Homeಮುಖಪುಟ2019ರ ಲೋಕಸಭೆ ಚುನಾವಣೆಯಲ್ಲಿ ಸುಳ್ಳುಸುದ್ದಿಗಳು ಹೆಚ್ಚಾಗಿದ್ದವು: ಫೇಸ್‌ಬುಕ್‌

2019ರ ಲೋಕಸಭೆ ಚುನಾವಣೆಯಲ್ಲಿ ಸುಳ್ಳುಸುದ್ದಿಗಳು ಹೆಚ್ಚಾಗಿದ್ದವು: ಫೇಸ್‌ಬುಕ್‌

- Advertisement -
- Advertisement -

2019ರ ಫೆಬ್ರುವರಿಯಲ್ಲಿ ಹೇಗೆ ಭಾರತದಲ್ಲಿ ಫೇಕ್‌ನ್ಯೂಸ್‌ಗಳು ಶರವೇಗದಲ್ಲಿ ಹರಿದಾಡಿವೆ ಎಂದು ಫೇಸ್‌ಬುಕ್‌ ಹೇಳಿಕೊಂಡಿದೆ. ಕೇವಲ 21 ದಿನಗಳಲ್ಲಿ ಭಾರತದಲ್ಲಿ ಆಲ್ಗರಿದಂ ಹೇಗೆ ವೇಗವಾಗಿ ಬೆಳೆದಿತ್ತು ಎಂಬುದನ್ನು ಫೇಸ್‌ಬುಕ್‌ ಸಂಸ್ಥೆ ಪರಿಶೀಲಿಸಿದ್ದು, ಫೇಸ್‌ಬುಕ್‌ ಸಿಬ್ಬಂದಿ ದಿಗ್ಭ್ರಾಂತರಾಗಿದ್ದಾರೆ ಎನ್ನಲಾಗಿದೆ.

ಕೇವಲ ಮೂರು ವಾರಗಳಲ್ಲಿ ಹೊಸ ಬಳಕೆದಾರರು ಸುಳ್ಳು ಸುದ್ದಿಗಳನ್ನು, ಪ್ರಚೋದನಕಾರಿ ಚಿತ್ರಗಳನ್ನು ಅತಿ ಹೆಚ್ಚು ಹಂಚಿಕೊಂಡಿದ್ದಾರೆ. ಶಿರಚ್ಛೇದದ ಗ್ರಾಫಿಕ್‌ ಫೋಟೋಗಳು, ಪಾಕಿಸ್ತಾನದ ಮೇಲೆ ಭಾರತದ ನಡೆಸಿದೆ ಎನ್ನಲಾದ ವೈಮಾನಿಕ ದಾಳಿಯ, ಹಿಂಸಾಕೃತ್ಯದ ಗ್ರಾಫಿಕ್‌ ಫೋಟೋಗಳನ್ನು ಹರಿಬಿಡಲಾಯಿತು. ಪಾಕಿಸ್ತಾನದಲ್ಲಿ 300 ಭಯೋತ್ಪಾದಕರನ್ನು ಕೊಲ್ಲಲಾಗಿದೆ ಎಂಬ ನಕಲಿ ಸುದ್ದಿಯನ್ನು ಹಂಚಿದ ಒಂದು ಗುಂಪು ನಿಮ್ಮನ್ನು ನಗಿಸುತ್ತದೆ ಎಂದು ಫೇಸ್‌ಬುಕ್‌ ಸಿಬ್ಬಂದಿ ಹೇಳಿದ್ದಾರೆ.

ವಿಷಲ್‌ಬ್ಲೋವರ್‌‌ (ನಕಲಿ ಖಾತೆಗಳನ್ನು ಪತ್ತೆ ಹಚ್ಚುವವವರು) ಫ್ರಾನ್ಸ್‌ ಹೌಗನ್‌ ನೀಡಿರುವ 46 ಪುಟಗಳ ಸಂಶೋಧನಾ ಟಿಪ್ಪಣಿಯಲ್ಲಿ, “ನನ್ನ ಜೀವಿತಾವಧಿಯಲ್ಲಿ ನೋಡಿರದಿದ್ದಷ್ಟು ಸತ್ತವರ ಫೋಟೋಗಳನ್ನು ಕೇವಲ ಮೂರು ವಾರಗಳಲ್ಲಿ ನೋಡಿದೆ” ಎಂದು ಸಿಬ್ಬಂದಿಯೊಬ್ಬರು ಹೇಳಿರುವುದನ್ನು ಉಲ್ಲೇಖಿಸಲಾಗಿದೆ.

ಇದನ್ನೂ ಓದಿರಿ: ಯೋಗೇಂದ್ರ ಯಾದವ್ ಅಮಾನತು: ಚಾರಿತ್ರಿಕ ರೈತ ಹೋರಾಟದ ವಿಶಿಷ್ಟ ಪ್ರಜಾತಂತ್ರ

ಟ್ರಯಲ್ ಖಾತೆಯು ಜೈಪುರದಲ್ಲಿ ವಾಸಿಸುವ ಮತ್ತು ಹೈದರಾಬಾದ್‌ನ 21 ವರ್ಷದ ಮಹಿಳೆಯ ಪ್ರೊಫೈಲ್ ಅನ್ನು ಬಳಸಿದೆ. ಬಳಕೆದಾರರು ಫೇಸ್‌ಬುಕ್‌ ಶಿಫಾರಸು ಮಾಡಿದ ಅಥವಾ ಆ ಶಿಫಾರಸುಗಳ ಮೂಲಕ ಕಾಣಿಸಿಕೊಂಡ ಪೇಜ್‌ಗಳನ್ನು, ಗುಂಪುಗಳನ್ನು ಮಾತ್ರ ಅನುಸರಿಸಿರುವುದು ತಿಳಿದುಬಂದಿದೆ. ಸಂಶೋಧನಾ ಟಿಪ್ಪಣಿಯ ಲೇಖಕರು ಈ ಅನುಭವವನ್ನು ‘ಸಮಗ್ರತೆಯ ದುಃಸ್ವಪ್ನ’ ಎಂದು ಕರೆದಿದ್ದಾರೆ.

ಕಂಪನಿಯ ಬೆಳವಣಿಗೆಯು ಭಾರತ, ಇಂಡೋನೇಷಿಯ, ಬ್ರೆಜಿಲ್‌ನಂತಹ ದೇಶದಲ್ಲಿ ಹೆಚ್ಚಾಗಿದೆ. ಅಲ್ಲಿ ಮೂಲಭೂತ ಮೇಲ್ವಿಚಾರಣೆಗೆ ಭಾಷಾ ಕೌಶಲ್ಯ ಹೊಂದಿರುವ ಜನರನ್ನು ನೇಮಿಸಿಕೊಳ್ಳಲು ಕಂಪನಿ ಹೆಣಗಾಡುತ್ತಿದೆ. 22 ಅಧಿಕೃತ ಭಾಷೆಗಳನ್ನು ಹೊಂದಿರುವ 1.3 ಬಿಲಿಯನ್ ಜನರಿರುವ ಭಾರತದಲ್ಲಿ ಈ ಸವಾಲು ವಿಶೇಷವಾಗಿ ತೀವ್ರವಾಗಿದೆ. ಫೇಸ್‌ಬುಕ್ ತನ್ನ ಪ್ಲಾಟ್‌ಫಾರ್ಮ್‌ನಲ್ಲಿನ ಕಂಟೆಂಟ್‌ನ ಉಸ್ತುವಾರಿಯನ್ನು ಆಕ್ಸೆಂಚರ್‌ನಂತಹ ಕಂಪನಿಗಳ ಗುತ್ತಿಗೆದಾರರಿಗೆ ಹೊರಗುತ್ತಿಗೆ ನೀಡುತ್ತದೆ.

“ಹಿಂದಿ ಮತ್ತು ಬಂಗಾಳಿ ಸೇರಿದಂತೆ ವಿವಿಧ ಭಾಷೆಗಳಲ್ಲಿ ದ್ವೇಷದ ಭಾಷಣವನ್ನು ಕಂಡುಹಿಡಿಯಲು ತಂತ್ರಜ್ಞಾನದ ಮೇಲೆ ನಾವು ಗಣನೀಯವಾಗಿ ಹೂಡಿಕೆ ಮಾಡಿದ್ದೇವೆ” ಎಂದು ಫೇಸ್‌ಬುಕ್ ವಕ್ತಾರರು ಹೇಳಿದ್ದಾರೆ. “ಪರಿಣಾಮವಾಗಿ ಜನರು ನೋಡುವ ದ್ವೇಷದ ಭಾಷಣದ ಪ್ರಮಾಣವನ್ನು ನಾವು ಈ ವರ್ಷ ಅರ್ಧದಷ್ಟು ಕಡಿಮೆ ಮಾಡಿದ್ದೇವೆ. ಇಂದು ಅದು ಶೇಕಡಾ 0.05 ಕ್ಕೆ ಇಳಿದಿದೆ” ಎಂದು ಕಂಪನಿ ಹೇಳಿಕೊಂಡಿದೆ.

“ಮುಸ್ಲಿಮರು ಸೇರಿದಂತೆ ಹಿಂದುಳಿದ ಗುಂಪುಗಳ ವಿರುದ್ಧ ದ್ವೇಷ ಭಾಷಣವು ಜಾಗತಿಕವಾಗಿ ಹೆಚ್ಚುತ್ತಿದೆ. ಆದ್ದರಿಂದ ನಾವು ನಿಯಮ ಜಾರಿಗೊಳಿಸುವಿಕೆಯನ್ನು ಸುಧಾರಿಸುತ್ತಿದ್ದೇವೆ. ದ್ವೇಷದ ಮಾತುಗಳು ಆನ್‌ಲೈನ್‌ನಲ್ಲಿ ಹುಟ್ಟಿಕೊಳ್ಳುವುತ್ತಿರುವುದರಿಂದ ನಮ್ಮ ನೀತಿಗಳನ್ನು ನವೀಕರಿಸಲು ಬದ್ಧರಾಗಿರುತ್ತೇವೆ” ಎಂದು ಫೇಸ್‌ಬುಕ್‌ ಹೇಳಿದೆ.

ವರದಿಯ ಪ್ರಕಾರ, ಹೊಸ ಬಳಕೆದಾರ ಪರೀಕ್ಷಾ ಖಾತೆಯನ್ನು ಫೆಬ್ರವರಿ 4, 2019ರಂದು ಸಂಶೋಧನಾ ತಂಡವು ಭಾರತದಲ್ಲಿ ಪ್ರವಾಸ ಕೈಗೊಂಡಿದ್ದ ಸಮಯದಲ್ಲಿ ರಚಿಸಲಾಗಿದೆ. ಪರೀಕ್ಷಾ ಬಳಕೆದಾರರು ಸಾಮಾಜಿಕ ಜಾಲತಾಣದಲ್ಲಿ ಜನಪ್ರಿಯವಾಗಿರುವ ಪೋಸ್ಟ್‌ಗಳನ್ನು ಒಳಗೊಂಡಂತೆ ಫೇಸ್‌ಬುಕ್ ಶಿಫಾರಸು ಮಾಡಿದ ವಿಷಯವನ್ನು ಅನ್ವೇಷಿಸಲು ಆರಂಭಿಸಿದರು.

ಫೆ .14ರಂದು ರಾಜಕೀಯವಾಗಿ ಸೂಕ್ಷ್ಮವಾಗಿರುವ ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 40 ಭಾರತೀಯ ಭದ್ರತಾ ಸಿಬ್ಬಂದಿ ಸಾವನ್ನಪ್ಪಿದರು. ಹತ್ತಾರು ಜನರು ಗಾಯಗೊಂಡರು. ಭಾರತ ಸರ್ಕಾರ ಈ ದಾಳಿಯನ್ನು ಪಾಕಿಸ್ತಾನದ ಭಯೋತ್ಪಾದಕ ಗುಂಪು ಮಾಡಿದೆ ಎಂದು ಹೇಳಿತು. ಶೀಘ್ರದಲ್ಲೇ ಪಾಕಿಸ್ತಾನದ ವಿರೋಧಿ ದ್ವೇಷದ ಮಾತಿನ ಸುರಿಮಳೆಯಾಯಿತು. ಇದರಲ್ಲಿ ಶಿರಚ್ಛೇದದ ಚಿತ್ರಗಳು ಮತ್ತು ಪಾಕಿಸ್ತಾನಿಯರ ಗುಂಪನ್ನು ಸೋಲಿಸಲು ಸಿದ್ಧತೆಗಳನ್ನು ತೋರಿಸುವ ಗ್ರಾಫಿಕ್ ಚಿತ್ರಗಳು ಒಳಗೊಂಡಿದ್ದವು.

ರಾಷ್ಟ್ರೀಯವಾದ ಸಂದೇಶಗಳು, ಪಾಕಿಸ್ತಾನದಲ್ಲಿ ಭಾರತದ ವಾಯುದಾಳಿಗಳ ಬಗ್ಗೆ ಉತ್ಪ್ರೇಕ್ಷಿತ ಹೇಳಿಕೆಗಳು, ಬಾಂಬ್ ಸ್ಫೋಟಗಳ ನಕಲಿ ಫೋಟೋಗಳು ಮತ್ತು ದಾಳಿಯಲ್ಲಿ ಹೊಸದಾಗಿ ಮದುವೆಯಾದ ಸೇನಾ ಸಿಬ್ಬಂದಿ ತನ್ನ ಕುಟುಂಬಕ್ಕೆ ಮರಳಲು ತಯಾರಿ ನಡೆಸುತ್ತಿದ್ದಾಗ ದಾಳಿಗೆ ತುತ್ತಾಗಿದ್ದನ್ನು ಬಿಂಬಿಸಲಾಗಿತ್ತು.


ಇದನ್ನೂ ಓದಿರಿ: ಯುಪಿ ಚುನಾವಣೆ: 10 ಲಕ್ಷ ರೂ.ವರೆಗೆ ಉಚಿತ ವೈದ್ಯಕೀಯ ಚಿಕಿತ್ಸೆ ಘೋಷಿಸಿದ ಪ್ರಿಯಾಂಕಾ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...