Homeಅಂಕಣಗಳುಫೇಕು ಪತ್ರ: ಪೋಸ್ಟ್ಕಾರ್ಡಿನ ಮಹೇಶ ಹೆಗೆಡೆ ವಿಚಾರಣೆ ಬಾಯಿಬಡುಕಿ ಶೃತಿ ಬೆಳ್ಳಕ್ಕಿ ಬಂಧನ

ಫೇಕು ಪತ್ರ: ಪೋಸ್ಟ್ಕಾರ್ಡಿನ ಮಹೇಶ ಹೆಗೆಡೆ ವಿಚಾರಣೆ ಬಾಯಿಬಡುಕಿ ಶೃತಿ ಬೆಳ್ಳಕ್ಕಿ ಬಂಧನ

- Advertisement -
- Advertisement -

 

ಪೋಸ್ಟ್ಕಾರ್ಡ್ ನ್ಯೂಸ್ ಎಂಬ ಫೇಕ್‌ನ್ಯೂಸ್ ಪೋರ್ಟಲ್‌ನ ಸಂಸ್ಥಾಪಕ ಮಹೇಶ ವಿಕ್ರಮ ಹೆಗಡೆಯನ್ನು ಸಿಐಡಿ ಪೊಲೀಸರು ಫೇಕ್ ಪತ್ರದ ಸೃಷ್ಟಿಗೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದಾರೆ. ಈ ಸುದ್ದಿ ರಾಜ್ಯಾದ್ಯಂತ ತಲುಪುವ ಮೊದಲೇ ಬಿಜೆಪಿಯ ಒಂದಿಬ್ಬರು ನಾಯಕರು ಟ್ವೀಟ್ ಮಾಡಿ, ಮಹೇಶ ಬಂಧನ ಖಂಡನೀಯ ಎಂದಿದ್ದರು!! ಪೋಸ್ಟ್ಕಾರ್ಡ್ ಎನ್ನುವುದು ಬಿಜೆಪಿ ಪ್ರಾಯೋಜಿತ ಪೋರ್ಟಲ್ ಎಂಬುದಂತೂ ಹೊಸ ವಿಷಯವೇನಲ್ಲ ಬಿಡಿ…

ಸಚಿವ ಎಂಬಿ, .ಪಾಟೀಲರ ಹೆಸರಿನಲ್ಲಿ ಫೋರ್ಜರಿ ಪತ್ರವನ್ನು ಸೃಷ್ಟಿಸಿದ ಪ್ರಕರಣದ ವಿಚಾರಣೆ ತೀವ್ರಗೊಂಡಿದ್ದು, ಅದರ ಭಾಗವಾಗಿ ನಿನ್ನೆ ಏಪ್ರಿಲ್ 24ರಂದು ಧಾರವಾಡ ಪೊಲೀಸರು ಶೃತಿ ಬೆಳ್ಳಕ್ಕಿ ಎಂಬ ಬಿಜೆಪಿ ಕಾರ್ಯಕರ್ತೆಯನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ನೀಡಿದ್ದಾರೆ. ಶೃತಿ ಧಾರವಾಡ ಬಿಜೆಪಿ ಗ್ರಾಮೀಣ ವಿಭಾಗದ ಅಧ್ಯಕ್ಷ ಪರಮೇಶ ಉಳವಣ್ಣವರ್ ಪತ್ನಿಯಾಗಿದ್ದು, ಸೋನಿಯಾರಿಗೆ ಎಂ. ಬಿ. ಪಾಟೀಲರು ಬರೆದಿದ್ದ ‘ಫೇಕ್’ ಪತ್ರವನ್ನು ಉಲ್ಲೇಖಿಸಿ, ಕಾಂಗ್ರೆಸ್ ವಿರುದ್ಧ ಚುನಾವಣಾ ಭಾಷಣ ಮಾಡುವ ಸಂದರ್ಭದಲ್ಲಿ ಸಮುದಾಯಗಳಿಗೆ ಅವಮಾನವಾಗುವಂತೆ ಮಾತಾಡಿದ್ದರು. ತಮ್ಮ ಆ ಭಾಷಣವನ್ನು ಫೇಸ್‌ಬುಕ್‌ನಲ್ಲಿ ಹರಿಬಿಟ್ಟಿದ್ದರು. ಧಾರವಾಡ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಲಕರ್ಣಿ ವಿರುದ್ಧ ಪುತೂರಿ ನಡೆಸಲು ಬಿಜೆಪಿ ನಾಯಕರು ಈ ಕಾರ್ಯಕರ್ತೆಯನ್ನು ಬಳಸಿಕೊಂಡು, ವಿಜಯವಾಣಿಯಲ್ಲಿ ಬಂದಿದ್ದ ಫೇಕ್ ಪತ್ರದ ಕುರಿತು ಸುದ್ದಿ ಹರಡಲು ಯತ್ನಿಸಿದ್ದರು.

ಹಾಗೆಯೇ ನಿನ್ನೆ ‘ಫೇಕ್’ ಪತ್ರದ ರೂವಾರಿ ಎನ್ನಲಾದ ಪೋಸ್ಟ್ಕಾರ್ಡ್ನ ಮಹೇಶ ಹೆಗಡೆಯ ವಿಚಾರಣೆಯನ್ನು ಪೊಲೀಸರು ನಡೆಸಿದ್ದಾರೆ.

ಹಿನ್ನೆಲೆ ಕೆದಕುತ್ತ….

ಈ ಫೇಕ್ ಪತ್ರ ಮೊದಲ ಬಾರಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಲಿತಕ್ಕೆ ಬಂದಿದ್ದು 2017ರಲ್ಲಿ ರಾಜ್ಯದಲ್ಲಿ ಲಿಂಗಾಯತ ಪ್ರತ್ಯೇಕ ಧರ್ಮ
ಚಳವಳಿ ಜೋರಾಗಿದ್ದ ಸಂದರ್ಭದಲ್ಲಿ. ನಂತರ ಕಳೆದ 2018ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ. ಕಾಂಗ್ರೆಸ್ ಅಧ್ಯಕ್ಷೆಗೆ ಅಂದಿನ ಜಲ ಸಂಪನ್ಮೂಲ ಸಚಿವ (ಈಗಿನ ಗೃಹ ಸಚಿವ) ಬರೆದ ಪತ್ರ ಇದೆಂದು ಸೃಷ್ಟಿಸಲಾಗಿತ್ತು. ಜಾಗತಿಕ ಕ್ಯಾಥೋಲಿಕ್ ಸಂಘಟನೆಗಳ ಆಶಯದಂತೆ ಲಿಂಗಾಯತರನ್ನು ಹಿಂದೂ ಧರ್ಮದಿಂದ ಬೇರ್ಪಡಿಸುವ ಉದ್ದೇಶಕ್ಕಾಗಿ ಎಂ.ಬಿ. ಪಾಟೀಲರು ಸೋನಿಯಾ ಗಾಂಧಿಯವರಿಗೆ ಭಿನ್ನವಿಸುವ
ರೀತಿಯಲ್ಲಿ ಪತ್ರವನ್ನು ಸೃಷ್ಟಿಸಲಾಗಿತ್ತು. ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟದ ಹಿಂದೆ ಸೋನಿಯಾ ಗಾಂಧಿ ಮತ್ತು ಕ್ಯಾಥೊಲಿಕ್ ಸಂಘಟನೆಗಳ ಕೈವಾಡ ಇದೆ ಎಂದೂ, ಹಿಂದೂ ಧರ್ಮಕ್ಕೆ ಅಪಾಯ ಕಾದಿದೆ ಎಂದೂ ಸುಳ್ಳು ಹರಡಲಾಗಿತ್ತು. ಇದನ್ನು ಮುಂಚೂಣಿಗೆ ತಂದಿದ್ದು ಪೋಸ್ಟ್ಕಾರ್ಡ್ ನ್ಯೂಸ್ ಎಂಬ ಫೇಕು ಖ್ಯಾತಿಯ ಪೋರ್ಟಲ್.

ಆಗಲೇ ಅನೇಕ ಫ್ಯಾಕ್ಟ್ ಚೆಕಿಂಗ್ ಪೋರ್ಟಲ್‌ಗಳು ಈ ಪತ್ರ ನಕಲಿ ಎಂದು ಪ್ರೂವ್ ಮಾಡಿದ್ದವು. ಬಿಎಲ್‌ಡಿಇಎ ಸಂಸ್ಥೆಯ ಲೆಟರ್‌ಹೆಡ್‌ನ ಫೋರ್ಜರಿ ಮಾಡಲಾಗಿತ್ತಲ್ಲದೇ, ಎಂ.ಬಿ. ಪಾಟೀಲರ ಸಹಿಯನ್ನೂ ಫೋರ್ಜರಿ ಮಾಡಲಾಗಿತ್ತು. ಆಗ ಚುನಾವಣೆ ಗದ್ದಲದಲ್ಲಿ ಪೊಲೀಸರೂ ಬಹಳ ತಲೆ ಕೆಡಿಸಿಕೊಂಡಿರಲಿಲ್ಲ. ರಾಜ್ಯ ಬಿಜೆಪಿ ಘಟಕವೂ ಅದೇ ಪತ್ರ ಬಳಸಿ ಕಾಂಗ್ರೆಸ್ ವಿರುದ್ಧ ಅಪಪ್ರಚಾರ ಮಾಡಿತ್ತು.

ಈಗ ಅದೇ ಪತ್ರವನ್ನು ಕಳೆದ ವಾರ ಏಪ್ರಿಲ್ 16ರಂದು ಮತ್ತೆ ವಿಜಯವಾಣಿ ಪ್ರಕಟಿಸಿ ಎಂ.ಬಿ. ಪಾಟೀಲರ ಆಕ್ರೋಶಕ್ಕೆ ಗುರಿಯಾಗಿತ್ತು. ಇದನ್ನು ನಾನುಗೌರಿ.ಕಾಮ್ ಸವಿವರವಾಗಿ ವರದಿ ಮಾಡಿ, ಫೇಕ್‌ನ್ಯೂಸ್ ಎಂಬುದನ್ನು ಜನರ ಗಮನಕ್ಕೆ ತಂದಿತ್ತು.

ಈಗ ಎಂ.ಬಿ. ಪಾಟೀಲರೇ ಗೃಹ ಸಚಿವರಾಗಿರುವುದರಿಂದ ಪೊಲೀಸರು ತನಿಖೆಯನ್ನು ಕ್ಷಿಪ್ರವಾಗಿ ನಡೆಸುತ್ತಿರುವಂತೆ ಕಾಣುತ್ತಿದೆ. ತನಿಖೆ ಫೇಕುವೀರರ ಬುಡಕ್ಕೆ ತಲುಪಿದರಷ್ಟೇ ಹಿಂದಿರುವ ‘ನಾಯಕರ’ ಬಣ್ಣ ಬಯಲಾದೀತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...