Homeಅಂಕಣಗಳುಫೇಕು ಪತ್ರ: ಪೋಸ್ಟ್ಕಾರ್ಡಿನ ಮಹೇಶ ಹೆಗೆಡೆ ವಿಚಾರಣೆ ಬಾಯಿಬಡುಕಿ ಶೃತಿ ಬೆಳ್ಳಕ್ಕಿ ಬಂಧನ

ಫೇಕು ಪತ್ರ: ಪೋಸ್ಟ್ಕಾರ್ಡಿನ ಮಹೇಶ ಹೆಗೆಡೆ ವಿಚಾರಣೆ ಬಾಯಿಬಡುಕಿ ಶೃತಿ ಬೆಳ್ಳಕ್ಕಿ ಬಂಧನ

- Advertisement -
- Advertisement -

 

ಪೋಸ್ಟ್ಕಾರ್ಡ್ ನ್ಯೂಸ್ ಎಂಬ ಫೇಕ್‌ನ್ಯೂಸ್ ಪೋರ್ಟಲ್‌ನ ಸಂಸ್ಥಾಪಕ ಮಹೇಶ ವಿಕ್ರಮ ಹೆಗಡೆಯನ್ನು ಸಿಐಡಿ ಪೊಲೀಸರು ಫೇಕ್ ಪತ್ರದ ಸೃಷ್ಟಿಗೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದಾರೆ. ಈ ಸುದ್ದಿ ರಾಜ್ಯಾದ್ಯಂತ ತಲುಪುವ ಮೊದಲೇ ಬಿಜೆಪಿಯ ಒಂದಿಬ್ಬರು ನಾಯಕರು ಟ್ವೀಟ್ ಮಾಡಿ, ಮಹೇಶ ಬಂಧನ ಖಂಡನೀಯ ಎಂದಿದ್ದರು!! ಪೋಸ್ಟ್ಕಾರ್ಡ್ ಎನ್ನುವುದು ಬಿಜೆಪಿ ಪ್ರಾಯೋಜಿತ ಪೋರ್ಟಲ್ ಎಂಬುದಂತೂ ಹೊಸ ವಿಷಯವೇನಲ್ಲ ಬಿಡಿ…

ಸಚಿವ ಎಂಬಿ, .ಪಾಟೀಲರ ಹೆಸರಿನಲ್ಲಿ ಫೋರ್ಜರಿ ಪತ್ರವನ್ನು ಸೃಷ್ಟಿಸಿದ ಪ್ರಕರಣದ ವಿಚಾರಣೆ ತೀವ್ರಗೊಂಡಿದ್ದು, ಅದರ ಭಾಗವಾಗಿ ನಿನ್ನೆ ಏಪ್ರಿಲ್ 24ರಂದು ಧಾರವಾಡ ಪೊಲೀಸರು ಶೃತಿ ಬೆಳ್ಳಕ್ಕಿ ಎಂಬ ಬಿಜೆಪಿ ಕಾರ್ಯಕರ್ತೆಯನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ನೀಡಿದ್ದಾರೆ. ಶೃತಿ ಧಾರವಾಡ ಬಿಜೆಪಿ ಗ್ರಾಮೀಣ ವಿಭಾಗದ ಅಧ್ಯಕ್ಷ ಪರಮೇಶ ಉಳವಣ್ಣವರ್ ಪತ್ನಿಯಾಗಿದ್ದು, ಸೋನಿಯಾರಿಗೆ ಎಂ. ಬಿ. ಪಾಟೀಲರು ಬರೆದಿದ್ದ ‘ಫೇಕ್’ ಪತ್ರವನ್ನು ಉಲ್ಲೇಖಿಸಿ, ಕಾಂಗ್ರೆಸ್ ವಿರುದ್ಧ ಚುನಾವಣಾ ಭಾಷಣ ಮಾಡುವ ಸಂದರ್ಭದಲ್ಲಿ ಸಮುದಾಯಗಳಿಗೆ ಅವಮಾನವಾಗುವಂತೆ ಮಾತಾಡಿದ್ದರು. ತಮ್ಮ ಆ ಭಾಷಣವನ್ನು ಫೇಸ್‌ಬುಕ್‌ನಲ್ಲಿ ಹರಿಬಿಟ್ಟಿದ್ದರು. ಧಾರವಾಡ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಲಕರ್ಣಿ ವಿರುದ್ಧ ಪುತೂರಿ ನಡೆಸಲು ಬಿಜೆಪಿ ನಾಯಕರು ಈ ಕಾರ್ಯಕರ್ತೆಯನ್ನು ಬಳಸಿಕೊಂಡು, ವಿಜಯವಾಣಿಯಲ್ಲಿ ಬಂದಿದ್ದ ಫೇಕ್ ಪತ್ರದ ಕುರಿತು ಸುದ್ದಿ ಹರಡಲು ಯತ್ನಿಸಿದ್ದರು.

ಹಾಗೆಯೇ ನಿನ್ನೆ ‘ಫೇಕ್’ ಪತ್ರದ ರೂವಾರಿ ಎನ್ನಲಾದ ಪೋಸ್ಟ್ಕಾರ್ಡ್ನ ಮಹೇಶ ಹೆಗಡೆಯ ವಿಚಾರಣೆಯನ್ನು ಪೊಲೀಸರು ನಡೆಸಿದ್ದಾರೆ.

ಹಿನ್ನೆಲೆ ಕೆದಕುತ್ತ….

ಈ ಫೇಕ್ ಪತ್ರ ಮೊದಲ ಬಾರಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಲಿತಕ್ಕೆ ಬಂದಿದ್ದು 2017ರಲ್ಲಿ ರಾಜ್ಯದಲ್ಲಿ ಲಿಂಗಾಯತ ಪ್ರತ್ಯೇಕ ಧರ್ಮ
ಚಳವಳಿ ಜೋರಾಗಿದ್ದ ಸಂದರ್ಭದಲ್ಲಿ. ನಂತರ ಕಳೆದ 2018ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ. ಕಾಂಗ್ರೆಸ್ ಅಧ್ಯಕ್ಷೆಗೆ ಅಂದಿನ ಜಲ ಸಂಪನ್ಮೂಲ ಸಚಿವ (ಈಗಿನ ಗೃಹ ಸಚಿವ) ಬರೆದ ಪತ್ರ ಇದೆಂದು ಸೃಷ್ಟಿಸಲಾಗಿತ್ತು. ಜಾಗತಿಕ ಕ್ಯಾಥೋಲಿಕ್ ಸಂಘಟನೆಗಳ ಆಶಯದಂತೆ ಲಿಂಗಾಯತರನ್ನು ಹಿಂದೂ ಧರ್ಮದಿಂದ ಬೇರ್ಪಡಿಸುವ ಉದ್ದೇಶಕ್ಕಾಗಿ ಎಂ.ಬಿ. ಪಾಟೀಲರು ಸೋನಿಯಾ ಗಾಂಧಿಯವರಿಗೆ ಭಿನ್ನವಿಸುವ
ರೀತಿಯಲ್ಲಿ ಪತ್ರವನ್ನು ಸೃಷ್ಟಿಸಲಾಗಿತ್ತು. ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟದ ಹಿಂದೆ ಸೋನಿಯಾ ಗಾಂಧಿ ಮತ್ತು ಕ್ಯಾಥೊಲಿಕ್ ಸಂಘಟನೆಗಳ ಕೈವಾಡ ಇದೆ ಎಂದೂ, ಹಿಂದೂ ಧರ್ಮಕ್ಕೆ ಅಪಾಯ ಕಾದಿದೆ ಎಂದೂ ಸುಳ್ಳು ಹರಡಲಾಗಿತ್ತು. ಇದನ್ನು ಮುಂಚೂಣಿಗೆ ತಂದಿದ್ದು ಪೋಸ್ಟ್ಕಾರ್ಡ್ ನ್ಯೂಸ್ ಎಂಬ ಫೇಕು ಖ್ಯಾತಿಯ ಪೋರ್ಟಲ್.

ಆಗಲೇ ಅನೇಕ ಫ್ಯಾಕ್ಟ್ ಚೆಕಿಂಗ್ ಪೋರ್ಟಲ್‌ಗಳು ಈ ಪತ್ರ ನಕಲಿ ಎಂದು ಪ್ರೂವ್ ಮಾಡಿದ್ದವು. ಬಿಎಲ್‌ಡಿಇಎ ಸಂಸ್ಥೆಯ ಲೆಟರ್‌ಹೆಡ್‌ನ ಫೋರ್ಜರಿ ಮಾಡಲಾಗಿತ್ತಲ್ಲದೇ, ಎಂ.ಬಿ. ಪಾಟೀಲರ ಸಹಿಯನ್ನೂ ಫೋರ್ಜರಿ ಮಾಡಲಾಗಿತ್ತು. ಆಗ ಚುನಾವಣೆ ಗದ್ದಲದಲ್ಲಿ ಪೊಲೀಸರೂ ಬಹಳ ತಲೆ ಕೆಡಿಸಿಕೊಂಡಿರಲಿಲ್ಲ. ರಾಜ್ಯ ಬಿಜೆಪಿ ಘಟಕವೂ ಅದೇ ಪತ್ರ ಬಳಸಿ ಕಾಂಗ್ರೆಸ್ ವಿರುದ್ಧ ಅಪಪ್ರಚಾರ ಮಾಡಿತ್ತು.

ಈಗ ಅದೇ ಪತ್ರವನ್ನು ಕಳೆದ ವಾರ ಏಪ್ರಿಲ್ 16ರಂದು ಮತ್ತೆ ವಿಜಯವಾಣಿ ಪ್ರಕಟಿಸಿ ಎಂ.ಬಿ. ಪಾಟೀಲರ ಆಕ್ರೋಶಕ್ಕೆ ಗುರಿಯಾಗಿತ್ತು. ಇದನ್ನು ನಾನುಗೌರಿ.ಕಾಮ್ ಸವಿವರವಾಗಿ ವರದಿ ಮಾಡಿ, ಫೇಕ್‌ನ್ಯೂಸ್ ಎಂಬುದನ್ನು ಜನರ ಗಮನಕ್ಕೆ ತಂದಿತ್ತು.

ಈಗ ಎಂ.ಬಿ. ಪಾಟೀಲರೇ ಗೃಹ ಸಚಿವರಾಗಿರುವುದರಿಂದ ಪೊಲೀಸರು ತನಿಖೆಯನ್ನು ಕ್ಷಿಪ್ರವಾಗಿ ನಡೆಸುತ್ತಿರುವಂತೆ ಕಾಣುತ್ತಿದೆ. ತನಿಖೆ ಫೇಕುವೀರರ ಬುಡಕ್ಕೆ ತಲುಪಿದರಷ್ಟೇ ಹಿಂದಿರುವ ‘ನಾಯಕರ’ ಬಣ್ಣ ಬಯಲಾದೀತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ಜೊತೆಗಿನ ಮಾತುಕತೆಗಳು ಫಲಪ್ರದವಾಗಿವೆ, ಐದು ದಿನಗಳ ಕಾಲ ದಾಳಿ ಮಾಡದಂತೆ ಸೂಚಿಸಿದ್ದೇನೆ : ಟ್ರಂಪ್

ಕಳೆದ ಎರಡು ದಿನಗಳಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ನಡೆದ ಮಾತುಕತೆಗಳು ಫಲಪ್ರದವಾಗಿವೆ. ಆದ್ದರಿಂದ ಇರಾನ್‌ನ ಇಂಧನ ಕೇಂದ್ರಗಳ ಮೇಲಿನ ಅಮೆರಿಕದ ದಾಳಿಯನ್ನು ಐದು ದಿನಗಳವರೆಗೆ ಮುಂದೂಡಲು ಸೂಚಿಸಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್...

ಎಸ್‌ಐಆರ್ ದೂರಾಲೋಚನೆ ಅಲ್ಲ, ಸಿಎಎ-ಎನ್‌ಆರ್‌ಸಿ ಜಾರಿಗೊಳಿಸುವ ದುರಾಲೋಚನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು 'ದೂರಾಲೋಚನೆ'ಯಲ್ಲ, ಬದಲಿಗೆ ಅದು ಸಿಎಎ-ಎನ್‌ಅರ್‌ಸಿಯನ್ನು ಜಾರಿಗೊಳಿಸುವ 'ದುರಾಲೋಚನೆ'ಯನ್ನು ತನ್ನ ಒಡಲಲ್ಲಿಟ್ಟಿಕೊಂಡಿದೆ. ಮೊಕದ್ದಮೆಗಳ ವಿಚಾರಣೆಯು ಸುಪ್ರೀಂ ಕೋರ್ಟಿನಲ್ಲಿರುವಾಗ ಕರ್ನಾಟಕದಲ್ಲಿ ತರಾರುರಿಯಲ್ಲಿ ಎಸ್‌ಐಆರ್ ಪ್ರಕ್ರಿಯೆಯನ್ನು ನಡೆಸಬಾರದು...

ಸ್ವಘೋಷಿತ ದೇವಮಾನವನ ಖರಾತ್ ವಿರುದ್ಧ ಮತ್ತೆರಡು ಎಫ್‌ಐಆರ್ : ಗರ್ಭಿಣಿ ಮೇಲೆ ಅತ್ಯಾಚಾರವೆಸಗಿದ ಆರೋಪ

ಅತ್ಯಾಚಾರ ಸೇರಿದಂತೆ ಹಲವು ಕ್ರಿಮಿನಲ್ ಆರೋಪಗಳ ಮೇಲೆ ಈಗಾಗಲೇ ಬಂಧಿತನಾಗಿರುವ ಸ್ವಘೋಷಿತ ದೇವಮಾನವ ಹಾಗೂ ಜ್ಯೋತಿಷಿ ಅಶೋಕ್ ಖರಾತ್ ವಿರುದ್ಧ ಮಹಾರಾಷ್ಟ್ರದ ನಾಸಿಕ್‌ನ ಸರ್ಕಾರವಾಡಾ ಪೊಲೀಸರು ಶನಿವಾರ (ಮಾ.21) ಎರಡು ಹೊಸ ಅತ್ಯಾಚಾರ...

ದಲಿತ ಮಹಿಳೆ ಮೇಲೆ ಸಾರ್ವಜನಿಕವಾಗಿ ಹಲ್ಲೆ; ಹಾಡಗಲೇ ಕೂದಲಿಡಿದು ಎಳೆದಾಡಿದ ಪಂಜಾಬ್ ಪೊಲೀಸರು

ಪಂಜಾಬ್‌ನ ಜಲಂಧರ್‌ನಲ್ಲಿ ಕಳೆದ ಶುಕ್ರವಾರ (ಮಾ.20), ಪೊಲೀಸ್ ಅಧಿಕಾರಿಯೊಬ್ಬರು ದಲಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಹಲ್ಲೆ ನಡೆಸಿ ಕೂದಲು ಹಿಡಿದು ಎಳೆದಾಡಿದ್ದಾರೆ ಎಂದು 'ಸಿಯಾಸಾಟ್.ಕಾಮ್' ವರದಿ ಮಾಡಿದೆ. ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಮಾಧ್ಯಮದಲ್ಲಿ...

ನ್ಯೂಯಾರ್ಕ್‌ನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನ; ಇಬ್ಬರು ಸಾವು

ಭಾನುವಾರ ತಡರಾತ್ರಿ ನ್ಯೂಯಾರ್ಕ್‌ನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಸುಮಾರು 76 ಜನರನ್ನು ಹೊತ್ತೊಯ್ಯುತ್ತಿದ್ದ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನವು ನೆಲದ ಮೇಲೆ ಚಲಿಸುತ್ತಿದ್ದ ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಪೈಲಟ್ ಮತ್ತು...

‘ತೀರ್ಮಾನಿಸಲು ಏನೂ ಉಳಿದಿಲ್ಲ’ : ಸೋನಮ್ ವಾಂಗ್ಚುಕ್ ಬಂಧನ ಪ್ರಶ್ನಿಸಿದ್ದ ಅರ್ಜಿ ವಿಲೇವಾರಿ ಮಾಡಿದ ಸುಪ್ರೀಂ ಕೋರ್ಟ್

ಲಡಾಖ್‌ನ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರನ್ನು ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿಯಲ್ಲಿ ಬಂಧಿಸಿರುವುದನ್ನು ಪ್ರಶ್ನಿಸಿ ಅವರ ಪತ್ನಿ ಗೀತಾಂಜಲಿ ಅಂಗ್ಮೋ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಮಾ.23)...

ಡೋನಾಲ್ಡ್‌ ಟ್ರಂಪ್ ಕಠಿಣ ವೀಸಾ ನೀತಿಗಳಿಂದ ಸಂಕಷ್ಟಕ್ಕೆ ಸಿಲುಕಿದ ಭಾರತ-ಚೀನಾ

ಡೊನಾಲ್ಡ್‌ ಟ್ರಂಪ್ ಆಡಳಿತವು ಅನಾವರಣಗೊಳಿಸಿದ ಕಠಿಣ ವಲಸೆ ನೀತಿಯ ಗರಿಷ್ಠ ಹೊರೆಯು ಭಾರತ ಮತ್ತು ಚೀನಾ ದೇಶಗಳ ಮೇಲೆ ಬಿದ್ದಿದೆ. 2024 ರ ಅದೇ ಅವಧಿಗೆ ಹೋಲಿಸಿದರೆ 2025 ರ ಮೊದಲ ಎಂಟು...

ಉತ್ತರಾಖಂಡ| ಪೌರಿಯಲ್ಲಿ ಅಂಬೇಡ್ಕರ್ ಪ್ರತಿಮೆ ವಿರೂಪ; ದೂರು ದಾಖಲು

ಉತ್ತರಾಖಂಡದ ಪೌರಿ ಜಿಲ್ಲೆಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಯನ್ನು ವಿರೂಪಗೊಳಿಸಿದ ನಂತರ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು (ಮಾ.22) ತಿಳಿಸಿದ್ದಾರೆ. ಮಾರ್ಚ್ 21 ರ ಶನಿವಾರ ಸಂಜೆ 4 ಗಂಟೆ ಸುಮಾರಿಗೆ ಅಲಕನಂದಾ...

ಅಸ್ಸಾಂ : ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಸಚಿವೆ ನಂದಿತಾ ಗರ್ಲೋಸಾ

ಅಸ್ಸಾಂನ ಬಿಜೆಪಿ ಸರ್ಕಾರದಲ್ಲಿ ಸಚಿವೆಯಾಗಿದ್ದ ನಂದಿತಾ ಗರ್ಲೋಸಾ ಅವರು ಭಾನುವಾರ (ಮಾ.22) ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ವಿಧಾನಸಭೆ ಚುನಾವಣೆಗೆ ಟಿಕೆಟ್ ನಿರಾಕರಿಸಿದ ಹಿನ್ನೆಲೆ ನಂದಿತಾ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ. ನಂದಿತಾ ಅವರು ಪ್ರತಿನಿಧಿಸುತ್ತಿದ್ದ...

ಉತ್ತರ ಪ್ರದೇಶ| ವಾಲ್ಮೀಕಿ ಸಮುದಾಯದ ವಿರುದ್ಧ ಹೇಳಿಕೆ; ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ಬಂಧನ

ವಾಲ್ಮೀಕಿ ಸಮುದಾಯದ ವಿರುದ್ಧ ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ನೀಡಿದ ಆಕ್ಷೇಪಾರ್ಹ ಹೇಳಿಕೆ ಆಕ್ರೋಶ ವ್ಯಕ್ತವಾಗಿದ್ದು, ಸಮುದಾಯದಿಂದ ಪ್ರತಿಭಟನೆ ಮತ್ತು ರಸ್ತೆ ತಡೆಗೆ ಕಾರಣವಾದ ನಂತರ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನೌಗವಾನ್ ಪಕ್ಡಿಯಾ...