Homeಮುಖಪುಟ2019ರ ಲೋಕಸಭೆ ಚುನಾವಣೆಯಲ್ಲಿ ಸುಳ್ಳುಸುದ್ದಿಗಳು ಹೆಚ್ಚಾಗಿದ್ದವು: ಫೇಸ್‌ಬುಕ್‌

2019ರ ಲೋಕಸಭೆ ಚುನಾವಣೆಯಲ್ಲಿ ಸುಳ್ಳುಸುದ್ದಿಗಳು ಹೆಚ್ಚಾಗಿದ್ದವು: ಫೇಸ್‌ಬುಕ್‌

- Advertisement -
- Advertisement -

2019ರ ಫೆಬ್ರುವರಿಯಲ್ಲಿ ಹೇಗೆ ಭಾರತದಲ್ಲಿ ಫೇಕ್‌ನ್ಯೂಸ್‌ಗಳು ಶರವೇಗದಲ್ಲಿ ಹರಿದಾಡಿವೆ ಎಂದು ಫೇಸ್‌ಬುಕ್‌ ಹೇಳಿಕೊಂಡಿದೆ. ಕೇವಲ 21 ದಿನಗಳಲ್ಲಿ ಭಾರತದಲ್ಲಿ ಆಲ್ಗರಿದಂ ಹೇಗೆ ವೇಗವಾಗಿ ಬೆಳೆದಿತ್ತು ಎಂಬುದನ್ನು ಫೇಸ್‌ಬುಕ್‌ ಸಂಸ್ಥೆ ಪರಿಶೀಲಿಸಿದ್ದು, ಫೇಸ್‌ಬುಕ್‌ ಸಿಬ್ಬಂದಿ ದಿಗ್ಭ್ರಾಂತರಾಗಿದ್ದಾರೆ ಎನ್ನಲಾಗಿದೆ.

ಕೇವಲ ಮೂರು ವಾರಗಳಲ್ಲಿ ಹೊಸ ಬಳಕೆದಾರರು ಸುಳ್ಳು ಸುದ್ದಿಗಳನ್ನು, ಪ್ರಚೋದನಕಾರಿ ಚಿತ್ರಗಳನ್ನು ಅತಿ ಹೆಚ್ಚು ಹಂಚಿಕೊಂಡಿದ್ದಾರೆ. ಶಿರಚ್ಛೇದದ ಗ್ರಾಫಿಕ್‌ ಫೋಟೋಗಳು, ಪಾಕಿಸ್ತಾನದ ಮೇಲೆ ಭಾರತದ ನಡೆಸಿದೆ ಎನ್ನಲಾದ ವೈಮಾನಿಕ ದಾಳಿಯ, ಹಿಂಸಾಕೃತ್ಯದ ಗ್ರಾಫಿಕ್‌ ಫೋಟೋಗಳನ್ನು ಹರಿಬಿಡಲಾಯಿತು. ಪಾಕಿಸ್ತಾನದಲ್ಲಿ 300 ಭಯೋತ್ಪಾದಕರನ್ನು ಕೊಲ್ಲಲಾಗಿದೆ ಎಂಬ ನಕಲಿ ಸುದ್ದಿಯನ್ನು ಹಂಚಿದ ಒಂದು ಗುಂಪು ನಿಮ್ಮನ್ನು ನಗಿಸುತ್ತದೆ ಎಂದು ಫೇಸ್‌ಬುಕ್‌ ಸಿಬ್ಬಂದಿ ಹೇಳಿದ್ದಾರೆ.

ವಿಷಲ್‌ಬ್ಲೋವರ್‌‌ (ನಕಲಿ ಖಾತೆಗಳನ್ನು ಪತ್ತೆ ಹಚ್ಚುವವವರು) ಫ್ರಾನ್ಸ್‌ ಹೌಗನ್‌ ನೀಡಿರುವ 46 ಪುಟಗಳ ಸಂಶೋಧನಾ ಟಿಪ್ಪಣಿಯಲ್ಲಿ, “ನನ್ನ ಜೀವಿತಾವಧಿಯಲ್ಲಿ ನೋಡಿರದಿದ್ದಷ್ಟು ಸತ್ತವರ ಫೋಟೋಗಳನ್ನು ಕೇವಲ ಮೂರು ವಾರಗಳಲ್ಲಿ ನೋಡಿದೆ” ಎಂದು ಸಿಬ್ಬಂದಿಯೊಬ್ಬರು ಹೇಳಿರುವುದನ್ನು ಉಲ್ಲೇಖಿಸಲಾಗಿದೆ.

ಇದನ್ನೂ ಓದಿರಿ: ಯೋಗೇಂದ್ರ ಯಾದವ್ ಅಮಾನತು: ಚಾರಿತ್ರಿಕ ರೈತ ಹೋರಾಟದ ವಿಶಿಷ್ಟ ಪ್ರಜಾತಂತ್ರ

ಟ್ರಯಲ್ ಖಾತೆಯು ಜೈಪುರದಲ್ಲಿ ವಾಸಿಸುವ ಮತ್ತು ಹೈದರಾಬಾದ್‌ನ 21 ವರ್ಷದ ಮಹಿಳೆಯ ಪ್ರೊಫೈಲ್ ಅನ್ನು ಬಳಸಿದೆ. ಬಳಕೆದಾರರು ಫೇಸ್‌ಬುಕ್‌ ಶಿಫಾರಸು ಮಾಡಿದ ಅಥವಾ ಆ ಶಿಫಾರಸುಗಳ ಮೂಲಕ ಕಾಣಿಸಿಕೊಂಡ ಪೇಜ್‌ಗಳನ್ನು, ಗುಂಪುಗಳನ್ನು ಮಾತ್ರ ಅನುಸರಿಸಿರುವುದು ತಿಳಿದುಬಂದಿದೆ. ಸಂಶೋಧನಾ ಟಿಪ್ಪಣಿಯ ಲೇಖಕರು ಈ ಅನುಭವವನ್ನು ‘ಸಮಗ್ರತೆಯ ದುಃಸ್ವಪ್ನ’ ಎಂದು ಕರೆದಿದ್ದಾರೆ.

ಕಂಪನಿಯ ಬೆಳವಣಿಗೆಯು ಭಾರತ, ಇಂಡೋನೇಷಿಯ, ಬ್ರೆಜಿಲ್‌ನಂತಹ ದೇಶದಲ್ಲಿ ಹೆಚ್ಚಾಗಿದೆ. ಅಲ್ಲಿ ಮೂಲಭೂತ ಮೇಲ್ವಿಚಾರಣೆಗೆ ಭಾಷಾ ಕೌಶಲ್ಯ ಹೊಂದಿರುವ ಜನರನ್ನು ನೇಮಿಸಿಕೊಳ್ಳಲು ಕಂಪನಿ ಹೆಣಗಾಡುತ್ತಿದೆ. 22 ಅಧಿಕೃತ ಭಾಷೆಗಳನ್ನು ಹೊಂದಿರುವ 1.3 ಬಿಲಿಯನ್ ಜನರಿರುವ ಭಾರತದಲ್ಲಿ ಈ ಸವಾಲು ವಿಶೇಷವಾಗಿ ತೀವ್ರವಾಗಿದೆ. ಫೇಸ್‌ಬುಕ್ ತನ್ನ ಪ್ಲಾಟ್‌ಫಾರ್ಮ್‌ನಲ್ಲಿನ ಕಂಟೆಂಟ್‌ನ ಉಸ್ತುವಾರಿಯನ್ನು ಆಕ್ಸೆಂಚರ್‌ನಂತಹ ಕಂಪನಿಗಳ ಗುತ್ತಿಗೆದಾರರಿಗೆ ಹೊರಗುತ್ತಿಗೆ ನೀಡುತ್ತದೆ.

“ಹಿಂದಿ ಮತ್ತು ಬಂಗಾಳಿ ಸೇರಿದಂತೆ ವಿವಿಧ ಭಾಷೆಗಳಲ್ಲಿ ದ್ವೇಷದ ಭಾಷಣವನ್ನು ಕಂಡುಹಿಡಿಯಲು ತಂತ್ರಜ್ಞಾನದ ಮೇಲೆ ನಾವು ಗಣನೀಯವಾಗಿ ಹೂಡಿಕೆ ಮಾಡಿದ್ದೇವೆ” ಎಂದು ಫೇಸ್‌ಬುಕ್ ವಕ್ತಾರರು ಹೇಳಿದ್ದಾರೆ. “ಪರಿಣಾಮವಾಗಿ ಜನರು ನೋಡುವ ದ್ವೇಷದ ಭಾಷಣದ ಪ್ರಮಾಣವನ್ನು ನಾವು ಈ ವರ್ಷ ಅರ್ಧದಷ್ಟು ಕಡಿಮೆ ಮಾಡಿದ್ದೇವೆ. ಇಂದು ಅದು ಶೇಕಡಾ 0.05 ಕ್ಕೆ ಇಳಿದಿದೆ” ಎಂದು ಕಂಪನಿ ಹೇಳಿಕೊಂಡಿದೆ.

“ಮುಸ್ಲಿಮರು ಸೇರಿದಂತೆ ಹಿಂದುಳಿದ ಗುಂಪುಗಳ ವಿರುದ್ಧ ದ್ವೇಷ ಭಾಷಣವು ಜಾಗತಿಕವಾಗಿ ಹೆಚ್ಚುತ್ತಿದೆ. ಆದ್ದರಿಂದ ನಾವು ನಿಯಮ ಜಾರಿಗೊಳಿಸುವಿಕೆಯನ್ನು ಸುಧಾರಿಸುತ್ತಿದ್ದೇವೆ. ದ್ವೇಷದ ಮಾತುಗಳು ಆನ್‌ಲೈನ್‌ನಲ್ಲಿ ಹುಟ್ಟಿಕೊಳ್ಳುವುತ್ತಿರುವುದರಿಂದ ನಮ್ಮ ನೀತಿಗಳನ್ನು ನವೀಕರಿಸಲು ಬದ್ಧರಾಗಿರುತ್ತೇವೆ” ಎಂದು ಫೇಸ್‌ಬುಕ್‌ ಹೇಳಿದೆ.

ವರದಿಯ ಪ್ರಕಾರ, ಹೊಸ ಬಳಕೆದಾರ ಪರೀಕ್ಷಾ ಖಾತೆಯನ್ನು ಫೆಬ್ರವರಿ 4, 2019ರಂದು ಸಂಶೋಧನಾ ತಂಡವು ಭಾರತದಲ್ಲಿ ಪ್ರವಾಸ ಕೈಗೊಂಡಿದ್ದ ಸಮಯದಲ್ಲಿ ರಚಿಸಲಾಗಿದೆ. ಪರೀಕ್ಷಾ ಬಳಕೆದಾರರು ಸಾಮಾಜಿಕ ಜಾಲತಾಣದಲ್ಲಿ ಜನಪ್ರಿಯವಾಗಿರುವ ಪೋಸ್ಟ್‌ಗಳನ್ನು ಒಳಗೊಂಡಂತೆ ಫೇಸ್‌ಬುಕ್ ಶಿಫಾರಸು ಮಾಡಿದ ವಿಷಯವನ್ನು ಅನ್ವೇಷಿಸಲು ಆರಂಭಿಸಿದರು.

ಫೆ .14ರಂದು ರಾಜಕೀಯವಾಗಿ ಸೂಕ್ಷ್ಮವಾಗಿರುವ ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 40 ಭಾರತೀಯ ಭದ್ರತಾ ಸಿಬ್ಬಂದಿ ಸಾವನ್ನಪ್ಪಿದರು. ಹತ್ತಾರು ಜನರು ಗಾಯಗೊಂಡರು. ಭಾರತ ಸರ್ಕಾರ ಈ ದಾಳಿಯನ್ನು ಪಾಕಿಸ್ತಾನದ ಭಯೋತ್ಪಾದಕ ಗುಂಪು ಮಾಡಿದೆ ಎಂದು ಹೇಳಿತು. ಶೀಘ್ರದಲ್ಲೇ ಪಾಕಿಸ್ತಾನದ ವಿರೋಧಿ ದ್ವೇಷದ ಮಾತಿನ ಸುರಿಮಳೆಯಾಯಿತು. ಇದರಲ್ಲಿ ಶಿರಚ್ಛೇದದ ಚಿತ್ರಗಳು ಮತ್ತು ಪಾಕಿಸ್ತಾನಿಯರ ಗುಂಪನ್ನು ಸೋಲಿಸಲು ಸಿದ್ಧತೆಗಳನ್ನು ತೋರಿಸುವ ಗ್ರಾಫಿಕ್ ಚಿತ್ರಗಳು ಒಳಗೊಂಡಿದ್ದವು.

ರಾಷ್ಟ್ರೀಯವಾದ ಸಂದೇಶಗಳು, ಪಾಕಿಸ್ತಾನದಲ್ಲಿ ಭಾರತದ ವಾಯುದಾಳಿಗಳ ಬಗ್ಗೆ ಉತ್ಪ್ರೇಕ್ಷಿತ ಹೇಳಿಕೆಗಳು, ಬಾಂಬ್ ಸ್ಫೋಟಗಳ ನಕಲಿ ಫೋಟೋಗಳು ಮತ್ತು ದಾಳಿಯಲ್ಲಿ ಹೊಸದಾಗಿ ಮದುವೆಯಾದ ಸೇನಾ ಸಿಬ್ಬಂದಿ ತನ್ನ ಕುಟುಂಬಕ್ಕೆ ಮರಳಲು ತಯಾರಿ ನಡೆಸುತ್ತಿದ್ದಾಗ ದಾಳಿಗೆ ತುತ್ತಾಗಿದ್ದನ್ನು ಬಿಂಬಿಸಲಾಗಿತ್ತು.


ಇದನ್ನೂ ಓದಿರಿ: ಯುಪಿ ಚುನಾವಣೆ: 10 ಲಕ್ಷ ರೂ.ವರೆಗೆ ಉಚಿತ ವೈದ್ಯಕೀಯ ಚಿಕಿತ್ಸೆ ಘೋಷಿಸಿದ ಪ್ರಿಯಾಂಕಾ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...