Homeಮುಖಪುಟ2019ರ ಲೋಕಸಭೆ ಚುನಾವಣೆಯಲ್ಲಿ ಸುಳ್ಳುಸುದ್ದಿಗಳು ಹೆಚ್ಚಾಗಿದ್ದವು: ಫೇಸ್‌ಬುಕ್‌

2019ರ ಲೋಕಸಭೆ ಚುನಾವಣೆಯಲ್ಲಿ ಸುಳ್ಳುಸುದ್ದಿಗಳು ಹೆಚ್ಚಾಗಿದ್ದವು: ಫೇಸ್‌ಬುಕ್‌

- Advertisement -
- Advertisement -

2019ರ ಫೆಬ್ರುವರಿಯಲ್ಲಿ ಹೇಗೆ ಭಾರತದಲ್ಲಿ ಫೇಕ್‌ನ್ಯೂಸ್‌ಗಳು ಶರವೇಗದಲ್ಲಿ ಹರಿದಾಡಿವೆ ಎಂದು ಫೇಸ್‌ಬುಕ್‌ ಹೇಳಿಕೊಂಡಿದೆ. ಕೇವಲ 21 ದಿನಗಳಲ್ಲಿ ಭಾರತದಲ್ಲಿ ಆಲ್ಗರಿದಂ ಹೇಗೆ ವೇಗವಾಗಿ ಬೆಳೆದಿತ್ತು ಎಂಬುದನ್ನು ಫೇಸ್‌ಬುಕ್‌ ಸಂಸ್ಥೆ ಪರಿಶೀಲಿಸಿದ್ದು, ಫೇಸ್‌ಬುಕ್‌ ಸಿಬ್ಬಂದಿ ದಿಗ್ಭ್ರಾಂತರಾಗಿದ್ದಾರೆ ಎನ್ನಲಾಗಿದೆ.

ಕೇವಲ ಮೂರು ವಾರಗಳಲ್ಲಿ ಹೊಸ ಬಳಕೆದಾರರು ಸುಳ್ಳು ಸುದ್ದಿಗಳನ್ನು, ಪ್ರಚೋದನಕಾರಿ ಚಿತ್ರಗಳನ್ನು ಅತಿ ಹೆಚ್ಚು ಹಂಚಿಕೊಂಡಿದ್ದಾರೆ. ಶಿರಚ್ಛೇದದ ಗ್ರಾಫಿಕ್‌ ಫೋಟೋಗಳು, ಪಾಕಿಸ್ತಾನದ ಮೇಲೆ ಭಾರತದ ನಡೆಸಿದೆ ಎನ್ನಲಾದ ವೈಮಾನಿಕ ದಾಳಿಯ, ಹಿಂಸಾಕೃತ್ಯದ ಗ್ರಾಫಿಕ್‌ ಫೋಟೋಗಳನ್ನು ಹರಿಬಿಡಲಾಯಿತು. ಪಾಕಿಸ್ತಾನದಲ್ಲಿ 300 ಭಯೋತ್ಪಾದಕರನ್ನು ಕೊಲ್ಲಲಾಗಿದೆ ಎಂಬ ನಕಲಿ ಸುದ್ದಿಯನ್ನು ಹಂಚಿದ ಒಂದು ಗುಂಪು ನಿಮ್ಮನ್ನು ನಗಿಸುತ್ತದೆ ಎಂದು ಫೇಸ್‌ಬುಕ್‌ ಸಿಬ್ಬಂದಿ ಹೇಳಿದ್ದಾರೆ.

ವಿಷಲ್‌ಬ್ಲೋವರ್‌‌ (ನಕಲಿ ಖಾತೆಗಳನ್ನು ಪತ್ತೆ ಹಚ್ಚುವವವರು) ಫ್ರಾನ್ಸ್‌ ಹೌಗನ್‌ ನೀಡಿರುವ 46 ಪುಟಗಳ ಸಂಶೋಧನಾ ಟಿಪ್ಪಣಿಯಲ್ಲಿ, “ನನ್ನ ಜೀವಿತಾವಧಿಯಲ್ಲಿ ನೋಡಿರದಿದ್ದಷ್ಟು ಸತ್ತವರ ಫೋಟೋಗಳನ್ನು ಕೇವಲ ಮೂರು ವಾರಗಳಲ್ಲಿ ನೋಡಿದೆ” ಎಂದು ಸಿಬ್ಬಂದಿಯೊಬ್ಬರು ಹೇಳಿರುವುದನ್ನು ಉಲ್ಲೇಖಿಸಲಾಗಿದೆ.

ಇದನ್ನೂ ಓದಿರಿ: ಯೋಗೇಂದ್ರ ಯಾದವ್ ಅಮಾನತು: ಚಾರಿತ್ರಿಕ ರೈತ ಹೋರಾಟದ ವಿಶಿಷ್ಟ ಪ್ರಜಾತಂತ್ರ

ಟ್ರಯಲ್ ಖಾತೆಯು ಜೈಪುರದಲ್ಲಿ ವಾಸಿಸುವ ಮತ್ತು ಹೈದರಾಬಾದ್‌ನ 21 ವರ್ಷದ ಮಹಿಳೆಯ ಪ್ರೊಫೈಲ್ ಅನ್ನು ಬಳಸಿದೆ. ಬಳಕೆದಾರರು ಫೇಸ್‌ಬುಕ್‌ ಶಿಫಾರಸು ಮಾಡಿದ ಅಥವಾ ಆ ಶಿಫಾರಸುಗಳ ಮೂಲಕ ಕಾಣಿಸಿಕೊಂಡ ಪೇಜ್‌ಗಳನ್ನು, ಗುಂಪುಗಳನ್ನು ಮಾತ್ರ ಅನುಸರಿಸಿರುವುದು ತಿಳಿದುಬಂದಿದೆ. ಸಂಶೋಧನಾ ಟಿಪ್ಪಣಿಯ ಲೇಖಕರು ಈ ಅನುಭವವನ್ನು ‘ಸಮಗ್ರತೆಯ ದುಃಸ್ವಪ್ನ’ ಎಂದು ಕರೆದಿದ್ದಾರೆ.

ಕಂಪನಿಯ ಬೆಳವಣಿಗೆಯು ಭಾರತ, ಇಂಡೋನೇಷಿಯ, ಬ್ರೆಜಿಲ್‌ನಂತಹ ದೇಶದಲ್ಲಿ ಹೆಚ್ಚಾಗಿದೆ. ಅಲ್ಲಿ ಮೂಲಭೂತ ಮೇಲ್ವಿಚಾರಣೆಗೆ ಭಾಷಾ ಕೌಶಲ್ಯ ಹೊಂದಿರುವ ಜನರನ್ನು ನೇಮಿಸಿಕೊಳ್ಳಲು ಕಂಪನಿ ಹೆಣಗಾಡುತ್ತಿದೆ. 22 ಅಧಿಕೃತ ಭಾಷೆಗಳನ್ನು ಹೊಂದಿರುವ 1.3 ಬಿಲಿಯನ್ ಜನರಿರುವ ಭಾರತದಲ್ಲಿ ಈ ಸವಾಲು ವಿಶೇಷವಾಗಿ ತೀವ್ರವಾಗಿದೆ. ಫೇಸ್‌ಬುಕ್ ತನ್ನ ಪ್ಲಾಟ್‌ಫಾರ್ಮ್‌ನಲ್ಲಿನ ಕಂಟೆಂಟ್‌ನ ಉಸ್ತುವಾರಿಯನ್ನು ಆಕ್ಸೆಂಚರ್‌ನಂತಹ ಕಂಪನಿಗಳ ಗುತ್ತಿಗೆದಾರರಿಗೆ ಹೊರಗುತ್ತಿಗೆ ನೀಡುತ್ತದೆ.

“ಹಿಂದಿ ಮತ್ತು ಬಂಗಾಳಿ ಸೇರಿದಂತೆ ವಿವಿಧ ಭಾಷೆಗಳಲ್ಲಿ ದ್ವೇಷದ ಭಾಷಣವನ್ನು ಕಂಡುಹಿಡಿಯಲು ತಂತ್ರಜ್ಞಾನದ ಮೇಲೆ ನಾವು ಗಣನೀಯವಾಗಿ ಹೂಡಿಕೆ ಮಾಡಿದ್ದೇವೆ” ಎಂದು ಫೇಸ್‌ಬುಕ್ ವಕ್ತಾರರು ಹೇಳಿದ್ದಾರೆ. “ಪರಿಣಾಮವಾಗಿ ಜನರು ನೋಡುವ ದ್ವೇಷದ ಭಾಷಣದ ಪ್ರಮಾಣವನ್ನು ನಾವು ಈ ವರ್ಷ ಅರ್ಧದಷ್ಟು ಕಡಿಮೆ ಮಾಡಿದ್ದೇವೆ. ಇಂದು ಅದು ಶೇಕಡಾ 0.05 ಕ್ಕೆ ಇಳಿದಿದೆ” ಎಂದು ಕಂಪನಿ ಹೇಳಿಕೊಂಡಿದೆ.

“ಮುಸ್ಲಿಮರು ಸೇರಿದಂತೆ ಹಿಂದುಳಿದ ಗುಂಪುಗಳ ವಿರುದ್ಧ ದ್ವೇಷ ಭಾಷಣವು ಜಾಗತಿಕವಾಗಿ ಹೆಚ್ಚುತ್ತಿದೆ. ಆದ್ದರಿಂದ ನಾವು ನಿಯಮ ಜಾರಿಗೊಳಿಸುವಿಕೆಯನ್ನು ಸುಧಾರಿಸುತ್ತಿದ್ದೇವೆ. ದ್ವೇಷದ ಮಾತುಗಳು ಆನ್‌ಲೈನ್‌ನಲ್ಲಿ ಹುಟ್ಟಿಕೊಳ್ಳುವುತ್ತಿರುವುದರಿಂದ ನಮ್ಮ ನೀತಿಗಳನ್ನು ನವೀಕರಿಸಲು ಬದ್ಧರಾಗಿರುತ್ತೇವೆ” ಎಂದು ಫೇಸ್‌ಬುಕ್‌ ಹೇಳಿದೆ.

ವರದಿಯ ಪ್ರಕಾರ, ಹೊಸ ಬಳಕೆದಾರ ಪರೀಕ್ಷಾ ಖಾತೆಯನ್ನು ಫೆಬ್ರವರಿ 4, 2019ರಂದು ಸಂಶೋಧನಾ ತಂಡವು ಭಾರತದಲ್ಲಿ ಪ್ರವಾಸ ಕೈಗೊಂಡಿದ್ದ ಸಮಯದಲ್ಲಿ ರಚಿಸಲಾಗಿದೆ. ಪರೀಕ್ಷಾ ಬಳಕೆದಾರರು ಸಾಮಾಜಿಕ ಜಾಲತಾಣದಲ್ಲಿ ಜನಪ್ರಿಯವಾಗಿರುವ ಪೋಸ್ಟ್‌ಗಳನ್ನು ಒಳಗೊಂಡಂತೆ ಫೇಸ್‌ಬುಕ್ ಶಿಫಾರಸು ಮಾಡಿದ ವಿಷಯವನ್ನು ಅನ್ವೇಷಿಸಲು ಆರಂಭಿಸಿದರು.

ಫೆ .14ರಂದು ರಾಜಕೀಯವಾಗಿ ಸೂಕ್ಷ್ಮವಾಗಿರುವ ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 40 ಭಾರತೀಯ ಭದ್ರತಾ ಸಿಬ್ಬಂದಿ ಸಾವನ್ನಪ್ಪಿದರು. ಹತ್ತಾರು ಜನರು ಗಾಯಗೊಂಡರು. ಭಾರತ ಸರ್ಕಾರ ಈ ದಾಳಿಯನ್ನು ಪಾಕಿಸ್ತಾನದ ಭಯೋತ್ಪಾದಕ ಗುಂಪು ಮಾಡಿದೆ ಎಂದು ಹೇಳಿತು. ಶೀಘ್ರದಲ್ಲೇ ಪಾಕಿಸ್ತಾನದ ವಿರೋಧಿ ದ್ವೇಷದ ಮಾತಿನ ಸುರಿಮಳೆಯಾಯಿತು. ಇದರಲ್ಲಿ ಶಿರಚ್ಛೇದದ ಚಿತ್ರಗಳು ಮತ್ತು ಪಾಕಿಸ್ತಾನಿಯರ ಗುಂಪನ್ನು ಸೋಲಿಸಲು ಸಿದ್ಧತೆಗಳನ್ನು ತೋರಿಸುವ ಗ್ರಾಫಿಕ್ ಚಿತ್ರಗಳು ಒಳಗೊಂಡಿದ್ದವು.

ರಾಷ್ಟ್ರೀಯವಾದ ಸಂದೇಶಗಳು, ಪಾಕಿಸ್ತಾನದಲ್ಲಿ ಭಾರತದ ವಾಯುದಾಳಿಗಳ ಬಗ್ಗೆ ಉತ್ಪ್ರೇಕ್ಷಿತ ಹೇಳಿಕೆಗಳು, ಬಾಂಬ್ ಸ್ಫೋಟಗಳ ನಕಲಿ ಫೋಟೋಗಳು ಮತ್ತು ದಾಳಿಯಲ್ಲಿ ಹೊಸದಾಗಿ ಮದುವೆಯಾದ ಸೇನಾ ಸಿಬ್ಬಂದಿ ತನ್ನ ಕುಟುಂಬಕ್ಕೆ ಮರಳಲು ತಯಾರಿ ನಡೆಸುತ್ತಿದ್ದಾಗ ದಾಳಿಗೆ ತುತ್ತಾಗಿದ್ದನ್ನು ಬಿಂಬಿಸಲಾಗಿತ್ತು.


ಇದನ್ನೂ ಓದಿರಿ: ಯುಪಿ ಚುನಾವಣೆ: 10 ಲಕ್ಷ ರೂ.ವರೆಗೆ ಉಚಿತ ವೈದ್ಯಕೀಯ ಚಿಕಿತ್ಸೆ ಘೋಷಿಸಿದ ಪ್ರಿಯಾಂಕಾ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...