Homeಅಂಕಣಗಳುಫೇಕು ಪತ್ರ: ಪೋಸ್ಟ್ಕಾರ್ಡಿನ ಮಹೇಶ ಹೆಗೆಡೆ ವಿಚಾರಣೆ ಬಾಯಿಬಡುಕಿ ಶೃತಿ ಬೆಳ್ಳಕ್ಕಿ ಬಂಧನ

ಫೇಕು ಪತ್ರ: ಪೋಸ್ಟ್ಕಾರ್ಡಿನ ಮಹೇಶ ಹೆಗೆಡೆ ವಿಚಾರಣೆ ಬಾಯಿಬಡುಕಿ ಶೃತಿ ಬೆಳ್ಳಕ್ಕಿ ಬಂಧನ

- Advertisement -
- Advertisement -

 

ಪೋಸ್ಟ್ಕಾರ್ಡ್ ನ್ಯೂಸ್ ಎಂಬ ಫೇಕ್‌ನ್ಯೂಸ್ ಪೋರ್ಟಲ್‌ನ ಸಂಸ್ಥಾಪಕ ಮಹೇಶ ವಿಕ್ರಮ ಹೆಗಡೆಯನ್ನು ಸಿಐಡಿ ಪೊಲೀಸರು ಫೇಕ್ ಪತ್ರದ ಸೃಷ್ಟಿಗೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದಾರೆ. ಈ ಸುದ್ದಿ ರಾಜ್ಯಾದ್ಯಂತ ತಲುಪುವ ಮೊದಲೇ ಬಿಜೆಪಿಯ ಒಂದಿಬ್ಬರು ನಾಯಕರು ಟ್ವೀಟ್ ಮಾಡಿ, ಮಹೇಶ ಬಂಧನ ಖಂಡನೀಯ ಎಂದಿದ್ದರು!! ಪೋಸ್ಟ್ಕಾರ್ಡ್ ಎನ್ನುವುದು ಬಿಜೆಪಿ ಪ್ರಾಯೋಜಿತ ಪೋರ್ಟಲ್ ಎಂಬುದಂತೂ ಹೊಸ ವಿಷಯವೇನಲ್ಲ ಬಿಡಿ…

ಸಚಿವ ಎಂಬಿ, .ಪಾಟೀಲರ ಹೆಸರಿನಲ್ಲಿ ಫೋರ್ಜರಿ ಪತ್ರವನ್ನು ಸೃಷ್ಟಿಸಿದ ಪ್ರಕರಣದ ವಿಚಾರಣೆ ತೀವ್ರಗೊಂಡಿದ್ದು, ಅದರ ಭಾಗವಾಗಿ ನಿನ್ನೆ ಏಪ್ರಿಲ್ 24ರಂದು ಧಾರವಾಡ ಪೊಲೀಸರು ಶೃತಿ ಬೆಳ್ಳಕ್ಕಿ ಎಂಬ ಬಿಜೆಪಿ ಕಾರ್ಯಕರ್ತೆಯನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ನೀಡಿದ್ದಾರೆ. ಶೃತಿ ಧಾರವಾಡ ಬಿಜೆಪಿ ಗ್ರಾಮೀಣ ವಿಭಾಗದ ಅಧ್ಯಕ್ಷ ಪರಮೇಶ ಉಳವಣ್ಣವರ್ ಪತ್ನಿಯಾಗಿದ್ದು, ಸೋನಿಯಾರಿಗೆ ಎಂ. ಬಿ. ಪಾಟೀಲರು ಬರೆದಿದ್ದ ‘ಫೇಕ್’ ಪತ್ರವನ್ನು ಉಲ್ಲೇಖಿಸಿ, ಕಾಂಗ್ರೆಸ್ ವಿರುದ್ಧ ಚುನಾವಣಾ ಭಾಷಣ ಮಾಡುವ ಸಂದರ್ಭದಲ್ಲಿ ಸಮುದಾಯಗಳಿಗೆ ಅವಮಾನವಾಗುವಂತೆ ಮಾತಾಡಿದ್ದರು. ತಮ್ಮ ಆ ಭಾಷಣವನ್ನು ಫೇಸ್‌ಬುಕ್‌ನಲ್ಲಿ ಹರಿಬಿಟ್ಟಿದ್ದರು. ಧಾರವಾಡ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಲಕರ್ಣಿ ವಿರುದ್ಧ ಪುತೂರಿ ನಡೆಸಲು ಬಿಜೆಪಿ ನಾಯಕರು ಈ ಕಾರ್ಯಕರ್ತೆಯನ್ನು ಬಳಸಿಕೊಂಡು, ವಿಜಯವಾಣಿಯಲ್ಲಿ ಬಂದಿದ್ದ ಫೇಕ್ ಪತ್ರದ ಕುರಿತು ಸುದ್ದಿ ಹರಡಲು ಯತ್ನಿಸಿದ್ದರು.

ಹಾಗೆಯೇ ನಿನ್ನೆ ‘ಫೇಕ್’ ಪತ್ರದ ರೂವಾರಿ ಎನ್ನಲಾದ ಪೋಸ್ಟ್ಕಾರ್ಡ್ನ ಮಹೇಶ ಹೆಗಡೆಯ ವಿಚಾರಣೆಯನ್ನು ಪೊಲೀಸರು ನಡೆಸಿದ್ದಾರೆ.

ಹಿನ್ನೆಲೆ ಕೆದಕುತ್ತ….

ಈ ಫೇಕ್ ಪತ್ರ ಮೊದಲ ಬಾರಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಲಿತಕ್ಕೆ ಬಂದಿದ್ದು 2017ರಲ್ಲಿ ರಾಜ್ಯದಲ್ಲಿ ಲಿಂಗಾಯತ ಪ್ರತ್ಯೇಕ ಧರ್ಮ
ಚಳವಳಿ ಜೋರಾಗಿದ್ದ ಸಂದರ್ಭದಲ್ಲಿ. ನಂತರ ಕಳೆದ 2018ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ. ಕಾಂಗ್ರೆಸ್ ಅಧ್ಯಕ್ಷೆಗೆ ಅಂದಿನ ಜಲ ಸಂಪನ್ಮೂಲ ಸಚಿವ (ಈಗಿನ ಗೃಹ ಸಚಿವ) ಬರೆದ ಪತ್ರ ಇದೆಂದು ಸೃಷ್ಟಿಸಲಾಗಿತ್ತು. ಜಾಗತಿಕ ಕ್ಯಾಥೋಲಿಕ್ ಸಂಘಟನೆಗಳ ಆಶಯದಂತೆ ಲಿಂಗಾಯತರನ್ನು ಹಿಂದೂ ಧರ್ಮದಿಂದ ಬೇರ್ಪಡಿಸುವ ಉದ್ದೇಶಕ್ಕಾಗಿ ಎಂ.ಬಿ. ಪಾಟೀಲರು ಸೋನಿಯಾ ಗಾಂಧಿಯವರಿಗೆ ಭಿನ್ನವಿಸುವ
ರೀತಿಯಲ್ಲಿ ಪತ್ರವನ್ನು ಸೃಷ್ಟಿಸಲಾಗಿತ್ತು. ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟದ ಹಿಂದೆ ಸೋನಿಯಾ ಗಾಂಧಿ ಮತ್ತು ಕ್ಯಾಥೊಲಿಕ್ ಸಂಘಟನೆಗಳ ಕೈವಾಡ ಇದೆ ಎಂದೂ, ಹಿಂದೂ ಧರ್ಮಕ್ಕೆ ಅಪಾಯ ಕಾದಿದೆ ಎಂದೂ ಸುಳ್ಳು ಹರಡಲಾಗಿತ್ತು. ಇದನ್ನು ಮುಂಚೂಣಿಗೆ ತಂದಿದ್ದು ಪೋಸ್ಟ್ಕಾರ್ಡ್ ನ್ಯೂಸ್ ಎಂಬ ಫೇಕು ಖ್ಯಾತಿಯ ಪೋರ್ಟಲ್.

ಆಗಲೇ ಅನೇಕ ಫ್ಯಾಕ್ಟ್ ಚೆಕಿಂಗ್ ಪೋರ್ಟಲ್‌ಗಳು ಈ ಪತ್ರ ನಕಲಿ ಎಂದು ಪ್ರೂವ್ ಮಾಡಿದ್ದವು. ಬಿಎಲ್‌ಡಿಇಎ ಸಂಸ್ಥೆಯ ಲೆಟರ್‌ಹೆಡ್‌ನ ಫೋರ್ಜರಿ ಮಾಡಲಾಗಿತ್ತಲ್ಲದೇ, ಎಂ.ಬಿ. ಪಾಟೀಲರ ಸಹಿಯನ್ನೂ ಫೋರ್ಜರಿ ಮಾಡಲಾಗಿತ್ತು. ಆಗ ಚುನಾವಣೆ ಗದ್ದಲದಲ್ಲಿ ಪೊಲೀಸರೂ ಬಹಳ ತಲೆ ಕೆಡಿಸಿಕೊಂಡಿರಲಿಲ್ಲ. ರಾಜ್ಯ ಬಿಜೆಪಿ ಘಟಕವೂ ಅದೇ ಪತ್ರ ಬಳಸಿ ಕಾಂಗ್ರೆಸ್ ವಿರುದ್ಧ ಅಪಪ್ರಚಾರ ಮಾಡಿತ್ತು.

ಈಗ ಅದೇ ಪತ್ರವನ್ನು ಕಳೆದ ವಾರ ಏಪ್ರಿಲ್ 16ರಂದು ಮತ್ತೆ ವಿಜಯವಾಣಿ ಪ್ರಕಟಿಸಿ ಎಂ.ಬಿ. ಪಾಟೀಲರ ಆಕ್ರೋಶಕ್ಕೆ ಗುರಿಯಾಗಿತ್ತು. ಇದನ್ನು ನಾನುಗೌರಿ.ಕಾಮ್ ಸವಿವರವಾಗಿ ವರದಿ ಮಾಡಿ, ಫೇಕ್‌ನ್ಯೂಸ್ ಎಂಬುದನ್ನು ಜನರ ಗಮನಕ್ಕೆ ತಂದಿತ್ತು.

ಈಗ ಎಂ.ಬಿ. ಪಾಟೀಲರೇ ಗೃಹ ಸಚಿವರಾಗಿರುವುದರಿಂದ ಪೊಲೀಸರು ತನಿಖೆಯನ್ನು ಕ್ಷಿಪ್ರವಾಗಿ ನಡೆಸುತ್ತಿರುವಂತೆ ಕಾಣುತ್ತಿದೆ. ತನಿಖೆ ಫೇಕುವೀರರ ಬುಡಕ್ಕೆ ತಲುಪಿದರಷ್ಟೇ ಹಿಂದಿರುವ ‘ನಾಯಕರ’ ಬಣ್ಣ ಬಯಲಾದೀತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...