Homeಅಂಕಣಗಳುಫೇಕು ಪತ್ರ: ಪೋಸ್ಟ್ಕಾರ್ಡಿನ ಮಹೇಶ ಹೆಗೆಡೆ ವಿಚಾರಣೆ ಬಾಯಿಬಡುಕಿ ಶೃತಿ ಬೆಳ್ಳಕ್ಕಿ ಬಂಧನ

ಫೇಕು ಪತ್ರ: ಪೋಸ್ಟ್ಕಾರ್ಡಿನ ಮಹೇಶ ಹೆಗೆಡೆ ವಿಚಾರಣೆ ಬಾಯಿಬಡುಕಿ ಶೃತಿ ಬೆಳ್ಳಕ್ಕಿ ಬಂಧನ

- Advertisement -
- Advertisement -

 

ಪೋಸ್ಟ್ಕಾರ್ಡ್ ನ್ಯೂಸ್ ಎಂಬ ಫೇಕ್‌ನ್ಯೂಸ್ ಪೋರ್ಟಲ್‌ನ ಸಂಸ್ಥಾಪಕ ಮಹೇಶ ವಿಕ್ರಮ ಹೆಗಡೆಯನ್ನು ಸಿಐಡಿ ಪೊಲೀಸರು ಫೇಕ್ ಪತ್ರದ ಸೃಷ್ಟಿಗೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದಾರೆ. ಈ ಸುದ್ದಿ ರಾಜ್ಯಾದ್ಯಂತ ತಲುಪುವ ಮೊದಲೇ ಬಿಜೆಪಿಯ ಒಂದಿಬ್ಬರು ನಾಯಕರು ಟ್ವೀಟ್ ಮಾಡಿ, ಮಹೇಶ ಬಂಧನ ಖಂಡನೀಯ ಎಂದಿದ್ದರು!! ಪೋಸ್ಟ್ಕಾರ್ಡ್ ಎನ್ನುವುದು ಬಿಜೆಪಿ ಪ್ರಾಯೋಜಿತ ಪೋರ್ಟಲ್ ಎಂಬುದಂತೂ ಹೊಸ ವಿಷಯವೇನಲ್ಲ ಬಿಡಿ…

ಸಚಿವ ಎಂಬಿ, .ಪಾಟೀಲರ ಹೆಸರಿನಲ್ಲಿ ಫೋರ್ಜರಿ ಪತ್ರವನ್ನು ಸೃಷ್ಟಿಸಿದ ಪ್ರಕರಣದ ವಿಚಾರಣೆ ತೀವ್ರಗೊಂಡಿದ್ದು, ಅದರ ಭಾಗವಾಗಿ ನಿನ್ನೆ ಏಪ್ರಿಲ್ 24ರಂದು ಧಾರವಾಡ ಪೊಲೀಸರು ಶೃತಿ ಬೆಳ್ಳಕ್ಕಿ ಎಂಬ ಬಿಜೆಪಿ ಕಾರ್ಯಕರ್ತೆಯನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ನೀಡಿದ್ದಾರೆ. ಶೃತಿ ಧಾರವಾಡ ಬಿಜೆಪಿ ಗ್ರಾಮೀಣ ವಿಭಾಗದ ಅಧ್ಯಕ್ಷ ಪರಮೇಶ ಉಳವಣ್ಣವರ್ ಪತ್ನಿಯಾಗಿದ್ದು, ಸೋನಿಯಾರಿಗೆ ಎಂ. ಬಿ. ಪಾಟೀಲರು ಬರೆದಿದ್ದ ‘ಫೇಕ್’ ಪತ್ರವನ್ನು ಉಲ್ಲೇಖಿಸಿ, ಕಾಂಗ್ರೆಸ್ ವಿರುದ್ಧ ಚುನಾವಣಾ ಭಾಷಣ ಮಾಡುವ ಸಂದರ್ಭದಲ್ಲಿ ಸಮುದಾಯಗಳಿಗೆ ಅವಮಾನವಾಗುವಂತೆ ಮಾತಾಡಿದ್ದರು. ತಮ್ಮ ಆ ಭಾಷಣವನ್ನು ಫೇಸ್‌ಬುಕ್‌ನಲ್ಲಿ ಹರಿಬಿಟ್ಟಿದ್ದರು. ಧಾರವಾಡ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಲಕರ್ಣಿ ವಿರುದ್ಧ ಪುತೂರಿ ನಡೆಸಲು ಬಿಜೆಪಿ ನಾಯಕರು ಈ ಕಾರ್ಯಕರ್ತೆಯನ್ನು ಬಳಸಿಕೊಂಡು, ವಿಜಯವಾಣಿಯಲ್ಲಿ ಬಂದಿದ್ದ ಫೇಕ್ ಪತ್ರದ ಕುರಿತು ಸುದ್ದಿ ಹರಡಲು ಯತ್ನಿಸಿದ್ದರು.

ಹಾಗೆಯೇ ನಿನ್ನೆ ‘ಫೇಕ್’ ಪತ್ರದ ರೂವಾರಿ ಎನ್ನಲಾದ ಪೋಸ್ಟ್ಕಾರ್ಡ್ನ ಮಹೇಶ ಹೆಗಡೆಯ ವಿಚಾರಣೆಯನ್ನು ಪೊಲೀಸರು ನಡೆಸಿದ್ದಾರೆ.

ಹಿನ್ನೆಲೆ ಕೆದಕುತ್ತ….

ಈ ಫೇಕ್ ಪತ್ರ ಮೊದಲ ಬಾರಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಲಿತಕ್ಕೆ ಬಂದಿದ್ದು 2017ರಲ್ಲಿ ರಾಜ್ಯದಲ್ಲಿ ಲಿಂಗಾಯತ ಪ್ರತ್ಯೇಕ ಧರ್ಮ
ಚಳವಳಿ ಜೋರಾಗಿದ್ದ ಸಂದರ್ಭದಲ್ಲಿ. ನಂತರ ಕಳೆದ 2018ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ. ಕಾಂಗ್ರೆಸ್ ಅಧ್ಯಕ್ಷೆಗೆ ಅಂದಿನ ಜಲ ಸಂಪನ್ಮೂಲ ಸಚಿವ (ಈಗಿನ ಗೃಹ ಸಚಿವ) ಬರೆದ ಪತ್ರ ಇದೆಂದು ಸೃಷ್ಟಿಸಲಾಗಿತ್ತು. ಜಾಗತಿಕ ಕ್ಯಾಥೋಲಿಕ್ ಸಂಘಟನೆಗಳ ಆಶಯದಂತೆ ಲಿಂಗಾಯತರನ್ನು ಹಿಂದೂ ಧರ್ಮದಿಂದ ಬೇರ್ಪಡಿಸುವ ಉದ್ದೇಶಕ್ಕಾಗಿ ಎಂ.ಬಿ. ಪಾಟೀಲರು ಸೋನಿಯಾ ಗಾಂಧಿಯವರಿಗೆ ಭಿನ್ನವಿಸುವ
ರೀತಿಯಲ್ಲಿ ಪತ್ರವನ್ನು ಸೃಷ್ಟಿಸಲಾಗಿತ್ತು. ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟದ ಹಿಂದೆ ಸೋನಿಯಾ ಗಾಂಧಿ ಮತ್ತು ಕ್ಯಾಥೊಲಿಕ್ ಸಂಘಟನೆಗಳ ಕೈವಾಡ ಇದೆ ಎಂದೂ, ಹಿಂದೂ ಧರ್ಮಕ್ಕೆ ಅಪಾಯ ಕಾದಿದೆ ಎಂದೂ ಸುಳ್ಳು ಹರಡಲಾಗಿತ್ತು. ಇದನ್ನು ಮುಂಚೂಣಿಗೆ ತಂದಿದ್ದು ಪೋಸ್ಟ್ಕಾರ್ಡ್ ನ್ಯೂಸ್ ಎಂಬ ಫೇಕು ಖ್ಯಾತಿಯ ಪೋರ್ಟಲ್.

ಆಗಲೇ ಅನೇಕ ಫ್ಯಾಕ್ಟ್ ಚೆಕಿಂಗ್ ಪೋರ್ಟಲ್‌ಗಳು ಈ ಪತ್ರ ನಕಲಿ ಎಂದು ಪ್ರೂವ್ ಮಾಡಿದ್ದವು. ಬಿಎಲ್‌ಡಿಇಎ ಸಂಸ್ಥೆಯ ಲೆಟರ್‌ಹೆಡ್‌ನ ಫೋರ್ಜರಿ ಮಾಡಲಾಗಿತ್ತಲ್ಲದೇ, ಎಂ.ಬಿ. ಪಾಟೀಲರ ಸಹಿಯನ್ನೂ ಫೋರ್ಜರಿ ಮಾಡಲಾಗಿತ್ತು. ಆಗ ಚುನಾವಣೆ ಗದ್ದಲದಲ್ಲಿ ಪೊಲೀಸರೂ ಬಹಳ ತಲೆ ಕೆಡಿಸಿಕೊಂಡಿರಲಿಲ್ಲ. ರಾಜ್ಯ ಬಿಜೆಪಿ ಘಟಕವೂ ಅದೇ ಪತ್ರ ಬಳಸಿ ಕಾಂಗ್ರೆಸ್ ವಿರುದ್ಧ ಅಪಪ್ರಚಾರ ಮಾಡಿತ್ತು.

ಈಗ ಅದೇ ಪತ್ರವನ್ನು ಕಳೆದ ವಾರ ಏಪ್ರಿಲ್ 16ರಂದು ಮತ್ತೆ ವಿಜಯವಾಣಿ ಪ್ರಕಟಿಸಿ ಎಂ.ಬಿ. ಪಾಟೀಲರ ಆಕ್ರೋಶಕ್ಕೆ ಗುರಿಯಾಗಿತ್ತು. ಇದನ್ನು ನಾನುಗೌರಿ.ಕಾಮ್ ಸವಿವರವಾಗಿ ವರದಿ ಮಾಡಿ, ಫೇಕ್‌ನ್ಯೂಸ್ ಎಂಬುದನ್ನು ಜನರ ಗಮನಕ್ಕೆ ತಂದಿತ್ತು.

ಈಗ ಎಂ.ಬಿ. ಪಾಟೀಲರೇ ಗೃಹ ಸಚಿವರಾಗಿರುವುದರಿಂದ ಪೊಲೀಸರು ತನಿಖೆಯನ್ನು ಕ್ಷಿಪ್ರವಾಗಿ ನಡೆಸುತ್ತಿರುವಂತೆ ಕಾಣುತ್ತಿದೆ. ತನಿಖೆ ಫೇಕುವೀರರ ಬುಡಕ್ಕೆ ತಲುಪಿದರಷ್ಟೇ ಹಿಂದಿರುವ ‘ನಾಯಕರ’ ಬಣ್ಣ ಬಯಲಾದೀತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನಲ್ಲಿ ಮುಂದುವರೆದ ಆಹಾರ ಸುರಕ್ಷತೆಗೆ ವಿಶೇಷ ಕಾರ್ಯಾಚರಣೆ: ಯುಬಿ ಸಿಟಿಯ ಹೋಟೆಲ್‌ಗಳಲ್ಲಿ ಕೊಳೆತ ಮಾಂಸ ಪತ್ತೆ!

'ಆಹಾರ ಸುರಕ್ಷತೆ ಇಲಾಖೆ ಮತ್ತು ಔಷಧಿ ಆಡಳಿತ ಇಲಾಖೆ'ಯ ಆಹಾರ ಸುರಕ್ಷತೆಗೆ ವಿಶೇಷ ಕಾರ್ಯಾಚರಣೆ ಮುಂದುವರೆದಿದ್ದು, ಬೆಂಗಳೂರಿನ ಯುಬಿ ಸಿಟಿಯ ಐದು ಪ್ರಮುಖ ಹೋಟೆಲ್‌ಗಳ ಅಡುಗೆ ಮನೆಗಳ ಮೇಲೆ ಅಧಿಕಾರಿಗಳು ಇಂದು (ಆ.10)...

ಮತಗಳ್ಳತನದ ವಿರುದ್ಧ ‘ಕ್ವಿಟ್ ವೋಟ್ ಚೋರಿ’ ಆಂದೋಲನಕ್ಕೆ ಕರೆ ನೀಡಿದ ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು: ದೇಶದಲ್ಲಿ ನಡೆಯುತ್ತಿರುವ 'ಮತ ಕಳ್ಳತನ'ವನ್ನು ತಡೆಗಟ್ಟಲು ಕ್ವಿಟ್ ಇಂಡಿಯಾ ಚಳವಳಿಯ ಮಾದರಿಯಲ್ಲೇ ದೇಶಾದ್ಯಂತ 'ಕ್ವಿಟ್ ವೋಟ್ ಚೋರಿ' (ಮತ ಬಿಟ್ಟು ತೊಲಗಿ) ಆಂದೋಲನವನ್ನು ಪ್ರಾರಂಭಿಸುವ ಅಗತ್ಯವಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ....

SIR ಅವಾಂತರ : ಎನ್ಯುಮರೇಷನ್ ಫಾರಂ ಸರಿಯಾಗಿ ತುಂಬಿಕೊಟ್ಟರೂ ಕರಡು ಪಟ್ಟಿಯಲ್ಲಿ ಹೆಸರಿಲ್ಲ; ಆತಂಕಗೊಂಡು ಮತಗಟ್ಟೆಗಳತ್ತ ಧಾವಿಸಿದ ಜನರು-ವರದಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಭಾಗವಾಗಿ ಪ್ರಕಟಗೊಂಡ ಕರಡು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇಲ್ಲದ ಕಾರಣ ಆತಂಕಗೊಂಡ ಜಾರ್ಖಂಡ್‌ನ ರಾಂಚಿ ನಗರದ ಜನರು ಭಾನುವಾರ (ಆ.9) ಮತಗಟ್ಟೆಗಳಿಗೆ...

ನೇಮಕಾತಿ ಅಕ್ರಮ ಖಂಡಿಸಿ ಜಾರ್ಖಂಡ್‌ನಲ್ಲಿ ಧರಣಿ: ವಿದ್ಯಾರ್ಥಿಗಳ ಹೋರಾಟಕ್ಕೆ ತಲೆಬಾಗಿದ ಸಿಎಂ ಹೇಮಂತ್ ಸೊರೇನ್, ‘ನ್ಯಾಯದ ಭರವಸೆ’

ಜಾರ್ಖಂಡ್‌ನ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳು ಹಾಗೂ ಯುವಜನತೆ ತಮ್ಮ ಭವಿಷ್ಯದ ಭದ್ರತೆಗಾಗಿ ಬೀದಿಗಿಳಿದು ನಡೆಸುತ್ತಿರುವ ಬೃಹತ್ ಪ್ರತಿಭಟನೆ ಈಗ ಇಡೀ ರಾಜ್ಯದ ಗಮನ ಸೆಳೆದಿದೆ. ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗ (JPSC) ಮತ್ತು...

ಪ.ಬಂಗಾಳ : ಮಮತಾ ಬ್ಯಾನರ್ಜಿ ಕಾರಿನ ಮೇಲೆ ದಾಳಿ; ಕಲ್ಲು, ಚಪ್ಪಲಿ ತೂರಿದ ಗುಂಪು

ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತನ ಮನೆಗೆ ಹೋಗುತ್ತಿದ್ದಾಗ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದ್ದ ಕಾರಿನ ಮೇಲೆ ಗುಂಪೊಂದು ದಾಳಿ ನಡೆಸಿದ ಘಟನೆ ಭಾನುವಾರ...

SIR ನೆಪದಲ್ಲಿ 1 ಕೋಟಿ ಮತ ಡಿಲೀಟ್ ಮಾಡೋ ಸಂಚು: ಎಚ್ಚೆತ್ತುಕೊಳ್ಳುವಂತೆ ಕಾರ್ಯಕರ್ತರಿಗೆ ಡಿ.ಕೆ. ಶಿವಕುಮಾರ್ ಕರೆ

SIR ನೆಪದಲ್ಲಿ ಮತದಾರರ ಪಟ್ಟಿಯಿಂದ ಒಂದು ಕೋಟಿಗೂ ಹೆಚ್ಚು ಮತಗಳನ್ನು ಅಳಿಸುವ ಸಂಚು ನಡೆಯುತ್ತಿದೆ, ಕಾಂಗ್ರೆಸ್ ಕಾರ್ಯಕರ್ತರು ಈ ವಿಚಾರದಲ್ಲಿ ಎಚ್ಚೆತ್ತುಕೊಳ್ಳಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಕೆಪಿಸಿಸಿ ಕಚೇರಿಯ...

‘ಮೋದಿ ದೇಶದ ಯುವಕರನ್ನು ಸಬಲೀಕರಣಗೊಳಿಸಲು ಶ್ರಮಿಸುತ್ತಿದ್ದಾರೆ ’: ‘ಜೆನ್ ಝೀ’ಗಳನ್ನು ‘ಬಾಹ್ಯ ಶಕ್ತಿಗಳು ದಾರಿ ತಪ್ಪಿಸುತ್ತಿವೆ’: ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ

ಭುವನೇಶ್ವರ: ಜಾಗತಿಕ ವೇದಿಕೆಯಲ್ಲಿ "ತಮ್ಮನ್ನು ದಾರಿ ತಪ್ಪಿಸಲು ಮತ್ತು ಭಾರತವನ್ನು ದುರ್ಬಲಗೊಳಿಸಲು" ನಿರಂತರವಾಗಿ ಪ್ರಯತ್ನಿಸುತ್ತಿರುವ "ಬಾಹ್ಯ ಶಕ್ತಿಗಳಿಗೆ" ಬಲಿಯಾಗಬೇಡಿ ಎಂದು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಭಾನುವಾರ ಜೆನ್ ಝೀ (GEN-Z)...

ಪದವಿ ಪ್ರದಾನ ಸಮಾರಂಭಕ್ಕೆ CJI ಆಹ್ವಾನಿಸಲು ಹೈದರಾಬಾದ್ ಕಾನೂನು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ವಿರೋಧ

ಹೈದರಾಬಾದ್‌ನ ‘ನಾಲ್ಸಾರ್’ (NALSAR) ಕಾನೂನು ವಿಶ್ವವಿದ್ಯಾಲಯದ ಪದವಿ ಪ್ರದಾನ ಸಮಾರಂಭಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಬಾರದು ಎಂದು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಒಂದು ಗುಂಪು ಆಡಳಿತ...

3ನೇ ಹಂತದ ‘SIR’ ಕರಡು ಮತದಾರರ ಪಟ್ಟಿ ಬಿಡುಗಡೆ: 12 ರಾಜ್ಯಗಳಲ್ಲಿ 1.58 ಕೋಟಿ ಮತದಾರರ ಹೆಸರು ಕೈಬಿಟ್ಟ ಆಯೋಗ, ಇನ್ನು ಕರ್ನಾಟಕ ಬಾಕಿ

3ನೇ ಹಂತದದಲ್ಲಿ ದೇಶದ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಜುಲೈನಿಂದ ನಡೆಸಲಾದ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಪ್ರಕ್ರಿಯೆಯ ಬಳಿಕ ಬಿಡುಗಡೆಯಾದ ಕರಡು ಮತದಾರರ ಪಟ್ಟಿಯಲ್ಲಿ ಭಾರಿ ಪ್ರಮಾಣದ ಹೆಸರುಗಳು...

ದಾರುಲ್ ಉಲೂಮ್ ದಿಯೋಬಂದ್ ಆವರಣದಲ್ಲಿ ಶಿವಲಿಂಗವಿದೆ ಎಂದ ಹಿಂದುತ್ವ ಸಂಘಟನೆ : ಆ.11ರಂದು ಗಂಗಾಜಲ ಅರ್ಪಿಸುವುದಾಗಿ ಘೋಷಣೆ

ಉತ್ತರ ಪ್ರದೇಶದ ದಿಯೋಬಂದ್‌ನಲ್ಲಿರುವ ಪ್ರಸಿದ್ದ ಮುಸ್ಲಿಂ ಶಿಕ್ಷಣ ಸಂಸ್ಥೆ ದಾರುಲ್ ಉಲೂಮ್ ಆವರಣದಲ್ಲಿ ಶಿವಲಿಂಗವಿದೆ ಎಂದು ಪ್ರತಿಪಾದಿಸಿರುವ ಹಿಂದೂ ರಕ್ಷಾ ದಳ ಸಂಘಟನೆ, ಆಗಸ್ಟ್ 11 ರಂದು ಸಂಸ್ಥೆಗೆ ಭೇಟಿ ನೀಡಿ ಗಂಗಾಜಲ...