Homeಮುಖಪುಟಯುಪಿ ಪೋಲಿಸರಿಂದ ಪತ್ರಕರ್ತ ಪ್ರಶಾಂತ್ ಕನೋಜಿಯಾ ಬಂಧನ

ಯುಪಿ ಪೋಲಿಸರಿಂದ ಪತ್ರಕರ್ತ ಪ್ರಶಾಂತ್ ಕನೋಜಿಯಾ ಬಂಧನ

ಸೋಷಿಯಲ್ ಮೀಡಿಯಾ ಪೋಸ್ಟ್‌ಗೆ ಸಂಬಂಧಿಸಿದಂತೆ ಯುಪಿ ಪೊಲೀಸರು ಕನೋಜಿಯಾ ವಿರುದ್ಧ ಎಫ್‌ಐಆರ್ ದಾಖಲಿಸುವುದು ಇದು ಮೂರನೇ ಬಾರಿ.

- Advertisement -
- Advertisement -

ಅಯೋಧ್ಯೆಯಲ್ಲಿ ರಾಮ ಮಂದಿರಕ್ಕೆ ಸಂಬಂಧಿಸಿದ ನಕಲಿ ಟ್ವೀಟ್ ಅನ್ನು ಪೋಸ್ಟ್ ಮಾಡಿದ್ದಕ್ಕಾಗಿ ಪತ್ರಕರ್ತ ಪ್ರಶಾಂತ್ ಕನೋಜಿಯಾ ಅವರನ್ನು ಆಗಸ್ಟ್ 18ರ ಮಂಗಳವಾರ ಅವರ ದೆಹಲಿ ಮನೆಯಿಂದ ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ.

ಸೋಷಿಯಲ್ ಮೀಡಿಯಾ ಪೋಸ್ಟ್‌ಗೆ ಸಂಬಂಧಿಸಿದಂತೆ ಯುಪಿ ಪೊಲೀಸರು ಕನೋಜಿಯಾ ವಿರುದ್ಧ ಎಫ್‌ಐಆರ್ ದಾಖಲಿಸುವುದು ಇದು ಮೂರನೇ ಬಾರಿಯಾಗಿದೆ. ಮಫ್ತಿನಲ್ಲಿದ್ದ ಪೊಲೀಸರು ಬಂಧಿಸಿ ವಸಂತ್ ವಿಹಾರ್ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ.

‘ನ್ಯಾಯಾಲಯದಲ್ಲಿ ಹಾಜರುಪಡಿಸಿದ ನಂತರ ಲಕ್ನೋಗೆ ಕರೆದೊಯ್ಯಲಾಗುವುದು’ ಎಂದು ಪೊಲೀಸರು ತಿಳಿಸಿದ್ದಾರೆ.

ಕನೋಜಿಯಾ “ದ್ವೇಷವನ್ನು ಹರಡಲು ಹಿಂದೂ ಸೇನೆಯ ಮುಖಂಡ ಸುಶೀಲ್ ತಿವಾರಿ ಮಾಡಿದ ಸಾಮಾಜಿಕ ಮಾಧ್ಯಮ ಪೋಸ್ಟ್‌ನ  ಫೋಟೋವನ್ನು ಎಡಿಟ್ ಮಾಡಿ ಟ್ವೀಟ್ ಮಾಡಿದ್ದಾರೆ” ಎಂದು ಹಜರತ್‌ಗಂಜ್ ಪೊಲೀಸ್ ಠಾಣೆಯಲ್ಲಿ ನೋಂದಾಯಿಸಲಾದ ಎಫ್‌ಐಆರ್ ಆರೋಪಿಸಿದೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153 ಎ, 153 ಬಿ, 420, 465, 468, 469 ಸೇರಿದಂತೆ ಹಲವು ವಿಭಾಗಗಳ ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ.

ತಿವಾರಿ ಅವರ ಫೇಸ್‌ಬುಕ್ ಪೋಸ್ಟ್ ಯುಪಿಎಸ್‌ಸಿಯಲ್ಲಿ ಇಸ್ಲಾಮಿಕ್ ಅಧ್ಯಯನಕ್ಕೆ ಬದಲಾಗಿ ವೈದಿಕ ಅಧ್ಯಯನಗಳು ತಕ್ಷಣ ಬದಲಾಯಿಸಬೇಕೆಂದು ಒತ್ತಾಯಿಸಿದೆ.

ಕನೋಜಿಯಾ ಟ್ವೀಟ್ ಮಾಡಿದ ಫೋಟೋದಲ್ಲಿ, ಚಿತ್ರ ಮತ್ತು ಹಿನ್ನೆಲೆ ಒಂದೇ ರೀತಿ ಕಾಣುತ್ತದೆ. ಆದರೆ, “ತಿವಾರಿ ಆದೇಶದ ಪ್ರಕಾರ, ರಾಮ ಮಂದಿರದೊಳಗೆ ಯಾವುದೇ ಶೂದ್ರ, ಎಸ್‌ಸಿ, ಎಸ್‌ಟಿ ಅಥವಾ ಒಬಿಸಿಗಳಿಗೆ ಪ್ರವೇಶವಿಲ್ಲ” ಎಂಬ ಶೀರ್ಷಿಕೆಯೊಂದಿಗೆ ಕನೋಜಿಯಾ ಟ್ವೀಟ್ ಮಾಡಿದ್ದಾರೆ.

2019 ರಲ್ಲಿ, ‘ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರನ್ನು ಮದುವೆಯಾಗಲು ಬಯಸುತ್ತೇನೆ’ ಎಂದು ಹೇಳಿಕೊಂಡ ಮಹಿಳೆಯ ವೀಡಿಯೊವನ್ನು ಹಂಚಿಕೊಂಡಿದ್ದಕ್ಕಾಗಿ ಕನೋಜಿಯಾನನ್ನು ಬಂಧಿಸಲಾಗಿತ್ತು.

ಪಿಎಂ ನರೇಂದ್ರ ಮೋದಿ ಮತ್ತು ಸಿಎಂ ಆದಿತ್ಯನಾಥ್ ವಿರುದ್ಧ “ಆಕ್ಷೇಪಾರ್ಹ ಟ್ವೀಟ್” ಮಾಡಿದ್ದಕ್ಕಾಗಿ ದಿ ವೈರ್ ನ ಮಾಜಿ ವರದಿಗಾರ ಕನೋಜಿಯಾ ಅವರನ್ನು ಏಪ್ರಿಲ್‌ನಲ್ಲಿ ಬಂಧಿಸಲಾಗಿತ್ತು.


ಇದನ್ನೂ ಓದಿ: ಕಳೆದೊಂದು ವಾರದಲ್ಲಿ 8 ಪತ್ರಕರ್ತರ ಮೇಲೆ ಹಲ್ಲೆ: ತೀವ್ರ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...