Homeಮುಖಪುಟಪೋಸ್ಟ್‌ಕಾರ್ಡ್ ಹರಡಿದ ಸುಳ್ಳು: ಹೈಡ್ರಾಕ್ಸಿಕ್ಲೊರೋಕ್ವಿನ್ ಔಷಧಿ ಕಂಡುಹಿಡಿದದ್ದು ಯಾರು?

ಪೋಸ್ಟ್‌ಕಾರ್ಡ್ ಹರಡಿದ ಸುಳ್ಳು: ಹೈಡ್ರಾಕ್ಸಿಕ್ಲೊರೋಕ್ವಿನ್ ಔಷಧಿ ಕಂಡುಹಿಡಿದದ್ದು ಯಾರು?

- Advertisement -
- Advertisement -

ಸುಳ್ಳು ಸುದ್ದಿ ಎಂಬುದು ಕೊರೋನಾಗಿಂತ ಮಾರಣಾಂತಿಕ ವೈರಸ್ ಎಂಬುದರಲ್ಲಿ ಎರಡು ಮಾತಿಲ್ಲ. ಅದರಲ್ಲೂ ಕೊರೋನಾ ಹರಡುವಿಕೆ ಅತಿಯಾದಂತೆಲ್ಲಾ ಸುಳ್ಳು ಸುದ್ದಿಯ ಹರಡುವಿಕೆಯೂ ಎಗ್ಗಿಲ್ಲದೆ ಸಾಗುತ್ತಲೇ ಇದೆ. ಇನ್ನೂ ಕರ್ನಾಟಕದ ಮಟ್ಟಿಗೆ ಈ ಸುಳ್ಳು ಸುದ್ದಿಗಳ ಶೂರರು ಯಾರು? ಸುಳ್ಳೇ ಮನೆ ದೇವರು ಎಂದು ನಂಬಿ ಜೈಲುವಾಸವನ್ನೂ ಅನುಭವಿಸಿ ಬಂದವರು ಯಾರು? ಎಂಬುದನ್ನು ಕನ್ನಡಿಗರಿಗೆ ಬಿಡಿಸಿ ಹೇಳಬೇಕಿಲ್ಲ. ಏಕೆಂದರೆ ಇವೆಲ್ಲಾ ಪೋಸ್ಟ್ ಕಾರ್ಡ್ ಕನ್ನಡ ಎಂಬ ಪೋರ್ಟಲ್ ಕೆಲಸ ಎಂಬುದು ಬಹುತೇಕರಿಗೆ ಗೊತ್ತು.

ಸುಳ್ಳು ಸುದ್ದಿಗೆ ಇಡೀ ರಾಜ್ಯದಲ್ಲಿ ಕುಖ್ಯಾತಿ ಪಡೆದಿರುವ ಪೋಸ್ಟ್ ಕಾರ್ಡ್, ದಿನಕ್ಕೊಂದು ಸುಳ್ಳು ಹೇಳಿ ಮನರಂಜನೆ ನೀಡುವಲ್ಲಿ ಎತ್ತಿದ ಕೈ. ಅಂದಹಾಗೆ ಈ ಪೋರ್ಟಲ್ ಇಂದು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿರುವ ಸುಳ್ಳು ಯಾವುದು ಗೊತ್ತಾ? ಅದೇ ಪ್ರಸ್ತುತ ಕೊರೋನಾ ಸೋಂಕಿನ ಚಿಕಿತ್ಸೆಗೆ ಉಪಯೋಗಿಸಲಾಗುತ್ತಿರುವ ’ಹೈಡ್ರಾಕ್ಸಿಕ್ಲೋರೋಕ್ವಿನ್’ ಔಷಧಿ ಪಿತಾಮಹ ಆಚಾರ್ಯ ಪ್ರಫುಲ್ಲಚಂದ್ರ ರಾಯ್ ಎಂಬುದು.

Posted by Postcard ಕನ್ನಡ on Friday, April 10, 2020

ಪಶ್ಚಿಮ ಬಂಗಾಳ ಮೂಲದ ಆಚಾರ್ಯ ಪ್ರಫುಲ್ಲಾಚಂದ್ರ ರಾಯ್ ಭಾರತದ ರಸಾಯನ ಶಾಸ್ತ್ರದ ಪಿತಾಮಹ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರವೇ. ದೇಶದ ರಸಾಯನ ಶಾಸ್ತ್ರ ಕ್ಷೇತ್ರಕ್ಕೆ ಇವರು ನೀಡಿರುವ ಕೊಡುಗೆ ಅಪಾರ ಮತ್ತು ಶ್ಲಾಘನೀಯ ಎಂಬುದರಲ್ಲಿ ಎರಡು ಮಾತಿಲ್ಲ. ಈ ಕುರಿತು ಭಾರತೀಯರೆನಿಸಿಕೊಂಡವರೆಲ್ಲರಿಗೂ ಅಪಾರ ಗೌರವ ಇದೆ. ಆದರೆ, ಪ್ರಸ್ತುತ ಚರ್ಚೆಯ ಕೇಂದ್ರವಾಗಿರುವ ’ಹೈಡ್ರಾಕ್ಸಿಕ್ಲೋರೋಕ್ವಿನ್’ ಔಷಧವನ್ನು ಕಂಡು ಹಿಡಿದದ್ದು ಇವರಲ್ಲ ಎಂಬುದೇ ಸತ್ಯ. ಏಕೆಂದರೆ ಅವರು ನಿಧನವಾಗಿದ್ದು 1944ರಲ್ಲಿ. ಔಷಧಿ ಕಂಡುಹಿಡಿದಿದ್ದು 1945ರ ನಂತರ.

ಆದರೆ ಪೋಸ್ಟ್‌ ಕಾರ್ಡ್‌ ಹರಡಿದ ಈ ಹಸಿ ಸುಳ್ಳನ್ನು ಎರಡು ಸಾವಿರಕ್ಕೂ ಹೆಚ್ಚು ಜನ ಲೈಕ್‌ ಮಾಡಿದರೆ, 1800 ಜನ ಷೇರ್‌ ಮಾಡಿದ್ದಾರೆ.

ಹಾಗಾದ್ರೆ ಈ ಔಷಧಿ ಕಂಡು ಹಿಡಿದದ್ದು ಯಾರು? ಇಲ್ಲಿದೆ ಅಸಲಿ ಅತ್ಯ

ಅಸಲಿಗೆ ಮಲೇರಿಯಾಗೆ ಔಷಧ ಕಂಡು ಹಿಡಿಯುವ ನಿಟ್ಟಿನಲ್ಲಿ ಮೊಟ್ಟಮೊದಲ ಬಾರಿಗೆ ’ಹೈಡ್ರಾಕ್ಸಿಕ್ಲೋರೋಕ್ವಿನ್’ ಔಷಧವನ್ನು ಕಂಡು ಹಿಡಿದದ್ದು ಜರ್ಮನಿಯ ಬಾಯರ್ ಫಾರ್ಮ. ಇದನ್ನು ಅನ್ವೇಷಿಸಲಾದ ವರ್ಷ 1945.

ಇವತ್ತು ಜಗತ್ತಿನ 70% ’ಹೈಡ್ರಾಕ್ಸಿಕ್ಲೋರೋಕ್ವೀನ್’ ನನ್ನು ಭಾರತ ಉತ್ಪಾದಿಸುತ್ತದೆ. ಭಾರತದ ಹೀಗೆ ಅತಿಹೆಚ್ಚು ಪ್ರಮಾಣದಲ್ಲಿ ಈ ಔಷಧವನ್ನು ಉತ್ಪಾದಿಸುತ್ತದೆ ಎಂದರೆ ಅದಕ್ಕೆ ಏಕೈಕ ಕಾರಣ ಈ ದೇಶ ಮಲೇರಿಯಾ ಮತ್ತು ಡೆಂಗ್ಯೂ ಬಾಧಿತ ರಾಷ್ಟ್ರ ಎಂಬುದೊಂದೆ.

ಆದರೆ, 1945ನೇ ವರ್ಷದಲ್ಲಿ ಜರ್ಮನಿ ಮೂಲದ ಫಾರ್ಮಾ ಕಂಪೆನಿಯಿಂದ ಮಲೇರಿಯಾಗೆ ಕಂಡು ಹಿಡಿಯಲ್ಪಟ್ಟ ’ಹೈಡ್ರಾಕ್ಸಿಕ್ಲೋರೋಕ್ವಿನ್’ ಎಂಬ ಔಷಧಿಯನ್ನು, 1944ಕ್ಕೂ ಮುಂಚಿತವಾಗಿಯೇ ಮೃತಪಟ್ಟ ಆಚಾರ್ಯ ಪ್ರಫುಲ್ಲಚಂದ್ರ ರೇ ಹೇಗೆ ಕಂಡು ಹಿಡಿದರು ಎಂಬುದು ಮಾತ್ರ ಈವರೆಗೆ ತರ್ಕಕ್ಕೆ ನಿಲುಕದ್ದಾಗಿದೆ.


ಇದನ್ನೂ ಓದಿ: ಮುಖ್ಯಮಂತ್ರಿಗಳ ಎಚ್ಚರಿಕೆಯ ನಂತರವೂ ಸುಳ್ಳು ಸುದ್ದಿ ಹರಡುತ್ತಿರುವ ಪೋಸ್ಟ್‌ ಕಾರ್ಡ್‌ ಕನ್ನಡ: ಕ್ರಮ ಯಾವಾಗ? 


ಈ ಸುಳ್ಳು ಹರಡುವುದರ ಹಿಂದೆ ಒಂದು ಕಾರಣವೂ ಇದೆ. ಅದೆಂದರೆ ಈ ಹೈಡ್ರಾಕ್ಸಿಕ್ಲೋರೋಕ್ವಿನ್ ಸದ್ಯಕ್ಕೆ ಕೊರೊನಾಗೆ ಔಷಧಿಯಾಗಿ ಬಳಕೆಯಾಗುತ್ತಿದೆ. ಭಾರತದಲ್ಲಿ ಕೊರೊನಾ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿರುವುದರಿಂದ ಪ್ರಧಾನಿಗಳು ಹೈಡ್ರಾಕ್ಸಿಕ್ಲೋರೋಕ್ವಿನ್ ರಫ್ತು ಮಾಡುವುದನ್ನು ಮಾರ್ಚ್‌ 25ರಂದು ನಿಷೇಧಿಸಿದರು. ಕಾರಣ ಸ್ಪಷ್ಟ ನಮ್ಮ ದೇಶಕ್ಕೆ ಸಾಕಷ್ಟು ಮಾತ್ರೆಗಳು ಬೇಕು ಎಂಬುದಷ್ಟೆ. ಆದರೆ ಏಪ್ರಿಲ್‌ 7ರಂದು ಅಮೆರಿಕಾ ಟ್ರಂಪ್‌ರವರು ಭಾರತ ಹೈಡ್ರಾಕ್ಸಿಕ್ಲೋರೋಕ್ವಿನ್ ರಫ್ತು ಮಾಡದಿದ್ದರೆ ಪ್ರತಿಕಾರ ತೀರಿಸಿಕೊಳ್ಳುವುದಾಗಿ ಬೆದರಿಕೆ ಹಾಕಿದರು. ಕೂಡಲೇ ನಮ್ಮ ಪ್ರಧಾನಿಗಳು ರಫ್ತು ಮೇಲಿನ ನಿಷೇಧ ತೆರವುಗೊಳಿಸಿದರು. ಆದ ಡ್ಯಾಮೇಜ್‌ ಕಂಟ್ರೋಲ್‌ ಮಾಡಿಕೊಳ್ಳಲು ಪೋಸ್ಟ್‌ ಕಾರ್ಡ್‌ ಈ ರೀತಿ ಸುಳ್ಳು ಹರಡುತ್ತಿದೆ.

ಪೊಲೀಸರೇ ಕ್ರಮ ಎಂದು?

ಕೊರೋನಾ ಭೀತಿ ಹಿನ್ನೆಲೆ ಮಾಧ್ಯಮ ಮತ್ತು ಸಾಮಾಜಿಕ ಜಾಲ ತಾಣಗಳಲ್ಲಿ ಸುಳ್ಳು ಸುದ್ದಿಯನ್ನು ಹಬ್ಬಿಸುವವವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಸ್ವತಃ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ತಿಳಿಸಿದ್ದರು. ಆದರೆ, ಪೋಸ್ಟ್ ಕಾರ್ಡ್ ಎಂಬ ಪೋರ್ಟಲ್ ಸುಳ್ಳು ಹೇಳುವುದನ್ನೇ ತನ್ನ ಕುಲಕಸುಬನ್ನಾಗಿಸಿಕೊಂಡಿದೆ.

ಇದೇ ಕಾರಣಕ್ಕೆ ಓ ಪೋರ್ಟಲ್ ಮುಖ್ಯಸ್ಥ ಇತ್ತೀಚೆಗೆ ಜೈಲು ಪಾಲಾಗಿ ಹಿಂದಿರುಗಿದ್ದರು. ಆದರೂ, ಸುಳ್ಳು ಹೇಳುವುದನ್ನು ಮಾತ್ರ ಬಿಟ್ಟಿಲ್ಲ. ಸಂದಿಗ್ಧ ಪರಿಸ್ಥಿತಿಯಲ್ಲೂ ಸುಳ್ಳು ಹೇಳುವ ಇಂತವರ ವಿರುದ್ಧ ಕ್ರಮ ಎಂದು ಎಂಬುದು ಹಲವರ ಪ್ರಶ್ನೆಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...

SIR | ಸೆಕ್ಸ್ ವರ್ಕರ್ಸ್, ಅವರ ಮಕ್ಕಳ ಬಳಿ ದಾಖಲೆಗಳಿಲ್ಲ : ಮಹಾರಾಷ್ಟ್ರ ಸಿಇಒಗೆ ಪತ್ರ ಬರೆದ ರಾಷ್ಟ್ರೀಯ ಸಂಸ್ಥೆ

ದಾಖಲಾತಿ ಮತ್ತು ಪರಿಶೀಲನೆ ಅಗತ್ಯತೆಗಳ ಕಾರಣದಿಂದಾಗಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ಲೈಂಗಿಕ ಕಾರ್ಯಕರ್ತೆಯರು ಮತ್ತು ಅವರ ಮಕ್ಕಳನ್ನು ಹೊರಗಿಡದಂತೆ ನೋಡಿಕೊಳ್ಳಲು ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕೆಂದು...

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...