Homeಫ್ಯಾಕ್ಟ್‌ಚೆಕ್Fact Check: ಬುರ್ಖಾಧಾರಿ ಮಹಿಳೆಯಿಂದ ಬಾಲಕನ ಅಪಹರಣವೆಂದು ಸುಳ್ಳು ವಿಡಿಯೋ ಹಂಚಿಕೆ

Fact Check: ಬುರ್ಖಾಧಾರಿ ಮಹಿಳೆಯಿಂದ ಬಾಲಕನ ಅಪಹರಣವೆಂದು ಸುಳ್ಳು ವಿಡಿಯೋ ಹಂಚಿಕೆ

- Advertisement -
- Advertisement -

ಬುರ್ಖಾಧಾರಿ ಮಹಿಳೆಯೊಬ್ಬರು ರಸ್ತೆ ಬದಿ ಕುಳಿತಿದ್ದ ಬಾಲಕನನ್ನು ಅಪಹರಿಸಿದ್ದಾರೆ ಎಂಬ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಸುಮಾರು 28 ಸೆಕೆಂಡ್‌ಗಳ ಈ ವಿಡಿಯೋದಲ್ಲಿ ಬುರ್ಖಾಧಾರಿ ಮಹಿಳೆ ಮತ್ತೊಬ್ಬನ ಸಹಾಯದೊಂದಿಗೆ ಬಾಲಕನನ್ನು ಎತ್ತಿ ಆಟೋದಲ್ಲಿ ಹಾಕಿಕೊಂಡು ಕರೆದೊಯ್ದ ದೃಶ್ಯವಿದೆ. ಇದನ್ನು ಮುಂದಿಟ್ಟುಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಮುಸ್ಲಿಂ ದ್ವೇಷ ಹರಡುವ ಪ್ರಯತ್ನ ಮಾಡಲಾಗಿದೆ.

‘ನಾವು ಎಲ್ಲಾ ಕಡೆಯಿಂದಲೂ ಎಚ್ಚರವಾಗಿರಬೇಕು’ ಎಂಬ ಶೀರ್ಷಿಕೆಯಲ್ಲಿ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗ್ತಿದೆ.

‘ಅಶುತೋಷ್ ಸಿಂಗ್ ಪಾಮರ್’ ಎಂಬ ಫೇಸ್‌ಬುಕ್ ಬಳಕೆದಾರ ಈ ವಿಡಿಯೋ ಹಂಚಿಕೊಂಡಿದ್ದು, ” ನಾವು ನಾಲ್ಕೂ ಕಡೆಗಳಿಂದ ಎಚ್ಚರವಾಗಿರಬೇಕು. ಅಪಾಯ ನಾವು ಊಹಿಸದಕ್ಕಿಂತ ದೊಡ್ಡದಾಗಿರುತ್ತದೆ” ಎಂದು ಬರೆದುಕೊಂಡಿದ್ದಾರೆ.

ಸದಾ ಕೋಮು ದ್ವೇಷದ ಸುದ್ದಿಗಳನ್ನೇ ಹರಡುವ ಸುದರ್ಶನ್‌ ನ್ಯೂಸ್‌ನ ಸಂತೋಷ್ ಚೌವ್ಹಾಣ್ ಕೂಡ ಈ ವಿಡಿಯೋ ಹಂಚಿಕೊಂಡಿದ್ದು, “ನಾವು ಇಂತಹ ವ್ಯಕ್ತಿಗಳಿಂದ ಮಕ್ಕಳ ಮೇಲೆ ನಿಗಾ ಇಡಬೇಕು” ಎಂದು ಬರೆದುಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್ : ಮೇಲೆ ತಿಳಿಸಿದ ವೈರಲ್ ವಿಡಿಯೋದ ಸತ್ಯಾಸತ್ಯತೆ ತಿಳಿಯುವ ಸಲುವಾಗಿ ನಾವು ಅದರ ಮೂಲವನ್ನು ಹುಡುಕಾಡಿದ್ದೇವೆ. ಮೊದಲು ಗೂಗಲ್‌ನಲ್ಲಿ ಈ ರೀತಿಯ ಘಟನೆಯ ಸುದ್ದಿ ಪ್ರಕಟಗೊಂಡಿದೆಯೇ ಎಂದು ಪರಿಶೀಲನೆ ನಡೆಸಿದ್ದೇವೆ. ಈ ವೇಳೆ ಜುಲೈ 7,2022ರಂದು ‘ದಿ ಕ್ವಿಂಟ್ ವೆಬ್‌ಸೈಟ್‌’ ಈ ಕುರಿತು ಸುದ್ದಿ ಪ್ರಕಟಿಸಿರುವುದು ಕಂಡು ಬಂದಿದೆ. “Video Showing Burqa-Clad Woman Kidnapping Child Is Staged and From Egypt” ಎಂಬ ಶೀರ್ಷಿಕೆಯ ಸುದ್ದಿಯಲ್ಲಿ, ಬುರ್ಖಾಧಾರಿ ಮಹಿಳೆ ಬಾಲಕನನ್ನು ಅಪಹರಿಸಿದ್ದಾರೆ ಎನ್ನಲಾದ ವಿಡಿಯೋ ಈಜಿಫ್ಟ್‌ ದೇಶದ್ದು ಮತ್ತು ಇದು ಸ್ಕ್ರಿಪ್ಟೆಡ್ ವಿಡಿಯೋ ಎಂದು ತಿಳಿಸಲಾಗಿದೆ.

ದಿ ಕ್ವಿಂಟ್ ಸುದ್ದಿ ಲಿಂಕ್ 

ನಾವು ಇನ್ನಷ್ಟು ಸುದ್ದಿ ಮೂಲಗಳನ್ನು ಹುಡುಕಿದಾಗ, ಈಜಿಫ್ಟ್‌ನ ಮಾಧ್ಯಮಗಳು ಈ ವಿಡಿಯೋ ಕುರಿತು ಸುದ್ದಿ ಮಾಡಿರುವುದು ಕಂಡು ಬಂದಿದೆ.

ಈಜಿಫ್ಟ್‌ನ ‘El Watan’ಎಂಬ ವೆಬ್‌ಸೈಟ್‌ 28 ಜೂನ್‌ 2022ರಂದು ಈ ವಿಡಿಯೋ ಕುರಿತು ಸುದ್ದಿ ಪ್ರಕಟಿಸಿದ್ದು, ಈಜಿಫ್ಟ್‌ನ ಸೋಹಾಗ್‌ ಗೌವರ್ನರೇಟ್‌ ಬುರ್ಖಾಧಾರಿ ಮಹಿಳೆ ಬಾಲಕನನ್ನು ಅಪಹರಿಸಿದ ರೀತಿಯ ವಿಡಿಯೋ ಕ್ರಿಯೇಟ್‌ ಮಾಡಿದ್ದ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಲ್ಲಿ ಬರೆಯಲಾಗಿದೆ.

ಅಲ್‌ ವತನ್ ಸುದ್ದಿಯ ಲಿಂಕ್ 

ಈಜಿಫ್ಟ್‌ನ ಆಂತರಿಕ ವ್ಯವಹಾರಗಳ ಸಚಿವಾಲಯ 29 ಜೂನ್ 2022ರಂದು ವೈರಲ್‌ ವಿಡಿಯೋವನ್ನು ಹಂಚಿಕೊಂಡಿದ್ದು, ಸೋಹಾಗ್‌ ಗೌವರ್ನರೇಟ್‌ನಲ್ಲಿ ಬುರ್ಖಾಧಾರಿ ಮಹಿಳೆಯೊಬ್ಬರು ಚುಚ್ಚುಮದ್ದು ಚುಚ್ಚಿ ಬಾಲಕನನ್ನು ಅಪಹರಿಸಿದ್ದಾರೆ ಎಂಬ ವಿಡಿಯೋ ಹರಿದಾಡುತ್ತಿದೆ. ಈ ಕುರಿತು ಪರಿಶೀಲನೆ ನಡೆಸಿದಾಗ ಇದು ಕ್ರಿಯೇಟೆಡ್ ವಿಡಿಯೋ ಎಂದು ಗೊತ್ತಾಗಿದೆ. ಈ ಸಂಬಂಧ ನಾಲ್ವರನ್ನು ಬಂಧಿಸಲಾಗಿದೆ. ಬುರ್ಖಾಧಾರಿ ಮಹಿಳೆ ಎನ್ನಲಾದ ವ್ಯಕ್ತಿಯನ್ನು ನೀವು ವಿಡಿಯೋದಲ್ಲಿ ನೋಡಬಹುದು ಎಂದು ತಿಳಿಸಿದೆ.

ಈಜಿಫ್ಟ್‌ ಆಂತರಿಕ ವ್ಯವಹಾರಗಳ ಸಚಿವಾಲಯದ ಇನ್‌ಸ್ಟಾಗ್ರಾಂ ಲಿಂಕ್ 

ಲಭ್ಯ ಮೂಲಗಳ ಮೂಲಕ ನಾವು ನಡೆಸಿದ ಪರಿಶೀಲನೆಯಲ್ಲಿ ವೈರಲ್ ವಿಡಿಯೋ ಭಾರತದಲ್ಲ ಈಜಿಫ್ಟ್‌ನದ್ದು. ಸಾಮಾಜಿಕ ಜಾಲತಾಣದ ಲೈಕ್‌, ಕಮೆಂಟ್‌ಗೋಸ್ಕರ ಈಜಿಫ್ಟ್‌ನ ಸೋಹಾಗ್‌ ಗೌವರ್ನರೇಟ್‌ನ ನಾಲ್ವರು ಯುವಕರು ಸೃಷ್ಟಿಸಿದ ವಿಡಿಯೋ ಇದು ಎಂದು ತಿಳಿದು ಬಂದಿದೆ. ಅಲ್ಲದೆ, ಈ ವಿಡಿಯೋ ಈ ಹಿಂದೆಯೇ ಸುಳ್ಳು ಹೆಸರಿನಲ್ಲಿ ವೈರಲ್ ಆಗಿತ್ತು. ಈಗ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ.

ಇದನ್ನೂ ಓದಿ: Fact Check: ನೌಕಾಪಡೆ ಸಿಬ್ಬಂದಿ ನೀರಿನಾಳದಲ್ಲಿ ಕೇಸರಿ ಧ್ವಜ ಹಾರಿಸಿದ್ದು ನಿಜಾನಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...