Homeಅಂಕಣಗಳುಫೇಕು ಪತ್ರ: ಪೋಸ್ಟ್ಕಾರ್ಡಿನ ಮಹೇಶ ಹೆಗೆಡೆ ವಿಚಾರಣೆ ಬಾಯಿಬಡುಕಿ ಶೃತಿ ಬೆಳ್ಳಕ್ಕಿ ಬಂಧನ

ಫೇಕು ಪತ್ರ: ಪೋಸ್ಟ್ಕಾರ್ಡಿನ ಮಹೇಶ ಹೆಗೆಡೆ ವಿಚಾರಣೆ ಬಾಯಿಬಡುಕಿ ಶೃತಿ ಬೆಳ್ಳಕ್ಕಿ ಬಂಧನ

- Advertisement -
- Advertisement -

 

ಪೋಸ್ಟ್ಕಾರ್ಡ್ ನ್ಯೂಸ್ ಎಂಬ ಫೇಕ್‌ನ್ಯೂಸ್ ಪೋರ್ಟಲ್‌ನ ಸಂಸ್ಥಾಪಕ ಮಹೇಶ ವಿಕ್ರಮ ಹೆಗಡೆಯನ್ನು ಸಿಐಡಿ ಪೊಲೀಸರು ಫೇಕ್ ಪತ್ರದ ಸೃಷ್ಟಿಗೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದಾರೆ. ಈ ಸುದ್ದಿ ರಾಜ್ಯಾದ್ಯಂತ ತಲುಪುವ ಮೊದಲೇ ಬಿಜೆಪಿಯ ಒಂದಿಬ್ಬರು ನಾಯಕರು ಟ್ವೀಟ್ ಮಾಡಿ, ಮಹೇಶ ಬಂಧನ ಖಂಡನೀಯ ಎಂದಿದ್ದರು!! ಪೋಸ್ಟ್ಕಾರ್ಡ್ ಎನ್ನುವುದು ಬಿಜೆಪಿ ಪ್ರಾಯೋಜಿತ ಪೋರ್ಟಲ್ ಎಂಬುದಂತೂ ಹೊಸ ವಿಷಯವೇನಲ್ಲ ಬಿಡಿ…

ಸಚಿವ ಎಂಬಿ, .ಪಾಟೀಲರ ಹೆಸರಿನಲ್ಲಿ ಫೋರ್ಜರಿ ಪತ್ರವನ್ನು ಸೃಷ್ಟಿಸಿದ ಪ್ರಕರಣದ ವಿಚಾರಣೆ ತೀವ್ರಗೊಂಡಿದ್ದು, ಅದರ ಭಾಗವಾಗಿ ನಿನ್ನೆ ಏಪ್ರಿಲ್ 24ರಂದು ಧಾರವಾಡ ಪೊಲೀಸರು ಶೃತಿ ಬೆಳ್ಳಕ್ಕಿ ಎಂಬ ಬಿಜೆಪಿ ಕಾರ್ಯಕರ್ತೆಯನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ನೀಡಿದ್ದಾರೆ. ಶೃತಿ ಧಾರವಾಡ ಬಿಜೆಪಿ ಗ್ರಾಮೀಣ ವಿಭಾಗದ ಅಧ್ಯಕ್ಷ ಪರಮೇಶ ಉಳವಣ್ಣವರ್ ಪತ್ನಿಯಾಗಿದ್ದು, ಸೋನಿಯಾರಿಗೆ ಎಂ. ಬಿ. ಪಾಟೀಲರು ಬರೆದಿದ್ದ ‘ಫೇಕ್’ ಪತ್ರವನ್ನು ಉಲ್ಲೇಖಿಸಿ, ಕಾಂಗ್ರೆಸ್ ವಿರುದ್ಧ ಚುನಾವಣಾ ಭಾಷಣ ಮಾಡುವ ಸಂದರ್ಭದಲ್ಲಿ ಸಮುದಾಯಗಳಿಗೆ ಅವಮಾನವಾಗುವಂತೆ ಮಾತಾಡಿದ್ದರು. ತಮ್ಮ ಆ ಭಾಷಣವನ್ನು ಫೇಸ್‌ಬುಕ್‌ನಲ್ಲಿ ಹರಿಬಿಟ್ಟಿದ್ದರು. ಧಾರವಾಡ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಲಕರ್ಣಿ ವಿರುದ್ಧ ಪುತೂರಿ ನಡೆಸಲು ಬಿಜೆಪಿ ನಾಯಕರು ಈ ಕಾರ್ಯಕರ್ತೆಯನ್ನು ಬಳಸಿಕೊಂಡು, ವಿಜಯವಾಣಿಯಲ್ಲಿ ಬಂದಿದ್ದ ಫೇಕ್ ಪತ್ರದ ಕುರಿತು ಸುದ್ದಿ ಹರಡಲು ಯತ್ನಿಸಿದ್ದರು.

ಹಾಗೆಯೇ ನಿನ್ನೆ ‘ಫೇಕ್’ ಪತ್ರದ ರೂವಾರಿ ಎನ್ನಲಾದ ಪೋಸ್ಟ್ಕಾರ್ಡ್ನ ಮಹೇಶ ಹೆಗಡೆಯ ವಿಚಾರಣೆಯನ್ನು ಪೊಲೀಸರು ನಡೆಸಿದ್ದಾರೆ.

ಹಿನ್ನೆಲೆ ಕೆದಕುತ್ತ….

ಈ ಫೇಕ್ ಪತ್ರ ಮೊದಲ ಬಾರಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಲಿತಕ್ಕೆ ಬಂದಿದ್ದು 2017ರಲ್ಲಿ ರಾಜ್ಯದಲ್ಲಿ ಲಿಂಗಾಯತ ಪ್ರತ್ಯೇಕ ಧರ್ಮ
ಚಳವಳಿ ಜೋರಾಗಿದ್ದ ಸಂದರ್ಭದಲ್ಲಿ. ನಂತರ ಕಳೆದ 2018ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ. ಕಾಂಗ್ರೆಸ್ ಅಧ್ಯಕ್ಷೆಗೆ ಅಂದಿನ ಜಲ ಸಂಪನ್ಮೂಲ ಸಚಿವ (ಈಗಿನ ಗೃಹ ಸಚಿವ) ಬರೆದ ಪತ್ರ ಇದೆಂದು ಸೃಷ್ಟಿಸಲಾಗಿತ್ತು. ಜಾಗತಿಕ ಕ್ಯಾಥೋಲಿಕ್ ಸಂಘಟನೆಗಳ ಆಶಯದಂತೆ ಲಿಂಗಾಯತರನ್ನು ಹಿಂದೂ ಧರ್ಮದಿಂದ ಬೇರ್ಪಡಿಸುವ ಉದ್ದೇಶಕ್ಕಾಗಿ ಎಂ.ಬಿ. ಪಾಟೀಲರು ಸೋನಿಯಾ ಗಾಂಧಿಯವರಿಗೆ ಭಿನ್ನವಿಸುವ
ರೀತಿಯಲ್ಲಿ ಪತ್ರವನ್ನು ಸೃಷ್ಟಿಸಲಾಗಿತ್ತು. ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟದ ಹಿಂದೆ ಸೋನಿಯಾ ಗಾಂಧಿ ಮತ್ತು ಕ್ಯಾಥೊಲಿಕ್ ಸಂಘಟನೆಗಳ ಕೈವಾಡ ಇದೆ ಎಂದೂ, ಹಿಂದೂ ಧರ್ಮಕ್ಕೆ ಅಪಾಯ ಕಾದಿದೆ ಎಂದೂ ಸುಳ್ಳು ಹರಡಲಾಗಿತ್ತು. ಇದನ್ನು ಮುಂಚೂಣಿಗೆ ತಂದಿದ್ದು ಪೋಸ್ಟ್ಕಾರ್ಡ್ ನ್ಯೂಸ್ ಎಂಬ ಫೇಕು ಖ್ಯಾತಿಯ ಪೋರ್ಟಲ್.

ಆಗಲೇ ಅನೇಕ ಫ್ಯಾಕ್ಟ್ ಚೆಕಿಂಗ್ ಪೋರ್ಟಲ್‌ಗಳು ಈ ಪತ್ರ ನಕಲಿ ಎಂದು ಪ್ರೂವ್ ಮಾಡಿದ್ದವು. ಬಿಎಲ್‌ಡಿಇಎ ಸಂಸ್ಥೆಯ ಲೆಟರ್‌ಹೆಡ್‌ನ ಫೋರ್ಜರಿ ಮಾಡಲಾಗಿತ್ತಲ್ಲದೇ, ಎಂ.ಬಿ. ಪಾಟೀಲರ ಸಹಿಯನ್ನೂ ಫೋರ್ಜರಿ ಮಾಡಲಾಗಿತ್ತು. ಆಗ ಚುನಾವಣೆ ಗದ್ದಲದಲ್ಲಿ ಪೊಲೀಸರೂ ಬಹಳ ತಲೆ ಕೆಡಿಸಿಕೊಂಡಿರಲಿಲ್ಲ. ರಾಜ್ಯ ಬಿಜೆಪಿ ಘಟಕವೂ ಅದೇ ಪತ್ರ ಬಳಸಿ ಕಾಂಗ್ರೆಸ್ ವಿರುದ್ಧ ಅಪಪ್ರಚಾರ ಮಾಡಿತ್ತು.

ಈಗ ಅದೇ ಪತ್ರವನ್ನು ಕಳೆದ ವಾರ ಏಪ್ರಿಲ್ 16ರಂದು ಮತ್ತೆ ವಿಜಯವಾಣಿ ಪ್ರಕಟಿಸಿ ಎಂ.ಬಿ. ಪಾಟೀಲರ ಆಕ್ರೋಶಕ್ಕೆ ಗುರಿಯಾಗಿತ್ತು. ಇದನ್ನು ನಾನುಗೌರಿ.ಕಾಮ್ ಸವಿವರವಾಗಿ ವರದಿ ಮಾಡಿ, ಫೇಕ್‌ನ್ಯೂಸ್ ಎಂಬುದನ್ನು ಜನರ ಗಮನಕ್ಕೆ ತಂದಿತ್ತು.

ಈಗ ಎಂ.ಬಿ. ಪಾಟೀಲರೇ ಗೃಹ ಸಚಿವರಾಗಿರುವುದರಿಂದ ಪೊಲೀಸರು ತನಿಖೆಯನ್ನು ಕ್ಷಿಪ್ರವಾಗಿ ನಡೆಸುತ್ತಿರುವಂತೆ ಕಾಣುತ್ತಿದೆ. ತನಿಖೆ ಫೇಕುವೀರರ ಬುಡಕ್ಕೆ ತಲುಪಿದರಷ್ಟೇ ಹಿಂದಿರುವ ‘ನಾಯಕರ’ ಬಣ್ಣ ಬಯಲಾದೀತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುತ್ತಿಗೆ ಕಾರ್ಮಿಕ ಪದ್ಧತಿ ರದ್ದುಪಡಿಸಿ, ನೇರ ವೇತನ ಪಾವತಿ ಜಾರಿಗೊಳಿಸಿ, ಪರಿಷ್ಕೃತ ಕನಿಷ್ಠ ವೇತನವನ್ನು ಜಾರಿಗೊಳಿಸಲು ಆಗ್ರಹಿಸಿ ಎಐಸಿಸಿಟಿಯು ಪ್ರತಿಭಟನೆ

ಬೆಂಗಳೂರು: ರಾಜ್ಯಾದ್ಯಂತ ವಿವಿಧ ವಲಯಗಳಲ್ಲಿ ದುಡಿಯುತ್ತಿರುವ ಗುತ್ತಿಗೆ, ಹೊರಗುತ್ತಿಗೆ, ದಿನಗೂಲಿ ಹಾಗೂ ತಾತ್ಕಾಲಿಕ ಕಾರ್ಮಿಕರ ಶೋಷಣೆ ತಡೆಗಟ್ಟಿ, ಅವರಿಗೆ ಉದ್ಯೋಗ ಭದ್ರತೆ ಮತ್ತು ಸಾಮಾಜಿಕ ಭದ್ರತೆ ಒದಗಿಸಬೇಕು ಎಂದು ಆಗ್ರಹಿಸಿ ಆಲ್ ಇಂಡಿಯಾ...

ಯುಜಿಸಿ ಇಕ್ವಿಟಿ ನಿಯಮಗಳು ಮರುಪರಿಶೀಲನೆಯಲ್ಲಿವೆ: ಸುಪ್ರೀಂ ಕೋರ್ಟ್‌ಗೆ ತಿಳಿಸಿದ ಕೇಂದ್ರ ಸರ್ಕಾರ

ಕ್ಯಾಂಪಸ್‌ಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟುವ ಕುರಿತಾದ 2026 ರ ವಿಶ್ವವಿದ್ಯಾಲಯ ಅನುದಾನ ಆಯೋಗದ ಇಕ್ವಿಟಿ ನಿಯಮಗಳು ಮರುಪರಿಶೀಲನೆಯಲ್ಲಿವೆ ಎಂದು ಕೇಂದ್ರ ಸರ್ಕಾರ ಗುರುವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಜನವರಿ 29 ರಂದು, ಸುಪ್ರೀಂ...

ಅಲ್ಪಸಂಖ್ಯಾತರ ಮೇಲಿನ ದಾಳಿ ಹಿನ್ನೆಲೆ: ಭಾಗವತ್ ಭೇಟಿಗೂ ಮುನ್ನ ಆರ್‌ಎಸ್‌ಎಸ್ ನಾಯಕರನ್ನು ದೂರವಿಡುವಂತೆ ವಾಷಿಂಗ್ಟನ್‌ಗೆ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ ಒತ್ತಾಯ

ವಾಷಿಂಗ್ಟನ್: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಸಂಘಚಾಲಕ ಮೋಹನ್ ಭಾಗವತ್ ಅವರ ಅಮೆರಿಕ ಭೇಟಿಗೆ ಮುನ್ನ, ಅವರೊಂದಿಗೆ ಉನ್ನತ ಮಟ್ಟದ ರಾಜತಾಂತ್ರಿಕ ಮಾತುಕತೆಗಳನ್ನು ತಡೆಹಿಡಿಯಬೇಕು ಮತ್ತು ಸಂಘದ ಪ್ರಮುಖ ನಾಯಕರ ವಿರುದ್ಧ ನಿರ್ಬಂಧಗಳನ್ನು...

ಮೋಹನ್ ಭಾಗವತ್‌ ಅಮೆರಿಕ ಪ್ರವಾಸಕ್ಕೆ ವಿರೋಧ: RSSಗೆ ನಿರ್ಬಂಧದ ಭೀತಿ

ಆರ್‌ಎಸ್‌ಎಸ್ (RSS) ಸಂಘಟನೆಯ ವಿರುದ್ಧ ನಿರ್ಬಂಧಗಳನ್ನು ವಿಧಿಸುವಂತೆ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಕುರಿತ ಸಲಹಾ ಮಂಡಳಿಯ (USCIRF) ಅಧಿಕಾರಿಗಳು ಅಮೆರಿಕ ಸರ್ಕಾರವನ್ನು ಆಗ್ರಹಿಸಿದ್ದಾರೆ. ಶೀಘ್ರದಲ್ಲೇ ಅಮೆರಿಕಕ್ಕೆ ಭೇಟಿ ನೀಡಲಿರುವ RSS ಸರಸಂಘಚಾಲಕ ಮೋಹನ್ ಭಾಗವತ್...

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿವಾದಾತ್ಮಕ ಹೇಳಿಕೆ ಆರೋಪ: ಕೇರಳದ ಟ್ರಾನ್ಸ್ ಜೆಂಡರ್ ಮೇಕಪ್ ಕಲಾವಿದೆ ಜಾನ್ಮೋನಿ ದಾಸ್ ಬಂಧನ

ಕೋಝಿಕ್ಕೋಡ್: ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಸಾರ್ವಜನಿಕವಾಗಿ ಅವಮಾನಕಾರಿ ಹಾಗೂ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇರೆಗೆ ಕೇರಳದ ಪ್ರಸಿದ್ಧ ಸೆಲೆಬ್ರಿಟಿ ಮೇಕಪ್ ಆರ್ಟಿಸ್ಟ್ ಹಾಗೂ ಬಿಗ್ ಬಾಸ್ ಮಾಜಿ...

ಎರಡು ಚರಣಗಳ ‘ವಂದೇ ಮಾತರಂ’ ನಿಲುವನ್ನು ಸಮರ್ಥಿಸಿಕೊಂಡ ಕಾಂಗ್ರೆಸ್

ವಂದೇ ಮಾತರಂ ವಿವಾದ ತೀವ್ರಗೊಳ್ಳುತ್ತಿರುವಂತೆಯೇ, ಭಾರತೀಯ ಜನತಾ ಪಾರ್ಟಿಯ (ಬಿಜೆಪಿ) ತೀವ್ರ ಟೀಕೆಗಳ ನಡುವೆಯೂ ಕಾಂಗ್ರೆಸ್ ಪಕ್ಷವು ತನ್ನ ಕಾರ್ಯಕ್ರಮಗಳಲ್ಲಿ ರಾಷ್ಟ್ರೀಯ ಗೀತೆಯ ಮೊದಲ ಎರಡು ಚರಣಗಳನ್ನು ಹಾಡುವ ತನ್ನ ದೀರ್ಘಕಾಲದ ಪದ್ಧತಿಯನ್ನು...

31ನೇ ದಕ್ಷಿಣ ವಲಯ ಮಂಡಳಿ ಸಭೆ : ಕರ್ನಾಟಕ ಸೇರಿ ದಕ್ಷಿಣ ಭಾರತಕ್ಕೆ ನ್ಯಾಯಯುತ ಅನುದಾನ ನೀಡುವಂತೆ ಸಿಎಂ ಡಿ.ಕೆ ಶಿವಕುಮಾರ್ ಒತ್ತಾಯ

ಕರ್ನಾಟಕ ಬಲಿಷ್ಠವಾದಾಗ, ದಕ್ಷಿಣ ಭಾರತ ಮತ್ತಷ್ಟು ಬಲಿಷ್ಠವಾಗುತ್ತದೆ. ದಕ್ಷಿಣ ಭಾರತ ಬಲಿಷ್ಠವಾದಾಗ, ಭಾರತ ಮತ್ತಷ್ಟು ಬಲಿಷ್ಠವಾಗುತ್ತದೆ. ನಾವು ಭಾರತದ ಅಭಿವೃದ್ಧಿಯ ಪಾಲುದಾರರು. ನಮಗೆ ನಮ್ಮ ನಿಧಿಗಳಲ್ಲಿ, ನಮ್ಮ ಧ್ವನಿಯಲ್ಲಿ ನ್ಯಾಯ ಬೇಕು. ನಮಗೆ...

ರಾಯಚೂರು| ಬಾವಿಯಲ್ಲಿ ದಲಿತ ಯುವತಿ ಮೃತದೇಹ ಪತ್ತೆ; ಅತ್ಯಾಚಾರ-ಕೊಲೆ ಶಂಕೆ

ನಿನ್ನೆ ರಾತ್ರಿ ಬಯಲು ಶೌಚಾಲಯಕ್ಕೆಂದು ಮನೆಯಿಂದ ಹೊರಹೋಗಿದ್ದ ಯುವತಿಯೊಬ್ಬಳು ನಾಪತ್ತೆಯಾಗಿದ್ದು, ಇಂದು ಬೆಳಗ್ಗೆ ಜಮೀನಿನಲ್ಲಿದ್ದ ಬಾವಿಯಲ್ಲಿ ಆಕೆಯ ಮೃತದೇಹ ಪತ್ತೆಯಾಗಿದೆ. ಸಿರವಾರ ಪೊಲೀಸ್ ಠಾಣಾ ವ್ಯಾಪ್ತಿಯ ಹೊಕ್ರಾಣಿ ಗ್ರಾಮದಲ್ಲಿ ಘಟನೆ ನಡೆಸಿದ್ದು, ಮೃತ...

ನಕಲಿ ಔಷಧ ಜಾಲದ ಸುಳಿವು ನೀಡಿದವರಿಗೆ ₹50,000 ನಗದು ಬಹುಮಾನ: ಆರೋಗ್ಯ ಇಲಾಖೆ

ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿರುವ ನಕಲಿ ಔಷಧ ಜಾಲದ ವಿರುದ್ಧ ಆರೋಗ್ಯ ಇಲಾಖೆ ಸಮರ ಸಾರಿದೆ. ರಾಜ್ಯದಲ್ಲಿ ನಕಲಿ ಔಷಧಗಳ ತಯಾರಿಕೆ, ಸಂಗ್ರಹಣೆ, ಮಾರಾಟ ಹಾಗೂ ಪೂರೈಕೆ ಕುರಿತು ನಿಖರ ಮಾಹಿತಿ ನೀಡುವ...

ಎಬಿವಿಪಿ ಮತ್ತು ಎಡಪಂಥೀಯ ಗುಂಪುಗಳ ನಡುವೆ ವಾಗ್ವಾದ: ಮಧ್ಯರಾತ್ರಿ ಜಾದವ್‌ಪುರ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಳಿ ನಡೆಸಿದ ಹಿಂದುತ್ವವಾದಿ ಗುಂಪು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಪ್ರತಿಷ್ಠಿತ ಜಾದವ್‌ಪುರ ವಿಶ್ವವಿದ್ಯಾಲಯದ (ಜೆ ಯು) ಕ್ಯಾಂಪಸ್‌ ಮೇಲೆ ತಡರಾತ್ರಿ ಹಿಂದುತ್ವವಾದಿ ಸಂಘಟನೆಗೆ ಸೇರಿದ ಗುಂಪೊಂದು ಭೀಕರ ದಾಳಿ ನಡೆಸಿದ್ದು, ವಿಶ್ವವಿದ್ಯಾಲಯದ ಆಸ್ತಿಪಾಸ್ತಿ ಧ್ವಂಸಗೊಳಿಸಿ ಹಲವು ವಿದ್ಯಾರ್ಥಿಗಳನ್ನು ತೀವ್ರವಾಗಿ...