Homeಅಂಕಣಗಳುಫೇಕು ಪತ್ರ: ಪೋಸ್ಟ್ಕಾರ್ಡಿನ ಮಹೇಶ ಹೆಗೆಡೆ ವಿಚಾರಣೆ ಬಾಯಿಬಡುಕಿ ಶೃತಿ ಬೆಳ್ಳಕ್ಕಿ ಬಂಧನ

ಫೇಕು ಪತ್ರ: ಪೋಸ್ಟ್ಕಾರ್ಡಿನ ಮಹೇಶ ಹೆಗೆಡೆ ವಿಚಾರಣೆ ಬಾಯಿಬಡುಕಿ ಶೃತಿ ಬೆಳ್ಳಕ್ಕಿ ಬಂಧನ

- Advertisement -
- Advertisement -

 

ಪೋಸ್ಟ್ಕಾರ್ಡ್ ನ್ಯೂಸ್ ಎಂಬ ಫೇಕ್‌ನ್ಯೂಸ್ ಪೋರ್ಟಲ್‌ನ ಸಂಸ್ಥಾಪಕ ಮಹೇಶ ವಿಕ್ರಮ ಹೆಗಡೆಯನ್ನು ಸಿಐಡಿ ಪೊಲೀಸರು ಫೇಕ್ ಪತ್ರದ ಸೃಷ್ಟಿಗೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದಾರೆ. ಈ ಸುದ್ದಿ ರಾಜ್ಯಾದ್ಯಂತ ತಲುಪುವ ಮೊದಲೇ ಬಿಜೆಪಿಯ ಒಂದಿಬ್ಬರು ನಾಯಕರು ಟ್ವೀಟ್ ಮಾಡಿ, ಮಹೇಶ ಬಂಧನ ಖಂಡನೀಯ ಎಂದಿದ್ದರು!! ಪೋಸ್ಟ್ಕಾರ್ಡ್ ಎನ್ನುವುದು ಬಿಜೆಪಿ ಪ್ರಾಯೋಜಿತ ಪೋರ್ಟಲ್ ಎಂಬುದಂತೂ ಹೊಸ ವಿಷಯವೇನಲ್ಲ ಬಿಡಿ…

ಸಚಿವ ಎಂಬಿ, .ಪಾಟೀಲರ ಹೆಸರಿನಲ್ಲಿ ಫೋರ್ಜರಿ ಪತ್ರವನ್ನು ಸೃಷ್ಟಿಸಿದ ಪ್ರಕರಣದ ವಿಚಾರಣೆ ತೀವ್ರಗೊಂಡಿದ್ದು, ಅದರ ಭಾಗವಾಗಿ ನಿನ್ನೆ ಏಪ್ರಿಲ್ 24ರಂದು ಧಾರವಾಡ ಪೊಲೀಸರು ಶೃತಿ ಬೆಳ್ಳಕ್ಕಿ ಎಂಬ ಬಿಜೆಪಿ ಕಾರ್ಯಕರ್ತೆಯನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ನೀಡಿದ್ದಾರೆ. ಶೃತಿ ಧಾರವಾಡ ಬಿಜೆಪಿ ಗ್ರಾಮೀಣ ವಿಭಾಗದ ಅಧ್ಯಕ್ಷ ಪರಮೇಶ ಉಳವಣ್ಣವರ್ ಪತ್ನಿಯಾಗಿದ್ದು, ಸೋನಿಯಾರಿಗೆ ಎಂ. ಬಿ. ಪಾಟೀಲರು ಬರೆದಿದ್ದ ‘ಫೇಕ್’ ಪತ್ರವನ್ನು ಉಲ್ಲೇಖಿಸಿ, ಕಾಂಗ್ರೆಸ್ ವಿರುದ್ಧ ಚುನಾವಣಾ ಭಾಷಣ ಮಾಡುವ ಸಂದರ್ಭದಲ್ಲಿ ಸಮುದಾಯಗಳಿಗೆ ಅವಮಾನವಾಗುವಂತೆ ಮಾತಾಡಿದ್ದರು. ತಮ್ಮ ಆ ಭಾಷಣವನ್ನು ಫೇಸ್‌ಬುಕ್‌ನಲ್ಲಿ ಹರಿಬಿಟ್ಟಿದ್ದರು. ಧಾರವಾಡ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಲಕರ್ಣಿ ವಿರುದ್ಧ ಪುತೂರಿ ನಡೆಸಲು ಬಿಜೆಪಿ ನಾಯಕರು ಈ ಕಾರ್ಯಕರ್ತೆಯನ್ನು ಬಳಸಿಕೊಂಡು, ವಿಜಯವಾಣಿಯಲ್ಲಿ ಬಂದಿದ್ದ ಫೇಕ್ ಪತ್ರದ ಕುರಿತು ಸುದ್ದಿ ಹರಡಲು ಯತ್ನಿಸಿದ್ದರು.

ಹಾಗೆಯೇ ನಿನ್ನೆ ‘ಫೇಕ್’ ಪತ್ರದ ರೂವಾರಿ ಎನ್ನಲಾದ ಪೋಸ್ಟ್ಕಾರ್ಡ್ನ ಮಹೇಶ ಹೆಗಡೆಯ ವಿಚಾರಣೆಯನ್ನು ಪೊಲೀಸರು ನಡೆಸಿದ್ದಾರೆ.

ಹಿನ್ನೆಲೆ ಕೆದಕುತ್ತ….

ಈ ಫೇಕ್ ಪತ್ರ ಮೊದಲ ಬಾರಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಲಿತಕ್ಕೆ ಬಂದಿದ್ದು 2017ರಲ್ಲಿ ರಾಜ್ಯದಲ್ಲಿ ಲಿಂಗಾಯತ ಪ್ರತ್ಯೇಕ ಧರ್ಮ
ಚಳವಳಿ ಜೋರಾಗಿದ್ದ ಸಂದರ್ಭದಲ್ಲಿ. ನಂತರ ಕಳೆದ 2018ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ. ಕಾಂಗ್ರೆಸ್ ಅಧ್ಯಕ್ಷೆಗೆ ಅಂದಿನ ಜಲ ಸಂಪನ್ಮೂಲ ಸಚಿವ (ಈಗಿನ ಗೃಹ ಸಚಿವ) ಬರೆದ ಪತ್ರ ಇದೆಂದು ಸೃಷ್ಟಿಸಲಾಗಿತ್ತು. ಜಾಗತಿಕ ಕ್ಯಾಥೋಲಿಕ್ ಸಂಘಟನೆಗಳ ಆಶಯದಂತೆ ಲಿಂಗಾಯತರನ್ನು ಹಿಂದೂ ಧರ್ಮದಿಂದ ಬೇರ್ಪಡಿಸುವ ಉದ್ದೇಶಕ್ಕಾಗಿ ಎಂ.ಬಿ. ಪಾಟೀಲರು ಸೋನಿಯಾ ಗಾಂಧಿಯವರಿಗೆ ಭಿನ್ನವಿಸುವ
ರೀತಿಯಲ್ಲಿ ಪತ್ರವನ್ನು ಸೃಷ್ಟಿಸಲಾಗಿತ್ತು. ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟದ ಹಿಂದೆ ಸೋನಿಯಾ ಗಾಂಧಿ ಮತ್ತು ಕ್ಯಾಥೊಲಿಕ್ ಸಂಘಟನೆಗಳ ಕೈವಾಡ ಇದೆ ಎಂದೂ, ಹಿಂದೂ ಧರ್ಮಕ್ಕೆ ಅಪಾಯ ಕಾದಿದೆ ಎಂದೂ ಸುಳ್ಳು ಹರಡಲಾಗಿತ್ತು. ಇದನ್ನು ಮುಂಚೂಣಿಗೆ ತಂದಿದ್ದು ಪೋಸ್ಟ್ಕಾರ್ಡ್ ನ್ಯೂಸ್ ಎಂಬ ಫೇಕು ಖ್ಯಾತಿಯ ಪೋರ್ಟಲ್.

ಆಗಲೇ ಅನೇಕ ಫ್ಯಾಕ್ಟ್ ಚೆಕಿಂಗ್ ಪೋರ್ಟಲ್‌ಗಳು ಈ ಪತ್ರ ನಕಲಿ ಎಂದು ಪ್ರೂವ್ ಮಾಡಿದ್ದವು. ಬಿಎಲ್‌ಡಿಇಎ ಸಂಸ್ಥೆಯ ಲೆಟರ್‌ಹೆಡ್‌ನ ಫೋರ್ಜರಿ ಮಾಡಲಾಗಿತ್ತಲ್ಲದೇ, ಎಂ.ಬಿ. ಪಾಟೀಲರ ಸಹಿಯನ್ನೂ ಫೋರ್ಜರಿ ಮಾಡಲಾಗಿತ್ತು. ಆಗ ಚುನಾವಣೆ ಗದ್ದಲದಲ್ಲಿ ಪೊಲೀಸರೂ ಬಹಳ ತಲೆ ಕೆಡಿಸಿಕೊಂಡಿರಲಿಲ್ಲ. ರಾಜ್ಯ ಬಿಜೆಪಿ ಘಟಕವೂ ಅದೇ ಪತ್ರ ಬಳಸಿ ಕಾಂಗ್ರೆಸ್ ವಿರುದ್ಧ ಅಪಪ್ರಚಾರ ಮಾಡಿತ್ತು.

ಈಗ ಅದೇ ಪತ್ರವನ್ನು ಕಳೆದ ವಾರ ಏಪ್ರಿಲ್ 16ರಂದು ಮತ್ತೆ ವಿಜಯವಾಣಿ ಪ್ರಕಟಿಸಿ ಎಂ.ಬಿ. ಪಾಟೀಲರ ಆಕ್ರೋಶಕ್ಕೆ ಗುರಿಯಾಗಿತ್ತು. ಇದನ್ನು ನಾನುಗೌರಿ.ಕಾಮ್ ಸವಿವರವಾಗಿ ವರದಿ ಮಾಡಿ, ಫೇಕ್‌ನ್ಯೂಸ್ ಎಂಬುದನ್ನು ಜನರ ಗಮನಕ್ಕೆ ತಂದಿತ್ತು.

ಈಗ ಎಂ.ಬಿ. ಪಾಟೀಲರೇ ಗೃಹ ಸಚಿವರಾಗಿರುವುದರಿಂದ ಪೊಲೀಸರು ತನಿಖೆಯನ್ನು ಕ್ಷಿಪ್ರವಾಗಿ ನಡೆಸುತ್ತಿರುವಂತೆ ಕಾಣುತ್ತಿದೆ. ತನಿಖೆ ಫೇಕುವೀರರ ಬುಡಕ್ಕೆ ತಲುಪಿದರಷ್ಟೇ ಹಿಂದಿರುವ ‘ನಾಯಕರ’ ಬಣ್ಣ ಬಯಲಾದೀತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್, ರಾಹುಲ್ ಗಾಂಧಿ ಬಿಜೆಪಿಯ ಬಿ-ಟೀಮ್: ಕೇರಳ ಸಿಎಂ ಪಿಣರಾಯಿ ವಿಜಯನ್

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಶನಿವಾರ ಕಾಂಗ್ರೆಸ್ ಮತ್ತು ಅದರ ನಾಯಕ ರಾಹುಲ್ ಗಾಂಧಿ ಅವರನ್ನು ಟೀಕಿಸಿದ್ದು, ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಬಿಜೆಪಿಯ ಬಿ-ಟೀಮ್ ಎಂದು ಆರೋಪಿಸಿದ್ದಾರೆ.   ಕೇಂದ್ರೀಯ ಸಂಸ್ಥೆಗಳು ಕೇರಳ...

‘ಬಿಜೆಪಿ ಮತದಾನದ ಹಕ್ಕನ್ನು ಕಸಿದುಕೊಳ್ಳಲು ಬಿಡುವುದಿಲ್ಲ, ಕೊನೆಯವರೆಗೂ ಹೋರಾಡುತ್ತೇವೆ’; ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮತದಾರರ ಪಟ್ಟಿಯ ಪರಿಷ್ಕರಣೆಯ ಮೂಲಕ ಜನರ "ಮತದಾನದ ಹಕ್ಕನ್ನು ಕಸಿದುಕೊಳ್ಳಲು" ಪ್ರಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.  "ಮೋದಿ ಜಿ...

ಏಳು ವರ್ಷಗಳ ನಂತರ ಯುಎಪಿಎ ಪ್ರಕರಣದಲ್ಲಿ ಇಬ್ಬರು ಕಾಶ್ಮೀರಿ ಯುವಕರನ್ನು ಖುಲಾಸೆಗೊಳಿಸಿದ ದೆಹಲಿ ನ್ಯಾಯಾಲಯ

ಏಳು ವರ್ಷಗಳಿಗೂ ಹೆಚ್ಚು ಕಾಲದ ನಂತರ, ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಬಂಧಿಸಲ್ಪಟ್ಟ ಇಬ್ಬರು ಕಾಶ್ಮೀರಿ ಯುವಕರನ್ನು ಗುರುವಾರ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಪ್ರಾಸಿಕ್ಯೂಷನ್ ತನ್ನ ಆರೋಪಗಳನ್ನು ಸಾಬೀತುಪಡಿಸಲು ವಿಫಲವಾಗಿದೆ ಮತ್ತು ದೆಹಲಿ ಪೊಲೀಸರು...

‘ನಾವು ಯುದ್ಧವನ್ನು ಶಾಶ್ವತವಾಗಿ ಕೊನೆಗೊಳಿಸಲು ಪ್ರಯತ್ನಿಸುತ್ತೇವೆ’; ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಗ್ಚಿ: ವರದಿ

ಟೆಹ್ರಾನ್: ಇಸ್ರೇಲ್ ಮತ್ತು ಅಮೆರಿಕದ ದಾಳಿಗಳ ನಂತರ ಇರಾನ್‌ನ ಉನ್ನತ ಅಧಿಕಾರಿಗಳು ಮತ್ತು ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಸೇರಿದಂತೆ ಸಾವಿರಾರು ಜನರು ಸಾವನ್ನಪ್ಪಿದ ನಂತರ, ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ...

‘ಅಮೆರಿಕ ಇಲ್ಲದೆ, ನ್ಯಾಟೋ ಒಂದು ಕಾಗದದ ಹುಲಿ’: ಅಟ್ಲಾಂಟಿಕ್ ಮೈತ್ರಿಕೂಟದ ದೇಶಗಳನ್ನು ‘ಹೇಡಿಗಳು’ ಎಂದ ಡೊನಾಲ್ಡ್ ಟ್ರಂಪ್  

ಇರಾನ್ ವಿರುದ್ಧದ ಅಮೆರಿಕ - ಇಸ್ರೇಲ್ ಯುದ್ಧಕ್ಕೆ ಬೆಂಬಲ ನೀಡದ ನ್ಯಾಟೋ ಮಿತ್ರರಾಷ್ಟ್ರಗಳ ವಿರುದ್ಧ ಶುಕ್ರವಾರ ವಾಗ್ದಾಳಿ ನಡೆಸಿದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ದೀರ್ಘಕಾಲದ ಅಮೆರಿಕದ ಮಿತ್ರರಾಷ್ಟ್ರಗಳನ್ನು "ಹೇಡಿಗಳು" ಎಂದು ಕರೆದಿದ್ದಾರೆ. "ಯುಎಸ್ಎ ಇಲ್ಲದೆ,...

ಮುಖ್ಯಮಂತ್ರಿಗಳಿಗೆ ವರ್ಗಾವಣೆಗಳಲ್ಲಿ ಹಸ್ತಕ್ಷೇಪ ಮಾಡುವುದಕ್ಕಿಂತ ಮಹತ್ವದ ಕೆಲಸವಿದೆ: ಕರ್ನಾಟಕ ಹೈಕೋರ್ಟ್ 

ಸರ್ಕಾರಿ ನೌಕರರ ವರ್ಗಾವಣೆ ಮತ್ತು ನೇಮಕಾತಿಗಳಲ್ಲಿ ಹಸ್ತಕ್ಷೇಪ ಮಾಡುವುದಕ್ಕಿಂತ ಮುಖ್ಯಮಂತ್ರಿಗಳು ನಿರ್ವಹಿಸಬೇಕಾದ ಕೆಲಸ ಉತ್ತಮ ಮತ್ತು ಹೆಚ್ಚು ಮುಖ್ಯವಾದುದು ಎಂದು ಕರ್ನಾಟಕ ಹೈಕೋರ್ಟ್ ಇತ್ತೀಚಿನ ತೀರ್ಪೊಂದರಲ್ಲಿ ಹೇಳಿದೆ.  ಬೆಸ್ಕಾಂ ಎಂಜಿನಿಯರ್ ವರ್ಗಾವಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ...

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...

ಸಾಮೂಹಿಕ ಮತಾಂತರಕ್ಕೆ ಕಾರಣವಾದವರಿಗೆ ಜೀವಾವಧಿ ಶಿಕ್ಷೆ; ಮಸೂದೆ ಅಂಗೀಕರಿಸಿದ ಛತ್ತೀಸ್‌ಗಢ ವಿಧಾನಸಭೆ

ಬಲವಂತ, ಪ್ರಚೋದನೆ, ವಂಚನೆ ಅಥವಾ ತಪ್ಪು ನಿರೂಪಣೆಯ ಮೂಲಕ ನಡೆಸಲಾಗುವ ಧಾರ್ಮಿಕ ಮತಾಂತರಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಛತ್ತೀಸ್‌ಗಢ ವಿಧಾನಸಭೆಯು ಗುರುವಾರ ಅಂಗೀಕರಿಸಿದೆ. ಸಾಮೂಹಿಕ ಮತಾಂತರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಸೇರಿದಂತೆ...