Homeಫ್ಯಾಕ್ಟ್‌ಚೆಕ್Fact Check: ಬುರ್ಖಾಧಾರಿ ಮಹಿಳೆಯಿಂದ ಬಾಲಕನ ಅಪಹರಣವೆಂದು ಸುಳ್ಳು ವಿಡಿಯೋ ಹಂಚಿಕೆ

Fact Check: ಬುರ್ಖಾಧಾರಿ ಮಹಿಳೆಯಿಂದ ಬಾಲಕನ ಅಪಹರಣವೆಂದು ಸುಳ್ಳು ವಿಡಿಯೋ ಹಂಚಿಕೆ

- Advertisement -
- Advertisement -

ಬುರ್ಖಾಧಾರಿ ಮಹಿಳೆಯೊಬ್ಬರು ರಸ್ತೆ ಬದಿ ಕುಳಿತಿದ್ದ ಬಾಲಕನನ್ನು ಅಪಹರಿಸಿದ್ದಾರೆ ಎಂಬ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಸುಮಾರು 28 ಸೆಕೆಂಡ್‌ಗಳ ಈ ವಿಡಿಯೋದಲ್ಲಿ ಬುರ್ಖಾಧಾರಿ ಮಹಿಳೆ ಮತ್ತೊಬ್ಬನ ಸಹಾಯದೊಂದಿಗೆ ಬಾಲಕನನ್ನು ಎತ್ತಿ ಆಟೋದಲ್ಲಿ ಹಾಕಿಕೊಂಡು ಕರೆದೊಯ್ದ ದೃಶ್ಯವಿದೆ. ಇದನ್ನು ಮುಂದಿಟ್ಟುಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಮುಸ್ಲಿಂ ದ್ವೇಷ ಹರಡುವ ಪ್ರಯತ್ನ ಮಾಡಲಾಗಿದೆ.

‘ನಾವು ಎಲ್ಲಾ ಕಡೆಯಿಂದಲೂ ಎಚ್ಚರವಾಗಿರಬೇಕು’ ಎಂಬ ಶೀರ್ಷಿಕೆಯಲ್ಲಿ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗ್ತಿದೆ.

‘ಅಶುತೋಷ್ ಸಿಂಗ್ ಪಾಮರ್’ ಎಂಬ ಫೇಸ್‌ಬುಕ್ ಬಳಕೆದಾರ ಈ ವಿಡಿಯೋ ಹಂಚಿಕೊಂಡಿದ್ದು, ” ನಾವು ನಾಲ್ಕೂ ಕಡೆಗಳಿಂದ ಎಚ್ಚರವಾಗಿರಬೇಕು. ಅಪಾಯ ನಾವು ಊಹಿಸದಕ್ಕಿಂತ ದೊಡ್ಡದಾಗಿರುತ್ತದೆ” ಎಂದು ಬರೆದುಕೊಂಡಿದ್ದಾರೆ.

ಸದಾ ಕೋಮು ದ್ವೇಷದ ಸುದ್ದಿಗಳನ್ನೇ ಹರಡುವ ಸುದರ್ಶನ್‌ ನ್ಯೂಸ್‌ನ ಸಂತೋಷ್ ಚೌವ್ಹಾಣ್ ಕೂಡ ಈ ವಿಡಿಯೋ ಹಂಚಿಕೊಂಡಿದ್ದು, “ನಾವು ಇಂತಹ ವ್ಯಕ್ತಿಗಳಿಂದ ಮಕ್ಕಳ ಮೇಲೆ ನಿಗಾ ಇಡಬೇಕು” ಎಂದು ಬರೆದುಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್ : ಮೇಲೆ ತಿಳಿಸಿದ ವೈರಲ್ ವಿಡಿಯೋದ ಸತ್ಯಾಸತ್ಯತೆ ತಿಳಿಯುವ ಸಲುವಾಗಿ ನಾವು ಅದರ ಮೂಲವನ್ನು ಹುಡುಕಾಡಿದ್ದೇವೆ. ಮೊದಲು ಗೂಗಲ್‌ನಲ್ಲಿ ಈ ರೀತಿಯ ಘಟನೆಯ ಸುದ್ದಿ ಪ್ರಕಟಗೊಂಡಿದೆಯೇ ಎಂದು ಪರಿಶೀಲನೆ ನಡೆಸಿದ್ದೇವೆ. ಈ ವೇಳೆ ಜುಲೈ 7,2022ರಂದು ‘ದಿ ಕ್ವಿಂಟ್ ವೆಬ್‌ಸೈಟ್‌’ ಈ ಕುರಿತು ಸುದ್ದಿ ಪ್ರಕಟಿಸಿರುವುದು ಕಂಡು ಬಂದಿದೆ. “Video Showing Burqa-Clad Woman Kidnapping Child Is Staged and From Egypt” ಎಂಬ ಶೀರ್ಷಿಕೆಯ ಸುದ್ದಿಯಲ್ಲಿ, ಬುರ್ಖಾಧಾರಿ ಮಹಿಳೆ ಬಾಲಕನನ್ನು ಅಪಹರಿಸಿದ್ದಾರೆ ಎನ್ನಲಾದ ವಿಡಿಯೋ ಈಜಿಫ್ಟ್‌ ದೇಶದ್ದು ಮತ್ತು ಇದು ಸ್ಕ್ರಿಪ್ಟೆಡ್ ವಿಡಿಯೋ ಎಂದು ತಿಳಿಸಲಾಗಿದೆ.

ದಿ ಕ್ವಿಂಟ್ ಸುದ್ದಿ ಲಿಂಕ್ 

ನಾವು ಇನ್ನಷ್ಟು ಸುದ್ದಿ ಮೂಲಗಳನ್ನು ಹುಡುಕಿದಾಗ, ಈಜಿಫ್ಟ್‌ನ ಮಾಧ್ಯಮಗಳು ಈ ವಿಡಿಯೋ ಕುರಿತು ಸುದ್ದಿ ಮಾಡಿರುವುದು ಕಂಡು ಬಂದಿದೆ.

ಈಜಿಫ್ಟ್‌ನ ‘El Watan’ಎಂಬ ವೆಬ್‌ಸೈಟ್‌ 28 ಜೂನ್‌ 2022ರಂದು ಈ ವಿಡಿಯೋ ಕುರಿತು ಸುದ್ದಿ ಪ್ರಕಟಿಸಿದ್ದು, ಈಜಿಫ್ಟ್‌ನ ಸೋಹಾಗ್‌ ಗೌವರ್ನರೇಟ್‌ ಬುರ್ಖಾಧಾರಿ ಮಹಿಳೆ ಬಾಲಕನನ್ನು ಅಪಹರಿಸಿದ ರೀತಿಯ ವಿಡಿಯೋ ಕ್ರಿಯೇಟ್‌ ಮಾಡಿದ್ದ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಲ್ಲಿ ಬರೆಯಲಾಗಿದೆ.

ಅಲ್‌ ವತನ್ ಸುದ್ದಿಯ ಲಿಂಕ್ 

ಈಜಿಫ್ಟ್‌ನ ಆಂತರಿಕ ವ್ಯವಹಾರಗಳ ಸಚಿವಾಲಯ 29 ಜೂನ್ 2022ರಂದು ವೈರಲ್‌ ವಿಡಿಯೋವನ್ನು ಹಂಚಿಕೊಂಡಿದ್ದು, ಸೋಹಾಗ್‌ ಗೌವರ್ನರೇಟ್‌ನಲ್ಲಿ ಬುರ್ಖಾಧಾರಿ ಮಹಿಳೆಯೊಬ್ಬರು ಚುಚ್ಚುಮದ್ದು ಚುಚ್ಚಿ ಬಾಲಕನನ್ನು ಅಪಹರಿಸಿದ್ದಾರೆ ಎಂಬ ವಿಡಿಯೋ ಹರಿದಾಡುತ್ತಿದೆ. ಈ ಕುರಿತು ಪರಿಶೀಲನೆ ನಡೆಸಿದಾಗ ಇದು ಕ್ರಿಯೇಟೆಡ್ ವಿಡಿಯೋ ಎಂದು ಗೊತ್ತಾಗಿದೆ. ಈ ಸಂಬಂಧ ನಾಲ್ವರನ್ನು ಬಂಧಿಸಲಾಗಿದೆ. ಬುರ್ಖಾಧಾರಿ ಮಹಿಳೆ ಎನ್ನಲಾದ ವ್ಯಕ್ತಿಯನ್ನು ನೀವು ವಿಡಿಯೋದಲ್ಲಿ ನೋಡಬಹುದು ಎಂದು ತಿಳಿಸಿದೆ.

ಈಜಿಫ್ಟ್‌ ಆಂತರಿಕ ವ್ಯವಹಾರಗಳ ಸಚಿವಾಲಯದ ಇನ್‌ಸ್ಟಾಗ್ರಾಂ ಲಿಂಕ್ 

ಲಭ್ಯ ಮೂಲಗಳ ಮೂಲಕ ನಾವು ನಡೆಸಿದ ಪರಿಶೀಲನೆಯಲ್ಲಿ ವೈರಲ್ ವಿಡಿಯೋ ಭಾರತದಲ್ಲ ಈಜಿಫ್ಟ್‌ನದ್ದು. ಸಾಮಾಜಿಕ ಜಾಲತಾಣದ ಲೈಕ್‌, ಕಮೆಂಟ್‌ಗೋಸ್ಕರ ಈಜಿಫ್ಟ್‌ನ ಸೋಹಾಗ್‌ ಗೌವರ್ನರೇಟ್‌ನ ನಾಲ್ವರು ಯುವಕರು ಸೃಷ್ಟಿಸಿದ ವಿಡಿಯೋ ಇದು ಎಂದು ತಿಳಿದು ಬಂದಿದೆ. ಅಲ್ಲದೆ, ಈ ವಿಡಿಯೋ ಈ ಹಿಂದೆಯೇ ಸುಳ್ಳು ಹೆಸರಿನಲ್ಲಿ ವೈರಲ್ ಆಗಿತ್ತು. ಈಗ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ.

ಇದನ್ನೂ ಓದಿ: Fact Check: ನೌಕಾಪಡೆ ಸಿಬ್ಬಂದಿ ನೀರಿನಾಳದಲ್ಲಿ ಕೇಸರಿ ಧ್ವಜ ಹಾರಿಸಿದ್ದು ನಿಜಾನಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...