡ್ರಾಕ್ಸಿಕ್ಲೊರೋಕ್ವಿನ್ ಔಷಧಿ ಕಂಡುಹಿಡಿದದ್ದು ಯಾರು?

ಪೋಸ್ಟ್‌ಕಾರ್ಡ್ ಹರಡಿದ ಸುಳ್ಳು: ಹೈಡ್ರಾಕ್ಸಿಕ್ಲೊರೋಕ್ವಿನ್ ಔಷಧಿ ಕಂಡುಹಿಡಿದದ್ದು ಯಾರು?

- Advertisement -
- Advertisement -

ಸುಳ್ಳು ಸುದ್ದಿ ಎಂಬುದು ಕೊರೋನಾಗಿಂತ ಮಾರಣಾಂತಿಕ ವೈರಸ್ ಎಂಬುದರಲ್ಲಿ ಎರಡು ಮಾತಿಲ್ಲ. ಅದರಲ್ಲೂ ಕೊರೋನಾ ಹರಡುವಿಕೆ ಅತಿಯಾದಂತೆಲ್ಲಾ ಸುಳ್ಳು ಸುದ್ದಿಯ ಹರಡುವಿಕೆಯೂ ಎಗ್ಗಿಲ್ಲದೆ ಸಾಗುತ್ತಲೇ ಇದೆ. ಇನ್ನೂ ಕರ್ನಾಟಕದ ಮಟ್ಟಿಗೆ ಈ ಸುಳ್ಳು ಸುದ್ದಿಗಳ ಶೂರರು ಯಾರು? ಸುಳ್ಳೇ ಮನೆ ದೇವರು ಎಂದು ನಂಬಿ ಜೈಲುವಾಸವನ್ನೂ ಅನುಭವಿಸಿ ಬಂದವರು ಯಾರು? ಎಂಬುದನ್ನು ಕನ್ನಡಿಗರಿಗೆ ಬಿಡಿಸಿ ಹೇಳಬೇಕಿಲ್ಲ. ಏಕೆಂದರೆ ಇವೆಲ್ಲಾ ಪೋಸ್ಟ್ ಕಾರ್ಡ್ ಕನ್ನಡ ಎಂಬ ಪೋರ್ಟಲ್ ಕೆಲಸ ಎಂಬುದು ಬಹುತೇಕರಿಗೆ ಗೊತ್ತು.

ಸುಳ್ಳು ಸುದ್ದಿಗೆ ಇಡೀ ರಾಜ್ಯದಲ್ಲಿ ಕುಖ್ಯಾತಿ ಪಡೆದಿರುವ ಪೋಸ್ಟ್ ಕಾರ್ಡ್, ದಿನಕ್ಕೊಂದು ಸುಳ್ಳು ಹೇಳಿ ಮನರಂಜನೆ ನೀಡುವಲ್ಲಿ ಎತ್ತಿದ ಕೈ. ಅಂದಹಾಗೆ ಈ ಪೋರ್ಟಲ್ ಇಂದು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿರುವ ಸುಳ್ಳು ಯಾವುದು ಗೊತ್ತಾ? ಅದೇ ಪ್ರಸ್ತುತ ಕೊರೋನಾ ಸೋಂಕಿನ ಚಿಕಿತ್ಸೆಗೆ ಉಪಯೋಗಿಸಲಾಗುತ್ತಿರುವ ’ಹೈಡ್ರಾಕ್ಸಿಕ್ಲೋರೋಕ್ವಿನ್’ ಔಷಧಿ ಪಿತಾಮಹ ಆಚಾರ್ಯ ಪ್ರಫುಲ್ಲಚಂದ್ರ ರಾಯ್ ಎಂಬುದು.

Posted by Postcard ಕನ್ನಡ on Friday, April 10, 2020

ಪಶ್ಚಿಮ ಬಂಗಾಳ ಮೂಲದ ಆಚಾರ್ಯ ಪ್ರಫುಲ್ಲಾಚಂದ್ರ ರಾಯ್ ಭಾರತದ ರಸಾಯನ ಶಾಸ್ತ್ರದ ಪಿತಾಮಹ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರವೇ. ದೇಶದ ರಸಾಯನ ಶಾಸ್ತ್ರ ಕ್ಷೇತ್ರಕ್ಕೆ ಇವರು ನೀಡಿರುವ ಕೊಡುಗೆ ಅಪಾರ ಮತ್ತು ಶ್ಲಾಘನೀಯ ಎಂಬುದರಲ್ಲಿ ಎರಡು ಮಾತಿಲ್ಲ. ಈ ಕುರಿತು ಭಾರತೀಯರೆನಿಸಿಕೊಂಡವರೆಲ್ಲರಿಗೂ ಅಪಾರ ಗೌರವ ಇದೆ. ಆದರೆ, ಪ್ರಸ್ತುತ ಚರ್ಚೆಯ ಕೇಂದ್ರವಾಗಿರುವ ’ಹೈಡ್ರಾಕ್ಸಿಕ್ಲೋರೋಕ್ವಿನ್’ ಔಷಧವನ್ನು ಕಂಡು ಹಿಡಿದದ್ದು ಇವರಲ್ಲ ಎಂಬುದೇ ಸತ್ಯ. ಏಕೆಂದರೆ ಅವರು ನಿಧನವಾಗಿದ್ದು 1944ರಲ್ಲಿ. ಔಷಧಿ ಕಂಡುಹಿಡಿದಿದ್ದು 1945ರ ನಂತರ.

ಆದರೆ ಪೋಸ್ಟ್‌ ಕಾರ್ಡ್‌ ಹರಡಿದ ಈ ಹಸಿ ಸುಳ್ಳನ್ನು ಎರಡು ಸಾವಿರಕ್ಕೂ ಹೆಚ್ಚು ಜನ ಲೈಕ್‌ ಮಾಡಿದರೆ, 1800 ಜನ ಷೇರ್‌ ಮಾಡಿದ್ದಾರೆ.

ಹಾಗಾದ್ರೆ ಈ ಔಷಧಿ ಕಂಡು ಹಿಡಿದದ್ದು ಯಾರು? ಇಲ್ಲಿದೆ ಅಸಲಿ ಅತ್ಯ

ಅಸಲಿಗೆ ಮಲೇರಿಯಾಗೆ ಔಷಧ ಕಂಡು ಹಿಡಿಯುವ ನಿಟ್ಟಿನಲ್ಲಿ ಮೊಟ್ಟಮೊದಲ ಬಾರಿಗೆ ’ಹೈಡ್ರಾಕ್ಸಿಕ್ಲೋರೋಕ್ವಿನ್’ ಔಷಧವನ್ನು ಕಂಡು ಹಿಡಿದದ್ದು ಜರ್ಮನಿಯ ಬಾಯರ್ ಫಾರ್ಮ. ಇದನ್ನು ಅನ್ವೇಷಿಸಲಾದ ವರ್ಷ 1945.

ಇವತ್ತು ಜಗತ್ತಿನ 70% ’ಹೈಡ್ರಾಕ್ಸಿಕ್ಲೋರೋಕ್ವೀನ್’ ನನ್ನು ಭಾರತ ಉತ್ಪಾದಿಸುತ್ತದೆ. ಭಾರತದ ಹೀಗೆ ಅತಿಹೆಚ್ಚು ಪ್ರಮಾಣದಲ್ಲಿ ಈ ಔಷಧವನ್ನು ಉತ್ಪಾದಿಸುತ್ತದೆ ಎಂದರೆ ಅದಕ್ಕೆ ಏಕೈಕ ಕಾರಣ ಈ ದೇಶ ಮಲೇರಿಯಾ ಮತ್ತು ಡೆಂಗ್ಯೂ ಬಾಧಿತ ರಾಷ್ಟ್ರ ಎಂಬುದೊಂದೆ.

ಆದರೆ, 1945ನೇ ವರ್ಷದಲ್ಲಿ ಜರ್ಮನಿ ಮೂಲದ ಫಾರ್ಮಾ ಕಂಪೆನಿಯಿಂದ ಮಲೇರಿಯಾಗೆ ಕಂಡು ಹಿಡಿಯಲ್ಪಟ್ಟ ’ಹೈಡ್ರಾಕ್ಸಿಕ್ಲೋರೋಕ್ವಿನ್’ ಎಂಬ ಔಷಧಿಯನ್ನು, 1944ಕ್ಕೂ ಮುಂಚಿತವಾಗಿಯೇ ಮೃತಪಟ್ಟ ಆಚಾರ್ಯ ಪ್ರಫುಲ್ಲಚಂದ್ರ ರೇ ಹೇಗೆ ಕಂಡು ಹಿಡಿದರು ಎಂಬುದು ಮಾತ್ರ ಈವರೆಗೆ ತರ್ಕಕ್ಕೆ ನಿಲುಕದ್ದಾಗಿದೆ.


ಇದನ್ನೂ ಓದಿ: ಮುಖ್ಯಮಂತ್ರಿಗಳ ಎಚ್ಚರಿಕೆಯ ನಂತರವೂ ಸುಳ್ಳು ಸುದ್ದಿ ಹರಡುತ್ತಿರುವ ಪೋಸ್ಟ್‌ ಕಾರ್ಡ್‌ ಕನ್ನಡ: ಕ್ರಮ ಯಾವಾಗ? 


ಈ ಸುಳ್ಳು ಹರಡುವುದರ ಹಿಂದೆ ಒಂದು ಕಾರಣವೂ ಇದೆ. ಅದೆಂದರೆ ಈ ಹೈಡ್ರಾಕ್ಸಿಕ್ಲೋರೋಕ್ವಿನ್ ಸದ್ಯಕ್ಕೆ ಕೊರೊನಾಗೆ ಔಷಧಿಯಾಗಿ ಬಳಕೆಯಾಗುತ್ತಿದೆ. ಭಾರತದಲ್ಲಿ ಕೊರೊನಾ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿರುವುದರಿಂದ ಪ್ರಧಾನಿಗಳು ಹೈಡ್ರಾಕ್ಸಿಕ್ಲೋರೋಕ್ವಿನ್ ರಫ್ತು ಮಾಡುವುದನ್ನು ಮಾರ್ಚ್‌ 25ರಂದು ನಿಷೇಧಿಸಿದರು. ಕಾರಣ ಸ್ಪಷ್ಟ ನಮ್ಮ ದೇಶಕ್ಕೆ ಸಾಕಷ್ಟು ಮಾತ್ರೆಗಳು ಬೇಕು ಎಂಬುದಷ್ಟೆ. ಆದರೆ ಏಪ್ರಿಲ್‌ 7ರಂದು ಅಮೆರಿಕಾ ಟ್ರಂಪ್‌ರವರು ಭಾರತ ಹೈಡ್ರಾಕ್ಸಿಕ್ಲೋರೋಕ್ವಿನ್ ರಫ್ತು ಮಾಡದಿದ್ದರೆ ಪ್ರತಿಕಾರ ತೀರಿಸಿಕೊಳ್ಳುವುದಾಗಿ ಬೆದರಿಕೆ ಹಾಕಿದರು. ಕೂಡಲೇ ನಮ್ಮ ಪ್ರಧಾನಿಗಳು ರಫ್ತು ಮೇಲಿನ ನಿಷೇಧ ತೆರವುಗೊಳಿಸಿದರು. ಆದ ಡ್ಯಾಮೇಜ್‌ ಕಂಟ್ರೋಲ್‌ ಮಾಡಿಕೊಳ್ಳಲು ಪೋಸ್ಟ್‌ ಕಾರ್ಡ್‌ ಈ ರೀತಿ ಸುಳ್ಳು ಹರಡುತ್ತಿದೆ.

ಪೊಲೀಸರೇ ಕ್ರಮ ಎಂದು?

ಕೊರೋನಾ ಭೀತಿ ಹಿನ್ನೆಲೆ ಮಾಧ್ಯಮ ಮತ್ತು ಸಾಮಾಜಿಕ ಜಾಲ ತಾಣಗಳಲ್ಲಿ ಸುಳ್ಳು ಸುದ್ದಿಯನ್ನು ಹಬ್ಬಿಸುವವವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಸ್ವತಃ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ತಿಳಿಸಿದ್ದರು. ಆದರೆ, ಪೋಸ್ಟ್ ಕಾರ್ಡ್ ಎಂಬ ಪೋರ್ಟಲ್ ಸುಳ್ಳು ಹೇಳುವುದನ್ನೇ ತನ್ನ ಕುಲಕಸುಬನ್ನಾಗಿಸಿಕೊಂಡಿದೆ.

ಇದೇ ಕಾರಣಕ್ಕೆ ಓ ಪೋರ್ಟಲ್ ಮುಖ್ಯಸ್ಥ ಇತ್ತೀಚೆಗೆ ಜೈಲು ಪಾಲಾಗಿ ಹಿಂದಿರುಗಿದ್ದರು. ಆದರೂ, ಸುಳ್ಳು ಹೇಳುವುದನ್ನು ಮಾತ್ರ ಬಿಟ್ಟಿಲ್ಲ. ಸಂದಿಗ್ಧ ಪರಿಸ್ಥಿತಿಯಲ್ಲೂ ಸುಳ್ಳು ಹೇಳುವ ಇಂತವರ ವಿರುದ್ಧ ಕ್ರಮ ಎಂದು ಎಂಬುದು ಹಲವರ ಪ್ರಶ್ನೆಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...