Homeಮುಖಪುಟ2019ರ ಲೋಕಸಭೆ ಚುನಾವಣೆಯಲ್ಲಿ ಸುಳ್ಳುಸುದ್ದಿಗಳು ಹೆಚ್ಚಾಗಿದ್ದವು: ಫೇಸ್‌ಬುಕ್‌

2019ರ ಲೋಕಸಭೆ ಚುನಾವಣೆಯಲ್ಲಿ ಸುಳ್ಳುಸುದ್ದಿಗಳು ಹೆಚ್ಚಾಗಿದ್ದವು: ಫೇಸ್‌ಬುಕ್‌

- Advertisement -
- Advertisement -

2019ರ ಫೆಬ್ರುವರಿಯಲ್ಲಿ ಹೇಗೆ ಭಾರತದಲ್ಲಿ ಫೇಕ್‌ನ್ಯೂಸ್‌ಗಳು ಶರವೇಗದಲ್ಲಿ ಹರಿದಾಡಿವೆ ಎಂದು ಫೇಸ್‌ಬುಕ್‌ ಹೇಳಿಕೊಂಡಿದೆ. ಕೇವಲ 21 ದಿನಗಳಲ್ಲಿ ಭಾರತದಲ್ಲಿ ಆಲ್ಗರಿದಂ ಹೇಗೆ ವೇಗವಾಗಿ ಬೆಳೆದಿತ್ತು ಎಂಬುದನ್ನು ಫೇಸ್‌ಬುಕ್‌ ಸಂಸ್ಥೆ ಪರಿಶೀಲಿಸಿದ್ದು, ಫೇಸ್‌ಬುಕ್‌ ಸಿಬ್ಬಂದಿ ದಿಗ್ಭ್ರಾಂತರಾಗಿದ್ದಾರೆ ಎನ್ನಲಾಗಿದೆ.

ಕೇವಲ ಮೂರು ವಾರಗಳಲ್ಲಿ ಹೊಸ ಬಳಕೆದಾರರು ಸುಳ್ಳು ಸುದ್ದಿಗಳನ್ನು, ಪ್ರಚೋದನಕಾರಿ ಚಿತ್ರಗಳನ್ನು ಅತಿ ಹೆಚ್ಚು ಹಂಚಿಕೊಂಡಿದ್ದಾರೆ. ಶಿರಚ್ಛೇದದ ಗ್ರಾಫಿಕ್‌ ಫೋಟೋಗಳು, ಪಾಕಿಸ್ತಾನದ ಮೇಲೆ ಭಾರತದ ನಡೆಸಿದೆ ಎನ್ನಲಾದ ವೈಮಾನಿಕ ದಾಳಿಯ, ಹಿಂಸಾಕೃತ್ಯದ ಗ್ರಾಫಿಕ್‌ ಫೋಟೋಗಳನ್ನು ಹರಿಬಿಡಲಾಯಿತು. ಪಾಕಿಸ್ತಾನದಲ್ಲಿ 300 ಭಯೋತ್ಪಾದಕರನ್ನು ಕೊಲ್ಲಲಾಗಿದೆ ಎಂಬ ನಕಲಿ ಸುದ್ದಿಯನ್ನು ಹಂಚಿದ ಒಂದು ಗುಂಪು ನಿಮ್ಮನ್ನು ನಗಿಸುತ್ತದೆ ಎಂದು ಫೇಸ್‌ಬುಕ್‌ ಸಿಬ್ಬಂದಿ ಹೇಳಿದ್ದಾರೆ.

ವಿಷಲ್‌ಬ್ಲೋವರ್‌‌ (ನಕಲಿ ಖಾತೆಗಳನ್ನು ಪತ್ತೆ ಹಚ್ಚುವವವರು) ಫ್ರಾನ್ಸ್‌ ಹೌಗನ್‌ ನೀಡಿರುವ 46 ಪುಟಗಳ ಸಂಶೋಧನಾ ಟಿಪ್ಪಣಿಯಲ್ಲಿ, “ನನ್ನ ಜೀವಿತಾವಧಿಯಲ್ಲಿ ನೋಡಿರದಿದ್ದಷ್ಟು ಸತ್ತವರ ಫೋಟೋಗಳನ್ನು ಕೇವಲ ಮೂರು ವಾರಗಳಲ್ಲಿ ನೋಡಿದೆ” ಎಂದು ಸಿಬ್ಬಂದಿಯೊಬ್ಬರು ಹೇಳಿರುವುದನ್ನು ಉಲ್ಲೇಖಿಸಲಾಗಿದೆ.

ಇದನ್ನೂ ಓದಿರಿ: ಯೋಗೇಂದ್ರ ಯಾದವ್ ಅಮಾನತು: ಚಾರಿತ್ರಿಕ ರೈತ ಹೋರಾಟದ ವಿಶಿಷ್ಟ ಪ್ರಜಾತಂತ್ರ

ಟ್ರಯಲ್ ಖಾತೆಯು ಜೈಪುರದಲ್ಲಿ ವಾಸಿಸುವ ಮತ್ತು ಹೈದರಾಬಾದ್‌ನ 21 ವರ್ಷದ ಮಹಿಳೆಯ ಪ್ರೊಫೈಲ್ ಅನ್ನು ಬಳಸಿದೆ. ಬಳಕೆದಾರರು ಫೇಸ್‌ಬುಕ್‌ ಶಿಫಾರಸು ಮಾಡಿದ ಅಥವಾ ಆ ಶಿಫಾರಸುಗಳ ಮೂಲಕ ಕಾಣಿಸಿಕೊಂಡ ಪೇಜ್‌ಗಳನ್ನು, ಗುಂಪುಗಳನ್ನು ಮಾತ್ರ ಅನುಸರಿಸಿರುವುದು ತಿಳಿದುಬಂದಿದೆ. ಸಂಶೋಧನಾ ಟಿಪ್ಪಣಿಯ ಲೇಖಕರು ಈ ಅನುಭವವನ್ನು ‘ಸಮಗ್ರತೆಯ ದುಃಸ್ವಪ್ನ’ ಎಂದು ಕರೆದಿದ್ದಾರೆ.

ಕಂಪನಿಯ ಬೆಳವಣಿಗೆಯು ಭಾರತ, ಇಂಡೋನೇಷಿಯ, ಬ್ರೆಜಿಲ್‌ನಂತಹ ದೇಶದಲ್ಲಿ ಹೆಚ್ಚಾಗಿದೆ. ಅಲ್ಲಿ ಮೂಲಭೂತ ಮೇಲ್ವಿಚಾರಣೆಗೆ ಭಾಷಾ ಕೌಶಲ್ಯ ಹೊಂದಿರುವ ಜನರನ್ನು ನೇಮಿಸಿಕೊಳ್ಳಲು ಕಂಪನಿ ಹೆಣಗಾಡುತ್ತಿದೆ. 22 ಅಧಿಕೃತ ಭಾಷೆಗಳನ್ನು ಹೊಂದಿರುವ 1.3 ಬಿಲಿಯನ್ ಜನರಿರುವ ಭಾರತದಲ್ಲಿ ಈ ಸವಾಲು ವಿಶೇಷವಾಗಿ ತೀವ್ರವಾಗಿದೆ. ಫೇಸ್‌ಬುಕ್ ತನ್ನ ಪ್ಲಾಟ್‌ಫಾರ್ಮ್‌ನಲ್ಲಿನ ಕಂಟೆಂಟ್‌ನ ಉಸ್ತುವಾರಿಯನ್ನು ಆಕ್ಸೆಂಚರ್‌ನಂತಹ ಕಂಪನಿಗಳ ಗುತ್ತಿಗೆದಾರರಿಗೆ ಹೊರಗುತ್ತಿಗೆ ನೀಡುತ್ತದೆ.

“ಹಿಂದಿ ಮತ್ತು ಬಂಗಾಳಿ ಸೇರಿದಂತೆ ವಿವಿಧ ಭಾಷೆಗಳಲ್ಲಿ ದ್ವೇಷದ ಭಾಷಣವನ್ನು ಕಂಡುಹಿಡಿಯಲು ತಂತ್ರಜ್ಞಾನದ ಮೇಲೆ ನಾವು ಗಣನೀಯವಾಗಿ ಹೂಡಿಕೆ ಮಾಡಿದ್ದೇವೆ” ಎಂದು ಫೇಸ್‌ಬುಕ್ ವಕ್ತಾರರು ಹೇಳಿದ್ದಾರೆ. “ಪರಿಣಾಮವಾಗಿ ಜನರು ನೋಡುವ ದ್ವೇಷದ ಭಾಷಣದ ಪ್ರಮಾಣವನ್ನು ನಾವು ಈ ವರ್ಷ ಅರ್ಧದಷ್ಟು ಕಡಿಮೆ ಮಾಡಿದ್ದೇವೆ. ಇಂದು ಅದು ಶೇಕಡಾ 0.05 ಕ್ಕೆ ಇಳಿದಿದೆ” ಎಂದು ಕಂಪನಿ ಹೇಳಿಕೊಂಡಿದೆ.

“ಮುಸ್ಲಿಮರು ಸೇರಿದಂತೆ ಹಿಂದುಳಿದ ಗುಂಪುಗಳ ವಿರುದ್ಧ ದ್ವೇಷ ಭಾಷಣವು ಜಾಗತಿಕವಾಗಿ ಹೆಚ್ಚುತ್ತಿದೆ. ಆದ್ದರಿಂದ ನಾವು ನಿಯಮ ಜಾರಿಗೊಳಿಸುವಿಕೆಯನ್ನು ಸುಧಾರಿಸುತ್ತಿದ್ದೇವೆ. ದ್ವೇಷದ ಮಾತುಗಳು ಆನ್‌ಲೈನ್‌ನಲ್ಲಿ ಹುಟ್ಟಿಕೊಳ್ಳುವುತ್ತಿರುವುದರಿಂದ ನಮ್ಮ ನೀತಿಗಳನ್ನು ನವೀಕರಿಸಲು ಬದ್ಧರಾಗಿರುತ್ತೇವೆ” ಎಂದು ಫೇಸ್‌ಬುಕ್‌ ಹೇಳಿದೆ.

ವರದಿಯ ಪ್ರಕಾರ, ಹೊಸ ಬಳಕೆದಾರ ಪರೀಕ್ಷಾ ಖಾತೆಯನ್ನು ಫೆಬ್ರವರಿ 4, 2019ರಂದು ಸಂಶೋಧನಾ ತಂಡವು ಭಾರತದಲ್ಲಿ ಪ್ರವಾಸ ಕೈಗೊಂಡಿದ್ದ ಸಮಯದಲ್ಲಿ ರಚಿಸಲಾಗಿದೆ. ಪರೀಕ್ಷಾ ಬಳಕೆದಾರರು ಸಾಮಾಜಿಕ ಜಾಲತಾಣದಲ್ಲಿ ಜನಪ್ರಿಯವಾಗಿರುವ ಪೋಸ್ಟ್‌ಗಳನ್ನು ಒಳಗೊಂಡಂತೆ ಫೇಸ್‌ಬುಕ್ ಶಿಫಾರಸು ಮಾಡಿದ ವಿಷಯವನ್ನು ಅನ್ವೇಷಿಸಲು ಆರಂಭಿಸಿದರು.

ಫೆ .14ರಂದು ರಾಜಕೀಯವಾಗಿ ಸೂಕ್ಷ್ಮವಾಗಿರುವ ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 40 ಭಾರತೀಯ ಭದ್ರತಾ ಸಿಬ್ಬಂದಿ ಸಾವನ್ನಪ್ಪಿದರು. ಹತ್ತಾರು ಜನರು ಗಾಯಗೊಂಡರು. ಭಾರತ ಸರ್ಕಾರ ಈ ದಾಳಿಯನ್ನು ಪಾಕಿಸ್ತಾನದ ಭಯೋತ್ಪಾದಕ ಗುಂಪು ಮಾಡಿದೆ ಎಂದು ಹೇಳಿತು. ಶೀಘ್ರದಲ್ಲೇ ಪಾಕಿಸ್ತಾನದ ವಿರೋಧಿ ದ್ವೇಷದ ಮಾತಿನ ಸುರಿಮಳೆಯಾಯಿತು. ಇದರಲ್ಲಿ ಶಿರಚ್ಛೇದದ ಚಿತ್ರಗಳು ಮತ್ತು ಪಾಕಿಸ್ತಾನಿಯರ ಗುಂಪನ್ನು ಸೋಲಿಸಲು ಸಿದ್ಧತೆಗಳನ್ನು ತೋರಿಸುವ ಗ್ರಾಫಿಕ್ ಚಿತ್ರಗಳು ಒಳಗೊಂಡಿದ್ದವು.

ರಾಷ್ಟ್ರೀಯವಾದ ಸಂದೇಶಗಳು, ಪಾಕಿಸ್ತಾನದಲ್ಲಿ ಭಾರತದ ವಾಯುದಾಳಿಗಳ ಬಗ್ಗೆ ಉತ್ಪ್ರೇಕ್ಷಿತ ಹೇಳಿಕೆಗಳು, ಬಾಂಬ್ ಸ್ಫೋಟಗಳ ನಕಲಿ ಫೋಟೋಗಳು ಮತ್ತು ದಾಳಿಯಲ್ಲಿ ಹೊಸದಾಗಿ ಮದುವೆಯಾದ ಸೇನಾ ಸಿಬ್ಬಂದಿ ತನ್ನ ಕುಟುಂಬಕ್ಕೆ ಮರಳಲು ತಯಾರಿ ನಡೆಸುತ್ತಿದ್ದಾಗ ದಾಳಿಗೆ ತುತ್ತಾಗಿದ್ದನ್ನು ಬಿಂಬಿಸಲಾಗಿತ್ತು.


ಇದನ್ನೂ ಓದಿರಿ: ಯುಪಿ ಚುನಾವಣೆ: 10 ಲಕ್ಷ ರೂ.ವರೆಗೆ ಉಚಿತ ವೈದ್ಯಕೀಯ ಚಿಕಿತ್ಸೆ ಘೋಷಿಸಿದ ಪ್ರಿಯಾಂಕಾ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...