Homeಅಂಕಣಗಳುಫೇಕು ಪತ್ರ: ಪೋಸ್ಟ್ಕಾರ್ಡಿನ ಮಹೇಶ ಹೆಗೆಡೆ ವಿಚಾರಣೆ ಬಾಯಿಬಡುಕಿ ಶೃತಿ ಬೆಳ್ಳಕ್ಕಿ ಬಂಧನ

ಫೇಕು ಪತ್ರ: ಪೋಸ್ಟ್ಕಾರ್ಡಿನ ಮಹೇಶ ಹೆಗೆಡೆ ವಿಚಾರಣೆ ಬಾಯಿಬಡುಕಿ ಶೃತಿ ಬೆಳ್ಳಕ್ಕಿ ಬಂಧನ

- Advertisement -
- Advertisement -

 

ಪೋಸ್ಟ್ಕಾರ್ಡ್ ನ್ಯೂಸ್ ಎಂಬ ಫೇಕ್‌ನ್ಯೂಸ್ ಪೋರ್ಟಲ್‌ನ ಸಂಸ್ಥಾಪಕ ಮಹೇಶ ವಿಕ್ರಮ ಹೆಗಡೆಯನ್ನು ಸಿಐಡಿ ಪೊಲೀಸರು ಫೇಕ್ ಪತ್ರದ ಸೃಷ್ಟಿಗೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದಾರೆ. ಈ ಸುದ್ದಿ ರಾಜ್ಯಾದ್ಯಂತ ತಲುಪುವ ಮೊದಲೇ ಬಿಜೆಪಿಯ ಒಂದಿಬ್ಬರು ನಾಯಕರು ಟ್ವೀಟ್ ಮಾಡಿ, ಮಹೇಶ ಬಂಧನ ಖಂಡನೀಯ ಎಂದಿದ್ದರು!! ಪೋಸ್ಟ್ಕಾರ್ಡ್ ಎನ್ನುವುದು ಬಿಜೆಪಿ ಪ್ರಾಯೋಜಿತ ಪೋರ್ಟಲ್ ಎಂಬುದಂತೂ ಹೊಸ ವಿಷಯವೇನಲ್ಲ ಬಿಡಿ…

ಸಚಿವ ಎಂಬಿ, .ಪಾಟೀಲರ ಹೆಸರಿನಲ್ಲಿ ಫೋರ್ಜರಿ ಪತ್ರವನ್ನು ಸೃಷ್ಟಿಸಿದ ಪ್ರಕರಣದ ವಿಚಾರಣೆ ತೀವ್ರಗೊಂಡಿದ್ದು, ಅದರ ಭಾಗವಾಗಿ ನಿನ್ನೆ ಏಪ್ರಿಲ್ 24ರಂದು ಧಾರವಾಡ ಪೊಲೀಸರು ಶೃತಿ ಬೆಳ್ಳಕ್ಕಿ ಎಂಬ ಬಿಜೆಪಿ ಕಾರ್ಯಕರ್ತೆಯನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ನೀಡಿದ್ದಾರೆ. ಶೃತಿ ಧಾರವಾಡ ಬಿಜೆಪಿ ಗ್ರಾಮೀಣ ವಿಭಾಗದ ಅಧ್ಯಕ್ಷ ಪರಮೇಶ ಉಳವಣ್ಣವರ್ ಪತ್ನಿಯಾಗಿದ್ದು, ಸೋನಿಯಾರಿಗೆ ಎಂ. ಬಿ. ಪಾಟೀಲರು ಬರೆದಿದ್ದ ‘ಫೇಕ್’ ಪತ್ರವನ್ನು ಉಲ್ಲೇಖಿಸಿ, ಕಾಂಗ್ರೆಸ್ ವಿರುದ್ಧ ಚುನಾವಣಾ ಭಾಷಣ ಮಾಡುವ ಸಂದರ್ಭದಲ್ಲಿ ಸಮುದಾಯಗಳಿಗೆ ಅವಮಾನವಾಗುವಂತೆ ಮಾತಾಡಿದ್ದರು. ತಮ್ಮ ಆ ಭಾಷಣವನ್ನು ಫೇಸ್‌ಬುಕ್‌ನಲ್ಲಿ ಹರಿಬಿಟ್ಟಿದ್ದರು. ಧಾರವಾಡ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಲಕರ್ಣಿ ವಿರುದ್ಧ ಪುತೂರಿ ನಡೆಸಲು ಬಿಜೆಪಿ ನಾಯಕರು ಈ ಕಾರ್ಯಕರ್ತೆಯನ್ನು ಬಳಸಿಕೊಂಡು, ವಿಜಯವಾಣಿಯಲ್ಲಿ ಬಂದಿದ್ದ ಫೇಕ್ ಪತ್ರದ ಕುರಿತು ಸುದ್ದಿ ಹರಡಲು ಯತ್ನಿಸಿದ್ದರು.

ಹಾಗೆಯೇ ನಿನ್ನೆ ‘ಫೇಕ್’ ಪತ್ರದ ರೂವಾರಿ ಎನ್ನಲಾದ ಪೋಸ್ಟ್ಕಾರ್ಡ್ನ ಮಹೇಶ ಹೆಗಡೆಯ ವಿಚಾರಣೆಯನ್ನು ಪೊಲೀಸರು ನಡೆಸಿದ್ದಾರೆ.

ಹಿನ್ನೆಲೆ ಕೆದಕುತ್ತ….

ಈ ಫೇಕ್ ಪತ್ರ ಮೊದಲ ಬಾರಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಲಿತಕ್ಕೆ ಬಂದಿದ್ದು 2017ರಲ್ಲಿ ರಾಜ್ಯದಲ್ಲಿ ಲಿಂಗಾಯತ ಪ್ರತ್ಯೇಕ ಧರ್ಮ
ಚಳವಳಿ ಜೋರಾಗಿದ್ದ ಸಂದರ್ಭದಲ್ಲಿ. ನಂತರ ಕಳೆದ 2018ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ. ಕಾಂಗ್ರೆಸ್ ಅಧ್ಯಕ್ಷೆಗೆ ಅಂದಿನ ಜಲ ಸಂಪನ್ಮೂಲ ಸಚಿವ (ಈಗಿನ ಗೃಹ ಸಚಿವ) ಬರೆದ ಪತ್ರ ಇದೆಂದು ಸೃಷ್ಟಿಸಲಾಗಿತ್ತು. ಜಾಗತಿಕ ಕ್ಯಾಥೋಲಿಕ್ ಸಂಘಟನೆಗಳ ಆಶಯದಂತೆ ಲಿಂಗಾಯತರನ್ನು ಹಿಂದೂ ಧರ್ಮದಿಂದ ಬೇರ್ಪಡಿಸುವ ಉದ್ದೇಶಕ್ಕಾಗಿ ಎಂ.ಬಿ. ಪಾಟೀಲರು ಸೋನಿಯಾ ಗಾಂಧಿಯವರಿಗೆ ಭಿನ್ನವಿಸುವ
ರೀತಿಯಲ್ಲಿ ಪತ್ರವನ್ನು ಸೃಷ್ಟಿಸಲಾಗಿತ್ತು. ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟದ ಹಿಂದೆ ಸೋನಿಯಾ ಗಾಂಧಿ ಮತ್ತು ಕ್ಯಾಥೊಲಿಕ್ ಸಂಘಟನೆಗಳ ಕೈವಾಡ ಇದೆ ಎಂದೂ, ಹಿಂದೂ ಧರ್ಮಕ್ಕೆ ಅಪಾಯ ಕಾದಿದೆ ಎಂದೂ ಸುಳ್ಳು ಹರಡಲಾಗಿತ್ತು. ಇದನ್ನು ಮುಂಚೂಣಿಗೆ ತಂದಿದ್ದು ಪೋಸ್ಟ್ಕಾರ್ಡ್ ನ್ಯೂಸ್ ಎಂಬ ಫೇಕು ಖ್ಯಾತಿಯ ಪೋರ್ಟಲ್.

ಆಗಲೇ ಅನೇಕ ಫ್ಯಾಕ್ಟ್ ಚೆಕಿಂಗ್ ಪೋರ್ಟಲ್‌ಗಳು ಈ ಪತ್ರ ನಕಲಿ ಎಂದು ಪ್ರೂವ್ ಮಾಡಿದ್ದವು. ಬಿಎಲ್‌ಡಿಇಎ ಸಂಸ್ಥೆಯ ಲೆಟರ್‌ಹೆಡ್‌ನ ಫೋರ್ಜರಿ ಮಾಡಲಾಗಿತ್ತಲ್ಲದೇ, ಎಂ.ಬಿ. ಪಾಟೀಲರ ಸಹಿಯನ್ನೂ ಫೋರ್ಜರಿ ಮಾಡಲಾಗಿತ್ತು. ಆಗ ಚುನಾವಣೆ ಗದ್ದಲದಲ್ಲಿ ಪೊಲೀಸರೂ ಬಹಳ ತಲೆ ಕೆಡಿಸಿಕೊಂಡಿರಲಿಲ್ಲ. ರಾಜ್ಯ ಬಿಜೆಪಿ ಘಟಕವೂ ಅದೇ ಪತ್ರ ಬಳಸಿ ಕಾಂಗ್ರೆಸ್ ವಿರುದ್ಧ ಅಪಪ್ರಚಾರ ಮಾಡಿತ್ತು.

ಈಗ ಅದೇ ಪತ್ರವನ್ನು ಕಳೆದ ವಾರ ಏಪ್ರಿಲ್ 16ರಂದು ಮತ್ತೆ ವಿಜಯವಾಣಿ ಪ್ರಕಟಿಸಿ ಎಂ.ಬಿ. ಪಾಟೀಲರ ಆಕ್ರೋಶಕ್ಕೆ ಗುರಿಯಾಗಿತ್ತು. ಇದನ್ನು ನಾನುಗೌರಿ.ಕಾಮ್ ಸವಿವರವಾಗಿ ವರದಿ ಮಾಡಿ, ಫೇಕ್‌ನ್ಯೂಸ್ ಎಂಬುದನ್ನು ಜನರ ಗಮನಕ್ಕೆ ತಂದಿತ್ತು.

ಈಗ ಎಂ.ಬಿ. ಪಾಟೀಲರೇ ಗೃಹ ಸಚಿವರಾಗಿರುವುದರಿಂದ ಪೊಲೀಸರು ತನಿಖೆಯನ್ನು ಕ್ಷಿಪ್ರವಾಗಿ ನಡೆಸುತ್ತಿರುವಂತೆ ಕಾಣುತ್ತಿದೆ. ತನಿಖೆ ಫೇಕುವೀರರ ಬುಡಕ್ಕೆ ತಲುಪಿದರಷ್ಟೇ ಹಿಂದಿರುವ ‘ನಾಯಕರ’ ಬಣ್ಣ ಬಯಲಾದೀತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾದಲ್ಲಿ ಹಿಂದೂ ಯುವಕನ ಗುಂಪುಹತ್ಯೆ ನಾಚಿಕೆಗೇಡು ಕೃತ್ಯ; ಇಸ್ಲಾಂ ವಿರುದ್ಧ: ಜಮಿಯತ್ ಮುಖ್ಯಸ್ಥ ಮಹಮೂದ್ ಮದನಿ

ಬಾಂಗ್ಲಾದೇಶದ ಮೈಮೆನ್ಸಿಂಗ್ ಜಿಲ್ಲೆಯಲ್ಲಿ ಹಿಂದೂ ಯುವಕ ದೀಪು ಚಂದ್ರ ದಾಸ್ ಅವರ ಮೇಲೆ ನಡೆದ ಗುಂಪು ಹಲ್ಲೆಯನ್ನು ಜಮಿಯತ್ ಉಲಮಾ-ಇ-ಹಿಂದ್ ಅಧ್ಯಕ್ಷ ಮೌಲಾನಾ ಮಹಮೂದ್ ಮದನಿ ಭಾನುವಾರ ತೀವ್ರವಾಗಿ ಖಂಡಿಸಿದ್ದಾರೆ. ಇಂತಹ ಕೃತ್ಯಗಳು...

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ-ರಾಹುಲ್‌ಗೆ ದೆಹಲಿ ಹೈಕೋರ್ಟಿನಿಂದ ನೋಟಿಸ್

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿನ ನಡೆದಿದೆ ಎನ್ನಲಾದ ಹಣ ವರ್ಗಾವಣೆ ದೂರನ್ನು ಪರಿಗಣಿಸಲು ನಿರಾಕರಿಸಿದ ವಿಚಾರಣಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ ಕ್ರಿಮಿನಲ್ ಪರಿಷ್ಕರಣಾ ಅರ್ಜಿಯ ಕುರಿತು, ಕಾಂಗ್ರೆಸ್ ಸಂಸದೀಯ...

ಆಕ್ರಮಿತ ಪಶ್ಚಿಮ ದಂಡೆಯಲ್ಲಿ ಇಸ್ರೇಲ್ ಆಕ್ರಮಣ : ಪ್ಯಾಲೆಸ್ತೀನಿಯರ ವಸತಿ ಕಟ್ಟಡಗಳು ಧ್ವಂಸ

ಇಸ್ರೇಲಿ ಪಡೆಗಳು ಆಕ್ರಮಿತ ಪಶ್ಚಿಮ ದಂಡೆಯಲ್ಲಿರುವ ಪಟ್ಟಣಗಳಿಗೆ ನುಗ್ಗಿ ಪ್ಯಾಲೆಸ್ತೀನಿಯರ ವಸತಿ ಕಟ್ಟಡಗಳನ್ನು ಕೆಡವಿ ಹಾಕಿದೆ ಎಂದು ಸುದ್ದಿ ಸಂಸ್ಥೆ ಅಲ್‌-ಜಝೀರಾ ವರದಿ ಮಾಡಿದೆ. ಇದು ಗಾಝಾ ಕದನ ವಿರಾಮದ ಮೂಲಕ ಇಸ್ರೇಲ್ ಪ್ಯಾಲೆಸ್ತೀನಿಯರ...

ಶಿಕ್ಷಣ ಸಂಸ್ಥೆಗಳು ‘ಕೋಮುವಾದದ ಪ್ರಯೋಗಶಾಲೆʼಗಳಾಗಲು ಅವಕಾಶ ನೀಡುವುದಿಲ್ಲ: ಕೇರಳ ಸರ್ಕಾರ

ಶಾಲೆಗಳಲ್ಲಿ ಕ್ರಿಸ್‌ಮಸ್‌ ಆಚರಣೆಗೆ ಹಿಂದುತ್ವ ಗುಂಪುಗಳು ಅಡ್ಡಿಪಡಿಸುತ್ತಿವೆ ಎಂಬ ಆರೋಪದ ಕುರಿತು ಕೇರಳದ ಶಿಕ್ಷಣ ಸಚಿವ ಶಿವನ್ ಕುಟ್ಟಿ ಭಾನುವಾರ (ಡಿ.22) ಪ್ರತಿಕ್ರಿಯಿಸಿದ್ದು, ಶಿಕ್ಷಣ ಸಂಸ್ಥೆಗಳು ಕೋಮುವಾದದ ಪ್ರಯೋಗ ಶಾಲೆಗಳಾಗಲು ಅವಕಾಶ ನೀಡುವುದಿಲ್ಲ...

ರಷ್ಯಾ ಪರವಾಗಿ ಹೋರಾಡಿದ ಆರೋಪ; ಉಕ್ರೇನ್‌ನಲ್ಲಿ ಗುಜರಾತ್ ವಿದ್ಯಾರ್ಥಿ ಬಂಧನ

ರಷ್ಯಾ ಪರವಾಗಿ ಹೋರಾಡಿದ ಆರೋಪದ ಮೇಲೆ ಪ್ರಸ್ತುತ ಉಕ್ರೇನಿಯನ್ ಬಂಧನದಲ್ಲಿರುವ ಗುಜರಾತ್‌ನ ಮೊರ್ಬಿ ಜಿಲ್ಲೆಯ 23 ವರ್ಷದ ವ್ಯಕ್ತಿಯೊಬ್ಬರು ತಮ್ಮ ಬಿಡುಗಡೆ ಮಾಡಿ, ಸಹಾಯ ಮಾಡುವಂತೆ ಭಾರತ ಸರ್ಕಾರ ಮತ್ತು ಪ್ರಧಾನಿ ನರೇಂದ್ರ...

ತಮಿಳುನಾಡು| ದಲಿತ ಮಹಿಳೆ ಅಡುಗೆ ಮಾಡುವುದಕ್ಕೆ ಪೋಷಕರ ವಿರೋಧ; ಕೆಲಸದಿಂದ ತೆಗೆದ ಶಾಲೆ

ತಮಿಳುನಾಡಿನ ಕರೂರ್ ಜಿಲ್ಲೆಯ ತೋಗಮಲೈ ಬಳಿಯ ಪಂಚಾಯತ್ ಯೂನಿಯನ್ ಮಧ್ಯಮ ಶಾಲೆಯಲ್ಲಿ, ಮುಖ್ಯಮಂತ್ರಿಗಳ ಉಪಾಹಾರ ಯೋಜನೆ (ಸಿಎಮ್‌ಬಿಎಸ್) ಅಡಿಯಲ್ಲಿ ಕೆಲಸ ಮಾಡುತ್ತಿದ್ದ ದಲಿತ ಸಮುದಾಯದ ಮಹಿಳೆಯನ್ನು ಕೆಲಸದಿಂದ ತೆಗೆದುಹಾಕಲಾಗಿದ ಎಂದು 'ನ್ಯೂ ಇಂಡಿಯನ್...

ಬಾಂಗ್ಲಾ ಉದ್ವಿಗ್ನತೆ: ಮತ್ತೊಬ್ಬ ಯುವ ನಾಯಕ ಮುಹಮ್ಮದ್ ಮೊತಾಲೆಬ್ ಸಿಕ್ದಾರ್ ಮೇಲೆ ಗುಂಡಿನ ದಾಳಿ 

ದೇಶದಲ್ಲಿ ವ್ಯಾಪಕ ಅಶಾಂತಿಗೆ ಕಾರಣವಾದ ಬಾಂಗ್ಲಾದೇಶದ ಪ್ರಮುಖ ಯುವ ನಾಯಕ ಷರೀಫ್ ಉಸ್ಮಾನ್ ಬಿನ್ ಹಾದಿ ಅವರ ಮರಣದ ಕೆಲವು ದಿನಗಳ ನಂತರ, ಸೋಮವಾರ ಮತ್ತೊಬ್ಬ ನಾಯಕನ ಮೇಲೆ ಗುಂಡು ಹಾರಿಸಲಾಯಿತು. ಗಾಯಗೊಂಡ...

ಕೇರಳ |ವಲಸೆ ಕಾರ್ಮಿಕನ ಗುಂಪು ಹತ್ಯೆಯಲ್ಲಿ ಆರ್‌ಎಸ್‌ಎಸ್‌ ಕಾರ್ಯಕರ್ತರು ಭಾಗಿ : ಸಿಪಿಐ(ಎಂ) ನಾಯಕರಿಂದ ಆರೋಪ

ಕೇರಳದಲ್ಲಿ ಪಾಲಕ್ಕಾಡ್‌ನಲ್ಲಿ ನಡೆದ ಛತ್ತೀಸ್‌ಗಢದ ವಲಸೆ ಕಾರ್ಮಿಕನ ಗುಂಪು ಹತ್ಯೆಯಲ್ಲಿ ಆರ್‌ಎಸ್‌ಎಸ್‌ ಕಾರ್ಯರ್ತರು ಭಾಗಿಯಾಗಿದ್ದಾರೆ ಎಂದು ಆಡಳಿತರೂಢ ಸಿಪಿಐ(ಎಂ) ನಾಯಕರು ಆರೋಪಿಸಿದ್ದಾರೆ. ಸ್ಥಳೀಯ ಸ್ವ-ಆಡಳಿತ ಸಚಿವ ಎಂ.ಬಿ ರಾಜೇಶ್ ಆರಂಭದಲ್ಲಿ ಈ ಆರೋಪ ಮಾಡಿದ್ದು,...

‘ಹಿಂದೂಸ್ತಾನಿ ಅವಾಮ್ ಮೋರ್ಚಾಕ್ಕೆ ರಾಜ್ಯಸಭಾ ಸೀಟು ನೀಡಿ’: ದಲಿತ ನಾಯಕ ಜಿತನ್ ರಾಮ್ ಮಾಂಝಿ ಬೇಡಿಕೆ

ಬಿಹಾರ: ಕೇಂದ್ರ ಸಚಿವ ಮತ್ತು ಹಿಂದೂಸ್ತಾನಿ ಅವಾಮ್ ಮೋರ್ಚಾ (ಜಾತ್ಯತೀತ) ಉಸ್ತುವಾರಿ ಜಿತನ್ ರಾಮ್ ಮಾಂಝಿ ಅವರು 2024ರ ಲೋಕಸಭಾ ಚುನಾವಣೆಯ ಸಮಯದಲ್ಲಿ ಬಿಹಾರದಲ್ಲಿ NDA ಮೈತ್ರಿಕೂಟದ ಭಾಗವಾಗಿ ನೀಡಿದ ಭರವಸೆಗಳನ್ನು ನೆನಪಿಸಿಕೊಂಡು...

ಚುನಾವಣಾ ಟ್ರಸ್ಟ್‌ಗಳ ಮೂಲಕ ದೇಣಿಗೆ : ಶೇ.82ರಷ್ಟು ಪಾಲು ಪಡೆದ ಬಿಜೆಪಿ

ಸುಪ್ರೀಂ ಕೋರ್ಟ್ ವಿವಾದಾತ್ಮಕ ಚುನಾವಣಾ ಬಾಂಡ್‌ಗಳನ್ನು ರದ್ದುಗೊಳಿಸಿದ ನಂತರ 2024-25ರಲ್ಲಿ ಚುನಾವಣಾ ಟ್ರಸ್ಟ್‌ಗಳ ಮೂಲಕ ರಾಜಕೀಯ ಪಕ್ಷಗಳಿಗೆ ಕಾರ್ಪೊರೇಟ್ ದೇಣಿಗೆಗಳು ಮೂರು ಪಟ್ಟು ಹೆಚ್ಚಾಗಿದ್ದು, 3,811 ಕೋಟಿ ರೂ.ಗಳಿಗೆ ತಲುಪಿದೆ ಎಂದು ದಿ...