Homeಮುಖಪುಟ2019ರ ಲೋಕಸಭೆ ಚುನಾವಣೆಯಲ್ಲಿ ಸುಳ್ಳುಸುದ್ದಿಗಳು ಹೆಚ್ಚಾಗಿದ್ದವು: ಫೇಸ್‌ಬುಕ್‌

2019ರ ಲೋಕಸಭೆ ಚುನಾವಣೆಯಲ್ಲಿ ಸುಳ್ಳುಸುದ್ದಿಗಳು ಹೆಚ್ಚಾಗಿದ್ದವು: ಫೇಸ್‌ಬುಕ್‌

- Advertisement -
- Advertisement -

2019ರ ಫೆಬ್ರುವರಿಯಲ್ಲಿ ಹೇಗೆ ಭಾರತದಲ್ಲಿ ಫೇಕ್‌ನ್ಯೂಸ್‌ಗಳು ಶರವೇಗದಲ್ಲಿ ಹರಿದಾಡಿವೆ ಎಂದು ಫೇಸ್‌ಬುಕ್‌ ಹೇಳಿಕೊಂಡಿದೆ. ಕೇವಲ 21 ದಿನಗಳಲ್ಲಿ ಭಾರತದಲ್ಲಿ ಆಲ್ಗರಿದಂ ಹೇಗೆ ವೇಗವಾಗಿ ಬೆಳೆದಿತ್ತು ಎಂಬುದನ್ನು ಫೇಸ್‌ಬುಕ್‌ ಸಂಸ್ಥೆ ಪರಿಶೀಲಿಸಿದ್ದು, ಫೇಸ್‌ಬುಕ್‌ ಸಿಬ್ಬಂದಿ ದಿಗ್ಭ್ರಾಂತರಾಗಿದ್ದಾರೆ ಎನ್ನಲಾಗಿದೆ.

ಕೇವಲ ಮೂರು ವಾರಗಳಲ್ಲಿ ಹೊಸ ಬಳಕೆದಾರರು ಸುಳ್ಳು ಸುದ್ದಿಗಳನ್ನು, ಪ್ರಚೋದನಕಾರಿ ಚಿತ್ರಗಳನ್ನು ಅತಿ ಹೆಚ್ಚು ಹಂಚಿಕೊಂಡಿದ್ದಾರೆ. ಶಿರಚ್ಛೇದದ ಗ್ರಾಫಿಕ್‌ ಫೋಟೋಗಳು, ಪಾಕಿಸ್ತಾನದ ಮೇಲೆ ಭಾರತದ ನಡೆಸಿದೆ ಎನ್ನಲಾದ ವೈಮಾನಿಕ ದಾಳಿಯ, ಹಿಂಸಾಕೃತ್ಯದ ಗ್ರಾಫಿಕ್‌ ಫೋಟೋಗಳನ್ನು ಹರಿಬಿಡಲಾಯಿತು. ಪಾಕಿಸ್ತಾನದಲ್ಲಿ 300 ಭಯೋತ್ಪಾದಕರನ್ನು ಕೊಲ್ಲಲಾಗಿದೆ ಎಂಬ ನಕಲಿ ಸುದ್ದಿಯನ್ನು ಹಂಚಿದ ಒಂದು ಗುಂಪು ನಿಮ್ಮನ್ನು ನಗಿಸುತ್ತದೆ ಎಂದು ಫೇಸ್‌ಬುಕ್‌ ಸಿಬ್ಬಂದಿ ಹೇಳಿದ್ದಾರೆ.

ವಿಷಲ್‌ಬ್ಲೋವರ್‌‌ (ನಕಲಿ ಖಾತೆಗಳನ್ನು ಪತ್ತೆ ಹಚ್ಚುವವವರು) ಫ್ರಾನ್ಸ್‌ ಹೌಗನ್‌ ನೀಡಿರುವ 46 ಪುಟಗಳ ಸಂಶೋಧನಾ ಟಿಪ್ಪಣಿಯಲ್ಲಿ, “ನನ್ನ ಜೀವಿತಾವಧಿಯಲ್ಲಿ ನೋಡಿರದಿದ್ದಷ್ಟು ಸತ್ತವರ ಫೋಟೋಗಳನ್ನು ಕೇವಲ ಮೂರು ವಾರಗಳಲ್ಲಿ ನೋಡಿದೆ” ಎಂದು ಸಿಬ್ಬಂದಿಯೊಬ್ಬರು ಹೇಳಿರುವುದನ್ನು ಉಲ್ಲೇಖಿಸಲಾಗಿದೆ.

ಇದನ್ನೂ ಓದಿರಿ: ಯೋಗೇಂದ್ರ ಯಾದವ್ ಅಮಾನತು: ಚಾರಿತ್ರಿಕ ರೈತ ಹೋರಾಟದ ವಿಶಿಷ್ಟ ಪ್ರಜಾತಂತ್ರ

ಟ್ರಯಲ್ ಖಾತೆಯು ಜೈಪುರದಲ್ಲಿ ವಾಸಿಸುವ ಮತ್ತು ಹೈದರಾಬಾದ್‌ನ 21 ವರ್ಷದ ಮಹಿಳೆಯ ಪ್ರೊಫೈಲ್ ಅನ್ನು ಬಳಸಿದೆ. ಬಳಕೆದಾರರು ಫೇಸ್‌ಬುಕ್‌ ಶಿಫಾರಸು ಮಾಡಿದ ಅಥವಾ ಆ ಶಿಫಾರಸುಗಳ ಮೂಲಕ ಕಾಣಿಸಿಕೊಂಡ ಪೇಜ್‌ಗಳನ್ನು, ಗುಂಪುಗಳನ್ನು ಮಾತ್ರ ಅನುಸರಿಸಿರುವುದು ತಿಳಿದುಬಂದಿದೆ. ಸಂಶೋಧನಾ ಟಿಪ್ಪಣಿಯ ಲೇಖಕರು ಈ ಅನುಭವವನ್ನು ‘ಸಮಗ್ರತೆಯ ದುಃಸ್ವಪ್ನ’ ಎಂದು ಕರೆದಿದ್ದಾರೆ.

ಕಂಪನಿಯ ಬೆಳವಣಿಗೆಯು ಭಾರತ, ಇಂಡೋನೇಷಿಯ, ಬ್ರೆಜಿಲ್‌ನಂತಹ ದೇಶದಲ್ಲಿ ಹೆಚ್ಚಾಗಿದೆ. ಅಲ್ಲಿ ಮೂಲಭೂತ ಮೇಲ್ವಿಚಾರಣೆಗೆ ಭಾಷಾ ಕೌಶಲ್ಯ ಹೊಂದಿರುವ ಜನರನ್ನು ನೇಮಿಸಿಕೊಳ್ಳಲು ಕಂಪನಿ ಹೆಣಗಾಡುತ್ತಿದೆ. 22 ಅಧಿಕೃತ ಭಾಷೆಗಳನ್ನು ಹೊಂದಿರುವ 1.3 ಬಿಲಿಯನ್ ಜನರಿರುವ ಭಾರತದಲ್ಲಿ ಈ ಸವಾಲು ವಿಶೇಷವಾಗಿ ತೀವ್ರವಾಗಿದೆ. ಫೇಸ್‌ಬುಕ್ ತನ್ನ ಪ್ಲಾಟ್‌ಫಾರ್ಮ್‌ನಲ್ಲಿನ ಕಂಟೆಂಟ್‌ನ ಉಸ್ತುವಾರಿಯನ್ನು ಆಕ್ಸೆಂಚರ್‌ನಂತಹ ಕಂಪನಿಗಳ ಗುತ್ತಿಗೆದಾರರಿಗೆ ಹೊರಗುತ್ತಿಗೆ ನೀಡುತ್ತದೆ.

“ಹಿಂದಿ ಮತ್ತು ಬಂಗಾಳಿ ಸೇರಿದಂತೆ ವಿವಿಧ ಭಾಷೆಗಳಲ್ಲಿ ದ್ವೇಷದ ಭಾಷಣವನ್ನು ಕಂಡುಹಿಡಿಯಲು ತಂತ್ರಜ್ಞಾನದ ಮೇಲೆ ನಾವು ಗಣನೀಯವಾಗಿ ಹೂಡಿಕೆ ಮಾಡಿದ್ದೇವೆ” ಎಂದು ಫೇಸ್‌ಬುಕ್ ವಕ್ತಾರರು ಹೇಳಿದ್ದಾರೆ. “ಪರಿಣಾಮವಾಗಿ ಜನರು ನೋಡುವ ದ್ವೇಷದ ಭಾಷಣದ ಪ್ರಮಾಣವನ್ನು ನಾವು ಈ ವರ್ಷ ಅರ್ಧದಷ್ಟು ಕಡಿಮೆ ಮಾಡಿದ್ದೇವೆ. ಇಂದು ಅದು ಶೇಕಡಾ 0.05 ಕ್ಕೆ ಇಳಿದಿದೆ” ಎಂದು ಕಂಪನಿ ಹೇಳಿಕೊಂಡಿದೆ.

“ಮುಸ್ಲಿಮರು ಸೇರಿದಂತೆ ಹಿಂದುಳಿದ ಗುಂಪುಗಳ ವಿರುದ್ಧ ದ್ವೇಷ ಭಾಷಣವು ಜಾಗತಿಕವಾಗಿ ಹೆಚ್ಚುತ್ತಿದೆ. ಆದ್ದರಿಂದ ನಾವು ನಿಯಮ ಜಾರಿಗೊಳಿಸುವಿಕೆಯನ್ನು ಸುಧಾರಿಸುತ್ತಿದ್ದೇವೆ. ದ್ವೇಷದ ಮಾತುಗಳು ಆನ್‌ಲೈನ್‌ನಲ್ಲಿ ಹುಟ್ಟಿಕೊಳ್ಳುವುತ್ತಿರುವುದರಿಂದ ನಮ್ಮ ನೀತಿಗಳನ್ನು ನವೀಕರಿಸಲು ಬದ್ಧರಾಗಿರುತ್ತೇವೆ” ಎಂದು ಫೇಸ್‌ಬುಕ್‌ ಹೇಳಿದೆ.

ವರದಿಯ ಪ್ರಕಾರ, ಹೊಸ ಬಳಕೆದಾರ ಪರೀಕ್ಷಾ ಖಾತೆಯನ್ನು ಫೆಬ್ರವರಿ 4, 2019ರಂದು ಸಂಶೋಧನಾ ತಂಡವು ಭಾರತದಲ್ಲಿ ಪ್ರವಾಸ ಕೈಗೊಂಡಿದ್ದ ಸಮಯದಲ್ಲಿ ರಚಿಸಲಾಗಿದೆ. ಪರೀಕ್ಷಾ ಬಳಕೆದಾರರು ಸಾಮಾಜಿಕ ಜಾಲತಾಣದಲ್ಲಿ ಜನಪ್ರಿಯವಾಗಿರುವ ಪೋಸ್ಟ್‌ಗಳನ್ನು ಒಳಗೊಂಡಂತೆ ಫೇಸ್‌ಬುಕ್ ಶಿಫಾರಸು ಮಾಡಿದ ವಿಷಯವನ್ನು ಅನ್ವೇಷಿಸಲು ಆರಂಭಿಸಿದರು.

ಫೆ .14ರಂದು ರಾಜಕೀಯವಾಗಿ ಸೂಕ್ಷ್ಮವಾಗಿರುವ ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 40 ಭಾರತೀಯ ಭದ್ರತಾ ಸಿಬ್ಬಂದಿ ಸಾವನ್ನಪ್ಪಿದರು. ಹತ್ತಾರು ಜನರು ಗಾಯಗೊಂಡರು. ಭಾರತ ಸರ್ಕಾರ ಈ ದಾಳಿಯನ್ನು ಪಾಕಿಸ್ತಾನದ ಭಯೋತ್ಪಾದಕ ಗುಂಪು ಮಾಡಿದೆ ಎಂದು ಹೇಳಿತು. ಶೀಘ್ರದಲ್ಲೇ ಪಾಕಿಸ್ತಾನದ ವಿರೋಧಿ ದ್ವೇಷದ ಮಾತಿನ ಸುರಿಮಳೆಯಾಯಿತು. ಇದರಲ್ಲಿ ಶಿರಚ್ಛೇದದ ಚಿತ್ರಗಳು ಮತ್ತು ಪಾಕಿಸ್ತಾನಿಯರ ಗುಂಪನ್ನು ಸೋಲಿಸಲು ಸಿದ್ಧತೆಗಳನ್ನು ತೋರಿಸುವ ಗ್ರಾಫಿಕ್ ಚಿತ್ರಗಳು ಒಳಗೊಂಡಿದ್ದವು.

ರಾಷ್ಟ್ರೀಯವಾದ ಸಂದೇಶಗಳು, ಪಾಕಿಸ್ತಾನದಲ್ಲಿ ಭಾರತದ ವಾಯುದಾಳಿಗಳ ಬಗ್ಗೆ ಉತ್ಪ್ರೇಕ್ಷಿತ ಹೇಳಿಕೆಗಳು, ಬಾಂಬ್ ಸ್ಫೋಟಗಳ ನಕಲಿ ಫೋಟೋಗಳು ಮತ್ತು ದಾಳಿಯಲ್ಲಿ ಹೊಸದಾಗಿ ಮದುವೆಯಾದ ಸೇನಾ ಸಿಬ್ಬಂದಿ ತನ್ನ ಕುಟುಂಬಕ್ಕೆ ಮರಳಲು ತಯಾರಿ ನಡೆಸುತ್ತಿದ್ದಾಗ ದಾಳಿಗೆ ತುತ್ತಾಗಿದ್ದನ್ನು ಬಿಂಬಿಸಲಾಗಿತ್ತು.


ಇದನ್ನೂ ಓದಿರಿ: ಯುಪಿ ಚುನಾವಣೆ: 10 ಲಕ್ಷ ರೂ.ವರೆಗೆ ಉಚಿತ ವೈದ್ಯಕೀಯ ಚಿಕಿತ್ಸೆ ಘೋಷಿಸಿದ ಪ್ರಿಯಾಂಕಾ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...