Homeಮುಖಪುಟ2019ರ ಲೋಕಸಭೆ ಚುನಾವಣೆಯಲ್ಲಿ ಸುಳ್ಳುಸುದ್ದಿಗಳು ಹೆಚ್ಚಾಗಿದ್ದವು: ಫೇಸ್‌ಬುಕ್‌

2019ರ ಲೋಕಸಭೆ ಚುನಾವಣೆಯಲ್ಲಿ ಸುಳ್ಳುಸುದ್ದಿಗಳು ಹೆಚ್ಚಾಗಿದ್ದವು: ಫೇಸ್‌ಬುಕ್‌

- Advertisement -
- Advertisement -

2019ರ ಫೆಬ್ರುವರಿಯಲ್ಲಿ ಹೇಗೆ ಭಾರತದಲ್ಲಿ ಫೇಕ್‌ನ್ಯೂಸ್‌ಗಳು ಶರವೇಗದಲ್ಲಿ ಹರಿದಾಡಿವೆ ಎಂದು ಫೇಸ್‌ಬುಕ್‌ ಹೇಳಿಕೊಂಡಿದೆ. ಕೇವಲ 21 ದಿನಗಳಲ್ಲಿ ಭಾರತದಲ್ಲಿ ಆಲ್ಗರಿದಂ ಹೇಗೆ ವೇಗವಾಗಿ ಬೆಳೆದಿತ್ತು ಎಂಬುದನ್ನು ಫೇಸ್‌ಬುಕ್‌ ಸಂಸ್ಥೆ ಪರಿಶೀಲಿಸಿದ್ದು, ಫೇಸ್‌ಬುಕ್‌ ಸಿಬ್ಬಂದಿ ದಿಗ್ಭ್ರಾಂತರಾಗಿದ್ದಾರೆ ಎನ್ನಲಾಗಿದೆ.

ಕೇವಲ ಮೂರು ವಾರಗಳಲ್ಲಿ ಹೊಸ ಬಳಕೆದಾರರು ಸುಳ್ಳು ಸುದ್ದಿಗಳನ್ನು, ಪ್ರಚೋದನಕಾರಿ ಚಿತ್ರಗಳನ್ನು ಅತಿ ಹೆಚ್ಚು ಹಂಚಿಕೊಂಡಿದ್ದಾರೆ. ಶಿರಚ್ಛೇದದ ಗ್ರಾಫಿಕ್‌ ಫೋಟೋಗಳು, ಪಾಕಿಸ್ತಾನದ ಮೇಲೆ ಭಾರತದ ನಡೆಸಿದೆ ಎನ್ನಲಾದ ವೈಮಾನಿಕ ದಾಳಿಯ, ಹಿಂಸಾಕೃತ್ಯದ ಗ್ರಾಫಿಕ್‌ ಫೋಟೋಗಳನ್ನು ಹರಿಬಿಡಲಾಯಿತು. ಪಾಕಿಸ್ತಾನದಲ್ಲಿ 300 ಭಯೋತ್ಪಾದಕರನ್ನು ಕೊಲ್ಲಲಾಗಿದೆ ಎಂಬ ನಕಲಿ ಸುದ್ದಿಯನ್ನು ಹಂಚಿದ ಒಂದು ಗುಂಪು ನಿಮ್ಮನ್ನು ನಗಿಸುತ್ತದೆ ಎಂದು ಫೇಸ್‌ಬುಕ್‌ ಸಿಬ್ಬಂದಿ ಹೇಳಿದ್ದಾರೆ.

ವಿಷಲ್‌ಬ್ಲೋವರ್‌‌ (ನಕಲಿ ಖಾತೆಗಳನ್ನು ಪತ್ತೆ ಹಚ್ಚುವವವರು) ಫ್ರಾನ್ಸ್‌ ಹೌಗನ್‌ ನೀಡಿರುವ 46 ಪುಟಗಳ ಸಂಶೋಧನಾ ಟಿಪ್ಪಣಿಯಲ್ಲಿ, “ನನ್ನ ಜೀವಿತಾವಧಿಯಲ್ಲಿ ನೋಡಿರದಿದ್ದಷ್ಟು ಸತ್ತವರ ಫೋಟೋಗಳನ್ನು ಕೇವಲ ಮೂರು ವಾರಗಳಲ್ಲಿ ನೋಡಿದೆ” ಎಂದು ಸಿಬ್ಬಂದಿಯೊಬ್ಬರು ಹೇಳಿರುವುದನ್ನು ಉಲ್ಲೇಖಿಸಲಾಗಿದೆ.

ಇದನ್ನೂ ಓದಿರಿ: ಯೋಗೇಂದ್ರ ಯಾದವ್ ಅಮಾನತು: ಚಾರಿತ್ರಿಕ ರೈತ ಹೋರಾಟದ ವಿಶಿಷ್ಟ ಪ್ರಜಾತಂತ್ರ

ಟ್ರಯಲ್ ಖಾತೆಯು ಜೈಪುರದಲ್ಲಿ ವಾಸಿಸುವ ಮತ್ತು ಹೈದರಾಬಾದ್‌ನ 21 ವರ್ಷದ ಮಹಿಳೆಯ ಪ್ರೊಫೈಲ್ ಅನ್ನು ಬಳಸಿದೆ. ಬಳಕೆದಾರರು ಫೇಸ್‌ಬುಕ್‌ ಶಿಫಾರಸು ಮಾಡಿದ ಅಥವಾ ಆ ಶಿಫಾರಸುಗಳ ಮೂಲಕ ಕಾಣಿಸಿಕೊಂಡ ಪೇಜ್‌ಗಳನ್ನು, ಗುಂಪುಗಳನ್ನು ಮಾತ್ರ ಅನುಸರಿಸಿರುವುದು ತಿಳಿದುಬಂದಿದೆ. ಸಂಶೋಧನಾ ಟಿಪ್ಪಣಿಯ ಲೇಖಕರು ಈ ಅನುಭವವನ್ನು ‘ಸಮಗ್ರತೆಯ ದುಃಸ್ವಪ್ನ’ ಎಂದು ಕರೆದಿದ್ದಾರೆ.

ಕಂಪನಿಯ ಬೆಳವಣಿಗೆಯು ಭಾರತ, ಇಂಡೋನೇಷಿಯ, ಬ್ರೆಜಿಲ್‌ನಂತಹ ದೇಶದಲ್ಲಿ ಹೆಚ್ಚಾಗಿದೆ. ಅಲ್ಲಿ ಮೂಲಭೂತ ಮೇಲ್ವಿಚಾರಣೆಗೆ ಭಾಷಾ ಕೌಶಲ್ಯ ಹೊಂದಿರುವ ಜನರನ್ನು ನೇಮಿಸಿಕೊಳ್ಳಲು ಕಂಪನಿ ಹೆಣಗಾಡುತ್ತಿದೆ. 22 ಅಧಿಕೃತ ಭಾಷೆಗಳನ್ನು ಹೊಂದಿರುವ 1.3 ಬಿಲಿಯನ್ ಜನರಿರುವ ಭಾರತದಲ್ಲಿ ಈ ಸವಾಲು ವಿಶೇಷವಾಗಿ ತೀವ್ರವಾಗಿದೆ. ಫೇಸ್‌ಬುಕ್ ತನ್ನ ಪ್ಲಾಟ್‌ಫಾರ್ಮ್‌ನಲ್ಲಿನ ಕಂಟೆಂಟ್‌ನ ಉಸ್ತುವಾರಿಯನ್ನು ಆಕ್ಸೆಂಚರ್‌ನಂತಹ ಕಂಪನಿಗಳ ಗುತ್ತಿಗೆದಾರರಿಗೆ ಹೊರಗುತ್ತಿಗೆ ನೀಡುತ್ತದೆ.

“ಹಿಂದಿ ಮತ್ತು ಬಂಗಾಳಿ ಸೇರಿದಂತೆ ವಿವಿಧ ಭಾಷೆಗಳಲ್ಲಿ ದ್ವೇಷದ ಭಾಷಣವನ್ನು ಕಂಡುಹಿಡಿಯಲು ತಂತ್ರಜ್ಞಾನದ ಮೇಲೆ ನಾವು ಗಣನೀಯವಾಗಿ ಹೂಡಿಕೆ ಮಾಡಿದ್ದೇವೆ” ಎಂದು ಫೇಸ್‌ಬುಕ್ ವಕ್ತಾರರು ಹೇಳಿದ್ದಾರೆ. “ಪರಿಣಾಮವಾಗಿ ಜನರು ನೋಡುವ ದ್ವೇಷದ ಭಾಷಣದ ಪ್ರಮಾಣವನ್ನು ನಾವು ಈ ವರ್ಷ ಅರ್ಧದಷ್ಟು ಕಡಿಮೆ ಮಾಡಿದ್ದೇವೆ. ಇಂದು ಅದು ಶೇಕಡಾ 0.05 ಕ್ಕೆ ಇಳಿದಿದೆ” ಎಂದು ಕಂಪನಿ ಹೇಳಿಕೊಂಡಿದೆ.

“ಮುಸ್ಲಿಮರು ಸೇರಿದಂತೆ ಹಿಂದುಳಿದ ಗುಂಪುಗಳ ವಿರುದ್ಧ ದ್ವೇಷ ಭಾಷಣವು ಜಾಗತಿಕವಾಗಿ ಹೆಚ್ಚುತ್ತಿದೆ. ಆದ್ದರಿಂದ ನಾವು ನಿಯಮ ಜಾರಿಗೊಳಿಸುವಿಕೆಯನ್ನು ಸುಧಾರಿಸುತ್ತಿದ್ದೇವೆ. ದ್ವೇಷದ ಮಾತುಗಳು ಆನ್‌ಲೈನ್‌ನಲ್ಲಿ ಹುಟ್ಟಿಕೊಳ್ಳುವುತ್ತಿರುವುದರಿಂದ ನಮ್ಮ ನೀತಿಗಳನ್ನು ನವೀಕರಿಸಲು ಬದ್ಧರಾಗಿರುತ್ತೇವೆ” ಎಂದು ಫೇಸ್‌ಬುಕ್‌ ಹೇಳಿದೆ.

ವರದಿಯ ಪ್ರಕಾರ, ಹೊಸ ಬಳಕೆದಾರ ಪರೀಕ್ಷಾ ಖಾತೆಯನ್ನು ಫೆಬ್ರವರಿ 4, 2019ರಂದು ಸಂಶೋಧನಾ ತಂಡವು ಭಾರತದಲ್ಲಿ ಪ್ರವಾಸ ಕೈಗೊಂಡಿದ್ದ ಸಮಯದಲ್ಲಿ ರಚಿಸಲಾಗಿದೆ. ಪರೀಕ್ಷಾ ಬಳಕೆದಾರರು ಸಾಮಾಜಿಕ ಜಾಲತಾಣದಲ್ಲಿ ಜನಪ್ರಿಯವಾಗಿರುವ ಪೋಸ್ಟ್‌ಗಳನ್ನು ಒಳಗೊಂಡಂತೆ ಫೇಸ್‌ಬುಕ್ ಶಿಫಾರಸು ಮಾಡಿದ ವಿಷಯವನ್ನು ಅನ್ವೇಷಿಸಲು ಆರಂಭಿಸಿದರು.

ಫೆ .14ರಂದು ರಾಜಕೀಯವಾಗಿ ಸೂಕ್ಷ್ಮವಾಗಿರುವ ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 40 ಭಾರತೀಯ ಭದ್ರತಾ ಸಿಬ್ಬಂದಿ ಸಾವನ್ನಪ್ಪಿದರು. ಹತ್ತಾರು ಜನರು ಗಾಯಗೊಂಡರು. ಭಾರತ ಸರ್ಕಾರ ಈ ದಾಳಿಯನ್ನು ಪಾಕಿಸ್ತಾನದ ಭಯೋತ್ಪಾದಕ ಗುಂಪು ಮಾಡಿದೆ ಎಂದು ಹೇಳಿತು. ಶೀಘ್ರದಲ್ಲೇ ಪಾಕಿಸ್ತಾನದ ವಿರೋಧಿ ದ್ವೇಷದ ಮಾತಿನ ಸುರಿಮಳೆಯಾಯಿತು. ಇದರಲ್ಲಿ ಶಿರಚ್ಛೇದದ ಚಿತ್ರಗಳು ಮತ್ತು ಪಾಕಿಸ್ತಾನಿಯರ ಗುಂಪನ್ನು ಸೋಲಿಸಲು ಸಿದ್ಧತೆಗಳನ್ನು ತೋರಿಸುವ ಗ್ರಾಫಿಕ್ ಚಿತ್ರಗಳು ಒಳಗೊಂಡಿದ್ದವು.

ರಾಷ್ಟ್ರೀಯವಾದ ಸಂದೇಶಗಳು, ಪಾಕಿಸ್ತಾನದಲ್ಲಿ ಭಾರತದ ವಾಯುದಾಳಿಗಳ ಬಗ್ಗೆ ಉತ್ಪ್ರೇಕ್ಷಿತ ಹೇಳಿಕೆಗಳು, ಬಾಂಬ್ ಸ್ಫೋಟಗಳ ನಕಲಿ ಫೋಟೋಗಳು ಮತ್ತು ದಾಳಿಯಲ್ಲಿ ಹೊಸದಾಗಿ ಮದುವೆಯಾದ ಸೇನಾ ಸಿಬ್ಬಂದಿ ತನ್ನ ಕುಟುಂಬಕ್ಕೆ ಮರಳಲು ತಯಾರಿ ನಡೆಸುತ್ತಿದ್ದಾಗ ದಾಳಿಗೆ ತುತ್ತಾಗಿದ್ದನ್ನು ಬಿಂಬಿಸಲಾಗಿತ್ತು.


ಇದನ್ನೂ ಓದಿರಿ: ಯುಪಿ ಚುನಾವಣೆ: 10 ಲಕ್ಷ ರೂ.ವರೆಗೆ ಉಚಿತ ವೈದ್ಯಕೀಯ ಚಿಕಿತ್ಸೆ ಘೋಷಿಸಿದ ಪ್ರಿಯಾಂಕಾ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...