Homeಅಂಕಣಗಳುಫೇಕು ಪತ್ರ: ಪೋಸ್ಟ್ಕಾರ್ಡಿನ ಮಹೇಶ ಹೆಗೆಡೆ ವಿಚಾರಣೆ ಬಾಯಿಬಡುಕಿ ಶೃತಿ ಬೆಳ್ಳಕ್ಕಿ ಬಂಧನ

ಫೇಕು ಪತ್ರ: ಪೋಸ್ಟ್ಕಾರ್ಡಿನ ಮಹೇಶ ಹೆಗೆಡೆ ವಿಚಾರಣೆ ಬಾಯಿಬಡುಕಿ ಶೃತಿ ಬೆಳ್ಳಕ್ಕಿ ಬಂಧನ

- Advertisement -
- Advertisement -

 

ಪೋಸ್ಟ್ಕಾರ್ಡ್ ನ್ಯೂಸ್ ಎಂಬ ಫೇಕ್‌ನ್ಯೂಸ್ ಪೋರ್ಟಲ್‌ನ ಸಂಸ್ಥಾಪಕ ಮಹೇಶ ವಿಕ್ರಮ ಹೆಗಡೆಯನ್ನು ಸಿಐಡಿ ಪೊಲೀಸರು ಫೇಕ್ ಪತ್ರದ ಸೃಷ್ಟಿಗೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದಾರೆ. ಈ ಸುದ್ದಿ ರಾಜ್ಯಾದ್ಯಂತ ತಲುಪುವ ಮೊದಲೇ ಬಿಜೆಪಿಯ ಒಂದಿಬ್ಬರು ನಾಯಕರು ಟ್ವೀಟ್ ಮಾಡಿ, ಮಹೇಶ ಬಂಧನ ಖಂಡನೀಯ ಎಂದಿದ್ದರು!! ಪೋಸ್ಟ್ಕಾರ್ಡ್ ಎನ್ನುವುದು ಬಿಜೆಪಿ ಪ್ರಾಯೋಜಿತ ಪೋರ್ಟಲ್ ಎಂಬುದಂತೂ ಹೊಸ ವಿಷಯವೇನಲ್ಲ ಬಿಡಿ…

ಸಚಿವ ಎಂಬಿ, .ಪಾಟೀಲರ ಹೆಸರಿನಲ್ಲಿ ಫೋರ್ಜರಿ ಪತ್ರವನ್ನು ಸೃಷ್ಟಿಸಿದ ಪ್ರಕರಣದ ವಿಚಾರಣೆ ತೀವ್ರಗೊಂಡಿದ್ದು, ಅದರ ಭಾಗವಾಗಿ ನಿನ್ನೆ ಏಪ್ರಿಲ್ 24ರಂದು ಧಾರವಾಡ ಪೊಲೀಸರು ಶೃತಿ ಬೆಳ್ಳಕ್ಕಿ ಎಂಬ ಬಿಜೆಪಿ ಕಾರ್ಯಕರ್ತೆಯನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ನೀಡಿದ್ದಾರೆ. ಶೃತಿ ಧಾರವಾಡ ಬಿಜೆಪಿ ಗ್ರಾಮೀಣ ವಿಭಾಗದ ಅಧ್ಯಕ್ಷ ಪರಮೇಶ ಉಳವಣ್ಣವರ್ ಪತ್ನಿಯಾಗಿದ್ದು, ಸೋನಿಯಾರಿಗೆ ಎಂ. ಬಿ. ಪಾಟೀಲರು ಬರೆದಿದ್ದ ‘ಫೇಕ್’ ಪತ್ರವನ್ನು ಉಲ್ಲೇಖಿಸಿ, ಕಾಂಗ್ರೆಸ್ ವಿರುದ್ಧ ಚುನಾವಣಾ ಭಾಷಣ ಮಾಡುವ ಸಂದರ್ಭದಲ್ಲಿ ಸಮುದಾಯಗಳಿಗೆ ಅವಮಾನವಾಗುವಂತೆ ಮಾತಾಡಿದ್ದರು. ತಮ್ಮ ಆ ಭಾಷಣವನ್ನು ಫೇಸ್‌ಬುಕ್‌ನಲ್ಲಿ ಹರಿಬಿಟ್ಟಿದ್ದರು. ಧಾರವಾಡ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಲಕರ್ಣಿ ವಿರುದ್ಧ ಪುತೂರಿ ನಡೆಸಲು ಬಿಜೆಪಿ ನಾಯಕರು ಈ ಕಾರ್ಯಕರ್ತೆಯನ್ನು ಬಳಸಿಕೊಂಡು, ವಿಜಯವಾಣಿಯಲ್ಲಿ ಬಂದಿದ್ದ ಫೇಕ್ ಪತ್ರದ ಕುರಿತು ಸುದ್ದಿ ಹರಡಲು ಯತ್ನಿಸಿದ್ದರು.

ಹಾಗೆಯೇ ನಿನ್ನೆ ‘ಫೇಕ್’ ಪತ್ರದ ರೂವಾರಿ ಎನ್ನಲಾದ ಪೋಸ್ಟ್ಕಾರ್ಡ್ನ ಮಹೇಶ ಹೆಗಡೆಯ ವಿಚಾರಣೆಯನ್ನು ಪೊಲೀಸರು ನಡೆಸಿದ್ದಾರೆ.

ಹಿನ್ನೆಲೆ ಕೆದಕುತ್ತ….

ಈ ಫೇಕ್ ಪತ್ರ ಮೊದಲ ಬಾರಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಲಿತಕ್ಕೆ ಬಂದಿದ್ದು 2017ರಲ್ಲಿ ರಾಜ್ಯದಲ್ಲಿ ಲಿಂಗಾಯತ ಪ್ರತ್ಯೇಕ ಧರ್ಮ
ಚಳವಳಿ ಜೋರಾಗಿದ್ದ ಸಂದರ್ಭದಲ್ಲಿ. ನಂತರ ಕಳೆದ 2018ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ. ಕಾಂಗ್ರೆಸ್ ಅಧ್ಯಕ್ಷೆಗೆ ಅಂದಿನ ಜಲ ಸಂಪನ್ಮೂಲ ಸಚಿವ (ಈಗಿನ ಗೃಹ ಸಚಿವ) ಬರೆದ ಪತ್ರ ಇದೆಂದು ಸೃಷ್ಟಿಸಲಾಗಿತ್ತು. ಜಾಗತಿಕ ಕ್ಯಾಥೋಲಿಕ್ ಸಂಘಟನೆಗಳ ಆಶಯದಂತೆ ಲಿಂಗಾಯತರನ್ನು ಹಿಂದೂ ಧರ್ಮದಿಂದ ಬೇರ್ಪಡಿಸುವ ಉದ್ದೇಶಕ್ಕಾಗಿ ಎಂ.ಬಿ. ಪಾಟೀಲರು ಸೋನಿಯಾ ಗಾಂಧಿಯವರಿಗೆ ಭಿನ್ನವಿಸುವ
ರೀತಿಯಲ್ಲಿ ಪತ್ರವನ್ನು ಸೃಷ್ಟಿಸಲಾಗಿತ್ತು. ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟದ ಹಿಂದೆ ಸೋನಿಯಾ ಗಾಂಧಿ ಮತ್ತು ಕ್ಯಾಥೊಲಿಕ್ ಸಂಘಟನೆಗಳ ಕೈವಾಡ ಇದೆ ಎಂದೂ, ಹಿಂದೂ ಧರ್ಮಕ್ಕೆ ಅಪಾಯ ಕಾದಿದೆ ಎಂದೂ ಸುಳ್ಳು ಹರಡಲಾಗಿತ್ತು. ಇದನ್ನು ಮುಂಚೂಣಿಗೆ ತಂದಿದ್ದು ಪೋಸ್ಟ್ಕಾರ್ಡ್ ನ್ಯೂಸ್ ಎಂಬ ಫೇಕು ಖ್ಯಾತಿಯ ಪೋರ್ಟಲ್.

ಆಗಲೇ ಅನೇಕ ಫ್ಯಾಕ್ಟ್ ಚೆಕಿಂಗ್ ಪೋರ್ಟಲ್‌ಗಳು ಈ ಪತ್ರ ನಕಲಿ ಎಂದು ಪ್ರೂವ್ ಮಾಡಿದ್ದವು. ಬಿಎಲ್‌ಡಿಇಎ ಸಂಸ್ಥೆಯ ಲೆಟರ್‌ಹೆಡ್‌ನ ಫೋರ್ಜರಿ ಮಾಡಲಾಗಿತ್ತಲ್ಲದೇ, ಎಂ.ಬಿ. ಪಾಟೀಲರ ಸಹಿಯನ್ನೂ ಫೋರ್ಜರಿ ಮಾಡಲಾಗಿತ್ತು. ಆಗ ಚುನಾವಣೆ ಗದ್ದಲದಲ್ಲಿ ಪೊಲೀಸರೂ ಬಹಳ ತಲೆ ಕೆಡಿಸಿಕೊಂಡಿರಲಿಲ್ಲ. ರಾಜ್ಯ ಬಿಜೆಪಿ ಘಟಕವೂ ಅದೇ ಪತ್ರ ಬಳಸಿ ಕಾಂಗ್ರೆಸ್ ವಿರುದ್ಧ ಅಪಪ್ರಚಾರ ಮಾಡಿತ್ತು.

ಈಗ ಅದೇ ಪತ್ರವನ್ನು ಕಳೆದ ವಾರ ಏಪ್ರಿಲ್ 16ರಂದು ಮತ್ತೆ ವಿಜಯವಾಣಿ ಪ್ರಕಟಿಸಿ ಎಂ.ಬಿ. ಪಾಟೀಲರ ಆಕ್ರೋಶಕ್ಕೆ ಗುರಿಯಾಗಿತ್ತು. ಇದನ್ನು ನಾನುಗೌರಿ.ಕಾಮ್ ಸವಿವರವಾಗಿ ವರದಿ ಮಾಡಿ, ಫೇಕ್‌ನ್ಯೂಸ್ ಎಂಬುದನ್ನು ಜನರ ಗಮನಕ್ಕೆ ತಂದಿತ್ತು.

ಈಗ ಎಂ.ಬಿ. ಪಾಟೀಲರೇ ಗೃಹ ಸಚಿವರಾಗಿರುವುದರಿಂದ ಪೊಲೀಸರು ತನಿಖೆಯನ್ನು ಕ್ಷಿಪ್ರವಾಗಿ ನಡೆಸುತ್ತಿರುವಂತೆ ಕಾಣುತ್ತಿದೆ. ತನಿಖೆ ಫೇಕುವೀರರ ಬುಡಕ್ಕೆ ತಲುಪಿದರಷ್ಟೇ ಹಿಂದಿರುವ ‘ನಾಯಕರ’ ಬಣ್ಣ ಬಯಲಾದೀತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...