Homeಅಂಕಣಗಳುಫೇಕು ಪತ್ರ: ಪೋಸ್ಟ್ಕಾರ್ಡಿನ ಮಹೇಶ ಹೆಗೆಡೆ ವಿಚಾರಣೆ ಬಾಯಿಬಡುಕಿ ಶೃತಿ ಬೆಳ್ಳಕ್ಕಿ ಬಂಧನ

ಫೇಕು ಪತ್ರ: ಪೋಸ್ಟ್ಕಾರ್ಡಿನ ಮಹೇಶ ಹೆಗೆಡೆ ವಿಚಾರಣೆ ಬಾಯಿಬಡುಕಿ ಶೃತಿ ಬೆಳ್ಳಕ್ಕಿ ಬಂಧನ

- Advertisement -
- Advertisement -

 

ಪೋಸ್ಟ್ಕಾರ್ಡ್ ನ್ಯೂಸ್ ಎಂಬ ಫೇಕ್‌ನ್ಯೂಸ್ ಪೋರ್ಟಲ್‌ನ ಸಂಸ್ಥಾಪಕ ಮಹೇಶ ವಿಕ್ರಮ ಹೆಗಡೆಯನ್ನು ಸಿಐಡಿ ಪೊಲೀಸರು ಫೇಕ್ ಪತ್ರದ ಸೃಷ್ಟಿಗೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದಾರೆ. ಈ ಸುದ್ದಿ ರಾಜ್ಯಾದ್ಯಂತ ತಲುಪುವ ಮೊದಲೇ ಬಿಜೆಪಿಯ ಒಂದಿಬ್ಬರು ನಾಯಕರು ಟ್ವೀಟ್ ಮಾಡಿ, ಮಹೇಶ ಬಂಧನ ಖಂಡನೀಯ ಎಂದಿದ್ದರು!! ಪೋಸ್ಟ್ಕಾರ್ಡ್ ಎನ್ನುವುದು ಬಿಜೆಪಿ ಪ್ರಾಯೋಜಿತ ಪೋರ್ಟಲ್ ಎಂಬುದಂತೂ ಹೊಸ ವಿಷಯವೇನಲ್ಲ ಬಿಡಿ…

ಸಚಿವ ಎಂಬಿ, .ಪಾಟೀಲರ ಹೆಸರಿನಲ್ಲಿ ಫೋರ್ಜರಿ ಪತ್ರವನ್ನು ಸೃಷ್ಟಿಸಿದ ಪ್ರಕರಣದ ವಿಚಾರಣೆ ತೀವ್ರಗೊಂಡಿದ್ದು, ಅದರ ಭಾಗವಾಗಿ ನಿನ್ನೆ ಏಪ್ರಿಲ್ 24ರಂದು ಧಾರವಾಡ ಪೊಲೀಸರು ಶೃತಿ ಬೆಳ್ಳಕ್ಕಿ ಎಂಬ ಬಿಜೆಪಿ ಕಾರ್ಯಕರ್ತೆಯನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ನೀಡಿದ್ದಾರೆ. ಶೃತಿ ಧಾರವಾಡ ಬಿಜೆಪಿ ಗ್ರಾಮೀಣ ವಿಭಾಗದ ಅಧ್ಯಕ್ಷ ಪರಮೇಶ ಉಳವಣ್ಣವರ್ ಪತ್ನಿಯಾಗಿದ್ದು, ಸೋನಿಯಾರಿಗೆ ಎಂ. ಬಿ. ಪಾಟೀಲರು ಬರೆದಿದ್ದ ‘ಫೇಕ್’ ಪತ್ರವನ್ನು ಉಲ್ಲೇಖಿಸಿ, ಕಾಂಗ್ರೆಸ್ ವಿರುದ್ಧ ಚುನಾವಣಾ ಭಾಷಣ ಮಾಡುವ ಸಂದರ್ಭದಲ್ಲಿ ಸಮುದಾಯಗಳಿಗೆ ಅವಮಾನವಾಗುವಂತೆ ಮಾತಾಡಿದ್ದರು. ತಮ್ಮ ಆ ಭಾಷಣವನ್ನು ಫೇಸ್‌ಬುಕ್‌ನಲ್ಲಿ ಹರಿಬಿಟ್ಟಿದ್ದರು. ಧಾರವಾಡ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಲಕರ್ಣಿ ವಿರುದ್ಧ ಪುತೂರಿ ನಡೆಸಲು ಬಿಜೆಪಿ ನಾಯಕರು ಈ ಕಾರ್ಯಕರ್ತೆಯನ್ನು ಬಳಸಿಕೊಂಡು, ವಿಜಯವಾಣಿಯಲ್ಲಿ ಬಂದಿದ್ದ ಫೇಕ್ ಪತ್ರದ ಕುರಿತು ಸುದ್ದಿ ಹರಡಲು ಯತ್ನಿಸಿದ್ದರು.

ಹಾಗೆಯೇ ನಿನ್ನೆ ‘ಫೇಕ್’ ಪತ್ರದ ರೂವಾರಿ ಎನ್ನಲಾದ ಪೋಸ್ಟ್ಕಾರ್ಡ್ನ ಮಹೇಶ ಹೆಗಡೆಯ ವಿಚಾರಣೆಯನ್ನು ಪೊಲೀಸರು ನಡೆಸಿದ್ದಾರೆ.

ಹಿನ್ನೆಲೆ ಕೆದಕುತ್ತ….

ಈ ಫೇಕ್ ಪತ್ರ ಮೊದಲ ಬಾರಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಲಿತಕ್ಕೆ ಬಂದಿದ್ದು 2017ರಲ್ಲಿ ರಾಜ್ಯದಲ್ಲಿ ಲಿಂಗಾಯತ ಪ್ರತ್ಯೇಕ ಧರ್ಮ
ಚಳವಳಿ ಜೋರಾಗಿದ್ದ ಸಂದರ್ಭದಲ್ಲಿ. ನಂತರ ಕಳೆದ 2018ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ. ಕಾಂಗ್ರೆಸ್ ಅಧ್ಯಕ್ಷೆಗೆ ಅಂದಿನ ಜಲ ಸಂಪನ್ಮೂಲ ಸಚಿವ (ಈಗಿನ ಗೃಹ ಸಚಿವ) ಬರೆದ ಪತ್ರ ಇದೆಂದು ಸೃಷ್ಟಿಸಲಾಗಿತ್ತು. ಜಾಗತಿಕ ಕ್ಯಾಥೋಲಿಕ್ ಸಂಘಟನೆಗಳ ಆಶಯದಂತೆ ಲಿಂಗಾಯತರನ್ನು ಹಿಂದೂ ಧರ್ಮದಿಂದ ಬೇರ್ಪಡಿಸುವ ಉದ್ದೇಶಕ್ಕಾಗಿ ಎಂ.ಬಿ. ಪಾಟೀಲರು ಸೋನಿಯಾ ಗಾಂಧಿಯವರಿಗೆ ಭಿನ್ನವಿಸುವ
ರೀತಿಯಲ್ಲಿ ಪತ್ರವನ್ನು ಸೃಷ್ಟಿಸಲಾಗಿತ್ತು. ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟದ ಹಿಂದೆ ಸೋನಿಯಾ ಗಾಂಧಿ ಮತ್ತು ಕ್ಯಾಥೊಲಿಕ್ ಸಂಘಟನೆಗಳ ಕೈವಾಡ ಇದೆ ಎಂದೂ, ಹಿಂದೂ ಧರ್ಮಕ್ಕೆ ಅಪಾಯ ಕಾದಿದೆ ಎಂದೂ ಸುಳ್ಳು ಹರಡಲಾಗಿತ್ತು. ಇದನ್ನು ಮುಂಚೂಣಿಗೆ ತಂದಿದ್ದು ಪೋಸ್ಟ್ಕಾರ್ಡ್ ನ್ಯೂಸ್ ಎಂಬ ಫೇಕು ಖ್ಯಾತಿಯ ಪೋರ್ಟಲ್.

ಆಗಲೇ ಅನೇಕ ಫ್ಯಾಕ್ಟ್ ಚೆಕಿಂಗ್ ಪೋರ್ಟಲ್‌ಗಳು ಈ ಪತ್ರ ನಕಲಿ ಎಂದು ಪ್ರೂವ್ ಮಾಡಿದ್ದವು. ಬಿಎಲ್‌ಡಿಇಎ ಸಂಸ್ಥೆಯ ಲೆಟರ್‌ಹೆಡ್‌ನ ಫೋರ್ಜರಿ ಮಾಡಲಾಗಿತ್ತಲ್ಲದೇ, ಎಂ.ಬಿ. ಪಾಟೀಲರ ಸಹಿಯನ್ನೂ ಫೋರ್ಜರಿ ಮಾಡಲಾಗಿತ್ತು. ಆಗ ಚುನಾವಣೆ ಗದ್ದಲದಲ್ಲಿ ಪೊಲೀಸರೂ ಬಹಳ ತಲೆ ಕೆಡಿಸಿಕೊಂಡಿರಲಿಲ್ಲ. ರಾಜ್ಯ ಬಿಜೆಪಿ ಘಟಕವೂ ಅದೇ ಪತ್ರ ಬಳಸಿ ಕಾಂಗ್ರೆಸ್ ವಿರುದ್ಧ ಅಪಪ್ರಚಾರ ಮಾಡಿತ್ತು.

ಈಗ ಅದೇ ಪತ್ರವನ್ನು ಕಳೆದ ವಾರ ಏಪ್ರಿಲ್ 16ರಂದು ಮತ್ತೆ ವಿಜಯವಾಣಿ ಪ್ರಕಟಿಸಿ ಎಂ.ಬಿ. ಪಾಟೀಲರ ಆಕ್ರೋಶಕ್ಕೆ ಗುರಿಯಾಗಿತ್ತು. ಇದನ್ನು ನಾನುಗೌರಿ.ಕಾಮ್ ಸವಿವರವಾಗಿ ವರದಿ ಮಾಡಿ, ಫೇಕ್‌ನ್ಯೂಸ್ ಎಂಬುದನ್ನು ಜನರ ಗಮನಕ್ಕೆ ತಂದಿತ್ತು.

ಈಗ ಎಂ.ಬಿ. ಪಾಟೀಲರೇ ಗೃಹ ಸಚಿವರಾಗಿರುವುದರಿಂದ ಪೊಲೀಸರು ತನಿಖೆಯನ್ನು ಕ್ಷಿಪ್ರವಾಗಿ ನಡೆಸುತ್ತಿರುವಂತೆ ಕಾಣುತ್ತಿದೆ. ತನಿಖೆ ಫೇಕುವೀರರ ಬುಡಕ್ಕೆ ತಲುಪಿದರಷ್ಟೇ ಹಿಂದಿರುವ ‘ನಾಯಕರ’ ಬಣ್ಣ ಬಯಲಾದೀತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...