Homeಅಂಕಣಗಳುಫೇಕು ಪತ್ರ: ಪೋಸ್ಟ್ಕಾರ್ಡಿನ ಮಹೇಶ ಹೆಗೆಡೆ ವಿಚಾರಣೆ ಬಾಯಿಬಡುಕಿ ಶೃತಿ ಬೆಳ್ಳಕ್ಕಿ ಬಂಧನ

ಫೇಕು ಪತ್ರ: ಪೋಸ್ಟ್ಕಾರ್ಡಿನ ಮಹೇಶ ಹೆಗೆಡೆ ವಿಚಾರಣೆ ಬಾಯಿಬಡುಕಿ ಶೃತಿ ಬೆಳ್ಳಕ್ಕಿ ಬಂಧನ

- Advertisement -
- Advertisement -

 

ಪೋಸ್ಟ್ಕಾರ್ಡ್ ನ್ಯೂಸ್ ಎಂಬ ಫೇಕ್‌ನ್ಯೂಸ್ ಪೋರ್ಟಲ್‌ನ ಸಂಸ್ಥಾಪಕ ಮಹೇಶ ವಿಕ್ರಮ ಹೆಗಡೆಯನ್ನು ಸಿಐಡಿ ಪೊಲೀಸರು ಫೇಕ್ ಪತ್ರದ ಸೃಷ್ಟಿಗೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದಾರೆ. ಈ ಸುದ್ದಿ ರಾಜ್ಯಾದ್ಯಂತ ತಲುಪುವ ಮೊದಲೇ ಬಿಜೆಪಿಯ ಒಂದಿಬ್ಬರು ನಾಯಕರು ಟ್ವೀಟ್ ಮಾಡಿ, ಮಹೇಶ ಬಂಧನ ಖಂಡನೀಯ ಎಂದಿದ್ದರು!! ಪೋಸ್ಟ್ಕಾರ್ಡ್ ಎನ್ನುವುದು ಬಿಜೆಪಿ ಪ್ರಾಯೋಜಿತ ಪೋರ್ಟಲ್ ಎಂಬುದಂತೂ ಹೊಸ ವಿಷಯವೇನಲ್ಲ ಬಿಡಿ…

ಸಚಿವ ಎಂಬಿ, .ಪಾಟೀಲರ ಹೆಸರಿನಲ್ಲಿ ಫೋರ್ಜರಿ ಪತ್ರವನ್ನು ಸೃಷ್ಟಿಸಿದ ಪ್ರಕರಣದ ವಿಚಾರಣೆ ತೀವ್ರಗೊಂಡಿದ್ದು, ಅದರ ಭಾಗವಾಗಿ ನಿನ್ನೆ ಏಪ್ರಿಲ್ 24ರಂದು ಧಾರವಾಡ ಪೊಲೀಸರು ಶೃತಿ ಬೆಳ್ಳಕ್ಕಿ ಎಂಬ ಬಿಜೆಪಿ ಕಾರ್ಯಕರ್ತೆಯನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ನೀಡಿದ್ದಾರೆ. ಶೃತಿ ಧಾರವಾಡ ಬಿಜೆಪಿ ಗ್ರಾಮೀಣ ವಿಭಾಗದ ಅಧ್ಯಕ್ಷ ಪರಮೇಶ ಉಳವಣ್ಣವರ್ ಪತ್ನಿಯಾಗಿದ್ದು, ಸೋನಿಯಾರಿಗೆ ಎಂ. ಬಿ. ಪಾಟೀಲರು ಬರೆದಿದ್ದ ‘ಫೇಕ್’ ಪತ್ರವನ್ನು ಉಲ್ಲೇಖಿಸಿ, ಕಾಂಗ್ರೆಸ್ ವಿರುದ್ಧ ಚುನಾವಣಾ ಭಾಷಣ ಮಾಡುವ ಸಂದರ್ಭದಲ್ಲಿ ಸಮುದಾಯಗಳಿಗೆ ಅವಮಾನವಾಗುವಂತೆ ಮಾತಾಡಿದ್ದರು. ತಮ್ಮ ಆ ಭಾಷಣವನ್ನು ಫೇಸ್‌ಬುಕ್‌ನಲ್ಲಿ ಹರಿಬಿಟ್ಟಿದ್ದರು. ಧಾರವಾಡ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಲಕರ್ಣಿ ವಿರುದ್ಧ ಪುತೂರಿ ನಡೆಸಲು ಬಿಜೆಪಿ ನಾಯಕರು ಈ ಕಾರ್ಯಕರ್ತೆಯನ್ನು ಬಳಸಿಕೊಂಡು, ವಿಜಯವಾಣಿಯಲ್ಲಿ ಬಂದಿದ್ದ ಫೇಕ್ ಪತ್ರದ ಕುರಿತು ಸುದ್ದಿ ಹರಡಲು ಯತ್ನಿಸಿದ್ದರು.

ಹಾಗೆಯೇ ನಿನ್ನೆ ‘ಫೇಕ್’ ಪತ್ರದ ರೂವಾರಿ ಎನ್ನಲಾದ ಪೋಸ್ಟ್ಕಾರ್ಡ್ನ ಮಹೇಶ ಹೆಗಡೆಯ ವಿಚಾರಣೆಯನ್ನು ಪೊಲೀಸರು ನಡೆಸಿದ್ದಾರೆ.

ಹಿನ್ನೆಲೆ ಕೆದಕುತ್ತ….

ಈ ಫೇಕ್ ಪತ್ರ ಮೊದಲ ಬಾರಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಲಿತಕ್ಕೆ ಬಂದಿದ್ದು 2017ರಲ್ಲಿ ರಾಜ್ಯದಲ್ಲಿ ಲಿಂಗಾಯತ ಪ್ರತ್ಯೇಕ ಧರ್ಮ
ಚಳವಳಿ ಜೋರಾಗಿದ್ದ ಸಂದರ್ಭದಲ್ಲಿ. ನಂತರ ಕಳೆದ 2018ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ. ಕಾಂಗ್ರೆಸ್ ಅಧ್ಯಕ್ಷೆಗೆ ಅಂದಿನ ಜಲ ಸಂಪನ್ಮೂಲ ಸಚಿವ (ಈಗಿನ ಗೃಹ ಸಚಿವ) ಬರೆದ ಪತ್ರ ಇದೆಂದು ಸೃಷ್ಟಿಸಲಾಗಿತ್ತು. ಜಾಗತಿಕ ಕ್ಯಾಥೋಲಿಕ್ ಸಂಘಟನೆಗಳ ಆಶಯದಂತೆ ಲಿಂಗಾಯತರನ್ನು ಹಿಂದೂ ಧರ್ಮದಿಂದ ಬೇರ್ಪಡಿಸುವ ಉದ್ದೇಶಕ್ಕಾಗಿ ಎಂ.ಬಿ. ಪಾಟೀಲರು ಸೋನಿಯಾ ಗಾಂಧಿಯವರಿಗೆ ಭಿನ್ನವಿಸುವ
ರೀತಿಯಲ್ಲಿ ಪತ್ರವನ್ನು ಸೃಷ್ಟಿಸಲಾಗಿತ್ತು. ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟದ ಹಿಂದೆ ಸೋನಿಯಾ ಗಾಂಧಿ ಮತ್ತು ಕ್ಯಾಥೊಲಿಕ್ ಸಂಘಟನೆಗಳ ಕೈವಾಡ ಇದೆ ಎಂದೂ, ಹಿಂದೂ ಧರ್ಮಕ್ಕೆ ಅಪಾಯ ಕಾದಿದೆ ಎಂದೂ ಸುಳ್ಳು ಹರಡಲಾಗಿತ್ತು. ಇದನ್ನು ಮುಂಚೂಣಿಗೆ ತಂದಿದ್ದು ಪೋಸ್ಟ್ಕಾರ್ಡ್ ನ್ಯೂಸ್ ಎಂಬ ಫೇಕು ಖ್ಯಾತಿಯ ಪೋರ್ಟಲ್.

ಆಗಲೇ ಅನೇಕ ಫ್ಯಾಕ್ಟ್ ಚೆಕಿಂಗ್ ಪೋರ್ಟಲ್‌ಗಳು ಈ ಪತ್ರ ನಕಲಿ ಎಂದು ಪ್ರೂವ್ ಮಾಡಿದ್ದವು. ಬಿಎಲ್‌ಡಿಇಎ ಸಂಸ್ಥೆಯ ಲೆಟರ್‌ಹೆಡ್‌ನ ಫೋರ್ಜರಿ ಮಾಡಲಾಗಿತ್ತಲ್ಲದೇ, ಎಂ.ಬಿ. ಪಾಟೀಲರ ಸಹಿಯನ್ನೂ ಫೋರ್ಜರಿ ಮಾಡಲಾಗಿತ್ತು. ಆಗ ಚುನಾವಣೆ ಗದ್ದಲದಲ್ಲಿ ಪೊಲೀಸರೂ ಬಹಳ ತಲೆ ಕೆಡಿಸಿಕೊಂಡಿರಲಿಲ್ಲ. ರಾಜ್ಯ ಬಿಜೆಪಿ ಘಟಕವೂ ಅದೇ ಪತ್ರ ಬಳಸಿ ಕಾಂಗ್ರೆಸ್ ವಿರುದ್ಧ ಅಪಪ್ರಚಾರ ಮಾಡಿತ್ತು.

ಈಗ ಅದೇ ಪತ್ರವನ್ನು ಕಳೆದ ವಾರ ಏಪ್ರಿಲ್ 16ರಂದು ಮತ್ತೆ ವಿಜಯವಾಣಿ ಪ್ರಕಟಿಸಿ ಎಂ.ಬಿ. ಪಾಟೀಲರ ಆಕ್ರೋಶಕ್ಕೆ ಗುರಿಯಾಗಿತ್ತು. ಇದನ್ನು ನಾನುಗೌರಿ.ಕಾಮ್ ಸವಿವರವಾಗಿ ವರದಿ ಮಾಡಿ, ಫೇಕ್‌ನ್ಯೂಸ್ ಎಂಬುದನ್ನು ಜನರ ಗಮನಕ್ಕೆ ತಂದಿತ್ತು.

ಈಗ ಎಂ.ಬಿ. ಪಾಟೀಲರೇ ಗೃಹ ಸಚಿವರಾಗಿರುವುದರಿಂದ ಪೊಲೀಸರು ತನಿಖೆಯನ್ನು ಕ್ಷಿಪ್ರವಾಗಿ ನಡೆಸುತ್ತಿರುವಂತೆ ಕಾಣುತ್ತಿದೆ. ತನಿಖೆ ಫೇಕುವೀರರ ಬುಡಕ್ಕೆ ತಲುಪಿದರಷ್ಟೇ ಹಿಂದಿರುವ ‘ನಾಯಕರ’ ಬಣ್ಣ ಬಯಲಾದೀತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...