Homeಅಂಕಣಗಳುಫೇಕು ಪತ್ರ: ಪೋಸ್ಟ್ಕಾರ್ಡಿನ ಮಹೇಶ ಹೆಗೆಡೆ ವಿಚಾರಣೆ ಬಾಯಿಬಡುಕಿ ಶೃತಿ ಬೆಳ್ಳಕ್ಕಿ ಬಂಧನ

ಫೇಕು ಪತ್ರ: ಪೋಸ್ಟ್ಕಾರ್ಡಿನ ಮಹೇಶ ಹೆಗೆಡೆ ವಿಚಾರಣೆ ಬಾಯಿಬಡುಕಿ ಶೃತಿ ಬೆಳ್ಳಕ್ಕಿ ಬಂಧನ

- Advertisement -
- Advertisement -

 

ಪೋಸ್ಟ್ಕಾರ್ಡ್ ನ್ಯೂಸ್ ಎಂಬ ಫೇಕ್‌ನ್ಯೂಸ್ ಪೋರ್ಟಲ್‌ನ ಸಂಸ್ಥಾಪಕ ಮಹೇಶ ವಿಕ್ರಮ ಹೆಗಡೆಯನ್ನು ಸಿಐಡಿ ಪೊಲೀಸರು ಫೇಕ್ ಪತ್ರದ ಸೃಷ್ಟಿಗೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದಾರೆ. ಈ ಸುದ್ದಿ ರಾಜ್ಯಾದ್ಯಂತ ತಲುಪುವ ಮೊದಲೇ ಬಿಜೆಪಿಯ ಒಂದಿಬ್ಬರು ನಾಯಕರು ಟ್ವೀಟ್ ಮಾಡಿ, ಮಹೇಶ ಬಂಧನ ಖಂಡನೀಯ ಎಂದಿದ್ದರು!! ಪೋಸ್ಟ್ಕಾರ್ಡ್ ಎನ್ನುವುದು ಬಿಜೆಪಿ ಪ್ರಾಯೋಜಿತ ಪೋರ್ಟಲ್ ಎಂಬುದಂತೂ ಹೊಸ ವಿಷಯವೇನಲ್ಲ ಬಿಡಿ…

ಸಚಿವ ಎಂಬಿ, .ಪಾಟೀಲರ ಹೆಸರಿನಲ್ಲಿ ಫೋರ್ಜರಿ ಪತ್ರವನ್ನು ಸೃಷ್ಟಿಸಿದ ಪ್ರಕರಣದ ವಿಚಾರಣೆ ತೀವ್ರಗೊಂಡಿದ್ದು, ಅದರ ಭಾಗವಾಗಿ ನಿನ್ನೆ ಏಪ್ರಿಲ್ 24ರಂದು ಧಾರವಾಡ ಪೊಲೀಸರು ಶೃತಿ ಬೆಳ್ಳಕ್ಕಿ ಎಂಬ ಬಿಜೆಪಿ ಕಾರ್ಯಕರ್ತೆಯನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ನೀಡಿದ್ದಾರೆ. ಶೃತಿ ಧಾರವಾಡ ಬಿಜೆಪಿ ಗ್ರಾಮೀಣ ವಿಭಾಗದ ಅಧ್ಯಕ್ಷ ಪರಮೇಶ ಉಳವಣ್ಣವರ್ ಪತ್ನಿಯಾಗಿದ್ದು, ಸೋನಿಯಾರಿಗೆ ಎಂ. ಬಿ. ಪಾಟೀಲರು ಬರೆದಿದ್ದ ‘ಫೇಕ್’ ಪತ್ರವನ್ನು ಉಲ್ಲೇಖಿಸಿ, ಕಾಂಗ್ರೆಸ್ ವಿರುದ್ಧ ಚುನಾವಣಾ ಭಾಷಣ ಮಾಡುವ ಸಂದರ್ಭದಲ್ಲಿ ಸಮುದಾಯಗಳಿಗೆ ಅವಮಾನವಾಗುವಂತೆ ಮಾತಾಡಿದ್ದರು. ತಮ್ಮ ಆ ಭಾಷಣವನ್ನು ಫೇಸ್‌ಬುಕ್‌ನಲ್ಲಿ ಹರಿಬಿಟ್ಟಿದ್ದರು. ಧಾರವಾಡ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಲಕರ್ಣಿ ವಿರುದ್ಧ ಪುತೂರಿ ನಡೆಸಲು ಬಿಜೆಪಿ ನಾಯಕರು ಈ ಕಾರ್ಯಕರ್ತೆಯನ್ನು ಬಳಸಿಕೊಂಡು, ವಿಜಯವಾಣಿಯಲ್ಲಿ ಬಂದಿದ್ದ ಫೇಕ್ ಪತ್ರದ ಕುರಿತು ಸುದ್ದಿ ಹರಡಲು ಯತ್ನಿಸಿದ್ದರು.

ಹಾಗೆಯೇ ನಿನ್ನೆ ‘ಫೇಕ್’ ಪತ್ರದ ರೂವಾರಿ ಎನ್ನಲಾದ ಪೋಸ್ಟ್ಕಾರ್ಡ್ನ ಮಹೇಶ ಹೆಗಡೆಯ ವಿಚಾರಣೆಯನ್ನು ಪೊಲೀಸರು ನಡೆಸಿದ್ದಾರೆ.

ಹಿನ್ನೆಲೆ ಕೆದಕುತ್ತ….

ಈ ಫೇಕ್ ಪತ್ರ ಮೊದಲ ಬಾರಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಲಿತಕ್ಕೆ ಬಂದಿದ್ದು 2017ರಲ್ಲಿ ರಾಜ್ಯದಲ್ಲಿ ಲಿಂಗಾಯತ ಪ್ರತ್ಯೇಕ ಧರ್ಮ
ಚಳವಳಿ ಜೋರಾಗಿದ್ದ ಸಂದರ್ಭದಲ್ಲಿ. ನಂತರ ಕಳೆದ 2018ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ. ಕಾಂಗ್ರೆಸ್ ಅಧ್ಯಕ್ಷೆಗೆ ಅಂದಿನ ಜಲ ಸಂಪನ್ಮೂಲ ಸಚಿವ (ಈಗಿನ ಗೃಹ ಸಚಿವ) ಬರೆದ ಪತ್ರ ಇದೆಂದು ಸೃಷ್ಟಿಸಲಾಗಿತ್ತು. ಜಾಗತಿಕ ಕ್ಯಾಥೋಲಿಕ್ ಸಂಘಟನೆಗಳ ಆಶಯದಂತೆ ಲಿಂಗಾಯತರನ್ನು ಹಿಂದೂ ಧರ್ಮದಿಂದ ಬೇರ್ಪಡಿಸುವ ಉದ್ದೇಶಕ್ಕಾಗಿ ಎಂ.ಬಿ. ಪಾಟೀಲರು ಸೋನಿಯಾ ಗಾಂಧಿಯವರಿಗೆ ಭಿನ್ನವಿಸುವ
ರೀತಿಯಲ್ಲಿ ಪತ್ರವನ್ನು ಸೃಷ್ಟಿಸಲಾಗಿತ್ತು. ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟದ ಹಿಂದೆ ಸೋನಿಯಾ ಗಾಂಧಿ ಮತ್ತು ಕ್ಯಾಥೊಲಿಕ್ ಸಂಘಟನೆಗಳ ಕೈವಾಡ ಇದೆ ಎಂದೂ, ಹಿಂದೂ ಧರ್ಮಕ್ಕೆ ಅಪಾಯ ಕಾದಿದೆ ಎಂದೂ ಸುಳ್ಳು ಹರಡಲಾಗಿತ್ತು. ಇದನ್ನು ಮುಂಚೂಣಿಗೆ ತಂದಿದ್ದು ಪೋಸ್ಟ್ಕಾರ್ಡ್ ನ್ಯೂಸ್ ಎಂಬ ಫೇಕು ಖ್ಯಾತಿಯ ಪೋರ್ಟಲ್.

ಆಗಲೇ ಅನೇಕ ಫ್ಯಾಕ್ಟ್ ಚೆಕಿಂಗ್ ಪೋರ್ಟಲ್‌ಗಳು ಈ ಪತ್ರ ನಕಲಿ ಎಂದು ಪ್ರೂವ್ ಮಾಡಿದ್ದವು. ಬಿಎಲ್‌ಡಿಇಎ ಸಂಸ್ಥೆಯ ಲೆಟರ್‌ಹೆಡ್‌ನ ಫೋರ್ಜರಿ ಮಾಡಲಾಗಿತ್ತಲ್ಲದೇ, ಎಂ.ಬಿ. ಪಾಟೀಲರ ಸಹಿಯನ್ನೂ ಫೋರ್ಜರಿ ಮಾಡಲಾಗಿತ್ತು. ಆಗ ಚುನಾವಣೆ ಗದ್ದಲದಲ್ಲಿ ಪೊಲೀಸರೂ ಬಹಳ ತಲೆ ಕೆಡಿಸಿಕೊಂಡಿರಲಿಲ್ಲ. ರಾಜ್ಯ ಬಿಜೆಪಿ ಘಟಕವೂ ಅದೇ ಪತ್ರ ಬಳಸಿ ಕಾಂಗ್ರೆಸ್ ವಿರುದ್ಧ ಅಪಪ್ರಚಾರ ಮಾಡಿತ್ತು.

ಈಗ ಅದೇ ಪತ್ರವನ್ನು ಕಳೆದ ವಾರ ಏಪ್ರಿಲ್ 16ರಂದು ಮತ್ತೆ ವಿಜಯವಾಣಿ ಪ್ರಕಟಿಸಿ ಎಂ.ಬಿ. ಪಾಟೀಲರ ಆಕ್ರೋಶಕ್ಕೆ ಗುರಿಯಾಗಿತ್ತು. ಇದನ್ನು ನಾನುಗೌರಿ.ಕಾಮ್ ಸವಿವರವಾಗಿ ವರದಿ ಮಾಡಿ, ಫೇಕ್‌ನ್ಯೂಸ್ ಎಂಬುದನ್ನು ಜನರ ಗಮನಕ್ಕೆ ತಂದಿತ್ತು.

ಈಗ ಎಂ.ಬಿ. ಪಾಟೀಲರೇ ಗೃಹ ಸಚಿವರಾಗಿರುವುದರಿಂದ ಪೊಲೀಸರು ತನಿಖೆಯನ್ನು ಕ್ಷಿಪ್ರವಾಗಿ ನಡೆಸುತ್ತಿರುವಂತೆ ಕಾಣುತ್ತಿದೆ. ತನಿಖೆ ಫೇಕುವೀರರ ಬುಡಕ್ಕೆ ತಲುಪಿದರಷ್ಟೇ ಹಿಂದಿರುವ ‘ನಾಯಕರ’ ಬಣ್ಣ ಬಯಲಾದೀತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: ಸರ್ಕಾರಕ್ಕೆ ನಾಲ್ಕು ಪ್ರಮುಖ ಹಕ್ಕೊತ್ತಾಯ, ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ.

ಬಿಡದಿ ಸ್ಮಾರ್ಟ್ ಸಿಟಿ ಅಥವಾ ಟೌನ್‌ಶಿಪ್ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆಯನ್ನು ವಿರೋಧಿಸಿ ಬಿಡದಿ ರೈತರು ಹಾಗೂ ಸಂಯುಕ್ತ ಹೋರಾಟದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ಮತ್ತು ವಿಧಾನಸೌಧ ಚಲೋ ಹೋರಾಟ...

ತಮಿಳುನಾಡು| ಮರ್ಯಾದೆಗೇಡು ಹತ್ಯೆ ಶಂಕೆ; 25 ವರ್ಷದ ದಲಿತ ಯುವಕನ ಭೀಕರ ಕೊಲೆ

ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯಲ್ಲಿ 23 ವರ್ಷದ ದಲಿತ ಯುವಕನೊಬ್ಬನನ್ನು ಕೊಚ್ಚಿ ಕೊಲೆ ಮಾಡಲಾಗಿದ್ದು, ಮರ್ಯಾದೆಗೇಡು ಕೊಲೆಯ ಶಂಕೆ ವ್ಯಕ್ತವಾಗಿದೆ. ಆಗಸ್ಟ್ 16 ರಂದು ರಾತ್ರಿ ಚೆಂಗಲ್ಪಟ್ಟುವಿನ ಕೇಳಂಬಾಕ್ಕಂ ನಿವಾಸಿ ಪ್ರವೀಣ್ ಅವರ ಮೇಲೆ ದಾಳಿಕೋರರಾದ...

44 ಲಕ್ಷ ಮತದಾರರಿಗೆ ನೋಟಿಸ್: BLA ಗಳಿಗೆ ಪಟ್ಟಿ ನೀಡಿ, ಪಾರದರ್ಶಕತೆ ಕಾಯ್ದುಕೊಳ್ಳಲು ‘ಜಾಗೃತ ಕರ್ನಾಟಕ’ ಒತ್ತಾಯ

ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಪ್ರಕಟಗೊಳ್ಳುತ್ತಿರುವ ಕರಡು ಮತದಾರರ ಪಟ್ಟಿಯಿಂದ ಯಾವುದೇ ಅರ್ಹ ಮತದಾರರ ಹೆಸರು ಕೈಬಿಟ್ಟು ಹೋಗದಂತೆ ಎಚ್ಚರವಹಿಸಬೇಕು ಹಾಗೂ ನೋಟಿಸ್ ಪ್ರಕ್ರಿಯೆಗೆ ಕಾಲಾವಕಾಶ ವಿಸ್ತರಿಸಬೇಕು ಎಂದು ಆಗ್ರಹಿಸಿ ‘ಜಾಗೃತ...

ಕೇರಳ ಬಿಜೆಪಿಗೆ ಹಿರಿಯ ನಟ ಎಸ್. ದೇವನ್ ಗುಡ್‌ಬೈ: ‘ದಳಪತಿ’ ವಿಜಯ್ ಟಿವಿಕೆ ಪಕ್ಷ ಸೇರಲು ಒಲವು!

ಮಲಯಾಳಂ ನಟ ಹಾಗೂ ರಾಜಕಾರಣಿ ಎಸ್. ದೇವನ್ ಅವರು ತಮಿಳುನಾಡಿನ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ' (ಟಿವಿಕೆ) ಪಕ್ಷವನ್ನು ಸೇರಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ. ಇತ್ತೀಚೆಗಷ್ಟೇ ಭಾರತೀಯ ಜನತಾ ಪಾರ್ಟಿಯ (ಬಿಜೆಪಿ) ಕೇರಳ...

ಮತ್ತೆ ಜೈಲಿನಿಂದ ಹೊರಬಂದ ಅತ್ಯಾಚಾರಿ ರಾಮ್ ರಹೀಮ್! 6 ವರ್ಷದಲ್ಲಿ 17ನೇ ಬಾರಿ ಪೆರೋಲ್

ನವದೆಹಲಿ/ರೋಹ್ಟಕ್: ಇಬ್ಬರು ಮಹಿಳಾ ಶಿಷ್ಯರ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಅನುಭವಿಸುತ್ತಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್‌ಗೆ ಹರಿಯಾಣ ಸರ್ಕಾರ ಪುನಃ...

ಎಸ್‌ಐಆರ್‌ ಕರಡು ತಿರಸ್ಕರಿಸಿದ ನಾಗರಿಕ ಸಂಘಟನೆಗಳು; ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ

ಆಗಸ್ಟ್ 24 ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ಮತದಾರರ ಎಸ್‌ಐಆರ್‌ ಕರಡು ಪಟ್ಟಿಯನ್ನು ಕರ್ನಾಟಕದ ನಾಗರಿಕ ಸಂಘಟನೆಗಳು ತಿರಸ್ಕರಿಸಿದ್ದು, ಲಕ್ಷಾಂತರ ಮತದಾರರಿಗೆ ನೋಟಿಸ್‌ ಕೊಡಲು ಸಿದ್ಧತೆ ನಡೆಸಿರುವ ಕೇಂದ್ರ ಚುನಾವಣಾ...

‘ಕೇಂದ್ರ ಸರ್ಕಾರ ಜಾತಿ ಗಣತಿಗೆ ರೂಪಿಸಿರುವ ಪ್ರಶ್ನಾವಳಿ ವಿಧಾನ ದಾರಿತಪ್ಪಿಸುವಂತಿವೆ’: ಹೊಸ ಪ್ರಶ್ನಾವಳಿ ರಚಿಸಲು ಪ್ರಧಾನಿ ಮೋದಿಗೆ ಖರ್ಗೆ-ರಾಹುಲ್ ಪತ್ರ

ರಾಷ್ಟ್ರೀಯ ಜನಗಣತಿಯಲ್ಲಿ ಜಾತಿ ದತ್ತಾಂಶ ಸಂಗ್ರಹಣೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ರೂಪಿಸಿರುವ ಪ್ರಶ್ನಾವಳಿಯ ವಿಧಾನವು ಅತ್ಯಂತ ದಾರಿತಪ್ಪಿಸುವಂತಿದೆ ಎಂದು ಗಂಭೀರ ಆಕ್ಷೇಪ ವ್ಯಕ್ತಪಡಿಸಿರುವ ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭಾ ವಿರೋಧ ಪಕ್ಷದ ನಾಯಕ...

ಪತ್ರಕರ್ತ ಅಭಿಷೇಕ್ ವಿರುದ್ಧ ಯಾವುದೇ ಬಲವಂತದ ಕ್ರಮ ಜರುಗಿಸದಂತೆ ಸುಪ್ರೀಂ ಕೋರ್ಟ್ ಆದೇಶ

ರಾಮ ಮಂದಿರ ದೇಣಿಗೆ ಅಕ್ರಮದ ಕುರಿತು ವರದಿ ಮಾಡಿದ್ದ ಪತ್ರಕರ್ತ ಅಭಿಷೇಕ್ ಉಪಾಧ್ಯಾಯ ಅವರ ವಿರುದ್ಧ ಉತ್ತರ ಪ್ರದೇಶ ಪೊಲೀಸರು ದಾಖಲಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಂತರ ಆದೇಶ ನೀಡಿದ್ದು,...

2027ರ ಜನಗಣತಿಯಲ್ಲಿ ಪೋಷಕರ ಧರ್ಮ, ಜನ್ಮಸ್ಥಳದ ವಿವರ ಏಕೆ? ಕೇಂದ್ರದ ವಿರುದ್ಧ ಸಿಪಿಐ(ಎಂ) ಆಕ್ರೋಶ

2027ರ ಜನಗಣತಿ ಪ್ರಶ್ನಾವಳಿಯಲ್ಲಿ ಪೋಷಕರ ಧರ್ಮ ಹಾಗೂ ಜನ್ಮಸ್ಥಳದ ಕುರಿತಾದ ವಿವರಗಳನ್ನು ಸಂಗ್ರಹಿಸಲು ಉದ್ದೇಶಿಸಿರುವುದರ ವಿರುದ್ಧ ಸಿಪಿಐ(ಎಂ) ತೀವ್ರ ಆತಂಕ ವ್ಯಕ್ತಪಡಿಸಿದ್ದು, ಈ ಕ್ರಮವು ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಜಾರಿಗೆ ತರುವ...

ಟಿಎಂಸಿ ಬಂಡಾಯ ಸಂಸದರಿಗೆ ಸುಪ್ರೀಂ ಕೋರ್ಟ್ ಶಾಕ್: 20 ಎಂಪಿಗಳಿಗೆ ನೋಟಿಸ್ ಜಾರಿ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ತೊರೆದು, ಎನ್‌ಸಿಪಿಐ (NCPI) ಎಂಬ ಅಷ್ಟಾಗಿ ಜನಪ್ರಿಯವಲ್ಲದ ಪಕ್ಷದೊಂದಿಗೆ ವಿಲೀನಗೊಂಡು ಎನ್‌ಡಿಎ ಒಕ್ಕೂಟವನ್ನು ಸೇರಿಕೊಂಡಿರುವ 20 ಬಂಡಾಯ ಸಂಸದರಿಗೆ ಸುಪ್ರೀಂ ಕೋರ್ಟ್ ಮಂಗಳವಾರ ನೋಟಿಸ್ ಜಾರಿ ಮಾಡಿದೆ. ಟಿಎಂಸಿ ಪ್ರಧಾನ...